Homeಮುಖಪುಟಜಾತಿ ನಿಂದನೆ ಆರೋಪ; ಬಾಂಬೆ ಐಐಟಿಯಲ್ಲಿ ದಲಿತ ವಿದ್ಯಾರ್ಥಿ ಆ*ಹತ್ಯೆ

ಜಾತಿ ನಿಂದನೆ ಆರೋಪ; ಬಾಂಬೆ ಐಐಟಿಯಲ್ಲಿ ದಲಿತ ವಿದ್ಯಾರ್ಥಿ ಆ*ಹತ್ಯೆ

ಇದೊಂದು ಸಾಂಸ್ಥಿಕ ಕೊಲೆ ಎಂದು ಐಐಟಿ ಬಾಂಬೆಯ ‘ಅಂಬೇಡ್ಕರ್‌ ಪೆರಿಯಾರ್‌ ಫುಲೆ ಸ್ಟಡಿ ಸರ್ಕಲ್‌’ ಟ್ವೀಟ್ ಮಾಡಿದೆ

- Advertisement -
- Advertisement -

ಬಾಂಬೆಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ)ಯ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬ ಭಾನುವಾರ ಮಧ್ಯಾಹ್ನ ಹಾಸ್ಟೆಲ್‌ನ ಎಂಟನೇ ಮಹಡಿಯಿಂದ ಜಿಗಿದು ಸಾವಿಗೆ ಶರಣಾಗಿದ್ದಾನೆ.

“ಈ ವಿದ್ಯಾರ್ಥಿಯು ದಲಿತ ಸಮುದಾಯದವನಾಗಿದ್ದು, ಜಾತಿ ಕಿರುಕುಳವನ್ನು ಎದುರಿಸಿದ್ದಾನೆ” ಎಂದು ‘ಐಐಟಿ ಬಾಂಬೆಯ ಅಂಬೇಡ್ಕರ್‌ ಪೆರಿಯಾರ್‌ ಫುಲೆ ಸ್ಟಡಿ ಸರ್ಕಲ್‌’ ಟ್ವಿಟರ್‌ ಖಾತೆಯಲ್ಲಿ ಆರೋಪಿಸಲಾಗಿದೆ.

ಭಾನುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊವಾಯಿ ಪೊಲೀಸರು ತಿಳಿಸಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ನೀಡಿ, ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಲಾಗಿದೆ.

ಅಹಮದಾಬಾದ್ ಮೂಲದ ದರ್ಶನ್ ಸೋಲಂಕಿ (18) ಎಂಬ ವಿದ್ಯಾರ್ಥಿ ಮೂರೂವರೆ ತಿಂಗಳ ಹಿಂದೆ ಐಐಟಿ ಬಾಂಬೆ ಸೇರಿದ್ದು, ಬಿಟೆಕ್ ವಿದ್ಯಾರ್ಥಿಯಾಗಿದ್ದ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಹಾಸ್ಟೆಲ್ ಕಟ್ಟಡದ ಮೇಲಿಂದ ಸೋಲಂಕಿಯವರು ಜಿಗಿದಿರುವುದನ್ನು ನೋಡಿದ ಪ್ರತ್ಯಕ್ಷದರ್ಶಿಗಳಿದ್ದಾರೆ. ನಾವು ಅವರ ರೂಮ್‌ಮೇಟ್‌ಗಳ ಹೇಳಿಕೆಗಳನ್ನು ದಾಖಲಿಸುತ್ತಿದ್ದೇವೆ. ಕಾರಣವನ್ನು ತಿಳಿದುಕೊಳ್ಳಲು ಪ್ರಯತ್ನಿಸುತ್ತಿದ್ದೇವೆ” ಎಂದು ಅಧಿಕಾರಿ ತಿಳಿಸಿದ್ದಾರೆ.

ಇದು ದುರದೃಷ್ಟಕರ ಘಟನೆ ಎಂದು ಹೇಳಿರುವ ಐಐಟಿಯ ಅಧಿಕಾರಿಯೊಬ್ಬರು, “ಸಂಸ್ಥೆಯು ಪೊಲೀಸ್ ತನಿಖೆಗೆ ಸಹಕರಿಸುತ್ತಿದೆ” ಎಂದಿದ್ದಾರೆ.

