Homeಮುಖಪುಟಮೋದಿ ಅವಧಿಯಲ್ಲಿ ಮಾಧ್ಯಮ ಸಂಸ್ಥೆಗಳ ಮೇಲೆ ಇ.ಡಿ., ಐ.ಟಿ. ಅಸ್ತ್ರ; ಇಲ್ಲಿದೆ ವಿವರ

ಮೋದಿ ಅವಧಿಯಲ್ಲಿ ಮಾಧ್ಯಮ ಸಂಸ್ಥೆಗಳ ಮೇಲೆ ಇ.ಡಿ., ಐ.ಟಿ. ಅಸ್ತ್ರ; ಇಲ್ಲಿದೆ ವಿವರ

- Advertisement -
- Advertisement -

ಸರ್ಕಾರದ ತಪ್ಪುಗಳನ್ನು ಪ್ರಶ್ನಿಸುವ ಮಾಧ್ಯಮಗಳ ಮೇಲೆ ತರಹೇವಾರಿ ದಾಳಿಗಳನ್ನು ಸರ್ಕಾರ ನಡೆಸುತ್ತಿರುವುದಕ್ಕೆ ಬಹುದೊಡ್ಡ ಇತಿಹಾಸವೇ ಇದೆ. ತುರ್ತು ಪರಿಸ್ಥಿತಿ ಹೇರಿದ್ದ ಕಾಲದಲ್ಲಿ ನೇರವಾಗಿ ಮಾಧ್ಯಮಗಳನ್ನು ನಿಯಂತ್ರಿಸಲಾಗುತ್ತಿತ್ತು. ಆದರೆ ಅಘೋಷಿತ ತುರ್ತು ಪರಿಸ್ಥಿತಿಯ ವಾತಾವರಣ ಸೃಷ್ಟಿಯಾಗಿರುವ ಈ ಕಾಲಘಟ್ಟದಲ್ಲಿ ಮಾಧ್ಯಮಗಳ ಬಾಯಿ ಮುಚ್ಚಿಸಲು ನಾನಾ ಮಾರ್ಗಗಳನ್ನು ಪ್ರಭುತ್ವ ಕಂಡುಕೊಂಡಿದೆ.

ಪತ್ರಿಕೆಗಳಿಗೆ ಸರ್ಕಾರಿ ಜಾಹೀರಾತುಗಳನ್ನು ತಡೆದು ತೊಂದರೆ ಕೊಡುವುದು, ಟ್ರೋಲ್‌ ಪಡೆಯ ಮೂಲಕ ದಾಳಿ ನಡೆಸುವುದು ಒಂದು ಕಡೆಯಾದರೆ ಆದಾಯ ತೆರಿಗೆ (ಐ.ಟಿ.), ಜಾರಿ ನಿರ್ದೇಶನಾಲಯ (ಇ.ಡಿ.) ಥರದ ಸಂಸ್ಥೆಗಳ ಮೂಲಕ ದಾಳಿ, ಸರ್ಚ್, ಪರಿಶೀಲನೆ ನಡೆಸುವ ಕೆಲಸವೂ ನಡೆಯುತ್ತಿದೆ. ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಬಳಿಕ ಈ ವಿದ್ಯಮಾನಗಳು ಆಗಾಗ್ಗೆ ವರದಿಯಾಗುತ್ತಿವೆ.

2002ರ ಗುಜರಾತ್ ಗಲಭೆ ಮತ್ತು ಮೋದಿ ಸರ್ಕಾರದ ಬಹುಸಂಖ್ಯಾತವಾದದ ಕುರಿತು ಎರಡು ಭಾಗಗಳಲ್ಲಿ ಬಿಬಿಸಿ ಸುದ್ದಿಸಂಸ್ಥೆಯು ಸಾಕ್ಷ್ಯಚಿತ್ರವನ್ನು ಬಿಡುಗಡೆ ಮಾಡಿತ್ತು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಜೊತೆಗೆ ಈ ಸಾಕ್ಷ್ಯಚಿತ್ರಗಳನ್ನು ಭಾರತದಲ್ಲಿ ನಿರ್ಬಂಧಿಸಲಾಯಿತು. ಅದರ ಬೆನ್ನಲ್ಲೇ ಆದಾಯ ತೆರಿಗೆ ಅಧಿಕಾರಿಗಳು ದೆಹಲಿ ಮತ್ತು ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳ ಮೇಲೆ ರೈಡ್‌ ಮಾಡಿದ್ದಾರೆ. ಹೀಗಾಗಿ ಸರ್ಕಾರವನ್ನು ಪ್ರಶ್ನಿಸುವ ಮಾಧ್ಯಮಗಳ ವಿರುದ್ಧ ಐ.ಟಿ., ಇ.ಡಿ.ಗಳನ್ನು ಸರ್ಕಾರ ಬಳಸುತ್ತದೆ ಎಂಬ ಟೀಕೆ ಮುನ್ನೆಲೆಗೆ ಬಂದಿದೆ.

