Homeಕರ್ನಾಟಕಟಿಪ್ಪು ಅನುಯಾಯಿಗಳನ್ನು ಕೊಲ್ಲಿರಿ: ನಳಿನ್ ಕುಮಾರ್‌‌ ಪ್ರಚೋದನಾತ್ಮಕ ಹೇಳಿಕೆ

ಟಿಪ್ಪು ಅನುಯಾಯಿಗಳನ್ನು ಕೊಲ್ಲಿರಿ: ನಳಿನ್ ಕುಮಾರ್‌‌ ಪ್ರಚೋದನಾತ್ಮಕ ಹೇಳಿಕೆ

- Advertisement -
- Advertisement -

ವಿವಾದಾತ್ಮಕ ಹೇಳಿಕೆಗಳಿಗೆ ಹೆಸರಾಗಿರುವ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, “ಟಿಪ್ಪು ಸುಲ್ತಾನನ ಎಲ್ಲಾ ಅನುಯಾಯಿಗಳನ್ನು ಕೊಲ್ಲಬೇಕು” ಎಂದು ಹೇಳಿರುವುದಾಗಿ ‘ಎನ್‌ಡಿಟಿವಿ’ ವರದಿ ಮಾಡಿದೆ. ಟಿಪ್ಪು ಸುಲ್ತಾನ್ ವಂಶಸ್ಥರನ್ನು ಓಡಿಸಿ ಕಾಡಿಗೆ ಕಳುಹಿಸಬೇಕು ಎಂದು ಅವರು ಕರೆ ನೀಡಿದ್ದಾರೆ.

ಇಂದು ಕೊಪ್ಪಳ ಜಿಲ್ಲೆಯ ಯಲಬುರ್ಗಾ ಪಂಚಾಯತ್ ಪಟ್ಟಣದಲ್ಲಿ ಬಿಜೆಪಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಕಟೀಲು, “ನಾವು ಶ್ರೀರಾಮ, ಹನುಮಂತನ ಭಕ್ತರು. ನಾವು ಹನುಮಂತ ದೇವರಿಗೆ ಪ್ರಾರ್ಥನೆ ಮತ್ತು ನಮನ ಸಲ್ಲಿಸುತ್ತೇವೆ. ನಾವು ಟಿಪ್ಪು ವಂಶಸ್ಥರಲ್ಲ. ಟಿಪ್ಪು ವಂಶಸ್ಥರನ್ನು ಮನೆಗೆ ಕಳುಹಿಸೋಣ” ಎಂದಿದ್ದಾರೆ.

“ನೀವು ಹನುಮಂತನನ್ನು ಪ್ರಾರ್ಥಿಸುತ್ತೀರೋ, ಟಿಪ್ಪುವಿಗೆ ಪ್ರಾರ್ಥನೆ ಸಲ್ಲಿಸುತ್ತೀರೋ ಎಂದು ಕೇಳುತ್ತಿದ್ದೇನೆ. ಹಾಗಾದರೆ ನೀವು ಟಿಪ್ಪುವಿನ ಕಟ್ಟಾ ಅನುಯಾಯಿಗಳನ್ನು ಕಾಡಿಗೆ ಕಳುಹಿಸುತ್ತೀರಾ? ಯೋಚಿಸಿ. ಈ ರಾಜ್ಯಕ್ಕೆ ಭಗವಾನ್ ಹನುಮಾನ್ ಭಕ್ತರು ಬೇಕೋ ಅಥವಾ ಟಿಪ್ಪುವಿನ ವಂಶಸ್ಥರು ಬೇಕೋ? ಟಿಪ್ಪುವಿನ ಕಟ್ಟಾ ಅನುಯಾಯಿಗಳು ಈ ನೆಲದಲ್ಲಿ ಜೀವಂತವಾಗಿರಬಾರದು” ಎಂದು ಅವರು ಪ್ರಚೋದಿಸಿರುವುದಾಗಿ ವರದಿ ತಿಳಿಸಿದೆ.

