Homeಮುಖಪುಟಮೋದಿ ಅವಧಿಯಲ್ಲಿ ಮಾಧ್ಯಮ ಸಂಸ್ಥೆಗಳ ಮೇಲೆ ಇ.ಡಿ., ಐ.ಟಿ. ಅಸ್ತ್ರ; ಇಲ್ಲಿದೆ ವಿವರ

ಮೋದಿ ಅವಧಿಯಲ್ಲಿ ಮಾಧ್ಯಮ ಸಂಸ್ಥೆಗಳ ಮೇಲೆ ಇ.ಡಿ., ಐ.ಟಿ. ಅಸ್ತ್ರ; ಇಲ್ಲಿದೆ ವಿವರ

- Advertisement -
- Advertisement -

ಸರ್ಕಾರದ ತಪ್ಪುಗಳನ್ನು ಪ್ರಶ್ನಿಸುವ ಮಾಧ್ಯಮಗಳ ಮೇಲೆ ತರಹೇವಾರಿ ದಾಳಿಗಳನ್ನು ಸರ್ಕಾರ ನಡೆಸುತ್ತಿರುವುದಕ್ಕೆ ಬಹುದೊಡ್ಡ ಇತಿಹಾಸವೇ ಇದೆ. ತುರ್ತು ಪರಿಸ್ಥಿತಿ ಹೇರಿದ್ದ ಕಾಲದಲ್ಲಿ ನೇರವಾಗಿ ಮಾಧ್ಯಮಗಳನ್ನು ನಿಯಂತ್ರಿಸಲಾಗುತ್ತಿತ್ತು. ಆದರೆ ಅಘೋಷಿತ ತುರ್ತು ಪರಿಸ್ಥಿತಿಯ ವಾತಾವರಣ ಸೃಷ್ಟಿಯಾಗಿರುವ ಈ ಕಾಲಘಟ್ಟದಲ್ಲಿ ಮಾಧ್ಯಮಗಳ ಬಾಯಿ ಮುಚ್ಚಿಸಲು ನಾನಾ ಮಾರ್ಗಗಳನ್ನು ಪ್ರಭುತ್ವ ಕಂಡುಕೊಂಡಿದೆ.

ಪತ್ರಿಕೆಗಳಿಗೆ ಸರ್ಕಾರಿ ಜಾಹೀರಾತುಗಳನ್ನು ತಡೆದು ತೊಂದರೆ ಕೊಡುವುದು, ಟ್ರೋಲ್‌ ಪಡೆಯ ಮೂಲಕ ದಾಳಿ ನಡೆಸುವುದು ಒಂದು ಕಡೆಯಾದರೆ ಆದಾಯ ತೆರಿಗೆ (ಐ.ಟಿ.), ಜಾರಿ ನಿರ್ದೇಶನಾಲಯ (ಇ.ಡಿ.) ಥರದ ಸಂಸ್ಥೆಗಳ ಮೂಲಕ ದಾಳಿ, ಸರ್ಚ್, ಪರಿಶೀಲನೆ ನಡೆಸುವ ಕೆಲಸವೂ ನಡೆಯುತ್ತಿದೆ. ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಬಳಿಕ ಈ ವಿದ್ಯಮಾನಗಳು ಆಗಾಗ್ಗೆ ವರದಿಯಾಗುತ್ತಿವೆ.

2002ರ ಗುಜರಾತ್ ಗಲಭೆ ಮತ್ತು ಮೋದಿ ಸರ್ಕಾರದ ಬಹುಸಂಖ್ಯಾತವಾದದ ಕುರಿತು ಎರಡು ಭಾಗಗಳಲ್ಲಿ ಬಿಬಿಸಿ ಸುದ್ದಿಸಂಸ್ಥೆಯು ಸಾಕ್ಷ್ಯಚಿತ್ರವನ್ನು ಬಿಡುಗಡೆ ಮಾಡಿತ್ತು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಜೊತೆಗೆ ಈ ಸಾಕ್ಷ್ಯಚಿತ್ರಗಳನ್ನು ಭಾರತದಲ್ಲಿ ನಿರ್ಬಂಧಿಸಲಾಯಿತು. ಅದರ ಬೆನ್ನಲ್ಲೇ ಆದಾಯ ತೆರಿಗೆ ಅಧಿಕಾರಿಗಳು ದೆಹಲಿ ಮತ್ತು ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳ ಮೇಲೆ ರೈಡ್‌ ಮಾಡಿದ್ದಾರೆ. ಹೀಗಾಗಿ ಸರ್ಕಾರವನ್ನು ಪ್ರಶ್ನಿಸುವ ಮಾಧ್ಯಮಗಳ ವಿರುದ್ಧ ಐ.ಟಿ., ಇ.ಡಿ.ಗಳನ್ನು ಸರ್ಕಾರ ಬಳಸುತ್ತದೆ ಎಂಬ ಟೀಕೆ ಮುನ್ನೆಲೆಗೆ ಬಂದಿದೆ.

