Homeಮುಖಪುಟಬ್ರಾಹ್ಮಣರ ವಿರುದ್ಧ ಭಾಗವತ್ ಅವಹೇಳನ ಆರೋಪ; ವಿಎಚ್‌ಪಿ ಮುಖಂಡನ ಮೇಲೆ ಗುಂಡು ಹಾರಿಸಿದ ಬಿಜೆಪಿ ಸದಸ್ಯ

ಬ್ರಾಹ್ಮಣರ ವಿರುದ್ಧ ಭಾಗವತ್ ಅವಹೇಳನ ಆರೋಪ; ವಿಎಚ್‌ಪಿ ಮುಖಂಡನ ಮೇಲೆ ಗುಂಡು ಹಾರಿಸಿದ ಬಿಜೆಪಿ ಸದಸ್ಯ

- Advertisement -
- Advertisement -

ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ವಿಚಾರಕ್ಕೆ ವಾಗ್ವಾದ ನಡೆದಿದ್ದು, ಈ ವೇಳೆ ವಿಶ್ವ ಹಿಂದೂ ಪರಿಷತ್ ನಾಯಕನ ಮೇಲೆ ಬಿಜೆಪಿ ಸದಸ್ಯನೊಬ್ಬ ಗುಂಡು ಹಾರಿಸಿರುವ ಘಟನೆ ಶನಿವಾರ ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಆರೋಪಿ ರಜತ್ ಶರ್ಮಾ ಭಾರತೀಯ ಜನತಾ ಪಕ್ಷದ ಸದಸ್ಯ ಎಂದು ವರದಿಯಾಗಿದೆ. ಫೆಬ್ರವರಿ 8ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಶರ್ಮಾ ಅವರು ಭಾಗವಹಿಸಿದ್ದರು ಈ ವೇಳೆ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು.

ಶರ್ಮಾ ಅವರು RSS ನಾಯಕರ ವಿರುದ್ಧ ಮಾತನಾಡಿದ್ದಾರೆ. ಹಾಗಾಗಿ ಅವರನ್ನು ಪಕ್ಷದಿಂದ ವಜಾಗೊಳಿಸಬೇಕು ಎಂದು ವಿಎಚ್‌ಪಿ ಮುಖಂಡ ಸಂತೋಷ್ ಪಂಡಿತ್ ಒತ್ತಾಯಿಸಿದ್ದಾರೆ. ಈ ವಿಚಾರವಾಗಿ ಶನಿವಾರ ಸಂಜೆ ಪಂಡಿತ್ ಮತ್ತು ಶರ್ಮಾ ನಡುವೆ ವಾಗ್ವಾದ ನಡೆದಿದ್ದು, ಈ ವೇಳೆ ವಿಎಚ್‌ಪಿ ನಾಯಕನ ಮೇಲೆ ಗುಂಡಿನ ದಾಳಿ ನಡೆದಿದೆ.

ಇದನ್ನೂ ಓದಿ: ಬ್ರಾಹ್ಮಣರ ಬಗ್ಗೆ ಅವಹೇಳನ ಆರೋಪ: RSS ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ದೂರು ದಾಖಲು

