Homeಮುಖಪುಟಜಾತಿ ನಿಂದನೆ ಆರೋಪ; ಬಾಂಬೆ ಐಐಟಿಯಲ್ಲಿ ದಲಿತ ವಿದ್ಯಾರ್ಥಿ ಆ*ಹತ್ಯೆ

ಜಾತಿ ನಿಂದನೆ ಆರೋಪ; ಬಾಂಬೆ ಐಐಟಿಯಲ್ಲಿ ದಲಿತ ವಿದ್ಯಾರ್ಥಿ ಆ*ಹತ್ಯೆ

ಇದೊಂದು ಸಾಂಸ್ಥಿಕ ಕೊಲೆ ಎಂದು ಐಐಟಿ ಬಾಂಬೆಯ ‘ಅಂಬೇಡ್ಕರ್‌ ಪೆರಿಯಾರ್‌ ಫುಲೆ ಸ್ಟಡಿ ಸರ್ಕಲ್‌’ ಟ್ವೀಟ್ ಮಾಡಿದೆ

- Advertisement -
- Advertisement -

ಬಾಂಬೆಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ)ಯ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬ ಭಾನುವಾರ ಮಧ್ಯಾಹ್ನ ಹಾಸ್ಟೆಲ್‌ನ ಎಂಟನೇ ಮಹಡಿಯಿಂದ ಜಿಗಿದು ಸಾವಿಗೆ ಶರಣಾಗಿದ್ದಾನೆ.

“ಈ ವಿದ್ಯಾರ್ಥಿಯು ದಲಿತ ಸಮುದಾಯದವನಾಗಿದ್ದು, ಜಾತಿ ಕಿರುಕುಳವನ್ನು ಎದುರಿಸಿದ್ದಾನೆ” ಎಂದು ‘ಐಐಟಿ ಬಾಂಬೆಯ ಅಂಬೇಡ್ಕರ್‌ ಪೆರಿಯಾರ್‌ ಫುಲೆ ಸ್ಟಡಿ ಸರ್ಕಲ್‌’ ಟ್ವಿಟರ್‌ ಖಾತೆಯಲ್ಲಿ ಆರೋಪಿಸಲಾಗಿದೆ.

ಭಾನುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊವಾಯಿ ಪೊಲೀಸರು ತಿಳಿಸಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ನೀಡಿ, ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಲಾಗಿದೆ.

ಅಹಮದಾಬಾದ್ ಮೂಲದ ದರ್ಶನ್ ಸೋಲಂಕಿ (18) ಎಂಬ ವಿದ್ಯಾರ್ಥಿ ಮೂರೂವರೆ ತಿಂಗಳ ಹಿಂದೆ ಐಐಟಿ ಬಾಂಬೆ ಸೇರಿದ್ದು, ಬಿಟೆಕ್ ವಿದ್ಯಾರ್ಥಿಯಾಗಿದ್ದ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಹಾಸ್ಟೆಲ್ ಕಟ್ಟಡದ ಮೇಲಿಂದ ಸೋಲಂಕಿಯವರು ಜಿಗಿದಿರುವುದನ್ನು ನೋಡಿದ ಪ್ರತ್ಯಕ್ಷದರ್ಶಿಗಳಿದ್ದಾರೆ. ನಾವು ಅವರ ರೂಮ್‌ಮೇಟ್‌ಗಳ ಹೇಳಿಕೆಗಳನ್ನು ದಾಖಲಿಸುತ್ತಿದ್ದೇವೆ. ಕಾರಣವನ್ನು ತಿಳಿದುಕೊಳ್ಳಲು ಪ್ರಯತ್ನಿಸುತ್ತಿದ್ದೇವೆ” ಎಂದು ಅಧಿಕಾರಿ ತಿಳಿಸಿದ್ದಾರೆ.

ಇದು ದುರದೃಷ್ಟಕರ ಘಟನೆ ಎಂದು ಹೇಳಿರುವ ಐಐಟಿಯ ಅಧಿಕಾರಿಯೊಬ್ಬರು, “ಸಂಸ್ಥೆಯು ಪೊಲೀಸ್ ತನಿಖೆಗೆ ಸಹಕರಿಸುತ್ತಿದೆ” ಎಂದಿದ್ದಾರೆ.

