Homeಮುಖಪುಟಮೋದಿ ಅವಧಿಯಲ್ಲಿ ಮಾಧ್ಯಮ ಸಂಸ್ಥೆಗಳ ಮೇಲೆ ಇ.ಡಿ., ಐ.ಟಿ. ಅಸ್ತ್ರ; ಇಲ್ಲಿದೆ ವಿವರ

ಮೋದಿ ಅವಧಿಯಲ್ಲಿ ಮಾಧ್ಯಮ ಸಂಸ್ಥೆಗಳ ಮೇಲೆ ಇ.ಡಿ., ಐ.ಟಿ. ಅಸ್ತ್ರ; ಇಲ್ಲಿದೆ ವಿವರ

- Advertisement -
- Advertisement -

ಸರ್ಕಾರದ ತಪ್ಪುಗಳನ್ನು ಪ್ರಶ್ನಿಸುವ ಮಾಧ್ಯಮಗಳ ಮೇಲೆ ತರಹೇವಾರಿ ದಾಳಿಗಳನ್ನು ಸರ್ಕಾರ ನಡೆಸುತ್ತಿರುವುದಕ್ಕೆ ಬಹುದೊಡ್ಡ ಇತಿಹಾಸವೇ ಇದೆ. ತುರ್ತು ಪರಿಸ್ಥಿತಿ ಹೇರಿದ್ದ ಕಾಲದಲ್ಲಿ ನೇರವಾಗಿ ಮಾಧ್ಯಮಗಳನ್ನು ನಿಯಂತ್ರಿಸಲಾಗುತ್ತಿತ್ತು. ಆದರೆ ಅಘೋಷಿತ ತುರ್ತು ಪರಿಸ್ಥಿತಿಯ ವಾತಾವರಣ ಸೃಷ್ಟಿಯಾಗಿರುವ ಈ ಕಾಲಘಟ್ಟದಲ್ಲಿ ಮಾಧ್ಯಮಗಳ ಬಾಯಿ ಮುಚ್ಚಿಸಲು ನಾನಾ ಮಾರ್ಗಗಳನ್ನು ಪ್ರಭುತ್ವ ಕಂಡುಕೊಂಡಿದೆ.

ಪತ್ರಿಕೆಗಳಿಗೆ ಸರ್ಕಾರಿ ಜಾಹೀರಾತುಗಳನ್ನು ತಡೆದು ತೊಂದರೆ ಕೊಡುವುದು, ಟ್ರೋಲ್‌ ಪಡೆಯ ಮೂಲಕ ದಾಳಿ ನಡೆಸುವುದು ಒಂದು ಕಡೆಯಾದರೆ ಆದಾಯ ತೆರಿಗೆ (ಐ.ಟಿ.), ಜಾರಿ ನಿರ್ದೇಶನಾಲಯ (ಇ.ಡಿ.) ಥರದ ಸಂಸ್ಥೆಗಳ ಮೂಲಕ ದಾಳಿ, ಸರ್ಚ್, ಪರಿಶೀಲನೆ ನಡೆಸುವ ಕೆಲಸವೂ ನಡೆಯುತ್ತಿದೆ. ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಬಳಿಕ ಈ ವಿದ್ಯಮಾನಗಳು ಆಗಾಗ್ಗೆ ವರದಿಯಾಗುತ್ತಿವೆ.

2002ರ ಗುಜರಾತ್ ಗಲಭೆ ಮತ್ತು ಮೋದಿ ಸರ್ಕಾರದ ಬಹುಸಂಖ್ಯಾತವಾದದ ಕುರಿತು ಎರಡು ಭಾಗಗಳಲ್ಲಿ ಬಿಬಿಸಿ ಸುದ್ದಿಸಂಸ್ಥೆಯು ಸಾಕ್ಷ್ಯಚಿತ್ರವನ್ನು ಬಿಡುಗಡೆ ಮಾಡಿತ್ತು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಜೊತೆಗೆ ಈ ಸಾಕ್ಷ್ಯಚಿತ್ರಗಳನ್ನು ಭಾರತದಲ್ಲಿ ನಿರ್ಬಂಧಿಸಲಾಯಿತು. ಅದರ ಬೆನ್ನಲ್ಲೇ ಆದಾಯ ತೆರಿಗೆ ಅಧಿಕಾರಿಗಳು ದೆಹಲಿ ಮತ್ತು ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳ ಮೇಲೆ ರೈಡ್‌ ಮಾಡಿದ್ದಾರೆ. ಹೀಗಾಗಿ ಸರ್ಕಾರವನ್ನು ಪ್ರಶ್ನಿಸುವ ಮಾಧ್ಯಮಗಳ ವಿರುದ್ಧ ಐ.ಟಿ., ಇ.ಡಿ.ಗಳನ್ನು ಸರ್ಕಾರ ಬಳಸುತ್ತದೆ ಎಂಬ ಟೀಕೆ ಮುನ್ನೆಲೆಗೆ ಬಂದಿದೆ.