ಇದನ್ನೂ ಓದಿರಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಇಮೇಜ್‌ಗೆ ಧಕ್ಕೆ ತಂದಿದ್ದಕ್ಕೆ ಬಿಬಿಸಿ ಕಚೇರಿಗಳ ಮೇಲೆ ದಾಳಿ: ದಿಗ್ವಿಜಯ ಸಿಂಗ್

“ಅಂತಾರಾಷ್ಟ್ರೀಯ ತೆರಿಗೆ ಮತ್ತು ವರ್ಗಾವಣೆ ಬೆಲೆಗಳ ಅಕ್ರಮದ ಬಗ್ಗೆ ಸಮೀಕ್ಷೆ ನಡೆಸುತ್ತಿದ್ದು, ಅದರಂತೆ ಬಿಬಿಸಿ ಮೇಲೂ ಆರೋಪ ಕೇಳಿಬಂದಿದೆ. ಹಾಗಾಗಿ ಸಮೀಕ್ಷೆ ಮಾಡುತ್ತಿದ್ದೇವೆ” ಎಂದು ಅಧಿಕಾರಿಗಳು ಹೇಳಿದ್ದಾರೆ. ಕೆಲವು ಪತ್ರಕರ್ತರ ದಾಖಲೆಗಳು ಮತ್ತು ಫೋನ್‌ಗಳನ್ನು ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದಾರೆ ಎಂದೂ ಮೂಲಗಳು ಹೇಳಿವೆ. ಬಿಬಿಸಿಯ ಮೇಲೆ ದಾಳಿ ಮಾಡಿದಂತೆಯೇ ಸರ್ಕಾರ ಇತ್ತೀಚಿನ ವರ್ಷಗಳಲ್ಲಿ ಹಲವು ಮಾಧ್ಯಮಗಳ ಮೇಲೆ ಐ.ಟಿ. ಮತ್ತು ಇ.ಡಿ. ಬಾಣಗಳನ್ನು ಬಳಸಿದೆ.

ನ್ಯಾಷನಲ್ ಹೆರಾಲ್ಡ್‌ ಮೇಲೆ ಇ.ಡಿ. ರೈಡ್‌

ಕಾಂಗ್ರೆಸ್‌ ಪಕ್ಷದ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮೇಲೆ ಇ.ಡಿ. ಪ್ರಹಾರ ನಡೆಸಿದೆ. ಮನಿಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಳೆದ ವರ್ಷ ಕಾಂಗ್ರೆಸ್ ನಾಯಕರಿಗೆ ಸಮನ್ಸ್ ಜಾರಿ ಮಾಡಿದ್ದರು. ರಾಹುಲ್‌ ಗಾಂಧಿ, ಸೋನಿಯಾ ಗಾಂಧಿಯವರು ವಿಚಾರಣೆಗೂ ಹಾಜರಾಗಿದ್ದರು.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಒಡೆತನದಲ್ಲಿದ್ದು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ಪ್ರಕಟಿಸುತ್ತಿದೆ. ಇದರ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರಾಜ್ಯಸಭೆಯ ವಿರೋಧ ಪಕ್ಷದ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಪವನ್ ಬನ್ಸಾಲ್ ಅವರನ್ನು ಪ್ರಶ್ನಿಸಿತ್ತು. ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್‌ ಗಾಂಧಿಗೆ ಜಾರಿ ನಿರ್ದೇಶನಾಲಯ (ED) ಸಮನ್ಸ್ ನೀಡಿತ್ತು. ಕಾಂಗ್ರೆಸ್‌ ಕಾರ್ಯಕರ್ತರು ಬೃಹತ್‌ ಮಟ್ಟದಲ್ಲಿ ಪ್ರತಿಭಟನೆ ನಡೆಸಿದ್ದರು.

