Homeಕರ್ನಾಟಕಐಐಟಿ ಬಾಂಬೆಯಲ್ಲಿನ ಜಾತಿ ಕಿರುಕುಳದ ಬಗ್ಗೆ ಸಾಯುವ ಮುನ್ನ ತಿಳಿಸಿದ್ದ; ದರ್ಶನ್ ಸೋಲಂಕಿ ಕುಟುಂಬ ಆರೋಪ

ಐಐಟಿ ಬಾಂಬೆಯಲ್ಲಿನ ಜಾತಿ ಕಿರುಕುಳದ ಬಗ್ಗೆ ಸಾಯುವ ಮುನ್ನ ತಿಳಿಸಿದ್ದ; ದರ್ಶನ್ ಸೋಲಂಕಿ ಕುಟುಂಬ ಆರೋಪ

- Advertisement -
- Advertisement -

ಐಐಟಿ ಬಾಂಬೆಯಲ್ಲಿ 18 ವರ್ಷದ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಆಘಾತಕಾರಿ ಸಂಗತಿಗಳು ಹೊರಬೀಳತೊಡಗಿವೆ. “ಜಾತಿಯ ಕಾರಣಕ್ಕಾಗಿ ತನ್ನ ಸ್ನೇಹಿತರಿಂದ ಆತ ಅವಮಾನಕ್ಕೀಡಾಗಿದ್ದ” ಎಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯ ಪೋಷಕರು ಪ್ರತಿಕ್ರಿಯಿಸಿದ್ದಾರೆ.

‘ಎನ್‌ಡಿಟಿವಿ’ ಜೊತೆಯಲ್ಲಿ ಮಾತನಾಡಿರುವ ಕುಟುಂಬಸ್ಥರು, “ಐಐಟಿ ಬಾಂಬೆಯ ಅಧಿಕಾರಿಗಳು ಕ್ಯಾಂಪಸ್‌ನಲ್ಲಿ ಯಾವುದೇ ತಾರತಮ್ಯವಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ಆತ್ಮಹತ್ಯೆ ಮಾಡಿಕೊಂಡಿರುವ ದರ್ಶನ್ ಸೋಲಂಕಿ, ತನಗಾಗುತ್ತಿರುವ ಜಾತಿ ಕಿರುಕುಳದ ಕುರಿತು ನಮ್ಮೊಂದಿಗೆ ಹೇಳಿಕೊಂಡಿದ್ದನು” ಎಂದು ಆರೋಪಿಸಿದ್ದಾರೆ.

“ಕಳೆದ ತಿಂಗಳು ದರ್ಶನ್‌ ಬಂದಿದ್ದಾಗ, ಬಾಂಬೆ ಐಐಟಿಯಲ್ಲಿ ಜಾತಿ ತಾರತಮ್ಯ ನಡೆಯುತ್ತಿದೆ ಎಂದು ನನಗೆ ಮತ್ತು ಅಮ್ಮ-ಅಪ್ಪನಿಗೆ ಹೇಳಿದ್ದನು. ದರ್ಶನ್‌ ಪರಿಶಿಷ್ಟ ಜಾತಿಗೆ ಸೇರಿದವನು ಎಂದು ಆತನ ಸ್ನೇಹಿತರಿಗೆ ತಿಳಿದಿತ್ತು, ಆದ್ದರಿಂದ ಸ್ನೇಹಿತರ ವರ್ತನೆಗಳು ಬದಲಾದವು. ದರ್ಶನ್‌ ಜೊತೆಯಲ್ಲಿ ಅವರು ಮಾತನಾಡುವುದನ್ನೂ ನಿಲ್ಲಿಸಿದರು. ಅವನೊಂದಿಗೆ ಸುತ್ತಾಡುವುದನ್ನೂ ನಿಲ್ಲಿಸಿದ್ದರು” ಎಂದು ದರ್ಶನ್‌ ಸಹೋದರಿ ಜಾನ್ವಿ ಸೋಲಂಕಿ ತಿಳಿಸಿದ್ದಾರೆ.

“ಆತ ಸಂಕಷ್ಟದಲ್ಲಿದ್ದನು. ಆತನಿಗೆ ಚಿತ್ರಹಿಂಸೆ ನೀಡುತ್ತಿದ್ದರು. ಅದಕ್ಕಾಗಿಯೇ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ” ಎಂದು ದರ್ಶನ್ ಅವರ ತಾಯಿ ತರ್ಲಿಕಾಬೆನ್ ಸೋಲಂಕಿ ದೂರಿದ್ದಾರೆ.

ದರ್ಶನ್ ಅವರ ಚಿಕ್ಕಮ್ಮ ದಿವ್ಯಾಬೆನ್ ಪ್ರತಿಕ್ರಿಯಿಸಿ, “ಒಂದು ತಿಂಗಳ ಹಿಂದೆ ಆತ ಇಲ್ಲಿಗೆ ಬಂದಿದ್ದಾಗ ಸಂಕಷ್ಟ ತೋಡಿಕೊಂಡಿದ್ದನು. ಉಚಿತವಾಗಿ ಓದುತ್ತಿದ್ದೀಯ ಎಂದು ಅನೇಕ ವಿದ್ಯಾರ್ಥಿಗಳು ಆತನನ್ನು ಹಂಗಿಸುತ್ತಿದ್ದರು, ಅಸೂಯೆ ಪಟ್ಟಿಕೊಳ್ಳುತ್ತಿದ್ದರು, ನಾವು ಸಾಕಷ್ಟು ಖರ್ಚು ಮಾಡುತ್ತಿರುವಾಗ ನೀವು ಏಕೆ ಉಚಿತವಾಗಿ ಓದುತ್ತಿದ್ದೀರಿ ಎಂದು ಅಣಕ ಮಾಡುತ್ತಿದ್ದರು, ಅನೇಕ ವಿದ್ಯಾರ್ಥಿಗಳು ನನ್ನ ಬಗ್ಗೆ ಅಸೂಯೆ ಹೊಂದಿದ್ದಾರೆ ಎಂದು ಆತ ತಿಳಿಸಿದ್ದನು. ಕೆಲವು ಸ್ನೇಹಿತರು ಮಾತನಾಡುವುದನ್ನೂ ನಿಲ್ಲಿಸಿದ್ದರು” ಎಂದು ವಿವರಿಸಿದ್ದಾರೆ.