ಇದನ್ನೂ ಓದಿರಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಇಮೇಜ್‌ಗೆ ಧಕ್ಕೆ ತಂದಿದ್ದಕ್ಕೆ ಬಿಬಿಸಿ ಕಚೇರಿಗಳ ಮೇಲೆ ದಾಳಿ: ದಿಗ್ವಿಜಯ ಸಿಂಗ್

“ಅಂತಾರಾಷ್ಟ್ರೀಯ ತೆರಿಗೆ ಮತ್ತು ವರ್ಗಾವಣೆ ಬೆಲೆಗಳ ಅಕ್ರಮದ ಬಗ್ಗೆ ಸಮೀಕ್ಷೆ ನಡೆಸುತ್ತಿದ್ದು, ಅದರಂತೆ ಬಿಬಿಸಿ ಮೇಲೂ ಆರೋಪ ಕೇಳಿಬಂದಿದೆ. ಹಾಗಾಗಿ ಸಮೀಕ್ಷೆ ಮಾಡುತ್ತಿದ್ದೇವೆ” ಎಂದು ಅಧಿಕಾರಿಗಳು ಹೇಳಿದ್ದಾರೆ. ಕೆಲವು ಪತ್ರಕರ್ತರ ದಾಖಲೆಗಳು ಮತ್ತು ಫೋನ್‌ಗಳನ್ನು ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದಾರೆ ಎಂದೂ ಮೂಲಗಳು ಹೇಳಿವೆ. ಬಿಬಿಸಿಯ ಮೇಲೆ ದಾಳಿ ಮಾಡಿದಂತೆಯೇ ಸರ್ಕಾರ ಇತ್ತೀಚಿನ ವರ್ಷಗಳಲ್ಲಿ ಹಲವು ಮಾಧ್ಯಮಗಳ ಮೇಲೆ ಐ.ಟಿ. ಮತ್ತು ಇ.ಡಿ. ಬಾಣಗಳನ್ನು ಬಳಸಿದೆ.

ನ್ಯಾಷನಲ್ ಹೆರಾಲ್ಡ್‌ ಮೇಲೆ ಇ.ಡಿ. ರೈಡ್‌

ಕಾಂಗ್ರೆಸ್‌ ಪಕ್ಷದ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮೇಲೆ ಇ.ಡಿ. ಪ್ರಹಾರ ನಡೆಸಿದೆ. ಮನಿಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಳೆದ ವರ್ಷ ಕಾಂಗ್ರೆಸ್ ನಾಯಕರಿಗೆ ಸಮನ್ಸ್ ಜಾರಿ ಮಾಡಿದ್ದರು. ರಾಹುಲ್‌ ಗಾಂಧಿ, ಸೋನಿಯಾ ಗಾಂಧಿಯವರು ವಿಚಾರಣೆಗೂ ಹಾಜರಾಗಿದ್ದರು.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಒಡೆತನದಲ್ಲಿದ್ದು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ಪ್ರಕಟಿಸುತ್ತಿದೆ. ಇದರ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರಾಜ್ಯಸಭೆಯ ವಿರೋಧ ಪಕ್ಷದ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಪವನ್ ಬನ್ಸಾಲ್ ಅವರನ್ನು ಪ್ರಶ್ನಿಸಿತ್ತು. ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್‌ ಗಾಂಧಿಗೆ ಜಾರಿ ನಿರ್ದೇಶನಾಲಯ (ED) ಸಮನ್ಸ್ ನೀಡಿತ್ತು. ಕಾಂಗ್ರೆಸ್‌ ಕಾರ್ಯಕರ್ತರು ಬೃಹತ್‌ ಮಟ್ಟದಲ್ಲಿ ಪ್ರತಿಭಟನೆ ನಡೆಸಿದ್ದರು.

