Homeಕರ್ನಾಟಕಜೈನ್‌ ವಿವಿ ವಿವಾದ ಉದ್ದೇಶಪೂರ್ವಕ ಕೃತ್ಯ; ಬೆಂಗಳೂರು ವಿವಿ ವಿದ್ಯಾರ್ಥಿಗಳ ಆಕ್ರೋಶ

ಜೈನ್‌ ವಿವಿ ವಿವಾದ ಉದ್ದೇಶಪೂರ್ವಕ ಕೃತ್ಯ; ಬೆಂಗಳೂರು ವಿವಿ ವಿದ್ಯಾರ್ಥಿಗಳ ಆಕ್ರೋಶ

- Advertisement -
- Advertisement -

ಡಾ.ಬಿ.ಆರ್‌.ಅಂಬೇಡ್ಕರ್‌, ಮೀಸಲಾತಿ ಮತ್ತು ದಲಿತರ ಕುರಿತು ಅವಹೇಳನಕಾರಿ ಸ್ಕಿಟ್‌ ಮಾಡಿ ವಿವಾದ ಸೃಷ್ಟಿಸುವ ಬೆಂಗಳೂರಿನ ಜೈನ್‌ ವಿಶ್ವವಿದ್ಯಾನಿಲಯದ ವಿರುದ್ಧ ಬೆಂಗಳೂರು ವಿವಿ ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರು ವಿವಿಯ ಜ್ಞಾನಭಾರತಿ ಆವರಣದಲ್ಲಿರುವ ಎಲ್ಲ ವಿಭಾಗಗಳಿಗೆ, ಕಚೇರಿಗಳಿಗೆ ಬೀಗ ಜಡಿದು, ಆಡಳಿತ ಕಚೇರಿಯ ಮುಂಭಾಗದಲ್ಲಿ ‘ಸ್ವಾಭಿಮಾನಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ವೇದಿಕೆ’ಯ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಗಿದೆ.

ಜೈನ್ ವಿವಿಯಲ್ಲಿ ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಸರಕಾರವು ನಿವೃತ್ತ ನ್ಯಾಯಾಧೀಶರನ್ನು ಒಳಗೊಂಡ ಸಮಿತಿಯಿಂದ ವರದಿಯನ್ನು ಪಡೆಯಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ದಲಿತ ಸಮುದಾಯಕ್ಕೆ ಮತ್ತು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಅವಮಾನ ಉದ್ದೇಶದಿಂದಲೇ ಜೈನ್ ವಿವಿಯ ಉತ್ಸವದಲ್ಲಿ ವಿವಾದಿತ ಸ್ಕಿಟ್‌ ಪ್ರದರ್ಶನ ಮಾಡಿದ್ದಾರೆ. ಹಾಗಾಗಿ ಘಟನೆಯನ್ನು ನಿಷ್ಪಕ್ಷಪಾತವಾಗಿ ತನಿಖೆ ಮಾಡದ ಹೊರತು ಪ್ರಕರಣಕ್ಕೆ ನ್ಯಾಯ ಒದಗಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಅಂಬೇಡ್ಕರ್‌ ಅವರನ್ನು ಅಗೌರವಿಸುವ ವಿದ್ಯಮಾನಗಳು ಆಗಾಗ್ಗೆ ಘಟಿಸುತ್ತಿವೆ. ಇವು ಉದ್ದೇಶಪೂರ್ವಕ ಘಟನೆಗಳಾಗಿವೆ. ರಾಯಚೂರಿನಲ್ಲಿ ಗಣರಾಜ್ಯೋತ್ಸವದಂದು ಅಂಬೇಡ್ಕರ್ ಭಾವಚಿತ್ರವನ್ನು ಕೆಳಗೆ ಇಳಿಸಿ ಅವಮಾನ ಮಾಡಲಾಗಿತ್ತು. ಈಗ ಜೈನ್ ವಿವಿಯಲ್ಲಿ ಅಂಬೇಡ್ಕರ್ ಅವರಿಗೆ ಅವಮಾನ ಮಾಡಲಾಗಿದೆ. ಆದರೆ ಸರಕಾರ ಯಾವುದೇ ಕ್ರಮವನ್ನು ಜರುಗಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸ್ಕಿಟ್‌ನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿ, ಜೈನ್ ವಿವಿಯ ಉತ್ಸವದಲ್ಲಿ ಅದನ್ನು ಪ್ರದರ್ಶನ ಮಾಡಿ ಸಂಭ್ರಮಿಸಲಾಗಿದೆ. ಈ ಹಿನ್ನಲೆಯಲ್ಲಿ ವಿಶ್ವವಿದ್ಯಾಲಯದ ಮಾನ್ಯತೆಯನ್ನು ಕೂಡಲೇ ರದ್ದು ಮಾಡಬೇಕು. ಯುಜಿಸಿ ಇದನ್ನು ಗಂಭೀರವಾಗಿ ಪರಿಗಣಿಸಿ ಯುಜಿಸಿ ನಿಯಮಗಳ ಅಡಿ ವಿವಿಗೆ ನಿರ್ಬಂಧ ವಿಧಿಸಬೇಕು ಎಂದು ಆಗ್ರಹಿಸಿದರು.

