Homeಮುಖಪುಟಮಾಧ್ಯಮಗಳ ಮೇಲೆ ಬೆದರಿಕೆ ಸಲ್ಲದು: ಬಿಬಿಸಿ ಮೇಲಿನ ಐಟಿ ದಾಳಿಗೆ ಎಡಿಟರ್ಸ್ ಗಿಲ್ಡ್ ಖಂಡನೆ

ಮಾಧ್ಯಮಗಳ ಮೇಲೆ ಬೆದರಿಕೆ ಸಲ್ಲದು: ಬಿಬಿಸಿ ಮೇಲಿನ ಐಟಿ ದಾಳಿಗೆ ಎಡಿಟರ್ಸ್ ಗಿಲ್ಡ್ ಖಂಡನೆ

- Advertisement -
- Advertisement -

ಗುಜರಾತ್ ಗಲಭೆಯಲ್ಲಿ ನರೇಂದ್ರ ಮೋದಿಯವರ ಪಾತ್ರದ ಕುರಿತು ಸಾಕ್ಷ್ಯಚಿತ್ರ ಬಿಡುಗಡೆ ಮಾಡಿದ ತಿಂಗಳೊಳಗೆ ಭಾರತದ ಬಿಬಿಸಿ ಕಚೇರಿಗಳ ಮೇಲೆ ಐಟಿ ದಾಳಿ ನಡೆಸಿರುವುದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಮಾಧ್ಯಮಗಳ ಮೇಲಿನ ಬೆದರಿಕೆ ಸಲ್ಲದು ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ತಾಕೀತು ಮಾಡಿದೆ.

ಸರ್ಕಾರದ ನೀತಿಗಳನ್ನು ಟೀಕಿಸುವ, ಆಡಳಿತವನ್ನು ಪ್ರಶ್ನಿಸುವ ಮಾಧ್ಯಮ ಸಂಸ್ಥೆಗಳನ್ನು ಬೆದರಿಸಲು ಮತ್ತು ಕಿರುಕುಳ ನೀಡಲು ಸರ್ಕಾರಿ ಏಜೆನ್ಸಿಗಳನ್ನು ಬಳಸಿಕೊಳ್ಳುವ ಪ್ರವೃತ್ತಿಯ ಮುಂದುವರಿಕೆಯಾಗಿ ಐಟಿ ಇಲಾಖೆಯ ‘ಸಮೀಕ್ಷೆಗಳು’ ನಡೆಯುತ್ತಿವೆ ಎಂದು ಗಿಲ್ಡ್ ಹೇಳಿಕೆಯಲ್ಲಿ ತಿಳಿಸಿದೆ.

“ಸರ್ವೆ” ಎಂದು ಕರೆಯಲ್ಪಡುವ ಈ ದಾಳಿಗಳು ಸರ್ಕಾರಿ ಏಜೆನ್ಸಿಗಳ ದುರುಪಯೋಗದ ಮೂಲಕ ಬೆದರಿಸುವ ಕ್ರಿಯೆಯೇ ಹೊರತು ಬೇರೇನೂ ಅಲ್ಲ” ಎಂದು ಬಿಬಿಸಿ ದೆಹಲಿಯ ಮಾಜಿ ಡೆಪ್ಯೂಟಿ ಚೀಫ್ ಆಫ್ ಬ್ಯೂರೋ ಪತ್ರಕರ್ತ ಸತೀಶ್ ಜಾಕೋಬ್ ತಿಳಿಸಿದ್ದಾರೆ.