ನ್ಯೂಸ್‌ ಕ್ಲಿಕ್‌, ನ್ಯೂಸ್‌ ಲಾಂಡ್ರಿ ಮೇಲೆ ಕಾರ್ಯಾಚರಣೆ

ಪರ್ಯಾಯ ಮಾಧ್ಯಮಗಳಾಗಿ ಭಾರೀ ಸಂಚಲನ ಮೂಡಿಸಿರುವ ನ್ಯೂಸ್‌ಕ್ಲಿಕ್ ಮತ್ತು ನ್ಯೂಸ್‌ಲಾಂಡ್ರಿ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು 2021ರ ಫೆಬ್ರುವರಿಯಲ್ಲಿ ಭೇಟಿ ನೀಡಿ, ಕಾರ್ಯಾಚರಣೆ ನಡೆಸಿದ್ದರು. ಅಧಿಕಾರಿಗಳು ಇದನ್ನು “ಸರ್ವೆ” ಎಂದು ಕರೆದಿದ್ದು, “ದಾಳಿ” ಅಲ್ಲ ಎಂದು ತಿಳಿಸಿದ್ದರು.

ಸರ್ವೇಗಳು ತೆರಿಗೆ ವಂಚನೆಯ ಆರೋಪಗಳಿಗೆ ಸಂಬಂಧಿಸಿದ್ದು, ಪೋರ್ಟಲ್‌ಗಳ ಖಾತೆ ಪುಸ್ತಕಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದರು.

ನ್ಯೂಸ್‌ ಕ್ಲಿಕ್ ವೆ‌ಬ್ ಪೋರ್ಟಲ್‌ 2018-19 ರ ಹಣಕಾಸು ವರ್ಷದಲ್ಲಿ ವರ್ಲ್ಡ್‌ವೈಡ್ ಮೀಡಿಯಾ ಹೋಲ್ಡಿಂಗ್ಸ್ ಎಲ್‌ಎಲ್‌ಸಿ ಯುಎಸ್‌ಎಯಿಂದ 9.59 ಕೋಟಿ ವಿದೇಶಿ ನೇರ ಹೂಡಿಕೆಯನ್ನು (ಎಫ್‌ಡಿಐ) ಪಡೆದಿದೆ ಎಂದು ಆರೋಪಿಸಿದ್ದ ದೆಹಲಿ ಪೊಲೀಸರು ‘ನ್ಯೂಸ್‌ ಕ್ಲಿಕ್‌’ ಮೇಲೆ ಫೆಬ್ರವರಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಇದರ ನಂತರ ನ್ಯೂಸ್‌ಕ್ಲಿಕ್ ಮತ್ತು ಅದರ ಸಂಸ್ಥಾಪಕರ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು.

ಮುಖ್ಯವಾಹಿನಿಯ ಮಾಧ್ಯಮಗಳು ನಿರ್ಲಕ್ಷಿಸುವ ಜನಪರ ಸುದ್ದಿಗಳನ್ನು ಪ್ರಕಟ ಮಾಡುವ ವೆಬ್‌ ಪೋರ್ಟಲ್‌ ನ್ಯೂಸ್‌ ಕ್ಲಿಕ್ ಆಗಿದೆ.

ಮಾಧ್ಯಮಗಳು ಮತ್ತು ಅವುಗಳ ಸುದ್ದಿಗಳನ್ನು ವಿಶ್ಲೇಷಿಸುವ ವೆಬ್‌ಪೋರ್ಟಲ್‌ ‘ನ್ಯೂಸ್‌ ಲಾಂಡ್ರಿ’. ಗ್ರೌಂಡ್ ರಿಪೋರ್ಟ್‌ಗಳಿಗೆ ಈ ಜಾಲತಾಣ ಹೆಸರುವಾಸಿಯಾಗಿದೆ. ಜೊತೆಗೆ ಖಚಿತ ಅಂಕಿ-ಅಂಶಗಳನ್ನು ಆಧರಿಸಿ ಸುದ್ದಿಯ ವಿಭಿನ್ನ ದೃಷ್ಟಿಕೋನಗಳನ್ನು ತೆರೆದಿಡುತ್ತಿದೆ. ಪ್ರಭುತ್ವದ ಪರ ಕೆಲಸ ಮಾಡುವ ಮಾಧ್ಯಮಗಳನ್ನು ವಿಶಿಷ್ಟವಾಗಿ ಗೇಲಿ ಮಾಡುವಲ್ಲಿ ‘ನ್ಯೂಸ್‌ಲಾಂಡ್ರಿ’ ಹೆಸರುವಾಸಿ.

