Homeಕರ್ನಾಟಕಐಐಟಿ ಬಾಂಬೆಯಲ್ಲಿನ ಜಾತಿ ಕಿರುಕುಳದ ಬಗ್ಗೆ ಸಾಯುವ ಮುನ್ನ ತಿಳಿಸಿದ್ದ; ದರ್ಶನ್ ಸೋಲಂಕಿ ಕುಟುಂಬ ಆರೋಪ

ಐಐಟಿ ಬಾಂಬೆಯಲ್ಲಿನ ಜಾತಿ ಕಿರುಕುಳದ ಬಗ್ಗೆ ಸಾಯುವ ಮುನ್ನ ತಿಳಿಸಿದ್ದ; ದರ್ಶನ್ ಸೋಲಂಕಿ ಕುಟುಂಬ ಆರೋಪ

- Advertisement -
- Advertisement -

ಐಐಟಿ ಬಾಂಬೆಯಲ್ಲಿ 18 ವರ್ಷದ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಆಘಾತಕಾರಿ ಸಂಗತಿಗಳು ಹೊರಬೀಳತೊಡಗಿವೆ. “ಜಾತಿಯ ಕಾರಣಕ್ಕಾಗಿ ತನ್ನ ಸ್ನೇಹಿತರಿಂದ ಆತ ಅವಮಾನಕ್ಕೀಡಾಗಿದ್ದ” ಎಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯ ಪೋಷಕರು ಪ್ರತಿಕ್ರಿಯಿಸಿದ್ದಾರೆ.

‘ಎನ್‌ಡಿಟಿವಿ’ ಜೊತೆಯಲ್ಲಿ ಮಾತನಾಡಿರುವ ಕುಟುಂಬಸ್ಥರು, “ಐಐಟಿ ಬಾಂಬೆಯ ಅಧಿಕಾರಿಗಳು ಕ್ಯಾಂಪಸ್‌ನಲ್ಲಿ ಯಾವುದೇ ತಾರತಮ್ಯವಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ಆತ್ಮಹತ್ಯೆ ಮಾಡಿಕೊಂಡಿರುವ ದರ್ಶನ್ ಸೋಲಂಕಿ, ತನಗಾಗುತ್ತಿರುವ ಜಾತಿ ಕಿರುಕುಳದ ಕುರಿತು ನಮ್ಮೊಂದಿಗೆ ಹೇಳಿಕೊಂಡಿದ್ದನು” ಎಂದು ಆರೋಪಿಸಿದ್ದಾರೆ.

“ಕಳೆದ ತಿಂಗಳು ದರ್ಶನ್‌ ಬಂದಿದ್ದಾಗ, ಬಾಂಬೆ ಐಐಟಿಯಲ್ಲಿ ಜಾತಿ ತಾರತಮ್ಯ ನಡೆಯುತ್ತಿದೆ ಎಂದು ನನಗೆ ಮತ್ತು ಅಮ್ಮ-ಅಪ್ಪನಿಗೆ ಹೇಳಿದ್ದನು. ದರ್ಶನ್‌ ಪರಿಶಿಷ್ಟ ಜಾತಿಗೆ ಸೇರಿದವನು ಎಂದು ಆತನ ಸ್ನೇಹಿತರಿಗೆ ತಿಳಿದಿತ್ತು, ಆದ್ದರಿಂದ ಸ್ನೇಹಿತರ ವರ್ತನೆಗಳು ಬದಲಾದವು. ದರ್ಶನ್‌ ಜೊತೆಯಲ್ಲಿ ಅವರು ಮಾತನಾಡುವುದನ್ನೂ ನಿಲ್ಲಿಸಿದರು. ಅವನೊಂದಿಗೆ ಸುತ್ತಾಡುವುದನ್ನೂ ನಿಲ್ಲಿಸಿದ್ದರು” ಎಂದು ದರ್ಶನ್‌ ಸಹೋದರಿ ಜಾನ್ವಿ ಸೋಲಂಕಿ ತಿಳಿಸಿದ್ದಾರೆ.

“ಆತ ಸಂಕಷ್ಟದಲ್ಲಿದ್ದನು. ಆತನಿಗೆ ಚಿತ್ರಹಿಂಸೆ ನೀಡುತ್ತಿದ್ದರು. ಅದಕ್ಕಾಗಿಯೇ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ” ಎಂದು ದರ್ಶನ್ ಅವರ ತಾಯಿ ತರ್ಲಿಕಾಬೆನ್ ಸೋಲಂಕಿ ದೂರಿದ್ದಾರೆ.

ದರ್ಶನ್ ಅವರ ಚಿಕ್ಕಮ್ಮ ದಿವ್ಯಾಬೆನ್ ಪ್ರತಿಕ್ರಿಯಿಸಿ, “ಒಂದು ತಿಂಗಳ ಹಿಂದೆ ಆತ ಇಲ್ಲಿಗೆ ಬಂದಿದ್ದಾಗ ಸಂಕಷ್ಟ ತೋಡಿಕೊಂಡಿದ್ದನು. ಉಚಿತವಾಗಿ ಓದುತ್ತಿದ್ದೀಯ ಎಂದು ಅನೇಕ ವಿದ್ಯಾರ್ಥಿಗಳು ಆತನನ್ನು ಹಂಗಿಸುತ್ತಿದ್ದರು, ಅಸೂಯೆ ಪಟ್ಟಿಕೊಳ್ಳುತ್ತಿದ್ದರು, ನಾವು ಸಾಕಷ್ಟು ಖರ್ಚು ಮಾಡುತ್ತಿರುವಾಗ ನೀವು ಏಕೆ ಉಚಿತವಾಗಿ ಓದುತ್ತಿದ್ದೀರಿ ಎಂದು ಅಣಕ ಮಾಡುತ್ತಿದ್ದರು, ಅನೇಕ ವಿದ್ಯಾರ್ಥಿಗಳು ನನ್ನ ಬಗ್ಗೆ ಅಸೂಯೆ ಹೊಂದಿದ್ದಾರೆ ಎಂದು ಆತ ತಿಳಿಸಿದ್ದನು. ಕೆಲವು ಸ್ನೇಹಿತರು ಮಾತನಾಡುವುದನ್ನೂ ನಿಲ್ಲಿಸಿದ್ದರು” ಎಂದು ವಿವರಿಸಿದ್ದಾರೆ.