”ಗುಂಡೇಟು ತಿಂದಿರುವ ವಿಎಚ್‌ಪಿ ಮುಖಂಡ ಸಂತೋಷ್ ಪಂಡಿತ್ ಅವರು, ತಮ್ಮ ಮೇಲೆ ಗುಂಡು ಹಾರಿಸಿದ್ದು ರಜತ್ ಶರ್ಮಾ ಎಂದು ಹೇಳಿಕೆಯನ್ನು ನೀಡಿದ್ದಾರೆ. ಶರ್ಮಾ ಮತ್ತು ಪಂಡಿತ್ ಇಬ್ಬರೂ ಒಬ್ಬರಿಗೊಬ್ಬರು ಪರಿಚಿತರಾಗಿದ್ದು, ಇಬ್ಬರ ಮಧ್ಯೆ ವಾಗ್ವಾದ ನಡೆದಿದೆ. ಆ ಬಳಿಕ ಈ ಹಲ್ಲೆ ನಡೆದಿದೆ. ಶರ್ಮಾ ದೇಶಿ ನಿರ್ಮಿತ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದು, ಸದ್ಯ ಆತ ತಲೆಮರೆಸಿಕೊಂಡಿದ್ದಾನೆ” ಎಂದು ಹಿರಿಯ ಮೊರಾದಾಬಾದ್ ಪೊಲೀಸ್ ಅಧೀಕ್ಷಕ ಹೇಮರಾಜ್ ಮೀನಾ ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಫೆಬ್ರವರಿ 5 ರಂದು ಮುಂಬಯಿಯಲ್ಲಿ ನಡೆದ ಸಂತ ರವಿದಾಸ್‌ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಮೋಹನ್ ಭಾಗವತ್ ಅವರು, ”ಹಿಂದೂ ಸಮಾಜದಲ್ಲಿ ಚಾಲ್ತಿಯಲ್ಲಿರುವ ಈ ಕೆಟ್ಟ ಜಾತಿ ಪದ್ಧತಿಯನ್ನು ಸೃಷ್ಟಿಸಿದ್ದು ದೇವರಲ್ಲ, ಅದು ಪುರೋಹಿತ ವರ್ಗದವರು ಸೃಷ್ಟಿ ಮಾಡಿರುವಂತಹದ್ದು” ಎಂದು ದೂಷಿಸಿದ್ದರು. ಹಾಗಾಗಿ ಅಖಿಲ ಭಾರತೀಯ ಬ್ರಾಹ್ಮಣ ಮಹಾಸಭಾ ಸಂಘಟನೆಯು ಭಾಗವತ್ ವಿರುದ್ಧ ಪ್ರತಿಭಟನೆ ನಡೆಸಿದೆ ಎಂದು ನವಭಾರತ್ ಟೈಮ್ಸ್ ವರದಿ ಮಾಡಿದೆ.

”ಸತ್ಯವೇ ದೇವರು. ವ್ಯಕ್ತಿಯೊಬ್ಬರ ಹೆಸರು, ಸಾಮರ್ಥ್ಯ ಮತ್ತು ಗೌರವ ಏನೇ ಇದ್ದರೂ ಎಲ್ಲರೂ ಒಂದೇ. ಅವರ ನಡುವೆ ಯಾವುದೇ ವ್ಯತ್ಯಾಸ ಇರುವುದಿಲ್ಲ. ಶಾಸ್ತ್ರಗಳ ಹೆಸರಿನಲ್ಲಿ ಕೆಲವು ಪಂಡಿತರು ಹೇಳುವುದು ಸುಳ್ಳು. ಜಾತಿ ಶ್ರೇಷ್ಠತೆಯ ವ್ಯಸನದಿಂದ ತಪ್ಪುದಾರಿಗೆ ನಮ್ಮನ್ನು ಎಳೆಯಲಾಗಿದೆ. ಈ ಭ್ರಮೆಯನ್ನು ತೊಲಗಿಸಬೇಕಿದೆ. ದೇಶದಲ್ಲಿ ಎಲ್ಲರಲ್ಲಿಯೂ ಆತ್ಮಸಾಕ್ಷಿ ಮತ್ತು ಜಾಗೃತಿ ಒಂದೇ ರೀತಿ ಇದೆ. ಆದರೆ ಅಭಿಪ್ರಾಯಗಳು ಮಾತ್ರ ಬೇರೆ ಬೇರೆ ಇರುತ್ತವೆ” ಎಂದು ಭಾಗವತ್ ಹೇಳಿದ್ದರು.

ಈ ಹೇಳಿಕೆಗಳು ಟೀಕೆಗೆ ಗುರಿಯಾಗುತ್ತಿದ್ದಂತೆ, ಆರ್‌ಎಸ್‌ಎಸ್‌ನ ಪ್ರಚಾರ ಮುಖ್ಯಸ್ಥ ಸುನಿಲ್ ಅಂಬೇಕರ್ ಫೆಬ್ರವರಿ 6 ರಂದು ಭಾಗವತ್ ಅವರ ಹೇಳಿಕೆಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ಪಂಡಿತರು ಅವರು ವಿದ್ವಾನ್ ಅಥವಾ ಬುದ್ಧಿಜೀವಿಗಳನ್ನು ಅರ್ಥೈಸಿದ್ದಾರೆ ಎಂದು ತೇಪೆ ಹಚ್ಚುವ ಕೆಲಸಕ್ಕೆ ಮುಂದಾಗಿತ್ತುಬ ಆದರೆ,

ಅಖಿಲ ಭಾರತೀಯ ಬ್ರಾಹ್ಮಣ ಮಹಾಸಭಾ ಸಂಘಟನೆಯು ಮೋಹನ್ ಭಾಗವತ್ ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...