ಇದನ್ನೂ ಓದಿರಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಇಮೇಜ್‌ಗೆ ಧಕ್ಕೆ ತಂದಿದ್ದಕ್ಕೆ ಬಿಬಿಸಿ ಕಚೇರಿಗಳ ಮೇಲೆ ದಾಳಿ: ದಿಗ್ವಿಜಯ ಸಿಂಗ್

“ಅಂತಾರಾಷ್ಟ್ರೀಯ ತೆರಿಗೆ ಮತ್ತು ವರ್ಗಾವಣೆ ಬೆಲೆಗಳ ಅಕ್ರಮದ ಬಗ್ಗೆ ಸಮೀಕ್ಷೆ ನಡೆಸುತ್ತಿದ್ದು, ಅದರಂತೆ ಬಿಬಿಸಿ ಮೇಲೂ ಆರೋಪ ಕೇಳಿಬಂದಿದೆ. ಹಾಗಾಗಿ ಸಮೀಕ್ಷೆ ಮಾಡುತ್ತಿದ್ದೇವೆ” ಎಂದು ಅಧಿಕಾರಿಗಳು ಹೇಳಿದ್ದಾರೆ. ಕೆಲವು ಪತ್ರಕರ್ತರ ದಾಖಲೆಗಳು ಮತ್ತು ಫೋನ್‌ಗಳನ್ನು ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದಾರೆ ಎಂದೂ ಮೂಲಗಳು ಹೇಳಿವೆ. ಬಿಬಿಸಿಯ ಮೇಲೆ ದಾಳಿ ಮಾಡಿದಂತೆಯೇ ಸರ್ಕಾರ ಇತ್ತೀಚಿನ ವರ್ಷಗಳಲ್ಲಿ ಹಲವು ಮಾಧ್ಯಮಗಳ ಮೇಲೆ ಐ.ಟಿ. ಮತ್ತು ಇ.ಡಿ. ಬಾಣಗಳನ್ನು ಬಳಸಿದೆ.

ನ್ಯಾಷನಲ್ ಹೆರಾಲ್ಡ್‌ ಮೇಲೆ ಇ.ಡಿ. ರೈಡ್‌

ಕಾಂಗ್ರೆಸ್‌ ಪಕ್ಷದ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮೇಲೆ ಇ.ಡಿ. ಪ್ರಹಾರ ನಡೆಸಿದೆ. ಮನಿಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಳೆದ ವರ್ಷ ಕಾಂಗ್ರೆಸ್ ನಾಯಕರಿಗೆ ಸಮನ್ಸ್ ಜಾರಿ ಮಾಡಿದ್ದರು. ರಾಹುಲ್‌ ಗಾಂಧಿ, ಸೋನಿಯಾ ಗಾಂಧಿಯವರು ವಿಚಾರಣೆಗೂ ಹಾಜರಾಗಿದ್ದರು.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಒಡೆತನದಲ್ಲಿದ್ದು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ಪ್ರಕಟಿಸುತ್ತಿದೆ. ಇದರ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರಾಜ್ಯಸಭೆಯ ವಿರೋಧ ಪಕ್ಷದ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಪವನ್ ಬನ್ಸಾಲ್ ಅವರನ್ನು ಪ್ರಶ್ನಿಸಿತ್ತು. ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್‌ ಗಾಂಧಿಗೆ ಜಾರಿ ನಿರ್ದೇಶನಾಲಯ (ED) ಸಮನ್ಸ್ ನೀಡಿತ್ತು. ಕಾಂಗ್ರೆಸ್‌ ಕಾರ್ಯಕರ್ತರು ಬೃಹತ್‌ ಮಟ್ಟದಲ್ಲಿ ಪ್ರತಿಭಟನೆ ನಡೆಸಿದ್ದರು.