ಬ್ರಿಟಿಷರೊಂದಿಗೆ ಹೋರಾಡಿದ ಟಿಪ್ಪು ಸುಲ್ತಾನ್‌ನನ್ನು ವಿರೋಧಿಸುತ್ತಾ ಬಂದಿರುವ ಬಿಜೆಪಿ ಮೊದಲಿನಿಂದಲೂ ಕೋಮು ಧ್ರುವೀಕರಣದ ರಾಜಕೀಯ ಮಾಡುತ್ತಿದೆ. ಟಿಪ್ಪು ಸುಲ್ತಾನ್ ವರ್ಸಸ್ ಹನುಮಾನ್ ಚರ್ಚೆಯನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕರ್ನಾಟಕದಲ್ಲಿ 2018 ರ ಚುನಾವಣೆಗೆ ಮುಂಚಿತವಾಗಿ ಪ್ರಚೋದಿಸಿದ್ದರು.

“ಹನುಮಂತನನ್ನು ಮತ್ತು ವಿಜಯನಗರವನ್ನು ಪೂಜಿಸುವ ಬದಲು ಕಾಂಗ್ರೆಸ್ ಟಿಪ್ಪು ಸುಲ್ತಾನ್‌ನನ್ನು ಪೂಜಿಸುತ್ತಿರುವುದು ದುರದೃಷ್ಟಕರ ಸಂಗತಿಯಾಗಿದೆ. ಕಾಂಗ್ರೆಸ್ ಅನ್ನು ಕರ್ನಾಟಕ ವಜಾಗೊಳಿಸಿದರೆ, ಟಿಪ್ಪು ಸುಲ್ತಾನ್ ಪೂಜೆಗೆ ಬೇರೆ ಯಾರೂ ಬರುವುದಿಲ್ಲ” ಎಂದಿದ್ದರು.

ಈ ತಿಂಗಳ ಆರಂಭದಲ್ಲಿ ಮಾತನಾಡಿದ್ದ ಕಟೀಲ್, ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯು “ಟಿಪ್ಪು ವರ್ಸಸ್ ಸಾವರ್ಕರ್” ಎಂದು ಹೇಳುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದರು. “ಅಗತ್ಯವಿಲ್ಲದ ಟಿಪ್ಪು ಜಯಂತಿಯನ್ನು ಆಚರಿಸಲು ಕಾಂಗ್ರೆಸ್‌ನವರು ಅವಕಾಶ ಮಾಡಿಕೊಟ್ಟರು. ಸಾವರ್ಕರ್ ಬಗ್ಗೆ ಅವಮಾನಕರವಾಗಿ ಮಾತನಾಡಿದರು” ಎಂದು ದೂರಿದ್ದರು.

ಏಪ್ರಿಲ್-ಮೇ ತಿಂಗಳಲ್ಲಿ ಕರ್ನಾಟಕದಲ್ಲಿ 224 ಸ್ಥಾನಗಳಿಗೆ ವಿಧಾನಸಭೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌- ಬಿಜೆಪಿ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದೆ.

ಟಿಪ್ಪುವಿನ ಕುರಿತು ತಪ್ಪು ಕಲ್ಪನೆಗಳು

ಮೈಸೂರು ರಾಜ್ಯವನ್ನು ಆಳಿದ ’ಟಿಪ್ಪು ಸುಲ್ತಾನ್‌’ ಮತಾಂಧ, ಹಿಂದೂಗಳ ವಿರೋಧಿ, ನರಮೇಧ ನಡೆಸಿದವನು, ಕನ್ನಡ ವಿರೋಧಿ, ಅಸಂಖ್ಯಾತ ಹಿಂದೂಗಳನ್ನು ಇಸ್ಲಾಂಗೆ ಮತಾಂತರ ಮಾಡಿದವನು, ದೇವಾಲಯಗಳನ್ನು ಧ್ವಂಸ ಮಾಡಿದವನು- ಇತ್ಯಾದಿ ಸುಳ್ಳುಗಳನ್ನು ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಪ್ರಚಾರ ಮಾಡಲಾಗುತ್ತಿದೆ. ಟಿಪ್ಪುವಿನ ಕುರಿತು ಹಬ್ಬಿಸಲಾದ ಇಂತಹ ಸುಳ್ಳುಗಳ ಕುರಿತು ಇತಿಹಾಸಕಾರರು, ವಿಚಾರವಂತರು ಸಾಕಷ್ಟು ಚರ್ಚೆ ಮಾಡಿದ್ದಾರೆ.