ನ್ಯೂಸ್‌ ಕ್ಲಿಕ್‌, ನ್ಯೂಸ್‌ ಲಾಂಡ್ರಿ ಮೇಲೆ ಕಾರ್ಯಾಚರಣೆ

ಪರ್ಯಾಯ ಮಾಧ್ಯಮಗಳಾಗಿ ಭಾರೀ ಸಂಚಲನ ಮೂಡಿಸಿರುವ ನ್ಯೂಸ್‌ಕ್ಲಿಕ್ ಮತ್ತು ನ್ಯೂಸ್‌ಲಾಂಡ್ರಿ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು 2021ರ ಫೆಬ್ರುವರಿಯಲ್ಲಿ ಭೇಟಿ ನೀಡಿ, ಕಾರ್ಯಾಚರಣೆ ನಡೆಸಿದ್ದರು. ಅಧಿಕಾರಿಗಳು ಇದನ್ನು “ಸರ್ವೆ” ಎಂದು ಕರೆದಿದ್ದು, “ದಾಳಿ” ಅಲ್ಲ ಎಂದು ತಿಳಿಸಿದ್ದರು.

ಸರ್ವೇಗಳು ತೆರಿಗೆ ವಂಚನೆಯ ಆರೋಪಗಳಿಗೆ ಸಂಬಂಧಿಸಿದ್ದು, ಪೋರ್ಟಲ್‌ಗಳ ಖಾತೆ ಪುಸ್ತಕಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದರು.

ನ್ಯೂಸ್‌ ಕ್ಲಿಕ್ ವೆ‌ಬ್ ಪೋರ್ಟಲ್‌ 2018-19 ರ ಹಣಕಾಸು ವರ್ಷದಲ್ಲಿ ವರ್ಲ್ಡ್‌ವೈಡ್ ಮೀಡಿಯಾ ಹೋಲ್ಡಿಂಗ್ಸ್ ಎಲ್‌ಎಲ್‌ಸಿ ಯುಎಸ್‌ಎಯಿಂದ 9.59 ಕೋಟಿ ವಿದೇಶಿ ನೇರ ಹೂಡಿಕೆಯನ್ನು (ಎಫ್‌ಡಿಐ) ಪಡೆದಿದೆ ಎಂದು ಆರೋಪಿಸಿದ್ದ ದೆಹಲಿ ಪೊಲೀಸರು ‘ನ್ಯೂಸ್‌ ಕ್ಲಿಕ್‌’ ಮೇಲೆ ಫೆಬ್ರವರಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಇದರ ನಂತರ ನ್ಯೂಸ್‌ಕ್ಲಿಕ್ ಮತ್ತು ಅದರ ಸಂಸ್ಥಾಪಕರ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು.

ಮುಖ್ಯವಾಹಿನಿಯ ಮಾಧ್ಯಮಗಳು ನಿರ್ಲಕ್ಷಿಸುವ ಜನಪರ ಸುದ್ದಿಗಳನ್ನು ಪ್ರಕಟ ಮಾಡುವ ವೆಬ್‌ ಪೋರ್ಟಲ್‌ ನ್ಯೂಸ್‌ ಕ್ಲಿಕ್ ಆಗಿದೆ.

ಮಾಧ್ಯಮಗಳು ಮತ್ತು ಅವುಗಳ ಸುದ್ದಿಗಳನ್ನು ವಿಶ್ಲೇಷಿಸುವ ವೆಬ್‌ಪೋರ್ಟಲ್‌ ‘ನ್ಯೂಸ್‌ ಲಾಂಡ್ರಿ’. ಗ್ರೌಂಡ್ ರಿಪೋರ್ಟ್‌ಗಳಿಗೆ ಈ ಜಾಲತಾಣ ಹೆಸರುವಾಸಿಯಾಗಿದೆ. ಜೊತೆಗೆ ಖಚಿತ ಅಂಕಿ-ಅಂಶಗಳನ್ನು ಆಧರಿಸಿ ಸುದ್ದಿಯ ವಿಭಿನ್ನ ದೃಷ್ಟಿಕೋನಗಳನ್ನು ತೆರೆದಿಡುತ್ತಿದೆ. ಪ್ರಭುತ್ವದ ಪರ ಕೆಲಸ ಮಾಡುವ ಮಾಧ್ಯಮಗಳನ್ನು ವಿಶಿಷ್ಟವಾಗಿ ಗೇಲಿ ಮಾಡುವಲ್ಲಿ ‘ನ್ಯೂಸ್‌ಲಾಂಡ್ರಿ’ ಹೆಸರುವಾಸಿ.