ಎರಡು ಪೋರ್ಟಲ್‌ಗಳು ಕೂಡಾ ಪ್ರಭುತ್ವದ ಕೆಂಗಣ್ಣಿಗೆ ಗುರಿಯಾಗಿರುವ ಜನಪರ ಸುದ್ದಿ ಸಂಸ್ಥೆಗಳಾಗಿವೆ. ಸರ್ಕಾರದ ರೈತ ಕಾಯ್ದೆಗಳ ವಿರುದ್ಧ ನಡೆದ ಪ್ರತಿಭಟನೆಯನ್ನು ವರದಿ ಮಾಡಿದ ಕಾರಣದಿಂದ ಈ ಸಂಸ್ಥೆಗಳ ಮೇಲೆ ಐಟಿ ಸರ್ಚ್ ಮಾಡಿದೆ ಎಂಬ ಆರೋಪಗಳು ಬಂದಿದ್ದವು.

ದೈನಿಕ್‌ ಭಾಸ್ಕರ್‌‌ ಮೇಲೆ ರೈಡ್‌

ಉತ್ತರ ಭಾರತದ ಪ್ರಮುಖ ಪತ್ರಿಕೆಗಳಲ್ಲಿ ದೈನಿಕ್‌ ಭಾಸ್ಕರ್ ಒಂದಾಗಿದ್ದು, 12 ರಾಜ್ಯಗಳಲ್ಲಿ ಈ ಪತ್ರಿಕೆಯ ಆವೃತ್ತಿಗಳಿವೆ. ಸುಮಾರು 65 ವರ್ಷಗಳ ಇತಿಹಾಸವಿರುವ ಈ ಪತ್ರಿಕೆ ಪ್ರಭುತ್ವಕ್ಕೆ ಸೊಪ್ಪು ಹಾಕುವುದಿಲ್ಲ ಎಂಬ ಪ್ರಶಂಸೆಗೆ ಪಾತ್ರವಾಗಿದೆ.

‘ದೈನಿಕ್ ಭಾಸ್ಕರ್‌’ ಸಂಸ್ಥೆಯು ಆದಾಯ ತೆರಿಗೆ ಪಾವತಿಯಲ್ಲಿ ಅಕ್ರಮ ಎಸಗಿದೆ ಎಂಬ ಆರೋಪದ ಮೇಲೆ ಸಂಸ್ಥೆಯ ಪ್ರಧಾನ ಕಚೇರಿ ಮತ್ತು ಪ್ರಾದೇಶಿಕ ಕಚೇರಿಗಳ ಮೇಲೆ 2021ರ ಜುಲೈ 12ರಂದು ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ದೇಶದ ಒಟ್ಟು ಆರು ರಾಜ್ಯಗಳಲ್ಲಿ ಏಕಕಾಲದಲ್ಲಿ ಪರಿಶೀಲನೆ ನಡೆದಿತ್ತು.

‘ಕೋವಿಡ್‌ ಎರಡನೇ ಅಲೆಯ ಸಂದರ್ಭದಲ್ಲಿ ಉತ್ತರ ಪ್ರದೇಶದ ಗಂಗಾ ತಟದಲ್ಲಿ ಹೆಣಗಳನ್ನು ಮನಬಂದಂತೆ ವಿಲೇವಾರಿ ಮಾಡಲಾಗಿದೆ. ಸರ್ಕಾರವು ಸಾವಿನ ಸಂಖ್ಯೆಯನ್ನು ಮುಚ್ಚಿಡಲು ಯತ್ನಿಸುತ್ತಿದೆ. ಆದರೆ, ಗಂಗೆ ತನ್ನ ಒಡಲಲ್ಲಿ ಇರುವ ಹೆಣಗಳನ್ನು ಹೊರಹಾಕುತ್ತಿದ್ದಾಳೆ’ ಎಂದು ದೈನಿಕ್‌ ಭಾಸ್ಕರ್‌ ಪತ್ರಿಕೆಯು 2021ರ ಜೂನ್‌ ಕೊನೆಯ ವಾರದಲ್ಲಿ ವಿಸ್ತೃತ ವರದಿ ಪ್ರಕಟಿಸಿತ್ತು. ವೈಫಲ್ಯವನ್ನು ಎತ್ತಿ ಹಿಡಿದು ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿತ್ತು.