ಘಟನೆ ಬೆಳಕಿಗೆ ಬಂದ ಕೂಡಲೇ ಸಂಸ್ಥೆಯ ನಿರ್ದೇಶಕ ಸುಭಾಸಿಸ್ ಚೌಧರಿ ಎಲ್ಲಾ ವಿದ್ಯಾರ್ಥಿಗಳಿಗೆ ಸಂದೇಶ ಕಳುಹಿಸಿದ್ದಾರೆ. “ಇಂದು ಮಧ್ಯಾಹ್ನ ನಡೆದ ದುರಂತ ಘಟನೆಯಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬನ ಸಾವಿನ ಕುರಿತು ತಿಳಿಸಲು ನಾವು ವಿಷಾದಿಸುತ್ತೇವೆ. ಪೊವಾಯಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ವಿದ್ಯಾರ್ಥಿಯ ಪೋಷಕರಿಗೆ ಮಾಹಿತಿ ನೀಡಲಾಗಿದ್ದು, ಅವರು ಬರುತ್ತಿದ್ದಾರೆ. ವಿದ್ಯಾರ್ಥಿನಿಯ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇವೆ ಮತ್ತು ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಸಂದೇಶದಲ್ಲಿ ತಿಳಿಸಿದ್ದಾರೆ.

ಸೋಲಂಕಿ ಅವರು ಕೆಮಿಕಲ್ ಇಂಜಿನಿಯರಿಂಗ್‌ನ ಮೊದಲ ವರ್ಷದ ಬಿಟೆಕ್ ವಿದ್ಯಾರ್ಥಿಯಾಗಿದ್ದರು. ಅಹಮದಾಬಾದ್‌ ಮೂಲದವರಾದ ಸೋಲಂಕಿ ಹಾಸ್ಟೆಲ್ 16ರಲ್ಲಿ ವಾಸವಿದ್ದರು.

ಪ್ರಥಮ ವರ್ಷದ ವಿದ್ಯಾರ್ಥಿಗಳ ಮೊದಲ ಸೆಮಿಸ್ಟರ್ ಪರೀಕ್ಷೆಗಳು ಶನಿವಾರ ಮುಕ್ತಾಯಗೊಂಡವು. ಶೈಕ್ಷಣಿಕ ಒತ್ತಡವಿತ್ತು. ಆದಾಗ್ಯೂ, ಹೆಚ್ಚಿನ ವಿವರಗಳು ಹೊರಬೀಳುವ ಮೊದಲು ಊಹಾಪೋಹ ಮಾಡುವುದು ಸೂಕ್ತವಲ್ಲ ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಹೆಸರು ಹೇಳಲಿಚ್ಛಿಸದ ಕ್ಯಾಂಪಸ್‌ ವಿದ್ಯಾರ್ಥಿಯೊಬ್ಬರು ‘ಇಂಡಿಯನ್‌ ಎಕ್ಸ್‌ಪ್ರೆಸ್‌’ಗೆ ಪ್ರತಿಕ್ರಿಯಿಸಿದ್ದು, “ಯಾವುದೇ ಡೆತ್‌ನೋಟ್ ಇಲ್ಲದ ಕಾರಣ, ಆತನ ಸಾವಿನ ಕಾರಣವೇನೆಂದು ಸ್ಪಷ್ಟವಾಗಿಲ್ಲ. ಸೆಮಿಸ್ಟರ್ ಪರೀಕ್ಷೆಗಳು ಈಗಷ್ಟೇ ಮುಗಿದಿವೆ, ಅದೊಂದೇ ಕಾರಣ ಎಂದು ಹೇಳುವುದು ಸರಿಯಲ್ಲ. ಇನ್‌ಸ್ಟಿಟ್ಯೂಟ್‌ನಿಂದ ಹೆಚ್ಚಿನದನ್ನು ತಿಳಿಯಲು ನಾವು ಕಾಯುತ್ತಿದ್ದೇವೆ” ಎಂದಿದ್ದಾರೆ.

ಕ್ಯಾಂಪಸ್‌ನ ಕೆಲವು ವಿದ್ಯಾರ್ಥಿಗಳು ಭಾನುವಾರ ತಡರಾತ್ರಿ ಕ್ಯಾಂಡಲ್‌ಲೈಟ್ ಮಾರ್ಚ್‌ನಲ್ಲಿ ಭಾಗವಹಿಸಿದರು. ಅಗಲಿದ ಸೋಲಂಕಿಗೆ ಸಂತಾಪ ಸೂಚಿಸಿದರು.