ನ್ಯೂಸ್‌ ಕ್ಲಿಕ್‌, ನ್ಯೂಸ್‌ ಲಾಂಡ್ರಿ ಮೇಲೆ ಕಾರ್ಯಾಚರಣೆ

ಪರ್ಯಾಯ ಮಾಧ್ಯಮಗಳಾಗಿ ಭಾರೀ ಸಂಚಲನ ಮೂಡಿಸಿರುವ ನ್ಯೂಸ್‌ಕ್ಲಿಕ್ ಮತ್ತು ನ್ಯೂಸ್‌ಲಾಂಡ್ರಿ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು 2021ರ ಫೆಬ್ರುವರಿಯಲ್ಲಿ ಭೇಟಿ ನೀಡಿ, ಕಾರ್ಯಾಚರಣೆ ನಡೆಸಿದ್ದರು. ಅಧಿಕಾರಿಗಳು ಇದನ್ನು “ಸರ್ವೆ” ಎಂದು ಕರೆದಿದ್ದು, “ದಾಳಿ” ಅಲ್ಲ ಎಂದು ತಿಳಿಸಿದ್ದರು.

ಸರ್ವೇಗಳು ತೆರಿಗೆ ವಂಚನೆಯ ಆರೋಪಗಳಿಗೆ ಸಂಬಂಧಿಸಿದ್ದು, ಪೋರ್ಟಲ್‌ಗಳ ಖಾತೆ ಪುಸ್ತಕಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದರು.

ನ್ಯೂಸ್‌ ಕ್ಲಿಕ್ ವೆ‌ಬ್ ಪೋರ್ಟಲ್‌ 2018-19 ರ ಹಣಕಾಸು ವರ್ಷದಲ್ಲಿ ವರ್ಲ್ಡ್‌ವೈಡ್ ಮೀಡಿಯಾ ಹೋಲ್ಡಿಂಗ್ಸ್ ಎಲ್‌ಎಲ್‌ಸಿ ಯುಎಸ್‌ಎಯಿಂದ 9.59 ಕೋಟಿ ವಿದೇಶಿ ನೇರ ಹೂಡಿಕೆಯನ್ನು (ಎಫ್‌ಡಿಐ) ಪಡೆದಿದೆ ಎಂದು ಆರೋಪಿಸಿದ್ದ ದೆಹಲಿ ಪೊಲೀಸರು ‘ನ್ಯೂಸ್‌ ಕ್ಲಿಕ್‌’ ಮೇಲೆ ಫೆಬ್ರವರಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಇದರ ನಂತರ ನ್ಯೂಸ್‌ಕ್ಲಿಕ್ ಮತ್ತು ಅದರ ಸಂಸ್ಥಾಪಕರ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು.

ಮುಖ್ಯವಾಹಿನಿಯ ಮಾಧ್ಯಮಗಳು ನಿರ್ಲಕ್ಷಿಸುವ ಜನಪರ ಸುದ್ದಿಗಳನ್ನು ಪ್ರಕಟ ಮಾಡುವ ವೆಬ್‌ ಪೋರ್ಟಲ್‌ ನ್ಯೂಸ್‌ ಕ್ಲಿಕ್ ಆಗಿದೆ.

ಮಾಧ್ಯಮಗಳು ಮತ್ತು ಅವುಗಳ ಸುದ್ದಿಗಳನ್ನು ವಿಶ್ಲೇಷಿಸುವ ವೆಬ್‌ಪೋರ್ಟಲ್‌ ‘ನ್ಯೂಸ್‌ ಲಾಂಡ್ರಿ’. ಗ್ರೌಂಡ್ ರಿಪೋರ್ಟ್‌ಗಳಿಗೆ ಈ ಜಾಲತಾಣ ಹೆಸರುವಾಸಿಯಾಗಿದೆ. ಜೊತೆಗೆ ಖಚಿತ ಅಂಕಿ-ಅಂಶಗಳನ್ನು ಆಧರಿಸಿ ಸುದ್ದಿಯ ವಿಭಿನ್ನ ದೃಷ್ಟಿಕೋನಗಳನ್ನು ತೆರೆದಿಡುತ್ತಿದೆ. ಪ್ರಭುತ್ವದ ಪರ ಕೆಲಸ ಮಾಡುವ ಮಾಧ್ಯಮಗಳನ್ನು ವಿಶಿಷ್ಟವಾಗಿ ಗೇಲಿ ಮಾಡುವಲ್ಲಿ ‘ನ್ಯೂಸ್‌ಲಾಂಡ್ರಿ’ ಹೆಸರುವಾಸಿ.