ಶೃಂಗೇರಿಯ ಮಠಾಧೀಶರಾಗಿದ್ದ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರಿಗೆ ಟಿಪ್ಪು ಬರೆದಿರುವ ಹಲವು ಪತ್ರಗಳೇ ಆತನ ಪರಧರ್ಮ ಸಹಿಷ್ಣುತೆಗೆ ಸಾಕ್ಷಿಯಾಗಿವೆ. ಸ್ವಾಮೀಜಿಯವರಿಗೆ ಟಿಪ್ಪು ಬರೆದಿರುವ ಪತ್ರಗಳು ಕನ್ನಡದಲ್ಲಿರುವುದು- ಟಿಪ್ಪು ಕನ್ನಡ ವಿರೋಧಿ ಎನ್ನುವವರಿಗೆ ಉತ್ತರವಾಗಿವೆ. ಮರಾಠರ ಸೇನೆ ಶೃಂಗೇರಿ ಮಠದ ಮೇಲೆ ದಾಳಿ ಮಾಡಿದಾಗ, ಟಿಪ್ಪು ಸ್ವಾಮೀಜಿಯವರಿಗೆ ಪತ್ರ ಬರೆದು ಸಂತೈಸಿದ್ದಾರೆ. ಮಠಕ್ಕೆ, ಧಾರ್ಮಿಕ ಆಚರಣೆಗಳಿಗೆ ಬೇಕಾದ ಎಲ್ಲ ಸಹಕಾರವನ್ನು ಟಿಪ್ಪು ನೀಡಿರುವುದು ಇಲ್ಲಿನ ಪತ್ರಗಳಿಂದ ಸ್ಪಷ್ಟವಾಗುತ್ತದೆ. ಅಲ್ಲದೇ ಸ್ವಾಮೀಜಿಯವರ ಕುರಿತು ಟಿಪ್ಪುವಿಗೆ ಇದ್ದ ಪ್ರೀತಿ, ಗೌರವ ಮಹತ್ವದ್ದು.

ಸ್ವಾಮೀಜಿಯವರು ಪುಣೆಗೆ ಹೋಗಿ ಹಲವು ದಿನಗಳಾದರೂ ವಾಪಸ್ ಬರದಿದ್ದಾಗ ಟಿಪ್ಪು ಪತ್ರ ಬರೆದು, “ಶ್ರೀ ಸ್ವಾಮೀಜಿಯವರಿಗೆ ಟಿಪ್ಪು ಸುಲ್ತಾನ್ ಬಾದಶಹರವರ ಸಲಾಮು…. ತಮ್ಮಂಥಾ ದೊಡ್ಡವರು ಯಾವ ದೇಶದಲ್ಲಿ ಇದ್ದರೂ ಆ ದೇಶಕ್ಕೆ ಮಳೆ, ಬೆಳೆ ಸಕಲವೂ ಆಗಿ ಸುಭಿಕ್ಷೆಯೂ ಆಗಿ ಇರತಕ್ಕದ್ದರಿಂದ ಪರಸ್ಥಳದಲ್ಲಿ ಬಹಳ ದಿವಸ ತಾವು ಯಾತಕ್ಕೆ ಇರಬೇಕು? ಹೋದ ಕೆಲಸವನ್ನು ಕ್ಷಿಪ್ರದಲ್ಲಿ ಅನುಕೂಲ ಮಾಡಿಸಿಕೊಂಡು ಸ್ಥಳಕ್ಕೆ ಸಾಗಿಬರುವಂತೆ ಮಾಡಿಸುವುದು…” ಎಂದು ಭಿನ್ನವಿಸಿಕೊಳ್ಳುವುದು ಹೃದಯಸ್ಪರ್ಶಿಯಾಗಿದೆ. ಟಿಪ್ಪುವಿಗೆ ಇಸ್ಲಾಮೀ ಶಿಕ್ಷಣವನ್ನು ಮೌಲವಿ ಉಬೇದುಲ್ಲಾಹ್ ನೀಡಿದರೆ, ಹಿಂದೂ ಧಾರ್ಮಿಕ ಶಿಕ್ಷಣವನ್ನು ಗೋವರ್ಧನ ಪಂಡಿತರು ನೀಡಿದ್ದರು.