ಘಟನೆ ಬೆಳಕಿಗೆ ಬಂದ ಕೂಡಲೇ ಸಂಸ್ಥೆಯ ನಿರ್ದೇಶಕ ಸುಭಾಸಿಸ್ ಚೌಧರಿ ಎಲ್ಲಾ ವಿದ್ಯಾರ್ಥಿಗಳಿಗೆ ಸಂದೇಶ ಕಳುಹಿಸಿದ್ದಾರೆ. “ಇಂದು ಮಧ್ಯಾಹ್ನ ನಡೆದ ದುರಂತ ಘಟನೆಯಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬನ ಸಾವಿನ ಕುರಿತು ತಿಳಿಸಲು ನಾವು ವಿಷಾದಿಸುತ್ತೇವೆ. ಪೊವಾಯಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ವಿದ್ಯಾರ್ಥಿಯ ಪೋಷಕರಿಗೆ ಮಾಹಿತಿ ನೀಡಲಾಗಿದ್ದು, ಅವರು ಬರುತ್ತಿದ್ದಾರೆ. ವಿದ್ಯಾರ್ಥಿನಿಯ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇವೆ ಮತ್ತು ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಸಂದೇಶದಲ್ಲಿ ತಿಳಿಸಿದ್ದಾರೆ.

ಸೋಲಂಕಿ ಅವರು ಕೆಮಿಕಲ್ ಇಂಜಿನಿಯರಿಂಗ್‌ನ ಮೊದಲ ವರ್ಷದ ಬಿಟೆಕ್ ವಿದ್ಯಾರ್ಥಿಯಾಗಿದ್ದರು. ಅಹಮದಾಬಾದ್‌ ಮೂಲದವರಾದ ಸೋಲಂಕಿ ಹಾಸ್ಟೆಲ್ 16ರಲ್ಲಿ ವಾಸವಿದ್ದರು.

ಪ್ರಥಮ ವರ್ಷದ ವಿದ್ಯಾರ್ಥಿಗಳ ಮೊದಲ ಸೆಮಿಸ್ಟರ್ ಪರೀಕ್ಷೆಗಳು ಶನಿವಾರ ಮುಕ್ತಾಯಗೊಂಡವು. ಶೈಕ್ಷಣಿಕ ಒತ್ತಡವಿತ್ತು. ಆದಾಗ್ಯೂ, ಹೆಚ್ಚಿನ ವಿವರಗಳು ಹೊರಬೀಳುವ ಮೊದಲು ಊಹಾಪೋಹ ಮಾಡುವುದು ಸೂಕ್ತವಲ್ಲ ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಹೆಸರು ಹೇಳಲಿಚ್ಛಿಸದ ಕ್ಯಾಂಪಸ್‌ ವಿದ್ಯಾರ್ಥಿಯೊಬ್ಬರು ‘ಇಂಡಿಯನ್‌ ಎಕ್ಸ್‌ಪ್ರೆಸ್‌’ಗೆ ಪ್ರತಿಕ್ರಿಯಿಸಿದ್ದು, “ಯಾವುದೇ ಡೆತ್‌ನೋಟ್ ಇಲ್ಲದ ಕಾರಣ, ಆತನ ಸಾವಿನ ಕಾರಣವೇನೆಂದು ಸ್ಪಷ್ಟವಾಗಿಲ್ಲ. ಸೆಮಿಸ್ಟರ್ ಪರೀಕ್ಷೆಗಳು ಈಗಷ್ಟೇ ಮುಗಿದಿವೆ, ಅದೊಂದೇ ಕಾರಣ ಎಂದು ಹೇಳುವುದು ಸರಿಯಲ್ಲ. ಇನ್‌ಸ್ಟಿಟ್ಯೂಟ್‌ನಿಂದ ಹೆಚ್ಚಿನದನ್ನು ತಿಳಿಯಲು ನಾವು ಕಾಯುತ್ತಿದ್ದೇವೆ” ಎಂದಿದ್ದಾರೆ.

ಕ್ಯಾಂಪಸ್‌ನ ಕೆಲವು ವಿದ್ಯಾರ್ಥಿಗಳು ಭಾನುವಾರ ತಡರಾತ್ರಿ ಕ್ಯಾಂಡಲ್‌ಲೈಟ್ ಮಾರ್ಚ್‌ನಲ್ಲಿ ಭಾಗವಹಿಸಿದರು. ಅಗಲಿದ ಸೋಲಂಕಿಗೆ ಸಂತಾಪ ಸೂಚಿಸಿದರು.