ಎರಡು ಪೋರ್ಟಲ್‌ಗಳು ಕೂಡಾ ಪ್ರಭುತ್ವದ ಕೆಂಗಣ್ಣಿಗೆ ಗುರಿಯಾಗಿರುವ ಜನಪರ ಸುದ್ದಿ ಸಂಸ್ಥೆಗಳಾಗಿವೆ. ಸರ್ಕಾರದ ರೈತ ಕಾಯ್ದೆಗಳ ವಿರುದ್ಧ ನಡೆದ ಪ್ರತಿಭಟನೆಯನ್ನು ವರದಿ ಮಾಡಿದ ಕಾರಣದಿಂದ ಈ ಸಂಸ್ಥೆಗಳ ಮೇಲೆ ಐಟಿ ಸರ್ಚ್ ಮಾಡಿದೆ ಎಂಬ ಆರೋಪಗಳು ಬಂದಿದ್ದವು.

ದೈನಿಕ್‌ ಭಾಸ್ಕರ್‌‌ ಮೇಲೆ ರೈಡ್‌

ಉತ್ತರ ಭಾರತದ ಪ್ರಮುಖ ಪತ್ರಿಕೆಗಳಲ್ಲಿ ದೈನಿಕ್‌ ಭಾಸ್ಕರ್ ಒಂದಾಗಿದ್ದು, 12 ರಾಜ್ಯಗಳಲ್ಲಿ ಈ ಪತ್ರಿಕೆಯ ಆವೃತ್ತಿಗಳಿವೆ. ಸುಮಾರು 65 ವರ್ಷಗಳ ಇತಿಹಾಸವಿರುವ ಈ ಪತ್ರಿಕೆ ಪ್ರಭುತ್ವಕ್ಕೆ ಸೊಪ್ಪು ಹಾಕುವುದಿಲ್ಲ ಎಂಬ ಪ್ರಶಂಸೆಗೆ ಪಾತ್ರವಾಗಿದೆ.

‘ದೈನಿಕ್ ಭಾಸ್ಕರ್‌’ ಸಂಸ್ಥೆಯು ಆದಾಯ ತೆರಿಗೆ ಪಾವತಿಯಲ್ಲಿ ಅಕ್ರಮ ಎಸಗಿದೆ ಎಂಬ ಆರೋಪದ ಮೇಲೆ ಸಂಸ್ಥೆಯ ಪ್ರಧಾನ ಕಚೇರಿ ಮತ್ತು ಪ್ರಾದೇಶಿಕ ಕಚೇರಿಗಳ ಮೇಲೆ 2021ರ ಜುಲೈ 12ರಂದು ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ದೇಶದ ಒಟ್ಟು ಆರು ರಾಜ್ಯಗಳಲ್ಲಿ ಏಕಕಾಲದಲ್ಲಿ ಪರಿಶೀಲನೆ ನಡೆದಿತ್ತು.

‘ಕೋವಿಡ್‌ ಎರಡನೇ ಅಲೆಯ ಸಂದರ್ಭದಲ್ಲಿ ಉತ್ತರ ಪ್ರದೇಶದ ಗಂಗಾ ತಟದಲ್ಲಿ ಹೆಣಗಳನ್ನು ಮನಬಂದಂತೆ ವಿಲೇವಾರಿ ಮಾಡಲಾಗಿದೆ. ಸರ್ಕಾರವು ಸಾವಿನ ಸಂಖ್ಯೆಯನ್ನು ಮುಚ್ಚಿಡಲು ಯತ್ನಿಸುತ್ತಿದೆ. ಆದರೆ, ಗಂಗೆ ತನ್ನ ಒಡಲಲ್ಲಿ ಇರುವ ಹೆಣಗಳನ್ನು ಹೊರಹಾಕುತ್ತಿದ್ದಾಳೆ’ ಎಂದು ದೈನಿಕ್‌ ಭಾಸ್ಕರ್‌ ಪತ್ರಿಕೆಯು 2021ರ ಜೂನ್‌ ಕೊನೆಯ ವಾರದಲ್ಲಿ ವಿಸ್ತೃತ ವರದಿ ಪ್ರಕಟಿಸಿತ್ತು. ವೈಫಲ್ಯವನ್ನು ಎತ್ತಿ ಹಿಡಿದು ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿತ್ತು.

