Homeಕರ್ನಾಟಕಬೆಂಗಳೂರು: ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ನಾಳೆ ಬೃಹತ್ ಸಮಾವೇಶ

ಬೆಂಗಳೂರು: ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ನಾಳೆ ಬೃಹತ್ ಸಮಾವೇಶ

- Advertisement -
- Advertisement -

ಜಸ್ಟಿಸ್‌ ಎ.ಜೆ.ಸದಾಶಿವ ಆಯೋಗದ ವರದಿ ಅನ್ವಯ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ನಾಳೆ (ಫೆಬ್ರುವರಿ 14) ಬೃಹತ್ ಸಮಾವೇಶವನ್ನು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಹಮ್ಮಿಕೊಂಡಿದೆ.

“ಡಿಸೆಂಬರ್‌ 11ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದ 64 ದಿನಗಳಿಂದ ಹೋರಾಟ ನಡೆಯುತ್ತಿದ್ದು, 65ನೇ ದಿನಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ ಭೋವಿ, ಲಂಬಾಣಿ ಸಮುದಾಯಗಳನ್ನು ಹೊರತುಪಡಿಸಿ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿನ ಉಳಿದ ಎಲ್ಲಾ ಸಮುದಾಯಗಳು ಈ ಹೋರಾಟದಲ್ಲಿ ಪಾಲ್ಗೊಳ್ಳುತ್ತಿವೆ. ಸಾವಿರಾರು ಜನ ಸೇರಲಿದ್ದಾರೆ” ಎಂದು ದಲಿತ ಮುಖಂಡರಾದ ಅಂಬಣ್ಣ ಅರೋಲಿಕರ್‌ ಅವರು ‘ನಾನುಗೌರಿ.ಕಾಂ’ಗೆ ತಿಳಿಸಿದರು.

“ಪರಿಶಿಷ್ಟ ಜಾತಿಯಲ್ಲಿನ ಅಸ್ಪೃಶ್ಯ ಸಮುದಾಯಗಳು ಒಂದಾಗಿವೆ ಎಂಬ ದೊಡ್ಡ ಸಂದೇಶವನ್ನು ನಾಳಿನ ಸಮಾವೇಶ ನೀಡುತ್ತಿದೆ. ಸಮಗಾರ, ಮೋಚಿ, ಡೋಹಾರ (ತ್ರಿಮಸ್ಥ) ಸಮುದಾಯದ ಮುಖಂಡರು ನಾಳಿನ ಸಮಾವೇಶದಲ್ಲಿ ಮಾತನಾಡಲಿದ್ದಾರೆ” ಎಂದು ಮಾಹಿತಿ ನೀಡಿದರು.

“ಕೇವಲ ಎರಡು ಜಾತಿಗಳು ಒಳಮೀಸಲಾತಿಗಾಗಿ ಹೋರಾಡುತ್ತಿವೆ ಎಂಬ ತಪ್ಪು ಕಲ್ಪನೆ ರವಾನೆಯಾಗಿತ್ತು. ಆದರೆ ಈ ಮೂವತ್ತು ವರ್ಷಗಳ ಹೋರಾಟದ ಫಲವಾಗಿ ಎಲ್ಲ ಅಸ್ಪೃಶ್ಯ ಜಾತಿಗಳು ಈಗ ಒಳಮೀಸಲಾತಿಗೆ ಆಗ್ರಹಿಸುತ್ತಿರುವುದು ದೊಡ್ಡ ಬದಲಾವಣೆ. ಇದು ಖುಷಿಯ ಸಂಗತಿ. ಒಳಮೀಸಲಾತಿ ಜಾರಿಯಾಗುವುದಕ್ಕಿಂತ ಹೆಚ್ಚಿನ ಖುಷಿ ಈ ಅಸ್ಪೃಶ್ಯ ಸಮುದಾಯಗಳ ಒಗ್ಗಟ್ಟಿನಿಂದ ಸಿಕ್ಕಿದೆ. ಇದೊಂದು ದೊಡ್ಡ ಯಶಸ್ಸು” ಎಂದು ಬಣ್ಣಿಸಿದರು.

ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿಯನ್ನು ಅಂಗೀಕರಿಸಿ ಕೂಡಲೇ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ಕೇಂದ್ರ ಸರ್ಕಾರವು ಅನುಚ್ಛೇದ 341(3)ಕ್ಕೆ ಕೂಡಲೇ ತಿದ್ದುಪಡಿ ಮಾಡಬೇಕು ಎಂದು ನಾಳಿನ ಸಮಾವೇಶ ಆಗ್ರಹಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತ್ರಿಮತಸ್ಥರಿಗೆ (ಮೋಚಿ, ಡೋಹಾರ, ಸಮಗಾರ) ಅಭಿವೃದ್ಧಿ ನಿಗಮವನ್ನು ಕೂಡಲೇ ಸ್ಥಾಪಿಸಬೇಕು. ಹಿಂದುಳಿದ ವರ್ಗಗಳ ಆಯೋಗದ ಕಾಂತರಾಜ ವರದಿಯನ್ನು ಬಹಿರಂಗ ಮಾಡಿ ಯಥಾವತ್ತಾಗಿ ಜಾರಿ ಮಾಡಬೇಕು. ಎಲ್ಲಾ ರಾಜಕೀಯ ಪಕ್ಷಗಳು ಪರಿಶಿಷ್ಟ ಜಾತಿಗಳಲ್ಲಿ ಬಹುಸಂಖ್ಯಾತರಾಗಿರುವ ಮಾದಿಗ ಮತ್ತು ಛಲವಾದಿಗಳ ಜನಸಂಖ್ಯೆಗೆ ತಕ್ಕಂತೆ ತಲಾ 15 ರಾಜಕೀಯ ಪ್ರಾತಿನಿಧ್ಯ ಕಲ್ಪಿಸಬೇಕು. ಕರ್ನಾಟಕ ರಾಜ್ಯದಲ್ಲಿರುವ 43 ಸಾವಿರ ಪೌರ ಕಾರ್ಮಿಕರು ಮತ್ತು ವಾಹನ ಚಾಲಕರನ್ನು ಖಾಯಂಗೊಳಿಸಬೇಕು ಎಂದು ಒತ್ತಾಯಿಸಲಾಗುತ್ತಿದೆ.

ನ್ಯಾ. ಎ.ಜೆ. ಸದಾಶಿವ ಆಯೋಗದ ಪರ ಹೋರಾಟಗಾರರ ಮೇಲೆ ಹೂಡಿದ ರೌಡಿಶೀಟರ್ ಪ್ರಕರಣಗಳನ್ನು ರದ್ದುಪಡಿಸಬೇಕು. ದಲಿತ ಸಂಘಟಕರ ಮೇಲೆ ದಾಖಲಾದ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ರದ್ದುಪಡಿಸಬೇಕು. ಪರಿಶಿಷ್ಟ ಜಾತಿಗಳ ಉಪ ಹಂಚಿಕೆ ಅನುದಾನವನ್ನು ಒಳಮೀಸಲಾತಿ ಅನ್ವಯ 6 + 5+1+ 3 ಸೂತ್ರದಂತೆ ಹಂಚಿಕೆ ಮಾಡಬೇಕು. ಅನುದಾನ ದುರುಪಯೋಗಕ್ಕೆ ಕಾರಣವಾದ 7(D) ಯನ್ನು ತೆಗೆದು ಹಾಕಬೇಕು ಎಂದು ಆಗ್ರಹಿಸಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...