ಭಾರತದಲ್ಲಿ ಶತಶತಮಾನಗಳಿಂದಲೂ ಅಸ್ತಿತ್ವದಲ್ಲಿದ್ದಂತಹ ಅಸ್ಪೃಶ್ಯತೆ, ಜಾತಿ ಪದ್ಧತಿಯನ್ನು ತೊಡೆದು ಹಾಕಿ ಸಮಾನತೆಯನ್ನು ಸಾರಿ, ಇಡೀ ವಿಶ್ವಕ್ಕೆ ಮಾದರಿಯಾದಂತಹ ಡಾ. ಬಿ.ಆರ್ ಅಂಬೇಡ್ಕರ್ ಅವರನ್ನು ಅತ್ಯಂತ ಕೀಳಾಗಿ ಚಿತ್ರಿಸಿರುವುದು ದಲಿತರ ಮನಸ್ಸಿಗೆ ಅಶಾಂತಿಯನ್ನು ಉಂಟು ಮಾಡಿದೆ ಎಂದಿದ್ದಾರೆ.

ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ಬಿಯುಟಿಸಿ ಅಧ್ಯಕ್ಷ ಪ್ರೊ.ಮುರಳೀಧರ್, ಬಿ.ಗೋಪಾಲ್, ಡಾ. ರಾಮಕೃಷ್ಣಯ್ಯ, ಪ್ರೊ.ಹೊನ್ನು ಸಿದ್ದಾರ್ಥ, ಟಿ.ಎಚ್.ಮೂರ್ತಿ, ಡಾ.ಪ್ರಭಾಕರ್, ಪ್ರೊ. ಕೃಷ್ಣಸ್ವಾಮಿ, ಹ.ರ.ಮಹೇಶ್, ಡಾ.ದೇವಾನಂದ್, ಸುರೇಶ್ ಗೌತಮ್, ವಿದ್ಯಾರ್ಥಿ ಮುಖಂಡರಾದ ಲೋಕೇಶ್ ಎನ್, ಶಶಿಕುಮಾರ್ ಪಿ, ಬೈರಾಜ್, ನಂದೀಶ್, ಚಂದ್ರ ಮಿಡ್ಲಮನೆ, ಈಶ್ವರ್ ಸಿರಿಗೇರಿ, ಲಿಂಗರಾಜು, ಅರಣ್, ಶುಭಾಕರ್, ಪ್ರಭಾಕರ್, ತಿಲಕ್, ರಾಜೇಶ್, ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿ- ವಿದ್ಯಾರ್ಥಿನಿಯರು,
ವಿವಿಯ ಬೋಧಕ-ಬೋಧಕೇತರ ನೌಕಕರ ಸಂಘದ ಪದಾಧಿಕಾರಿಗಳು ಮತ್ತಿತರರು ಭಾಗವಹಿಸಿದ್ದರು.

ಇದನ್ನೂ ಓದಿರಿ: ಅಂಬೇಡ್ಕರ್‌ರವರಿಗೆ ಅವಮಾನ ಪ್ರಕರಣ: ಜೈನ್ ವಿವಿಯ ಏಳು ವಿದ್ಯಾರ್ಥಿಗಳ ಬಂಧನ

ಜೈನ್‌ ವಿವಿ, ತಪ್ಪಿತಸ್ಥರ ಬಂಧನ

ಸಂವಿಧಾನಶಿಲ್ಪಿ, ರಾಷ್ಟ್ರನಾಯಕ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಕುರಿತು ಅವಹೇಳನಕಾರಿಯಾಗಿ ಸ್ಕಿಟ್‌ ಪ್ರದರ್ಶನ ಮಾಡಿರುವ ಬೆಂಗಳೂರಿನ ಜೈನ್ ಕಾಲೇಜಿನ ಏಳು ವಿದ್ಯಾರ್ಥಿಗಳನ್ನು ಬಂಧಿಸಿರುವುದಾಗಿ ವರದಿಯಾಗಿದೆ.

ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ನೀಡಿದ ದೂರಿನ ಅನ್ವಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್‌ 3(1)(r), 3(1)(s), 3(1)(v) ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 153A, 149, 295A ಅಡಿಯಲ್ಲಿ ನಾಟಕದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು ಬಂಧಿಸಿರುವುದಾಗಿ ಬೆಂಗಳೂರಿನ ಸಿದ್ದಾಪುರ ಪೊಲೀಸರು ತಿಳಿಸಿದ್ದಾರೆ.

ಸುಜಲ್, ಗೌರವ್ ಪವಾರ್, ನೈಮಾ ನಾಗ್ರಿಯಾ, ಪ್ರಣವ್ ಪಲ್ಲಿಯಿಲ್, ರಿಷಬ್ ಜೈನ್, ಸ್ಮೃತಿ ಆರ್.ಬಿ, ಆಸಿಶ್ ಅಗರ್ವಾಲ್ ಬಂಧಿತ ವಿದ್ಯಾರ್ಥಿಗಳಾಗಿದ್ದಾರೆ. ಇವರೆಲ್ಲರೂ ಬಿಬಿಎ 5 ನೇ ಸೆಮಿಸ್ಟರ್ ನಲ್ಲಿ ಓದುತ್ತಿದ್ದಾರೆ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. It’s am immature reaction. If Gandhiji can be out to scrutiny, if Nehru can be out to scrutiny, if savarkar can be out to scrutiny, why if lord Ram himself can be put to scrutiny, why not the architect of constitution. Let him come out even brighter…

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...