Homeಮುಖಪುಟನೆಹರು ಉಪನಾಮ ಬಳಕೆ ಕುರಿತಾದ ಮೋದಿ ಹೇಳಿಕೆಯನ್ನು ಕಡತದಿಂದ ಏಕೆ ತೆಗೆದಿಲ್ಲ?: ರಾಹುಲ್ ಪ್ರಶ್ನೆ

ನೆಹರು ಉಪನಾಮ ಬಳಕೆ ಕುರಿತಾದ ಮೋದಿ ಹೇಳಿಕೆಯನ್ನು ಕಡತದಿಂದ ಏಕೆ ತೆಗೆದಿಲ್ಲ?: ರಾಹುಲ್ ಪ್ರಶ್ನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ನೆಹರೂ ಉಪನಾಮ ಬಳಕೆ ಕುರಿತು ಮಾತನಾಡಿದ್ದನ್ನು ಏಕೆ ದಾಖಲೆಯಿಂದ ತೆಗೆದುಹಾಕಲಿಲ್ಲ ಎಂದು ಕಾಂಗ್ರೆಸ್‌ನ ರಾಹುಲ್ ಗಾಂಧಿ ಇಂದು ಪ್ರಶ್ನಿಸಿದ್ದಾರೆ. ”ನಾನು ಅತ್ಯಂತ ಸಭ್ಯ ಭಾಷೆ ಬಳಸಿದ್ದೇನೆ ಮತ್ತು ನಾನು ಹೇಳಿದ ಎಲ್ಲ ಹೇಳಿಕೆಗಳಿಗೂ ಸಾಕ್ಷಿಗಳಿವೆ. ಆದರೆ ಪ್ರಧಾನಿ ನೇರವಾಗಿ ನನ್ನನ್ನು ಅವಮಾನಿಸುತ್ತಾರೆ. ನಿಮ್ಮ ಹೆಸರು ರಾಹುಲ್ ಗಾಂಧಿ, ರಾಹುಲ್ ನೆಹರೂ ಅಲ್ಲ ಏಕೆ ಎಂದು ಅವರು ಹೇಳುತ್ತಾರೆ. ಆದರೆ ಅವರ ಈ ಯಾವ ಮಾತುಗಳನ್ನೂ ದಾಖಲೆಯಿಂದ ತೆಗೆದುಹಾಕಲಾಗಿಲ್ಲ. ಆದರೆ ಸತ್ಯ ಯಾವಾಗಲೂ ಹೊರಬರಬರುತ್ತದೆ” ಎಂದು ಅವರು ಕೇರಳದ ವಯಾನಂದ್‌ನಲ್ಲಿ ತಮ್ಮ ಕ್ಷೇತ್ರದಲ್ಲಿ ನಡೆದ ಸಭೆಯಲ್ಲಿ ಹೇಳಿದರು.

”ನೀವು ಗಮನಿಸಿ ನೋಡಿ ನಾನು ಮಾತನಾಡುವಾಗ ಅವರು ಮುಖವನ್ನೇ ನೋಡುತ್ತಿದ್ದರು. ಆ ವೇಳೆ ಪ್ರಧಾನಿ ಎಷ್ಟು ಬಾರಿ ನೀರು ಕುಡಿದರು ಮತ್ತು ನೀರು ಕುಡಿಯುವಾಗ ಅವರ ಕೈಗಳು ಹೇಗೆ ನಡುಗುತ್ತಿದ್ದವು ಎಂಬುದನ್ನು ನೋಡಿ… ಪ್ರಧಾನಿ ಅವರು ತುಂಬಾ ಶಕ್ತಿಶಾಲಿ ಮತ್ತು ಎಲ್ಲರೂ ಅವರಿಗೆ ಭಯ ಪಡುತ್ತಾರೆ ಎಂದು ಜನರು ಭಾವಿಸುತ್ತಾರೆ. ಅವರು ಭಯಪಡುವ ಕೊನೆಯ ವಿಷಯವೆಂದರೆ ತಾನು ನರೇಂದ್ರ ಮೋದಿ ಎನ್ನುವ ಕಾರಣಕ್ಕೆ.. ಅವರು ಭಾರತದ ಪ್ರಧಾನಿಯಾಗಿದ್ದರೂ ಪರವಾಗಿಲ್ಲ. ಮುಂದೊಂದು ದಿನ ಅವರು ಸತ್ಯವನ್ನು ಎದುರಿಸಬೇಕಾಗುತ್ತದೆ ಎಂದು ರಾಹುಲ್ ಹೇಳಿದರು.

ಗೌತಮ್ ಅದಾನಿ ಹಗರಣದ ಬಗ್ಗೆ ಮಾತನಾಡುವ ಸಮಯದಲ್ಲಿ ಪ್ರಧಾನಿಗೂ ಅದಾನಿಗೂ ಸಂಬಂಧ ಏನು ಎಂದು ರಾಹುಲ್ ಪ್ರಶ್ನೆ ಮಾಡಿದ್ದರು. ಅಷ್ಟೇ ಅಲ್ಲದೇ ಪ್ರಧಾನಿ ಮೋದಿಯನ್ನು ಕ್ರೋನಿ ಕ್ಯಾಪಿಟಲಿಸಂ ಎಂದು ಆರೋಪಿಸಿದರು. ಅವರ ಈ ಹೇಳಿಕೆಗಳು ಸಂಸತ್ತಿನ ಒಳಗೆ ಮತ್ತು ಹೊರಗೆ ರಾಜಕೀಯ ವಲಯದಲ್ಲಿ ಬಿರುಗಾಳಿಯನ್ನು ಎಬ್ಬಿಸಿದೆ. ರಾಹುಲ್ ಗಾಂಧಿಯವರ ಟೀಕೆಗಳನ್ನು ಕಡತದಿಂದ ತೆಗೆದುಹಾಕುವುದು ಪ್ರಜಾಪ್ರಭುತ್ವದ ಮೇಲಿನ ದಾಳಿ ಎಂದು ಕಾಂಗ್ರೆಸ್ ಹೇಳಿದೆ.