ಘಟನೆಯ ಕುರಿತು ‘ಅಂಬೇಡ್ಕರ್ ಪೆರಿಯಾರ್ ಫುಲೆ ಸ್ಟಡಿ ಸರ್ಕಲ್ ಐಐಟಿ ಬಾಂಬೆ’ (APPSC IIT Bombay) ಟ್ವಿಟರ್‌ ಖಾತೆಯಿಂದ ಮಾಡಿರುವ ಟ್ವೀಟ್‌ಗಳು ಘಟನೆಗೆ ಮತ್ತೊಂದು ಆಯಾಮವಿರುವುದನ್ನು ಹೇಳುತ್ತಿವೆ.

“3 ತಿಂಗಳ ಹಿಂದಷ್ಟೇ ಬಿಟೆಕ್‌ಗಾಗಿ ಸೋಲಂಕಿ ಇಲ್ಲಿಗೆ ಅಧ್ಯಯನಕ್ಕೆ ಬಂದಿದ್ದರು. ಇದು ವೈಯಕ್ತಿಕ ಸಮಸ್ಯೆಯಿಂದಾದ ಸಾವಲ್ಲ. ಇದೊಂದು ಸಾಂಸ್ಥಿಕ ಕೊಲೆ ಎಂದು ನಾವು ಅರ್ಥಮಾಡಿಕೊಳ್ಳಬೇಕು. ನಮ್ಮ ದೂರುಗಳ ಹೊರತಾಗಿಯೂ ಸಂಸ್ಥೆ ಯಾವುದೇ ಕ್ರಮ ವಹಿಸಲಿಲ್ಲ” ಎಂದು ಸ್ಟಡಿ ಸರ್ಕಲ್ ಆರೋಪಿಸಿದೆ.

“ಮೊದಲ ವರ್ಷದ ವಿದ್ಯಾರ್ಥಿಗಳು ಮೀಸಲಾತಿ ವಿರೋಧಿ ನಿಂದನೆಗಳನ್ನು ಎದುರಿಸಬೇಕಾಗುತ್ತಿದೆ. ಅರ್ಹತೆ ಉಳ್ಳವರು, ಅರ್ಹತೆ ಇಲ್ಲದವರು ಎಂದು ಹೀಯಾಳಿಸಲಾಗುತ್ತದೆ. ಇಲ್ಲಿ ತಳಸಮುದಾಯದ ಅಧ್ಯಾಪಕರು ಮತ್ತು ಸಲಹೆಗಾರರ ಪ್ರಾತಿನಿಧ್ಯದ ಕೊರತೆ ಇದೆ” ಎಂದು ದೂರಿದೆ.

“ಜಾತಿ ಸಂಬಂಧಿತ ಪ್ರಶ್ನೆಗಳನ್ನು ಪರಿಹರಿಸಲು ಕೌನ್ಸಿಲಿಂಗ್ ಇಲ್ಲದಿರುವುದನ್ನು ಪ್ರಶ್ನಿಸುತ್ತಲೇ ಇದ್ದೇವೆ. ಐಐಟಿಗೆ ಬರುವ ವಿದ್ಯಾರ್ಥಿಗಳನ್ನು ಮೆರಿಟ್ ಎಂಬ ಅಸ್ತ್ರ ಮೂಲಕ ಶೋಷಿಸಲಾಗುತ್ತಿದೆ” ಎಂದು ವಿಷಾದಿಸಿದೆ.

“ಇನ್ನು ಎಷ್ಟು ಮಂದಿ ದರ್ಶನ್ ಮತ್ತು ಅನಿಕೇತ್‌ ಅಂಥವರು ಸಾಯಬೇಕು? ದರ್ಶನ್ ಸೋಲಂಕಿ ಅವರ ಸಾಂಸ್ಥಿಕ ಹತ್ಯೆಯ ಕುರಿತು ನಮ್ಮ ಹೇಳಿಕೆ ಇದಾಗಿದೆ.  ಇವರ ಕುಟುಂಬದ ಬಗ್ಗೆ ನಾವು ಸಾಮೂಹಿಕ ಜವಾಬ್ದಾರಿಯನ್ನು ಹೊಂದಿದ್ದೇವೆ. ಒಂದು ಸಮಾಜವಾಗಿ, ಒಂದು ಸಂಸ್ಥೆಯಾಗಿ ನಾವು ಯಾವುದನ್ನು ಆಚರಿಸುತ್ತಿದ್ದೇವೆ ಮತ್ತು ಯಾವುದನ್ನು ಕಡೆಗಣಿಸುತ್ತಿದ್ದೇವೆ” ಎಂದು ಪ್ರಶ್ನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...