Homeಕರ್ನಾಟಕಶಾಲೆಗಳಲ್ಲಿ ಸಾತ್ವಿಕ ಆಹಾರ ನೀಡುವ ಚಿಂತನೆಯಿಲ್ಲ: ಶಿಕ್ಷಣ ಸಚಿವ ನಾಗೇಶ್ ಸ್ಪಷ್ಟನೆ

ಶಾಲೆಗಳಲ್ಲಿ ಸಾತ್ವಿಕ ಆಹಾರ ನೀಡುವ ಚಿಂತನೆಯಿಲ್ಲ: ಶಿಕ್ಷಣ ಸಚಿವ ನಾಗೇಶ್ ಸ್ಪಷ್ಟನೆ

- Advertisement -
- Advertisement -

ಶಾಲೆಗಳಲ್ಲಿ ಸಾತ್ವಿಕ ಆಹಾರ ನೀಡುವ ಚಿಂತನೆಯಿಲ್ಲ, ಆದರೆ ಸರ್ಕರ ನೈತಿಕ ಶಿಕ್ಷಣ ನೀಡುವ ಉದ್ದೇಶವಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟನೆ ನೀಡಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಜೆಡಿಎಸ್ ಶಾಸಕ ಕೆ.ಎಸ್ ತಿಪ್ಪೇಸ್ವಾಮಿಯವರ ಪ್ರಶ್ನೆಗೆ ಉತ್ತರಿಸಿದ ಅವರು, “ಸಾತ್ವಿಕ ಆಹಾರ ಮತ್ತು ನೈತಿಕ ಶಿಕ್ಷಣ ಎರಡನ್ನೂ ಒಟ್ಟಿಗೆ ನೋಡುವುದು ಸರಿಯಲ್ಲ. ಸರ್ವಧರ್ಮ ಚಿಂತಕರ ಸಭೆಯಲ್ಲಿ ನೈತಿಕ ಶಿಕ್ಷಣ ನೀಡಬೇಕೆಂಬ ಒಕ್ಕೊರಲ ಆಗ್ರಹ ಕೇಳಿಬಂದಿದೆ. ಕೆಲವರು ಸಾತ್ವಿಕ ಆಹಾರ ನೀಡಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಆಧಾರದಲ್ಲಿ ನಾವು ನೈತಿಕ ಶಿಕ್ಷಣ ನೀಡುವ ಉದ್ದೇಶ ಹೊಂದಿದ್ದೇವೆ” ಎಂದಿದ್ದಾರ.

ಶಾಲಾ ಶಿಕ್ಷಣದಲ್ಲಿ ಮೌಲ್ಯ ಶಿಕ್ಷಣ ಶಿಕ್ಷಣವನ್ನು ಅನುಷ್ಠಾನಗೊಳಿಸುವುದರ ಕುರಿತು ವಿಧಾನಸೌಧದಲ್ಲಿ ನಡೆದಿದ್ದ ಸಭೆಯಲ್ಲಿ ಸಭೆಯಲ್ಲಿ ಮಠಾಧೀಶರು ಮಾಂಸಾಹಾರದ ಮೇಲೆ ಮತ್ತೆ ಪ್ರಹಾರ ನಡೆಸಿದ್ದರು. ಮಕ್ಕಳಿಗೆ ಸಾತ್ವಿಕ ಆಹಾರ ನೀಡಬೇಕು, ಅಂಗಡಿಗಳ ಮುಂದೆ ಮಾಂಸ ನೇತು ಹಾಕುವುದನ್ನು ಬ್ಯಾನ್ ಮಾಡಬೇಕೆಂಬ ಆಗ್ರಹಗಳು ಕೇಳಿಬಂದಿದ್ದವು. ಆದರೆ ಇದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಕಂಡುಬಂದಿತ್ತು.

ಸಭೆಯಲ್ಲಿ ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಮಾತನಾಡಿ, “ಆಹಾರಕ್ಕೂ ವ್ಯಕ್ತಿತ್ವಕ್ಕೂ ಸಂಬಂಧವಿದೆ.  ಕೆಲವು ಆಹಾರಗಳು ಮಕ್ಕಳಲ್ಲಿ ನಕರಾತ್ಮಕ ಮನೋಭಾವ ಬೆಳೆಸುತ್ತವೆ. ಹಾಗಾಗಿ ಮಕ್ಕಳಿಗೆ ಸಾತ್ವಿಕ ಆಹಾರ ನೀಡಬೇಕು ಮತ್ತು ಭಗವದ್ಗೀತೆಯನ್ನು ಮುಕ್ತವಾಗಿ ಬೋಧಿಸಬೇಕು” ಎಂದು ಪ್ರತಿಪಾದಿಸಿದ್ದರು.

ಮಕ್ಕಳು ಅಪೌಷ್ಠಿಕತೆಯಿಂದ ನರಳುತ್ತಿರುವ ಸಂದರ್ಭದಲ್ಲಿ ಮಾಂಸಾಹಾರದಂತಹ ಪೌಷ್ಠಿಕ ಆಹಾರದ ಮೇಲಿನ ಸ್ವಾಮೀಜಿಗಳ ಪ್ರಹಾರವನ್ನು ಹಲವಾರು ಜನ ಸಾಮಾಜಿಕ ಜಾಲತಾಣಗಳಲ್ಲಿ ಖಂಡಿಸಿದ್ದರು. ಹಾಗಾಗಿ ಸರ್ಕಾರ ಸಸ್ಯಾಹಾರಿ ಆಹಾರ ಕಡ್ಡಾಯ ಮಾಡುವುದರಿಂದ ಹಿಂದೆ ಸರಿದು, ನೈತಿಕ ಶಿಕ್ಷಣ ನೀಡುವುದಾಗಿ ಹೇಳಿಕೆ ನೀಡುತ್ತಿದೆ.

ಇದನ್ನೂ ಓದಿ: ನೈತಿಕತೆಗೂ, ಮೊಟ್ಟೆ-ಮಾಂಸದಂಗಡಿಗೂ ಎತ್ತನಿಂದೆತ್ತ ಸಂಬಂಧವಯ್ಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...