ದರ್ಶನ್ ಸಾವಿಗೆ ಶರಣಾಗುವ ಕೆಲವೇ ಗಂಟೆಗಳ ಮೊದಲು ನನಗೆ ಕರೆ ಮಾಡಿದ್ದನು ಎಂದು ದರ್ಶನ್ ಅವರ ತಂದೆ ರಮೇಶ್ ಭಾಯ್ ಸೋಲಂಕಿ ಪ್ರತಿಕ್ರಿಯಿಸಿದ್ದಾರೆ.

“ಆತ್ಮಹತ್ಯೆಗೆ ಎರಡು ಗಂಟೆಗಳ ಮೊದಲು, ನಮಗೆ ಐಐಟಿಯಿಂದ ಕರೆ ಬಂದಿತು, ‘ಹೇಗಿದ್ದೀರಿ’ ಎಂದು ಆತ ಕೇಳಿದನು, ಆತ ಸಾಮಾನ್ಯವಾಗಿಯೇ ಮಾತನಾಡುತ್ತಿದ್ದನು, ನನ್ನ ಅಣ್ಣನ ಮಗಳಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಲು ತಿಳಿಸಿದನು. ಇಂದು ಹೊರಗೆ ಹೋಗುತ್ತಿದ್ದೇನೆ ಎಂದನು. ನಾನು ಸ್ವಲ್ಪ ಹಣವನ್ನು ಕಳುಹಿಸಿದೆ. ನನ್ನ ಬಳಿ ಹಣವಿದೆ, ನನಗೆ ಹಣದ ಅಗತ್ಯವಿಲ್ಲ ಎಂದು ಆತ ತಿಳಿಸಿದ. ಅವನು ಹೆಚ್ಚು ಖರ್ಚು ಮಾಡುತ್ತಿರಲಿಲ್ಲ. ಆದರೆ ನಾನು ಇನ್ನೂ ಸ್ವಲ್ಪ ಹಣವನ್ನು ಕಳುಹಿಸುತ್ತಿದ್ದೆ. ಈ ರೀತಿಯಾಗಬಹುದು ಎಂದು ನನಗೆ ತಿಳಿದಿರಲಿಲ್ಲ” ಎಂದಿದ್ದಾರೆ ದರ್ಶನ್ ತಂದೆ.

ಇದನ್ನೂ ಓದಿರಿ: ಜಾತಿ ನಿಂದನೆ ಆರೋಪ; ಬಾಂಬೆ ಐಐಟಿಯಲ್ಲಿ ದಲಿತ ವಿದ್ಯಾರ್ಥಿ ಆ*ಹತ್ಯೆ

ದರ್ಶನ್ ಸೋಲಂಕಿ ಅವರು ವ್ಯವಸ್ಥಿತವಾಗಿ ತಾರತಮ್ಯವನ್ನು ಎದುರಿಸಿದ್ದಾರೆ ಎಂಬ ಆರೋಪವನ್ನು ಐಐಟಿ ಬಾಂಬೆ ತಳ್ಳಿಹಾಕಿದೆ. ಅವರ ಸಾವಿನ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದೆ.

“ಐಐಟಿ ಬಾಂಬೆಯ 1ನೇ ವರ್ಷದ ಬಿಟೆಕ್ ವಿದ್ಯಾರ್ಥಿಯ ದುರಂತ ಸಾವಿನ ಬಗ್ಗೆ ಆಗುತ್ತಿರುವ ಕೆಲವು ಸುದ್ದಿಗಳನ್ನು ನಾವು ನಿರಾಕರಿಸುತ್ತೇವೆ. ಸಾಂಸ್ಥಿಕ ಕೊಲೆ ಇದಾಗಿದೆ, ತಾರತಮ್ಯ ನಡೆದಿದೆ ಎಂಬುದು ಸುಳ್ಳು” ಎಂದು ಶಿಕ್ಷಣ ಸಂಸ್ಥೆ ಮಂಗಳವಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಭಾನುವಾರ ಹಾಸ್ಟೆಲ್ ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ದರ್ಶನ್ ಸಾವನ್ನಪ್ಪಿದ ನಂತರ ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿದ್ದಾರೆ. ಅವರಿಗೆ ಇನ್ನೂ ಸೂಸೈಡ್ ನೋಟ್ ಸಿಕ್ಕಿಲ್ಲ, ಆದರೆ ಕ್ಯಾಂಪಸ್‌ನಲ್ಲಿ ದಲಿತ ವಿದ್ಯಾರ್ಥಿಗಳ ವಿರುದ್ಧ ಆಗುತ್ತಿರುವ ತಾರತಮ್ಯದಿಂದಾಗಿ ದರ್ಶನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...