Homeಮುಖಪುಟಭಾರತದ ಬಿಬಿಸಿ ಕಚೇರಿಗಳ ಮೇಲೆ ಐಟಿ ದಾಳಿ: ಅದಾನಿ ವಿರುದ್ಧ ಈ ಕ್ರಮ ಯಾಕೆ ಇಲ್ಲ?...

ಭಾರತದ ಬಿಬಿಸಿ ಕಚೇರಿಗಳ ಮೇಲೆ ಐಟಿ ದಾಳಿ: ಅದಾನಿ ವಿರುದ್ಧ ಈ ಕ್ರಮ ಯಾಕೆ ಇಲ್ಲ? ಎಂದ ಮೊಯಿತ್ರಾ

- Advertisement -
- Advertisement -

2002ರ ಗುಜರಾತ್ ಗಲಭೆ ಮತ್ತು ಆ ಸಂದರ್ಭದಲ್ಲಿ ಮೋದಿ ನಡೆ ಬಗ್ಗೆ ಟೀಕಿಸುವ ಸಾಕ್ಷ್ಯಚಿತ್ರವನ್ನು BBC ಹೊರತಂದ ಬಳಿಕ ಭಾರತ ಸರ್ಕಾರ ಅದನ್ನು ವಿರೋಧಿಸಿ ದೇಶದಲ್ಲಿ ನಿಷೇಧಿಸಿತ್ತು. ಈ ವಿದ್ಯಮಾನಗಳು ನಡೆದು ಕೆಲವೇ ವಾರಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನವದೆಹಲಿ ಮತ್ತು ಮುಂಬೈನಲ್ಲಿರುವ ಬಿಬಿಸಿಯ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.

ನವದೆಹಲಿ ಮತ್ತು ಮುಂಬೈನ ಬಿಬಿಸಿ ಕಚೇರಿಯಲ್ಲಿ ಆದಾಯ ತೆರಿಗೆ ಅಧಿಕಾರಿಗಳು “ಸಮೀಕ್ಷೆ” ಹೆಸರಲ್ಲಿ ದಾಳಿ ನಡೆಸಿರುವುದನ್ನು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು, ವ್ಯಂಗ್ಯವಾಡಿದ್ದಾರೆ. ‘ಮಿಸ್ಟರ್ ಎ’ ವಿರುದ್ಧ ಇದೇ ರೀತಿಯ ಕ್ರಮಕ್ಕೆ ಕರೆ ನೀಡಬೇಕು. ಏಕೆಂದರೆ ಹಿಂಡೆನ್‌ಬರ್ಗ್ ರಿಸರ್ಚ್‌ನ ಕಟುವಾದ ವರದಿಯ ನಂತರ ಅವರ ವ್ಯಾಪಾರದ ಅದೃಷ್ಟವು ತೀವ್ರವಾಗಿ ಕುಸಿದಿದೆ ಎಂದು ಹೇಳಿದ್ದಾರೆ. ಗೌತಮ್ ಅದಾನಿ ಹೆಸರು ಉಲ್ಲೇಖಿಸದೇ ‘ಮಿಸ್ಟರ್ ಎ’ ಪದ ಬಳಕೆ ಮಾಡಿದ್ದಾರೆ ಎನ್ನುವುದು ಸ್ಪಷ್ಟವಾಗಿ ತಿಳಿದುಬರುತ್ತದೆ.

“ಈ ವ್ಯಾಲೆಂಟೈನ್ ಡೇ “ಸಮೀಕ್ಷೆಗಳನ್ನು” ಆದಾಯ ತೆರಿಗೆ ಇಲಾಖೆ, SEBI ಮತ್ತು ಜಾರಿ ನಿರ್ದೇಶನಾಲಯ ಏಜೆನ್ಸಿಗಳು ಮಾಡುವುದರಿಂದ ಸರ್ಕಾರದ ಅತ್ಯಂತ ಮೌಲ್ಯಯುತ ಪ್ರಿಯತಮೆ‍ಯಾಗಿರುವ ‘ಮಿಸ್ಟರ್ ಎ’ ಮೇಲೆ ಹೇಗೆ ನಡೆಸುತ್ತದೆ?” ಎಂದು ಮಹುವಾ ಮೊಯಿತ್ರಾ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಭಾರತದ ಬಿಬಿಸಿ ಕಚೇರಿಗಳ ಮೇಲೆ ಐಟಿ ದಾಳಿ; ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಟೀಕೆ

ಐಟಿ ಇಲಾಖೆಯ ಅಧಿಕಾರಿಗಳು ಮಂಗಳವಾರ ನವದೆಹಲಿಯ ಬಿಬಿಸಿ ಕಚೇರಿಯಲ್ಲಿದ್ದರು, ಇಲಾಖೆಯ ಅಧಿಕಾರಿಗಳು ಇದನ್ನು “ಸಮೀಕ್ಷೆ” ಎಂದು ವಿವರಿಸಿದ್ದಾರೆ. 2002 ರ ಗುಜರಾತ್ ಗಲಭೆ ಮತ್ತು ಮೋದಿ ಕುರಿತಾದ ಎರಡು ಸಾಕ್ಷ್ಯಚಿತ್ರಗಳನ್ನು BBC ಬಿಡುಗಡೆ ಮಾಡಿದ ಒಂದು ತಿಂಗಳ ನಂತರ ಈ ಬೆಳವಣಿಗೆ ನಡೆದಿದೆ.

”ಕೆಲವು ಅಕ್ರಮಗಳು ನಡೆದಿರುವ ಬಗ್ಗೆ ಖಚಿತವಾದ ಆಧಾರದ ಮೇಲೆ BBC ಗೆ ಸಂಬಂಧಿಸಿದ ಕೆಲವು ವಿಷಯಗಳನ್ನು” ಇಲಾಖೆಯು ತನಿಖೆ ನಡೆಸುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಧಿಕಾರಿಗಳು ಸಾಕ್ಷ್ಯಚಿತ್ರ ಮತ್ತು ಸಮೀಕ್ಷೆಯ ನಡುವೆ ಯಾವುದೇ ಸಂಬಂಧವನ್ನು ಇಲ್ಲ, ಬಿಬಿಸಿ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವಾಗ “ವಿಷ ಕಕ್ಕಬಾರದು” ಎಂದು ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಹೇಳಿದ್ದಾರೆ.

“ಬಿಬಿಸಿ ಭಾರತ ವಿರೋಧಿ ಪ್ರಚಾರದಲ್ಲಿ ತೊಡಗಿದೆ. ಎಲ್ಲಿಯವರೆಗೆ ವಿಷ ಕಕ್ಕುವುದಿಲ್ಲವೋ ಅಲ್ಲಿಯವರೆಗೆ ಭಾರತವು ಪ್ರತಿ ಸಂಸ್ಥೆಗೆ ಅವಕಾಶ ನೀಡುವ ದೇಶವಾಗಿರುತ್ತದೆ” ಎಂದು ಗೌರವ್ ಭಾಟಿಯಾ ಹೇಳಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಇಲ್ಲಿ ನಾವು ಅದಾನಿ ವಿಚಾರದಲ್ಲಿ ಜೆಪಿಸಿಗೆ ಬೇಡಿಕೆ ಇಡುತ್ತಿದ್ದೇವೆ ಆದರೆ ಸರ್ಕಾರ ಬಿಬಿಸಿಯ ಬೆನ್ನುಬಿದ್ದಿದೆ. ”ವಿನಾಶ ಕಾಲಕ್ಕೆ ವಿಪರೀತ ಬುದ್ದಿ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...