Homeಮುಖಪುಟಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಇಮೇಜ್‌ಗೆ ಧಕ್ಕೆ ತಂದಿದ್ದಕ್ಕೆ ಬಿಬಿಸಿ ಕಚೇರಿಗಳ ಮೇಲೆ ದಾಳಿ: ದಿಗ್ವಿಜಯ ಸಿಂಗ್

ಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಇಮೇಜ್‌ಗೆ ಧಕ್ಕೆ ತಂದಿದ್ದಕ್ಕೆ ಬಿಬಿಸಿ ಕಚೇರಿಗಳ ಮೇಲೆ ದಾಳಿ: ದಿಗ್ವಿಜಯ ಸಿಂಗ್

- Advertisement -
- Advertisement -

ಮಂಗಳವಾರ ಬೆಳಿಗ್ಗೆ ಮುಂಬೈ ಮತ್ತು ದೆಹಲಿಯಲ್ಲಿರುವ ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ (ಬಿಬಿಸಿ) ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸಮೀಕ್ಷೆಯ ನೆಪದಲ್ಲಿ ದಾಳಿ ಮಾಡಿದ್ದಾರೆ. ನೀವು ಅಂತರಾಷ್ಟೀಯ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಇರುವ ಇಮೇಜ್‌ನ್ನು ಕೆಡಸಿದ್ದಕ್ಕಾಗಿ ನಿಮ್ಮ ಮೇಲೆ ಸಮೀಕ್ಷೆಯ ನೆಪದಲ್ಲಿ ದಾಳಿ ಮಾಡಲಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಹೇಳಿದ್ದಾರೆ.

“ಬಹುಶಃ, ಬಿಬಿಸಿಯ 100 ವರ್ಷಗಳ ಇತಿಹಾಸದಲ್ಲಿ ವಿಶ್ವದ ಯಾವ ಭಾಗದಲ್ಲೂ ಇಂತಹ ದಾಳಿಯನ್ನು ಎದುರಿಸಿಲ್ಲ, ಇದೇ ಮೊದಲ ಬಾರಿಗೆ ಎಂದೆನಿಸುತ್ತದೆ. ಅವರು ಮಾಡಿದ ಏಕೈಕ ತಪ್ಪು ಎಂದರೆ, 2002ರ ಗುಜರಾತ್ ಗಲಭೆಗಳ ಕುರಿತು ಸಾಕ್ಷ್ಯಚಿತ್ರವನ್ನು ಮಾಡಿದ್ದು.. ಅದರಲ್ಲಿ ಅವರು ಸತ್ಯ ಹೇಳಿದ್ದಾರೆ. ಇದರಿಂದ ಪ್ರಧಾನಿ ನರೇಂದ್ರ ಮೋದಿಯವರ ಅಂತರಾಷ್ಟ್ರೀಯ ಇಮೇಜ್‌ಗೆ ಧಕ್ಕೆಯಾಗುವುದಿಲ್ಲವೇ?” ಎಂದು ಕೇಳಿದ್ದಾರೆ.

ಬಿಬಿಸಿ ಕಚೇರಿಗಳ ಮೇಲೆ ಮಂಗಳವಾರ ಆದಾಯ ತೆರಿಗೆ ಅಧಿಕಾರಿಗಳು ಸಮೀಕ್ಷೆಯ ಹೆಸರಿನಲ್ಲಿ ದಾಳಿ ನಡೆಸಿರುವುದನ್ನು ಇದು ”ಬೆದರಿಕೆ ತಂತ್ರ” ಎಂದು ಕಾಂಗ್ರೆಸ್ ಬಣ್ಣಿಸಿದೆ. ಮೋದಿ ಸರ್ಕಾರ ಟೀಕೆಗಳಿಗೆ ಹೆದರಿ ಈ ಕ್ರಮ ತೆಗೆದುಕೊಂಡಿದೆ ಎಂಬುದನ್ನು ಇದು ತೋರಿಸುತ್ತದೆ ಎಂದು ಆರೋಪಿಸಿದೆ.

ಇದನ್ನೂ ಓದಿ: ಮಾಧ್ಯಮಗಳ ಮೇಲೆ ಬೆದರಿಕೆ ಸಲ್ಲದು: ಬಿಬಿಸಿ ಮೇಲಿನ ಐಟಿ ದಾಳಿಗೆ ಎಡಿಟರ್ಸ್ ಗಿಲ್ಡ್ ಖಂಡನೆ

ತೆರಿಗೆ ವಂಚನೆ ಆರೋಪದ ತನಿಖೆಯ ಭಾಗವಾಗಿ ಐಟಿ ಇಲಾಖೆ ಮಂಗಳವಾರ ದೆಹಲಿ, ಮುಂಬೈ ಮತ್ತು ಇತರ ಎರಡು ಸಂಪರ್ಕಿತ ಸ್ಥಳಗಳಲ್ಲಿನ ಬಿಬಿಸಿ ಕಚೇರಿಗಳಲ್ಲಿ ಹತ್ತು ಗಂಟೆಗಳ ಕಾಲ ಸಮೀಕ್ಷೆ ಕಾರ್ಯಾಚರಣೆ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಪಕ್ಷದ ಅನೇಕ ನಾಯಕರು ಮೋದಿ ಸರ್ಕರದ ವಿರುದ್ದ ಟೀಕೆಗಳನ್ನು ಮಾಡಿದ್ದಾರೆ. ಸಂಸದೆ ಮಹುವಾ ಮೊಯಿತ್ರಾ ಅವರು ಟ್ವೀಟ್ ಮೂಲಕ ವ್ಯಂಗ್ಯವಾಡಿದ್ದಾರೆ. ”ಈ ವ್ಯಾಲೆಂಟೈನ್ ಡೇ ಸಮೀಕ್ಷೆಗಳನ್ನು ಆದಾಯ ತೆರಿಗೆ ಇಲಾಖೆ, SEBI ಮತ್ತು ಜಾರಿ ನಿರ್ದೇಶನಾಲಯ ಏಜೆನ್ಸಿಗಳು ಮಾಡುವುದರಿಂದ ಸರ್ಕಾರದ ಅತ್ಯಂತ ಮೌಲ್ಯಯುತ ಪ್ರಿಯತಮೆ‍ಯಾಗಿರುವ ‘ಮಿಸ್ಟರ್ ಎ’ ಮೇಲೆ ಹೇಗೆ ನಡೆಸುತ್ತದೆ?” ಎಂದು ಟ್ವೀಟ್ ಮಾಡುವ ಮೂಲಕ, ಅದಾನಿಯ ಬಗ್ಗೆ ಸರ್ಕಾರ ಮೌನವಾಗಿರುವುದರ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದಾರೆ…

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಇಲ್ಲಿ ನಾವು ಅದಾನಿ ವಿಚಾರದಲ್ಲಿ ಜೆಪಿಸಿಗೆ ಬೇಡಿಕೆ ಇಡುತ್ತಿದ್ದೇವೆ. ಆದರೆ ಸರ್ಕಾರ ಬಿಬಿಸಿಯ ಬೆನ್ನುಬಿದ್ದಿದೆ. ”ವಿನಾಶ ಕಾಲಕ್ಕೆ ವಿಪರೀತ ಬುದ್ದಿ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....