Homeಕರ್ನಾಟಕಐಐಟಿ ಬಾಂಬೆಯಲ್ಲಿನ ಜಾತಿ ಕಿರುಕುಳದ ಬಗ್ಗೆ ಸಾಯುವ ಮುನ್ನ ತಿಳಿಸಿದ್ದ; ದರ್ಶನ್ ಸೋಲಂಕಿ ಕುಟುಂಬ ಆರೋಪ

ಐಐಟಿ ಬಾಂಬೆಯಲ್ಲಿನ ಜಾತಿ ಕಿರುಕುಳದ ಬಗ್ಗೆ ಸಾಯುವ ಮುನ್ನ ತಿಳಿಸಿದ್ದ; ದರ್ಶನ್ ಸೋಲಂಕಿ ಕುಟುಂಬ ಆರೋಪ

- Advertisement -
- Advertisement -

ಐಐಟಿ ಬಾಂಬೆಯಲ್ಲಿ 18 ವರ್ಷದ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಆಘಾತಕಾರಿ ಸಂಗತಿಗಳು ಹೊರಬೀಳತೊಡಗಿವೆ. “ಜಾತಿಯ ಕಾರಣಕ್ಕಾಗಿ ತನ್ನ ಸ್ನೇಹಿತರಿಂದ ಆತ ಅವಮಾನಕ್ಕೀಡಾಗಿದ್ದ” ಎಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯ ಪೋಷಕರು ಪ್ರತಿಕ್ರಿಯಿಸಿದ್ದಾರೆ.

‘ಎನ್‌ಡಿಟಿವಿ’ ಜೊತೆಯಲ್ಲಿ ಮಾತನಾಡಿರುವ ಕುಟುಂಬಸ್ಥರು, “ಐಐಟಿ ಬಾಂಬೆಯ ಅಧಿಕಾರಿಗಳು ಕ್ಯಾಂಪಸ್‌ನಲ್ಲಿ ಯಾವುದೇ ತಾರತಮ್ಯವಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ಆತ್ಮಹತ್ಯೆ ಮಾಡಿಕೊಂಡಿರುವ ದರ್ಶನ್ ಸೋಲಂಕಿ, ತನಗಾಗುತ್ತಿರುವ ಜಾತಿ ಕಿರುಕುಳದ ಕುರಿತು ನಮ್ಮೊಂದಿಗೆ ಹೇಳಿಕೊಂಡಿದ್ದನು” ಎಂದು ಆರೋಪಿಸಿದ್ದಾರೆ.

“ಕಳೆದ ತಿಂಗಳು ದರ್ಶನ್‌ ಬಂದಿದ್ದಾಗ, ಬಾಂಬೆ ಐಐಟಿಯಲ್ಲಿ ಜಾತಿ ತಾರತಮ್ಯ ನಡೆಯುತ್ತಿದೆ ಎಂದು ನನಗೆ ಮತ್ತು ಅಮ್ಮ-ಅಪ್ಪನಿಗೆ ಹೇಳಿದ್ದನು. ದರ್ಶನ್‌ ಪರಿಶಿಷ್ಟ ಜಾತಿಗೆ ಸೇರಿದವನು ಎಂದು ಆತನ ಸ್ನೇಹಿತರಿಗೆ ತಿಳಿದಿತ್ತು, ಆದ್ದರಿಂದ ಸ್ನೇಹಿತರ ವರ್ತನೆಗಳು ಬದಲಾದವು. ದರ್ಶನ್‌ ಜೊತೆಯಲ್ಲಿ ಅವರು ಮಾತನಾಡುವುದನ್ನೂ ನಿಲ್ಲಿಸಿದರು. ಅವನೊಂದಿಗೆ ಸುತ್ತಾಡುವುದನ್ನೂ ನಿಲ್ಲಿಸಿದ್ದರು” ಎಂದು ದರ್ಶನ್‌ ಸಹೋದರಿ ಜಾನ್ವಿ ಸೋಲಂಕಿ ತಿಳಿಸಿದ್ದಾರೆ.

“ಆತ ಸಂಕಷ್ಟದಲ್ಲಿದ್ದನು. ಆತನಿಗೆ ಚಿತ್ರಹಿಂಸೆ ನೀಡುತ್ತಿದ್ದರು. ಅದಕ್ಕಾಗಿಯೇ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ” ಎಂದು ದರ್ಶನ್ ಅವರ ತಾಯಿ ತರ್ಲಿಕಾಬೆನ್ ಸೋಲಂಕಿ ದೂರಿದ್ದಾರೆ.

ದರ್ಶನ್ ಅವರ ಚಿಕ್ಕಮ್ಮ ದಿವ್ಯಾಬೆನ್ ಪ್ರತಿಕ್ರಿಯಿಸಿ, “ಒಂದು ತಿಂಗಳ ಹಿಂದೆ ಆತ ಇಲ್ಲಿಗೆ ಬಂದಿದ್ದಾಗ ಸಂಕಷ್ಟ ತೋಡಿಕೊಂಡಿದ್ದನು. ಉಚಿತವಾಗಿ ಓದುತ್ತಿದ್ದೀಯ ಎಂದು ಅನೇಕ ವಿದ್ಯಾರ್ಥಿಗಳು ಆತನನ್ನು ಹಂಗಿಸುತ್ತಿದ್ದರು, ಅಸೂಯೆ ಪಟ್ಟಿಕೊಳ್ಳುತ್ತಿದ್ದರು, ನಾವು ಸಾಕಷ್ಟು ಖರ್ಚು ಮಾಡುತ್ತಿರುವಾಗ ನೀವು ಏಕೆ ಉಚಿತವಾಗಿ ಓದುತ್ತಿದ್ದೀರಿ ಎಂದು ಅಣಕ ಮಾಡುತ್ತಿದ್ದರು, ಅನೇಕ ವಿದ್ಯಾರ್ಥಿಗಳು ನನ್ನ ಬಗ್ಗೆ ಅಸೂಯೆ ಹೊಂದಿದ್ದಾರೆ ಎಂದು ಆತ ತಿಳಿಸಿದ್ದನು. ಕೆಲವು ಸ್ನೇಹಿತರು ಮಾತನಾಡುವುದನ್ನೂ ನಿಲ್ಲಿಸಿದ್ದರು” ಎಂದು ವಿವರಿಸಿದ್ದಾರೆ.