”2014ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅದಾನಿ ಸಮೂಹದ ಹಲವು ವ್ಯವಹಾರಗಳಿಗೆ ಅನುಕೂಲವಾಗಲೆಂದು ಭಾರತದ ಆರ್ಥಿಕ ನೀತಿಗಳನ್ನು ಬದಲಿಸಲಾಗಿದೆ” ಎಂದ ರಾಹುಲ್ ಆರೋಪಿಸಿದರು. ಆಗ ಬಿಜೆಪಿಯವರು ಇದು “ಅಸಂಸದೀಯ” ಮತ್ತು “ದಾರಿ ತಪ್ಪಿಸುವ” ತಂತ್ರ ಎಂದು ಆರೋಪಿಸಿದ ನಂತರ ಕಡತದಿಂದ ಆವರ ಹೇಳಿಕೆಯನ್ನು ತೆಗೆದುಹಾಕಲಾಯಿತು.

ಇದನ್ನೂ ಓದಿ: ಸಂಸತ್ತಿನಲ್ಲಿ ಪ್ರಧಾನಿ ಬಗ್ಗೆ ಮಾತನಾಡಿದ್ದಕ್ಕೆ ರಾಹುಲ್ ಗಾಂಧಿಗೆ ನೋಟಿಸ್‌

ಆ ಬಳಿಕ ಪ್ರಧಾನಿ ಮೋದಿ ಮಾತನಾಡುವಾಗ, ಗಾಂಧೀಜಿ ಅಥವಾ ಕಾಂಗ್ರೆಸ್‌ನ ಹೆಸರನ್ನು ಹೇಳದೆ, “ನಾವು ಎಲ್ಲಿಯಾದರೂ ನೆಹರೂ ಅವರ ಹೆಸರನ್ನು ಹೇಳಲು ತಪ್ಪಿಸಿಕೊಂಡರೆ, ಅವರು (ಕಾಂಗ್ರೆಸ್) ಅಸಮಾಧಾನಗೊಳ್ಳುತ್ತಾರೆ, ನೆಹರೂ ಅವರು ಅಂತಹ ಮಹಾನ್ ವ್ಯಕ್ತಿಯಾಗಿದ್ದರು. ನಂತರ ಅವರ್ಯಾರೂ ನೆಹರು ಉಪನಾಮವನ್ನು ತಮ್ಮ ಹೆಸರಿನ ಮುಂದೆ ಏಕೆ ಬಳಸುವುದಿಲ್ಲ, ನೆಹರೂ ಹೆಸರನ್ನು ಬಳಸುವುದರಲ್ಲಿ ನಾಚಿಕೆಗೇಡು ಏನು? ಎಂದೆಲ್ಲಾ ಮಾತನಾಡಿದರು. ಪ್ರಧಾನಿ ಈ ರೀತಿಯ ಅಸಭ್ಯ ಮಾತುಗಳನ್ನಾಡಿದಾಗ ಅದನ್ನು ಕಡತದಿಂದ ತೆಗೆದು ಹಾಕಲ್ಲ, ನಾವು ಸಭ್ಯಮಾತುಗಳೊಂದಿಗೆ ಸಾಕ್ಷಿಸಮೇತ ಟೀಕೆ ಮಾಡಿದರೂ ಕಡತದಿಂದ ತೆಗೆದು ಹಾಕುತ್ತಾರೆ. ಇದು ಪ್ರಜಾಪ್ರಭುತ್ವದ ಮೇಲಿನ ದಾಳಿಯಲ್ಲವೇ? ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

“ನಿಯಮಗಳ ಪ್ರಕಾರ, ನೀವು ಸಾಕ್ಷಿಗಳಿಲ್ಲದೇ ಏನನ್ನಾದರೂ ಹೇಳುತ್ತಿದ್ದರೆ ಅಥವಾ ನೀವು ಯಾರನ್ನಾದರೂ ಅವಮಾನಿಸುತ್ತಿದ್ದರೆ ಭಾಷಣದ ಭಾಗಗಳನ್ನು ರೆಕಾರ್ಡ್‌ನಿಂದ ತೆಗೆದುಹಾಕಬಹುದು. ನಾನು ಯಾರನ್ನೂ ಅವಮಾನಿಸಿಲ್ಲ, ನಾನು ಸೌಜನ್ಯ ಭಾಷೆಯನ್ನು ಬಳಸಿದ್ದೇನೆ, ನಾನು ಅತ್ಯಂತ ಸಭ್ಯ ಭಾಷೆ ಮತ್ತು ಎಲ್ಲವನ್ನೂ ಬಳಸಿದ್ದೇನೆ” ಎಂದು ರಾಹುಲ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...