ಇದನ್ನೂ ಓದಿರಿ: ದಲಿತ ಯುವ ಹೋರಾಟಗಾರ ಸಂದೇಶ್ ವಿರುದ್ಧ ಎಫ್‌ಐಆರ್‌; ಬಂಧನ

ಭಾರತ್ ಸಮಾಚಾರ್‌ ಕಚೇರಿ ಪರಿಶೀಲನೆ

ಉತ್ತರ ಪ್ರದೇಶದ ಪ್ರಮುಖ ಸುದ್ದಿವಾಹಿನಿಗಳಲ್ಲಿ ಒಂದಾದ ಭಾರತ್ ಸಮಾಚಾರ್‌ ಕಚೇರಿಯ ಮೇಲೆ 2021ರ ಜುಲೈ 12ರಂದು ಆದಾಯ ತೆರಿಗೆ ಇಲಾಖೆ ಪರಿಶೀಲನೆ ನಡೆಸಿತ್ತು.

ಆದಾಯ ತೆರಿಗೆ ಪಾವತಿಯಲ್ಲಿ ಮತ್ತು ಕಂಪನಿಗೆ ಸಂಬಂಧಿಸಿದ ಖರೀದಿಯಲ್ಲಿ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಲಾಗಿತ್ತು. ಸರ್ಕಾರವನ್ನು ಎದುರು ಹಾಕಿಕೊಂಡಿದ್ದ ಈ ಪತ್ರಿಕೆಯು ಐಟಿ ದಾಳಿಗೂ ಮುನ್ನ ಕೋವಿಡ್ ವೈಫಲ್ಯಗಳನ್ನು ಸರಣಿಯಾಗಿ ತೆರೆದಿಟ್ಟಿತ್ತು. “ಕೋವಿಡ್‌ ಕಾರಣಕ್ಕೆ ಸಂಭವಿಸಿದ ಸಾವುಗಳ ಸಂಖ್ಯೆಯನ್ನು ಉತ್ತರ ಪ್ರದೇಶ ಸರ್ಕಾರ ಬಚ್ಚಿಟ್ಟಿದೆ. ಆಕ್ಸಿಜನ್‌ ಪೂರೈಕೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈ ಕಾರಣದಿಂದಲೇ ಎರಡನೇ ಅಲೆಯಲ್ಲಿ ಹೆಚ್ಚಿನ ಸಾವುಗಳು ಸಂಭವಿಸಿವೆ” ಎಂದು 2021ರ ಜೂನ್‌ ಮತ್ತು ಜುಲೈನಲ್ಲಿ ಒಂದರ ಹಿಂದೆ ಒಂದು ವರದಿಯನ್ನು ಪ್ರಸಾರ ಮಾಡಿತ್ತು. ಈ ಕಾರಣಕ್ಕಾಗಿಯೇ ಐಟಿ ಪರಿಶೀಲನೆ ನಡೆಸಲಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು.

‘ನೀವು ಎಷ್ಟು ಬೇಕಾದರೂ ದನಿ ಅಡಗಿಸಲು ಯತ್ನಿಸಿ, ನಾವೂ ಅಷ್ಟೇ ದೊಡ್ಡ ದನಿಯಲ್ಲಿ ಸತ್ಯ ಹೇಳುತ್ತೇವೆ. ನಾವು ಮೊದಲೂ ಹೆದರುತ್ತಿರಲಿಲ್ಲ, ಈಗಲೂ ಹೆದರುವುದಿಲ್ಲ’ ಎಂದು ಭಾರತ್ ಸಮಾಚಾರ್‌ ಚಾಟಿ ಬೀಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...