ಇದನ್ನೂ ಓದಿರಿ: ದಲಿತ ಯುವ ಹೋರಾಟಗಾರ ಸಂದೇಶ್ ವಿರುದ್ಧ ಎಫ್‌ಐಆರ್‌; ಬಂಧನ

ಭಾರತ್ ಸಮಾಚಾರ್‌ ಕಚೇರಿ ಪರಿಶೀಲನೆ

ಉತ್ತರ ಪ್ರದೇಶದ ಪ್ರಮುಖ ಸುದ್ದಿವಾಹಿನಿಗಳಲ್ಲಿ ಒಂದಾದ ಭಾರತ್ ಸಮಾಚಾರ್‌ ಕಚೇರಿಯ ಮೇಲೆ 2021ರ ಜುಲೈ 12ರಂದು ಆದಾಯ ತೆರಿಗೆ ಇಲಾಖೆ ಪರಿಶೀಲನೆ ನಡೆಸಿತ್ತು.

ಆದಾಯ ತೆರಿಗೆ ಪಾವತಿಯಲ್ಲಿ ಮತ್ತು ಕಂಪನಿಗೆ ಸಂಬಂಧಿಸಿದ ಖರೀದಿಯಲ್ಲಿ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಲಾಗಿತ್ತು. ಸರ್ಕಾರವನ್ನು ಎದುರು ಹಾಕಿಕೊಂಡಿದ್ದ ಈ ಪತ್ರಿಕೆಯು ಐಟಿ ದಾಳಿಗೂ ಮುನ್ನ ಕೋವಿಡ್ ವೈಫಲ್ಯಗಳನ್ನು ಸರಣಿಯಾಗಿ ತೆರೆದಿಟ್ಟಿತ್ತು. “ಕೋವಿಡ್‌ ಕಾರಣಕ್ಕೆ ಸಂಭವಿಸಿದ ಸಾವುಗಳ ಸಂಖ್ಯೆಯನ್ನು ಉತ್ತರ ಪ್ರದೇಶ ಸರ್ಕಾರ ಬಚ್ಚಿಟ್ಟಿದೆ. ಆಕ್ಸಿಜನ್‌ ಪೂರೈಕೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈ ಕಾರಣದಿಂದಲೇ ಎರಡನೇ ಅಲೆಯಲ್ಲಿ ಹೆಚ್ಚಿನ ಸಾವುಗಳು ಸಂಭವಿಸಿವೆ” ಎಂದು 2021ರ ಜೂನ್‌ ಮತ್ತು ಜುಲೈನಲ್ಲಿ ಒಂದರ ಹಿಂದೆ ಒಂದು ವರದಿಯನ್ನು ಪ್ರಸಾರ ಮಾಡಿತ್ತು. ಈ ಕಾರಣಕ್ಕಾಗಿಯೇ ಐಟಿ ಪರಿಶೀಲನೆ ನಡೆಸಲಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು.

‘ನೀವು ಎಷ್ಟು ಬೇಕಾದರೂ ದನಿ ಅಡಗಿಸಲು ಯತ್ನಿಸಿ, ನಾವೂ ಅಷ್ಟೇ ದೊಡ್ಡ ದನಿಯಲ್ಲಿ ಸತ್ಯ ಹೇಳುತ್ತೇವೆ. ನಾವು ಮೊದಲೂ ಹೆದರುತ್ತಿರಲಿಲ್ಲ, ಈಗಲೂ ಹೆದರುವುದಿಲ್ಲ’ ಎಂದು ಭಾರತ್ ಸಮಾಚಾರ್‌ ಚಾಟಿ ಬೀಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...