ದರ್ಶನ್ ಸಾವಿಗೆ ಶರಣಾಗುವ ಕೆಲವೇ ಗಂಟೆಗಳ ಮೊದಲು ನನಗೆ ಕರೆ ಮಾಡಿದ್ದನು ಎಂದು ದರ್ಶನ್ ಅವರ ತಂದೆ ರಮೇಶ್ ಭಾಯ್ ಸೋಲಂಕಿ ಪ್ರತಿಕ್ರಿಯಿಸಿದ್ದಾರೆ.

“ಆತ್ಮಹತ್ಯೆಗೆ ಎರಡು ಗಂಟೆಗಳ ಮೊದಲು, ನಮಗೆ ಐಐಟಿಯಿಂದ ಕರೆ ಬಂದಿತು, ‘ಹೇಗಿದ್ದೀರಿ’ ಎಂದು ಆತ ಕೇಳಿದನು, ಆತ ಸಾಮಾನ್ಯವಾಗಿಯೇ ಮಾತನಾಡುತ್ತಿದ್ದನು, ನನ್ನ ಅಣ್ಣನ ಮಗಳಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಲು ತಿಳಿಸಿದನು. ಇಂದು ಹೊರಗೆ ಹೋಗುತ್ತಿದ್ದೇನೆ ಎಂದನು. ನಾನು ಸ್ವಲ್ಪ ಹಣವನ್ನು ಕಳುಹಿಸಿದೆ. ನನ್ನ ಬಳಿ ಹಣವಿದೆ, ನನಗೆ ಹಣದ ಅಗತ್ಯವಿಲ್ಲ ಎಂದು ಆತ ತಿಳಿಸಿದ. ಅವನು ಹೆಚ್ಚು ಖರ್ಚು ಮಾಡುತ್ತಿರಲಿಲ್ಲ. ಆದರೆ ನಾನು ಇನ್ನೂ ಸ್ವಲ್ಪ ಹಣವನ್ನು ಕಳುಹಿಸುತ್ತಿದ್ದೆ. ಈ ರೀತಿಯಾಗಬಹುದು ಎಂದು ನನಗೆ ತಿಳಿದಿರಲಿಲ್ಲ” ಎಂದಿದ್ದಾರೆ ದರ್ಶನ್ ತಂದೆ.

ಇದನ್ನೂ ಓದಿರಿ: ಜಾತಿ ನಿಂದನೆ ಆರೋಪ; ಬಾಂಬೆ ಐಐಟಿಯಲ್ಲಿ ದಲಿತ ವಿದ್ಯಾರ್ಥಿ ಆ*ಹತ್ಯೆ

ದರ್ಶನ್ ಸೋಲಂಕಿ ಅವರು ವ್ಯವಸ್ಥಿತವಾಗಿ ತಾರತಮ್ಯವನ್ನು ಎದುರಿಸಿದ್ದಾರೆ ಎಂಬ ಆರೋಪವನ್ನು ಐಐಟಿ ಬಾಂಬೆ ತಳ್ಳಿಹಾಕಿದೆ. ಅವರ ಸಾವಿನ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದೆ.

“ಐಐಟಿ ಬಾಂಬೆಯ 1ನೇ ವರ್ಷದ ಬಿಟೆಕ್ ವಿದ್ಯಾರ್ಥಿಯ ದುರಂತ ಸಾವಿನ ಬಗ್ಗೆ ಆಗುತ್ತಿರುವ ಕೆಲವು ಸುದ್ದಿಗಳನ್ನು ನಾವು ನಿರಾಕರಿಸುತ್ತೇವೆ. ಸಾಂಸ್ಥಿಕ ಕೊಲೆ ಇದಾಗಿದೆ, ತಾರತಮ್ಯ ನಡೆದಿದೆ ಎಂಬುದು ಸುಳ್ಳು” ಎಂದು ಶಿಕ್ಷಣ ಸಂಸ್ಥೆ ಮಂಗಳವಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಭಾನುವಾರ ಹಾಸ್ಟೆಲ್ ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ದರ್ಶನ್ ಸಾವನ್ನಪ್ಪಿದ ನಂತರ ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿದ್ದಾರೆ. ಅವರಿಗೆ ಇನ್ನೂ ಸೂಸೈಡ್ ನೋಟ್ ಸಿಕ್ಕಿಲ್ಲ, ಆದರೆ ಕ್ಯಾಂಪಸ್‌ನಲ್ಲಿ ದಲಿತ ವಿದ್ಯಾರ್ಥಿಗಳ ವಿರುದ್ಧ ಆಗುತ್ತಿರುವ ತಾರತಮ್ಯದಿಂದಾಗಿ ದರ್ಶನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...