Homeಕರ್ನಾಟಕಸಿದ್ದು ಕೊಲೆಗೆ ಕರೆ ಕೊಟ್ಟ ಅಶ್ವತ್ಥ ನಾರಾಯಣ: ಬೊಮ್ಮಾಯಿಯ ಮೌನ, ಸಮ್ಮತಿಯ ಲಕ್ಷಣವೇ?; ಸಿದ್ದರಾಮಯ್ಯ ಪ್ರತಿಕ್ರಿಯೆ

ಸಿದ್ದು ಕೊಲೆಗೆ ಕರೆ ಕೊಟ್ಟ ಅಶ್ವತ್ಥ ನಾರಾಯಣ: ಬೊಮ್ಮಾಯಿಯ ಮೌನ, ಸಮ್ಮತಿಯ ಲಕ್ಷಣವೇ?; ಸಿದ್ದರಾಮಯ್ಯ ಪ್ರತಿಕ್ರಿಯೆ

- Advertisement -
- Advertisement -

ಉನ್ನತ ಶಿಕ್ಷಣ ಸಚಿವ ಸಿಎನ್ ಅಶ್ವತ್ಥ ನಾರಾಯಣ್ ಅವರು ಫೆ.15, ಬುಧವಾರದಂದು ಮಂಡ್ಯದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ವೇಳೆ, ”ಟಿಪ್ಪುವನ್ನು ಹೊಡೆದಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದಾಕಿ” ಎಂದು ಕರೆ ಕೊಟ್ಟಿದ್ದಾರೆ. ಇದು ಇದೀಗ ರಾಜ್ಯಾದ್ಯಂತ ಭಾರಿ ವಿವಾದಕ್ಕೆ ಕಾರಣವಾಗಿದೆ.

”ಮನಸ್ಸು ಮಾಡಿದ್ರೆ ಏನ ಬೇಕಾದ್ರೂ ಸಾಧಸ್ತಾರೆ.. ರಾಜಕೀಯ ದಿಕ್ಸೂಚಿ ಮಂಡ್ಯದಿಂದಲೇ ಕಾಣಬೇಕು. ಇಲ್ಲದಿದ್ರೆ, ಟಿಪ್ಪು ಜಾಗಕ್ಕೆ ಸಿದ್ದರಾಮಯ್ಯ ಬಂದಬಿಡ್ತಾರೆ. ಟಿಪ್ಪು ಬೇಕಾ? ಸಾವರ್ಕರ್ ಬೇಕಾ? ಹುರಿಗೌಡ ನಂಜೇಗೌಡ ಟಿಪ್ಪುವನ್ನು ಹೊಡದಾಕಿದ ಹಾಗೆ ಸಿದ್ದರಾಮಯ್ಯರನ್ನು ನೀವು ಹೊಡದಾಕಬೇಕು” ಎಂದು ಸಿಎನ್ ಅಶ್ವತ್ಥ ನಾರಾಯಣ ಕಾರ್ಯಕರ್ತರಿಗೆ ಕರೆ ಕೊಡುವ ಮೂಲಕ ವಿವಾದಕ್ಕೆ ಕಾರಣವಾಗಿದ್ದಾರೆ.