ಎರಡು ಪೋರ್ಟಲ್‌ಗಳು ಕೂಡಾ ಪ್ರಭುತ್ವದ ಕೆಂಗಣ್ಣಿಗೆ ಗುರಿಯಾಗಿರುವ ಜನಪರ ಸುದ್ದಿ ಸಂಸ್ಥೆಗಳಾಗಿವೆ. ಸರ್ಕಾರದ ರೈತ ಕಾಯ್ದೆಗಳ ವಿರುದ್ಧ ನಡೆದ ಪ್ರತಿಭಟನೆಯನ್ನು ವರದಿ ಮಾಡಿದ ಕಾರಣದಿಂದ ಈ ಸಂಸ್ಥೆಗಳ ಮೇಲೆ ಐಟಿ ಸರ್ಚ್ ಮಾಡಿದೆ ಎಂಬ ಆರೋಪಗಳು ಬಂದಿದ್ದವು.

ದೈನಿಕ್‌ ಭಾಸ್ಕರ್‌‌ ಮೇಲೆ ರೈಡ್‌

ಉತ್ತರ ಭಾರತದ ಪ್ರಮುಖ ಪತ್ರಿಕೆಗಳಲ್ಲಿ ದೈನಿಕ್‌ ಭಾಸ್ಕರ್ ಒಂದಾಗಿದ್ದು, 12 ರಾಜ್ಯಗಳಲ್ಲಿ ಈ ಪತ್ರಿಕೆಯ ಆವೃತ್ತಿಗಳಿವೆ. ಸುಮಾರು 65 ವರ್ಷಗಳ ಇತಿಹಾಸವಿರುವ ಈ ಪತ್ರಿಕೆ ಪ್ರಭುತ್ವಕ್ಕೆ ಸೊಪ್ಪು ಹಾಕುವುದಿಲ್ಲ ಎಂಬ ಪ್ರಶಂಸೆಗೆ ಪಾತ್ರವಾಗಿದೆ.

‘ದೈನಿಕ್ ಭಾಸ್ಕರ್‌’ ಸಂಸ್ಥೆಯು ಆದಾಯ ತೆರಿಗೆ ಪಾವತಿಯಲ್ಲಿ ಅಕ್ರಮ ಎಸಗಿದೆ ಎಂಬ ಆರೋಪದ ಮೇಲೆ ಸಂಸ್ಥೆಯ ಪ್ರಧಾನ ಕಚೇರಿ ಮತ್ತು ಪ್ರಾದೇಶಿಕ ಕಚೇರಿಗಳ ಮೇಲೆ 2021ರ ಜುಲೈ 12ರಂದು ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ದೇಶದ ಒಟ್ಟು ಆರು ರಾಜ್ಯಗಳಲ್ಲಿ ಏಕಕಾಲದಲ್ಲಿ ಪರಿಶೀಲನೆ ನಡೆದಿತ್ತು.

‘ಕೋವಿಡ್‌ ಎರಡನೇ ಅಲೆಯ ಸಂದರ್ಭದಲ್ಲಿ ಉತ್ತರ ಪ್ರದೇಶದ ಗಂಗಾ ತಟದಲ್ಲಿ ಹೆಣಗಳನ್ನು ಮನಬಂದಂತೆ ವಿಲೇವಾರಿ ಮಾಡಲಾಗಿದೆ. ಸರ್ಕಾರವು ಸಾವಿನ ಸಂಖ್ಯೆಯನ್ನು ಮುಚ್ಚಿಡಲು ಯತ್ನಿಸುತ್ತಿದೆ. ಆದರೆ, ಗಂಗೆ ತನ್ನ ಒಡಲಲ್ಲಿ ಇರುವ ಹೆಣಗಳನ್ನು ಹೊರಹಾಕುತ್ತಿದ್ದಾಳೆ’ ಎಂದು ದೈನಿಕ್‌ ಭಾಸ್ಕರ್‌ ಪತ್ರಿಕೆಯು 2021ರ ಜೂನ್‌ ಕೊನೆಯ ವಾರದಲ್ಲಿ ವಿಸ್ತೃತ ವರದಿ ಪ್ರಕಟಿಸಿತ್ತು. ವೈಫಲ್ಯವನ್ನು ಎತ್ತಿ ಹಿಡಿದು ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿತ್ತು.