ಟಿಪ್ಪುವಿನ ನ್ಯಾಯದಾನ ವ್ಯವಸ್ಥೆಯೂ ಮಾನವೀಯವಾಗಿತ್ತು. ತಿರುವಾಂಕೂರಿನ ನಂಬೂದಿರಿ ಜಾತಿಯ ಅರಸರು ಕೇರಳದಲ್ಲಿ ’ಮುಲಕ್ಕರ’ (ಸ್ತನ ತೆರಿಗೆ) ಎಂಬ ಅಮಾನವೀಯ ತೆರಿಗೆಯನ್ನು ಅಲ್ಲಿನ ಕೆಳವರ್ಗದ ಮಹಿಳೆಯರಿಗೆ ವಿಧಿಸುತ್ತಿದ್ದರು. ಋತುಮತಿಯಾದ ಕೆಳವರ್ಗದ ಮಹಿಳೆಯರು ಮೇಲ್ವಸ್ತ್ರ ಧರಿಸದೇ
ತಮ್ಮ ಸ್ತನಗಳು ಕಾಣುವಂತೆ ಅವರು ನಡೆದಾಡಬೇಕಿತ್ತು. ಒಂದು ವೇಳೆ ಯಾರಾದರೂ ಸ್ತನ ಮುಚ್ಚುವ ಮೇಲ್ವಸ್ತ್ರ ಧರಿಸಿದರೆ ಅದಕ್ಕಾಗಿ ತೆರಿಗೆ ಕಟ್ಟಬೇಕಾಗಿತ್ತು. ಇಂತಹ ಅಮಾನವೀಯ ಪದ್ಧತಿಯ ವಿರುದ್ಧ ಮೊಟ್ಟಮೊದಲು ಕಾನೂನು ಜಾರಿಗೆ ತಂದು ಕೆಳವರ್ಗದ ಮಹಿಳೆಯರಿಗೆ ಗೌರವ ಕೊಟ್ಟ ಅರಸ ಟಿಪ್ಪು ಸುಲ್ತಾನ್. ಭೂಮಿ ಇಲ್ಲದವರು ಭೂಮಿ ಹೊಂದಲು ಅವಕಾಶ ನೀಡಿದರು. ರೈತರ ಮೇಲಿನ ತೆರಿಗೆ ಭಾರ ಕಡಿಮೆ ಮಾಡಿದರು. ಕೃಷಿ ಪರಿಕರಗಳನ್ನು ಖರೀದಿಸಲು ಮುಂಗಡ ಹಣ ನೀಡುವ ಪದ್ಧತಿ ಶುರುಮಾಡಿದರು. ಕೆ.ಆರ್.ಎಸ್. ಅಣೆಕಟ್ಟೆಗೆ ಅಡಿಗಲ್ಲು ಹಾಕಿದರು. ಕಾರ್ಮಿಕರ ಘನತೆಯನ್ನು ಎತ್ತಿ ಹಿಡಿದರು – ಇಂತಹ ಹಲವು ಸುಧಾರಣೆಗಳತ್ತ ಗಮನ ಹರಿಸಿದ ಟಿಪ್ಪು, ಮೂವರು ಶತ್ರುಗಳನ್ನು (ಬ್ರಿಟಿಷರು, ಮರಾಠರು, ನಿಜಾಮರು) ಸದಾ ಎದುರಿಸಬೇಕಾಯಿತು.

(ಟಿಪ್ಪುವಿನ ಆಡಳಿತ ಮತ್ತು ಹೋರಾಟದ ಕುರಿತು ‘ನಾನುಗೌರಿ.ಕಾಂ’ನಲ್ಲಿ ಸಾಕಷ್ಟು ಲೇಖನಗಳು ಪ್ರಕಟವಾಗಿವೆ. ಅವುಗಳನ್ನು ಓದಲು ‘ಇಲ್ಲಿ’ ‘ಕ್ಲಿಕ್’ ಮಾಡಿರಿ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...