Homeಮುಖಪುಟಭಾರತದ ಬಿಬಿಸಿ ಕಚೇರಿಗಳ ಮೇಲೆ ಐಟಿ ದಾಳಿ; ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಟೀಕೆ

ಭಾರತದ ಬಿಬಿಸಿ ಕಚೇರಿಗಳ ಮೇಲೆ ಐಟಿ ದಾಳಿ; ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಟೀಕೆ

- Advertisement -
- Advertisement -

ಇತ್ತೀಚೆಗೆ ಬಿಬಿಸಿ ಸುದ್ದಿ ಸಂಸ್ಥೆಯು 2002ರ ಗುಜರಾತ್ ಗಲಭೆಗೆ ಸಂಬಂಧಿಸಿದ ಆರೋಪಗಳು ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕುರಿತಾದ ಸರಣಿ ಸಾಕ್ಷ್ಯಚಿತ್ರ ಬಿಡುಗಡೆ ಮಾಡಿತ್ತು. ಇದು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಅದರ ಬೆನ್ನಲ್ಲೇ ಇಂದು ಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳು ದೆಹಲಿ ಮತ್ತು ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ.

ಅಂತರರಾಷ್ಟ್ರೀಯ ತೆರಿಗೆ ಮತ್ತು ವರ್ಗಾವಣೆ ಬೆಲೆಗಳ ಅಕ್ರಮದ ಬಗ್ಗೆ ಸಮೀಕ್ಷೆ ನಡೆಸುತ್ತಿದ್ದು, ಅದರಂತೆ ಬಿಬಿಸಿ ಮೇಲೂ ಆರೋಪ ಕೇಳಿಬಂದಿದೆ. ಹಾಗಾಗಿ ಸಮೀಕ್ಷೆ ಮಾಡುತ್ತಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆಂದು ಮೂಲಗಳು ತಿಳಿಸಿವೆ.

ಕೆಲವು ಪತ್ರಕರ್ತರ ದಾಖಲೆಗಳು ಮತ್ತು ಫೋನ್‌ಗಳನ್ನು ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಅಧಿಕಾರಿಗಳು ಇದು ಸಮೀಕ್ಷೆಯೇ ಹೊರತು ದಾಳಿಯಲ್ಲ, ಫೋನ್‌ಗಳನ್ನು ಹಿಂತಿರುಗಿಸಲಾಗುವುದು ಎಂದು ತೆರಿಗೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರಕ್ಕೆ ತಡೆ ವಿವಾದ; ಮೂರು ವಾರಗಳಲ್ಲಿ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

“ನಮಗೆ ಕೆಲವು ಸ್ಪಷ್ಟೀಕರಣಗಳು ಬೇಕಾಗಿದ್ದವು ಮತ್ತು ಅದಕ್ಕಾಗಿ ನಮ್ಮ ತಂಡವು ಬಿಬಿಸಿ ಕಚೇರಿಗೆ ಭೇಟಿ ನೀಡುತ್ತಿದೆ ಮತ್ತು ನಾವು ಸಮೀಕ್ಷೆಯನ್ನು ನಡೆಸುತ್ತಿದ್ದೇವೆ. ನಮ್ಮ ಅಧಿಕಾರಿಗಳು ಖಾತೆ ಪುಸ್ತಕಗಳನ್ನು ಪರಿಶೀಲಿಸಲು ಹೋಗಿದ್ದಾರೆ, ಇದು ದಾಳಿಯಲ್ಲ” ಎಂದು ಆದಾಯ ತೆರಿಗೆ ಮೂಲಗಳು ಪ್ರತಿಪಾದಿಸುತ್ತವೆ.

ಕಳೆದ ತಿಂಗಳು “ಭಾರತ: ಮೋದಿ ಪ್ರಶ್ನೆ” ಎಂಬ ಎರಡು ಭಾಗಗಳ ಸಾಕ್ಷ್ಯಚಿತ್ರದ ಸರಣಿಯನ್ನು ಬಿಬಿಸಿ  ಹೊರತಂದಿತ್ತು ಆದರೆ ಭಾರತ ಸರ್ಕಾರ ಜನವರಿ 21 ರಂದು, ಮಾಹಿತಿ ತಂತ್ರಜ್ಞಾನ ನಿಯಮಗಳ 2021ರ ಅಡಿಯಲ್ಲಿ ತುರ್ತು ಅಧಿಕಾರವನ್ನು ಬಳಸಿಕೊಂಡು ವಿವಾದಾತ್ಮಕ ಸಾಕ್ಷ್ಯಚಿತ್ರದ ಲಿಂಕ್‌ಗಳನ್ನು, YouTube ವೀಡಿಯೊಗಳು ಮತ್ತು Twitter ಪೋಸ್ಟ್‌ಗಳನ್ನು ಭಾರತದಲ್ಲಿ ನಿರ್ಬಂಧಿಸಲು ನಿರ್ದೇಶಿಸಿತು.

ಪ್ರಧಾನಿ ಮೋದಿಯವರನ್ನು ಟೀಕಿಸುವ ಸಾಕ್ಷ್ಯಚಿತ್ರದ ಬಗ್ಗೆ ಸರ್ಕಾರವು ಬಿಬಿಸಿಯನ್ನು ಗುರಿಯಾಗಿಸಿಕೊಂಡಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದೆ.

“ಇಲ್ಲಿ ನಾವು ಅದಾನಿ-ಹಿಂಡೆನ್‌ಬರ್ಗ್ ವಿವಾದದ ಬಗ್ಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಯನ್ನು ಕೇಳುತ್ತಿದ್ದೇವೆ, ಅಲ್ಲಿ ಸರ್ಕಾರವು ಬಿಬಿಸಿಯನ್ನು ಕಾಡುತ್ತಿದೆ. ವಿನಾಶ ಕಾಲಕ್ಕೆ ವಿಪರೀತ ಬುದ್ದಿ ಎನ್ನುವಂತಾಗಿದೆ” ಎಂದು ಕಾಂಗ್ರೆಸ್ ನಾಯಕ ರಮೇಶ್ ಜೈರಾಮ್ ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...