ದರ್ಶನ್ ಸಾವಿಗೆ ಶರಣಾಗುವ ಕೆಲವೇ ಗಂಟೆಗಳ ಮೊದಲು ನನಗೆ ಕರೆ ಮಾಡಿದ್ದನು ಎಂದು ದರ್ಶನ್ ಅವರ ತಂದೆ ರಮೇಶ್ ಭಾಯ್ ಸೋಲಂಕಿ ಪ್ರತಿಕ್ರಿಯಿಸಿದ್ದಾರೆ.

“ಆತ್ಮಹತ್ಯೆಗೆ ಎರಡು ಗಂಟೆಗಳ ಮೊದಲು, ನಮಗೆ ಐಐಟಿಯಿಂದ ಕರೆ ಬಂದಿತು, ‘ಹೇಗಿದ್ದೀರಿ’ ಎಂದು ಆತ ಕೇಳಿದನು, ಆತ ಸಾಮಾನ್ಯವಾಗಿಯೇ ಮಾತನಾಡುತ್ತಿದ್ದನು, ನನ್ನ ಅಣ್ಣನ ಮಗಳಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಲು ತಿಳಿಸಿದನು. ಇಂದು ಹೊರಗೆ ಹೋಗುತ್ತಿದ್ದೇನೆ ಎಂದನು. ನಾನು ಸ್ವಲ್ಪ ಹಣವನ್ನು ಕಳುಹಿಸಿದೆ. ನನ್ನ ಬಳಿ ಹಣವಿದೆ, ನನಗೆ ಹಣದ ಅಗತ್ಯವಿಲ್ಲ ಎಂದು ಆತ ತಿಳಿಸಿದ. ಅವನು ಹೆಚ್ಚು ಖರ್ಚು ಮಾಡುತ್ತಿರಲಿಲ್ಲ. ಆದರೆ ನಾನು ಇನ್ನೂ ಸ್ವಲ್ಪ ಹಣವನ್ನು ಕಳುಹಿಸುತ್ತಿದ್ದೆ. ಈ ರೀತಿಯಾಗಬಹುದು ಎಂದು ನನಗೆ ತಿಳಿದಿರಲಿಲ್ಲ” ಎಂದಿದ್ದಾರೆ ದರ್ಶನ್ ತಂದೆ.

ಇದನ್ನೂ ಓದಿರಿ: ಜಾತಿ ನಿಂದನೆ ಆರೋಪ; ಬಾಂಬೆ ಐಐಟಿಯಲ್ಲಿ ದಲಿತ ವಿದ್ಯಾರ್ಥಿ ಆ*ಹತ್ಯೆ

ದರ್ಶನ್ ಸೋಲಂಕಿ ಅವರು ವ್ಯವಸ್ಥಿತವಾಗಿ ತಾರತಮ್ಯವನ್ನು ಎದುರಿಸಿದ್ದಾರೆ ಎಂಬ ಆರೋಪವನ್ನು ಐಐಟಿ ಬಾಂಬೆ ತಳ್ಳಿಹಾಕಿದೆ. ಅವರ ಸಾವಿನ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದೆ.

“ಐಐಟಿ ಬಾಂಬೆಯ 1ನೇ ವರ್ಷದ ಬಿಟೆಕ್ ವಿದ್ಯಾರ್ಥಿಯ ದುರಂತ ಸಾವಿನ ಬಗ್ಗೆ ಆಗುತ್ತಿರುವ ಕೆಲವು ಸುದ್ದಿಗಳನ್ನು ನಾವು ನಿರಾಕರಿಸುತ್ತೇವೆ. ಸಾಂಸ್ಥಿಕ ಕೊಲೆ ಇದಾಗಿದೆ, ತಾರತಮ್ಯ ನಡೆದಿದೆ ಎಂಬುದು ಸುಳ್ಳು” ಎಂದು ಶಿಕ್ಷಣ ಸಂಸ್ಥೆ ಮಂಗಳವಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಭಾನುವಾರ ಹಾಸ್ಟೆಲ್ ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ದರ್ಶನ್ ಸಾವನ್ನಪ್ಪಿದ ನಂತರ ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿದ್ದಾರೆ. ಅವರಿಗೆ ಇನ್ನೂ ಸೂಸೈಡ್ ನೋಟ್ ಸಿಕ್ಕಿಲ್ಲ, ಆದರೆ ಕ್ಯಾಂಪಸ್‌ನಲ್ಲಿ ದಲಿತ ವಿದ್ಯಾರ್ಥಿಗಳ ವಿರುದ್ಧ ಆಗುತ್ತಿರುವ ತಾರತಮ್ಯದಿಂದಾಗಿ ದರ್ಶನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...