2002ರ ಗುಜರಾತ್ ಗಲಭೆ ಮತ್ತು ಮೋದಿಯ ಆಡಳಿತದಲ್ಲಿ ಅಲ್ಪಸಂಖ್ಯಾತರ ಪರಿಸ್ಥಿತಿಯ ಕುರಿತು ಬಿಬಿಸಿಯು 2 ಕಂತುಗಳು ಸಾಕ್ಷ್ಯಚಿತ್ರವನ್ನು ಬಿಡುಗಡೆಗೊಳಿಸಿದೆ. ಆದರೆ ಅವು ದುರುದ್ದೇಶದಿಂದ ಕೂಡಿವೆ ಎಂದು ಕೇಂದ್ರ ಸರ್ಕಾರ ಭಾರತದಲ್ಲಿ ಅವುಗಳ ಪ್ರಸಾರವನ್ನು ತಡೆಹಿಡಿದಿತ್ತು. ಇದೇ ಸಂದರ್ಭದಲ್ಲಿ ಬಿಬಿಸಿ ಕಚೇರಿಗಳ ಮೇಲೆ ಐಟಿ ದಾಳಿ ನಡೆದಿರುವುದು ಆತಂಕಕಾರಿ ಬೆಳೆವಣಿಗೆ ಎಂದು ಗಿಲ್ಡ್ ಹೇಳಿದೆ.

2021ರಲ್ಲಿ ನ್ಯೂಸ್‌ಕ್ಲಿಕ್, ನ್ಯೂಸ್‌ಲಾಂಡ್ರಿ, ದೈನಿಕ್ ಭಾಸ್ಕರ್ ಮತ್ತು ಭಾರತ್ ಸಮಾಚಾರ್ ಮಾಧ್ಯಮ ಸಂಸ್ಥೆಗಳ ಮೇಲೆ ಐಟಿ ದಾಳಿ ನಡೆಸಲಾಗಿತ್ತು. ಅವುಗಳು ಸರ್ಕಾರದ ನೀತಿಗಳ ವಿರುದ್ಧ ವಿಮರ್ಶಾತ್ಮಕ ವರದಿಗಳನ್ನು ಪ್ರಕಟಿಸಿದ ಬೆನ್ನಲ್ಲೆ ದಾಳಿಗಳು ನಡೆದಿದ್ದವು. ಈಗ ಅದೇ ಮಾದರಿಯಲ್ಲಿ ಬಿಬಿಸಿ ಮೇಲೆ ದಾಳಿ ನಡೆಸಲಾಗಿದೆ. ಇದು ಸಾಂವಿಧಾನಿಕ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಪ್ರವೃತ್ತಿಯಾಗಿದೆ ಗಿಲ್ಡ್ ಕಿಡಿಕಾರಿದೆ.

ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳ ಹಕ್ಕುಗಳನ್ನು ದುರ್ಬಲಗೊಳಿಸದಂತೆ ಇಂತಹ ಎಲ್ಲಾ ತನಿಖೆಗಳಲ್ಲಿ ಹೆಚ್ಚಿನ ಕಾಳಜಿ ಮತ್ತು ಸೂಕ್ಷ್ಮತೆಯನ್ನು ತೋರಿಸಬೇಕು. ಅಂತಹ ತನಿಖೆಗಳನ್ನು ನಿಗದಿತ ನಿಯಮಗಳೊಳಗೆ ನಡೆಸಲಾಗುವುದು ಮತ್ತು ಸ್ವತಂತ್ರ ಮಾಧ್ಯಮವನ್ನು ಬೆದರಿಸುವ ಕಿರುಕುಳದ ಸಾಧನಗಳಾಗಿ ಅವು ಬಳಕೆಯಾಗುವುದಿಲ್ಲ ಎಂಬುದನ್ನು ಸರ್ಕಾರ ಖಚಿತಪಡಿಸಿಕೊಳ್ಳಬೇಕು ಗಿಲ್ಡ್ ಹೇಳಿಕೆಯಲ್ಲಿ ಒತ್ತಾಯಿಸಿದೆ.

ಇದನ್ನೂ ಓದಿ: ಭಾರತದ ಬಿಬಿಸಿ ಕಚೇರಿಗಳ ಮೇಲೆ ಐಟಿ ದಾಳಿ: ಅದಾನಿ ವಿರುದ್ಧ ಈ ಕ್ರಮ ಯಾಕೆ ಇಲ್ಲ? ಎಂದ ಮೊಯಿತ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...