ಇದನ್ನೂ ಓದಿರಿ: ದಲಿತ ಯುವ ಹೋರಾಟಗಾರ ಸಂದೇಶ್ ವಿರುದ್ಧ ಎಫ್‌ಐಆರ್‌; ಬಂಧನ

ಭಾರತ್ ಸಮಾಚಾರ್‌ ಕಚೇರಿ ಪರಿಶೀಲನೆ

ಉತ್ತರ ಪ್ರದೇಶದ ಪ್ರಮುಖ ಸುದ್ದಿವಾಹಿನಿಗಳಲ್ಲಿ ಒಂದಾದ ಭಾರತ್ ಸಮಾಚಾರ್‌ ಕಚೇರಿಯ ಮೇಲೆ 2021ರ ಜುಲೈ 12ರಂದು ಆದಾಯ ತೆರಿಗೆ ಇಲಾಖೆ ಪರಿಶೀಲನೆ ನಡೆಸಿತ್ತು.

ಆದಾಯ ತೆರಿಗೆ ಪಾವತಿಯಲ್ಲಿ ಮತ್ತು ಕಂಪನಿಗೆ ಸಂಬಂಧಿಸಿದ ಖರೀದಿಯಲ್ಲಿ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಲಾಗಿತ್ತು. ಸರ್ಕಾರವನ್ನು ಎದುರು ಹಾಕಿಕೊಂಡಿದ್ದ ಈ ಪತ್ರಿಕೆಯು ಐಟಿ ದಾಳಿಗೂ ಮುನ್ನ ಕೋವಿಡ್ ವೈಫಲ್ಯಗಳನ್ನು ಸರಣಿಯಾಗಿ ತೆರೆದಿಟ್ಟಿತ್ತು. “ಕೋವಿಡ್‌ ಕಾರಣಕ್ಕೆ ಸಂಭವಿಸಿದ ಸಾವುಗಳ ಸಂಖ್ಯೆಯನ್ನು ಉತ್ತರ ಪ್ರದೇಶ ಸರ್ಕಾರ ಬಚ್ಚಿಟ್ಟಿದೆ. ಆಕ್ಸಿಜನ್‌ ಪೂರೈಕೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈ ಕಾರಣದಿಂದಲೇ ಎರಡನೇ ಅಲೆಯಲ್ಲಿ ಹೆಚ್ಚಿನ ಸಾವುಗಳು ಸಂಭವಿಸಿವೆ” ಎಂದು 2021ರ ಜೂನ್‌ ಮತ್ತು ಜುಲೈನಲ್ಲಿ ಒಂದರ ಹಿಂದೆ ಒಂದು ವರದಿಯನ್ನು ಪ್ರಸಾರ ಮಾಡಿತ್ತು. ಈ ಕಾರಣಕ್ಕಾಗಿಯೇ ಐಟಿ ಪರಿಶೀಲನೆ ನಡೆಸಲಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು.

‘ನೀವು ಎಷ್ಟು ಬೇಕಾದರೂ ದನಿ ಅಡಗಿಸಲು ಯತ್ನಿಸಿ, ನಾವೂ ಅಷ್ಟೇ ದೊಡ್ಡ ದನಿಯಲ್ಲಿ ಸತ್ಯ ಹೇಳುತ್ತೇವೆ. ನಾವು ಮೊದಲೂ ಹೆದರುತ್ತಿರಲಿಲ್ಲ, ಈಗಲೂ ಹೆದರುವುದಿಲ್ಲ’ ಎಂದು ಭಾರತ್ ಸಮಾಚಾರ್‌ ಚಾಟಿ ಬೀಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...