ಇದನ್ನೂ ಓದಿ: ಟಿಪ್ಪು ಅನುಯಾಯಿಗಳನ್ನು ಕೊಲ್ಲಿರಿ: ನಳಿನ್ ಕುಮಾರ್‌‌ ಪ್ರಚೋದನಾತ್ಮಕ ಹೇಳಿಕೆ

ಈ ಬಗ್ಗೆ ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ಪ್ರತಿಕ್ರಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ”ಟಿಪ್ಪು ಸುಲ್ತಾನನ್ನು ಹೊಡದಾಕಿದಂತೆ, ಮಾಜಿ ಸಿಎಂ ಸಿದ್ದರಾಮಯ್ಯರನ್ನು ಹೊಡದಾಕಬೇಕು ಎಂದು ಅಶ್ವತ್ಥ ನಾರಾಯಣ ಹೇಳತಾರೆ.. ಅಂದ್ರೆ ಅವರು ಮನುಷ್ಯರೋ.., ರಾಕ್ಷಸರೋ.. ಅಂತ ತಿಳ್ಕೊಳಿ ನೀವು… ನನ್ನನ್ನ ಹೊಡದಾಕೋಕೆ ಬಂದ್ರೆ ನೀವು ಬಿಡ್ತೀರಾ ಎಂದು ಕಾರ್ಯಕರ್ತರನ್ನು ಕೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಟಿಪ್ಪು ಅಧಿಕಾರಕ್ಕೆ ಬಂದ ಹಾಗೆ ಎನ್ನುತ್ತಾರೆ, ನಾನು ಟಿಪ್ಪು, ಸೇವಾಲಾಲ್, ಬಸವಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಎಲ್ಲರನ್ನೂ ಗೌರವಿಸ್ತೀನಿ.. ನಾನು ಮನುಷ್ಯತ್ವ ಇರೋನು ಹಿಂದೂಗಳನ್ನು, ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ, ಜೈನ್ ಎಲ್ಲರನ್ನೂ ಪ್ರೀತಸ್ತೀನಿ” ಎಂದು ಪ್ರತಿಕ್ರಿಯಿಸಿದ್ದಾರೆ.

ಈ ವಿಚಾರವಾಗಿ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದು, ”ಟಿಪ್ಪುವನ್ನು ಹೊಡೆದುಹಾಕಿದಂತೆ ನನ್ನನ್ನೂ ಹೊಡೆದುಹಾಕಬೇಕು ಎಂದು ಸಚಿವ ಡಾ.ಸಿಎನ್ ಅಶ್ವತ್ಥ್ ನಾರಾಯಣ ಜನರಿಗೆ ಕರೆ ನೀಡಿದ್ದಾರೆ. ಜನರನ್ನು ಯಾಕೆ ಪ್ರಚೋದಿಸುತ್ತೀರಿ ಸಚಿವರೇ? ನೀವೇ ಕೋವಿ (ಬಂದೂಕು) ಹಿಡಿದುಕೊಂಡು ಬಂದು ಬಿಡಿ” ಎಂದಿದ್ದಾರೆ.

”ನನ್ನ ಹತ್ಯೆಗೆ ಡಾ.ಸಿಎನ್ ಅಶ್ವತ್ಥ್ ನಾರಾಯಣ ಅವರು ಕೊಟ್ಟ ಕರೆಯಿಂದ ನನಗೇನು ಆಶ್ಚರ್ಯವಾಗಿಲ್ಲ. ಗಾಂಧೀಜಿಯನ್ನು ಕೊಂದವರನ್ನೇ ಆರಾಧಿಸುತ್ತಿರುವ ಪಕ್ಷದ ನಾಯಕರಿಂದ ಕೊಲೆಗಡುಕತನವಲ್ಲದೆ, ಪ್ರೀತಿ, ಕರುಣೆ, ಸ್ನೇಹವನ್ನು ನಿರೀಕ್ಷಿಸಲು ಸಾಧ್ಯವೇ?” ಎಂದು ಪ್ರಶ್ನೆ ಮಾಡಿದ್ದಾರೆ.

”ರಾಜ್ಯದ ಒಬ್ಬ ಸಚಿವ ಈ ರೀತಿ ಬಹಿರಂಗವಾಗಿ ಹತ್ಯೆಗೆ ಕರೆ ನೀಡಿದ ನಂತರವೂ ಅವರ ವಿರುದ್ಧ ಪೊಲೀಸರು ಕ್ರಮಕೈಗೊಂಡಿಲ್ಲ ಎಂದಾದರೆ ಈ ರಾಜ್ಯವನ್ನು ಆಳುವವರು ಜೀವಂತವಾಗಿಲ್ಲ, ಸರ್ಕಾರ ಸತ್ತುಹೋಗಿದೆ ಎಂದೇ ಲೆಕ್ಕ” ಎಂದು ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಸಿಟ್ಟು ಹೊರಹಾಕಿದ್ದಾರೆ.

”ಸಚಿವ ಡಾ.ಸಿಎನ್ ಅಶ್ವತ್ಥ್ ನಾರಾಯಣ ಅವರು ನೀಡಿರುವ ಹತ್ಯೆಯ ಕರೆಯ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪ್ರತಿಕ್ರಿಯೆ ಏನು ಎನ್ನುವುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ. ಮೌನ ಸಮ್ಮತಿಯ ಲಕ್ಷಣವೇ?” ಎಂದು ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...