ಘಟನೆಯ ಕುರಿತು ‘ಅಂಬೇಡ್ಕರ್ ಪೆರಿಯಾರ್ ಫುಲೆ ಸ್ಟಡಿ ಸರ್ಕಲ್ ಐಐಟಿ ಬಾಂಬೆ’ (APPSC IIT Bombay) ಟ್ವಿಟರ್‌ ಖಾತೆಯಿಂದ ಮಾಡಿರುವ ಟ್ವೀಟ್‌ಗಳು ಘಟನೆಗೆ ಮತ್ತೊಂದು ಆಯಾಮವಿರುವುದನ್ನು ಹೇಳುತ್ತಿವೆ.

“3 ತಿಂಗಳ ಹಿಂದಷ್ಟೇ ಬಿಟೆಕ್‌ಗಾಗಿ ಸೋಲಂಕಿ ಇಲ್ಲಿಗೆ ಅಧ್ಯಯನಕ್ಕೆ ಬಂದಿದ್ದರು. ಇದು ವೈಯಕ್ತಿಕ ಸಮಸ್ಯೆಯಿಂದಾದ ಸಾವಲ್ಲ. ಇದೊಂದು ಸಾಂಸ್ಥಿಕ ಕೊಲೆ ಎಂದು ನಾವು ಅರ್ಥಮಾಡಿಕೊಳ್ಳಬೇಕು. ನಮ್ಮ ದೂರುಗಳ ಹೊರತಾಗಿಯೂ ಸಂಸ್ಥೆ ಯಾವುದೇ ಕ್ರಮ ವಹಿಸಲಿಲ್ಲ” ಎಂದು ಸ್ಟಡಿ ಸರ್ಕಲ್ ಆರೋಪಿಸಿದೆ.

“ಮೊದಲ ವರ್ಷದ ವಿದ್ಯಾರ್ಥಿಗಳು ಮೀಸಲಾತಿ ವಿರೋಧಿ ನಿಂದನೆಗಳನ್ನು ಎದುರಿಸಬೇಕಾಗುತ್ತಿದೆ. ಅರ್ಹತೆ ಉಳ್ಳವರು, ಅರ್ಹತೆ ಇಲ್ಲದವರು ಎಂದು ಹೀಯಾಳಿಸಲಾಗುತ್ತದೆ. ಇಲ್ಲಿ ತಳಸಮುದಾಯದ ಅಧ್ಯಾಪಕರು ಮತ್ತು ಸಲಹೆಗಾರರ ಪ್ರಾತಿನಿಧ್ಯದ ಕೊರತೆ ಇದೆ” ಎಂದು ದೂರಿದೆ.

“ಜಾತಿ ಸಂಬಂಧಿತ ಪ್ರಶ್ನೆಗಳನ್ನು ಪರಿಹರಿಸಲು ಕೌನ್ಸಿಲಿಂಗ್ ಇಲ್ಲದಿರುವುದನ್ನು ಪ್ರಶ್ನಿಸುತ್ತಲೇ ಇದ್ದೇವೆ. ಐಐಟಿಗೆ ಬರುವ ವಿದ್ಯಾರ್ಥಿಗಳನ್ನು ಮೆರಿಟ್ ಎಂಬ ಅಸ್ತ್ರ ಮೂಲಕ ಶೋಷಿಸಲಾಗುತ್ತಿದೆ” ಎಂದು ವಿಷಾದಿಸಿದೆ.

“ಇನ್ನು ಎಷ್ಟು ಮಂದಿ ದರ್ಶನ್ ಮತ್ತು ಅನಿಕೇತ್‌ ಅಂಥವರು ಸಾಯಬೇಕು? ದರ್ಶನ್ ಸೋಲಂಕಿ ಅವರ ಸಾಂಸ್ಥಿಕ ಹತ್ಯೆಯ ಕುರಿತು ನಮ್ಮ ಹೇಳಿಕೆ ಇದಾಗಿದೆ.  ಇವರ ಕುಟುಂಬದ ಬಗ್ಗೆ ನಾವು ಸಾಮೂಹಿಕ ಜವಾಬ್ದಾರಿಯನ್ನು ಹೊಂದಿದ್ದೇವೆ. ಒಂದು ಸಮಾಜವಾಗಿ, ಒಂದು ಸಂಸ್ಥೆಯಾಗಿ ನಾವು ಯಾವುದನ್ನು ಆಚರಿಸುತ್ತಿದ್ದೇವೆ ಮತ್ತು ಯಾವುದನ್ನು ಕಡೆಗಣಿಸುತ್ತಿದ್ದೇವೆ” ಎಂದು ಪ್ರಶ್ನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...