Homeಕರ್ನಾಟಕಸಿದ್ದು ಕೊಲೆಗೆ ಕರೆ ಕೊಟ್ಟ ಅಶ್ವತ್ಥ ನಾರಾಯಣ: ಬೊಮ್ಮಾಯಿಯ ಮೌನ, ಸಮ್ಮತಿಯ ಲಕ್ಷಣವೇ?; ಸಿದ್ದರಾಮಯ್ಯ ಪ್ರತಿಕ್ರಿಯೆ

ಸಿದ್ದು ಕೊಲೆಗೆ ಕರೆ ಕೊಟ್ಟ ಅಶ್ವತ್ಥ ನಾರಾಯಣ: ಬೊಮ್ಮಾಯಿಯ ಮೌನ, ಸಮ್ಮತಿಯ ಲಕ್ಷಣವೇ?; ಸಿದ್ದರಾಮಯ್ಯ ಪ್ರತಿಕ್ರಿಯೆ

- Advertisement -
- Advertisement -

ಉನ್ನತ ಶಿಕ್ಷಣ ಸಚಿವ ಸಿಎನ್ ಅಶ್ವತ್ಥ ನಾರಾಯಣ್ ಅವರು ಫೆ.15, ಬುಧವಾರದಂದು ಮಂಡ್ಯದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ವೇಳೆ, ”ಟಿಪ್ಪುವನ್ನು ಹೊಡೆದಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದಾಕಿ” ಎಂದು ಕರೆ ಕೊಟ್ಟಿದ್ದಾರೆ. ಇದು ಇದೀಗ ರಾಜ್ಯಾದ್ಯಂತ ಭಾರಿ ವಿವಾದಕ್ಕೆ ಕಾರಣವಾಗಿದೆ.

”ಮನಸ್ಸು ಮಾಡಿದ್ರೆ ಏನ ಬೇಕಾದ್ರೂ ಸಾಧಸ್ತಾರೆ.. ರಾಜಕೀಯ ದಿಕ್ಸೂಚಿ ಮಂಡ್ಯದಿಂದಲೇ ಕಾಣಬೇಕು. ಇಲ್ಲದಿದ್ರೆ, ಟಿಪ್ಪು ಜಾಗಕ್ಕೆ ಸಿದ್ದರಾಮಯ್ಯ ಬಂದಬಿಡ್ತಾರೆ. ಟಿಪ್ಪು ಬೇಕಾ? ಸಾವರ್ಕರ್ ಬೇಕಾ? ಹುರಿಗೌಡ ನಂಜೇಗೌಡ ಟಿಪ್ಪುವನ್ನು ಹೊಡದಾಕಿದ ಹಾಗೆ ಸಿದ್ದರಾಮಯ್ಯರನ್ನು ನೀವು ಹೊಡದಾಕಬೇಕು” ಎಂದು ಸಿಎನ್ ಅಶ್ವತ್ಥ ನಾರಾಯಣ ಕಾರ್ಯಕರ್ತರಿಗೆ ಕರೆ ಕೊಡುವ ಮೂಲಕ ವಿವಾದಕ್ಕೆ ಕಾರಣವಾಗಿದ್ದಾರೆ.

ಇದನ್ನೂ ಓದಿ: ಟಿಪ್ಪು ಅನುಯಾಯಿಗಳನ್ನು ಕೊಲ್ಲಿರಿ: ನಳಿನ್ ಕುಮಾರ್‌‌ ಪ್ರಚೋದನಾತ್ಮಕ ಹೇಳಿಕೆ

ಈ ಬಗ್ಗೆ ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ಪ್ರತಿಕ್ರಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ”ಟಿಪ್ಪು ಸುಲ್ತಾನನ್ನು ಹೊಡದಾಕಿದಂತೆ, ಮಾಜಿ ಸಿಎಂ ಸಿದ್ದರಾಮಯ್ಯರನ್ನು ಹೊಡದಾಕಬೇಕು ಎಂದು ಅಶ್ವತ್ಥ ನಾರಾಯಣ ಹೇಳತಾರೆ.. ಅಂದ್ರೆ ಅವರು ಮನುಷ್ಯರೋ.., ರಾಕ್ಷಸರೋ.. ಅಂತ ತಿಳ್ಕೊಳಿ ನೀವು… ನನ್ನನ್ನ ಹೊಡದಾಕೋಕೆ ಬಂದ್ರೆ ನೀವು ಬಿಡ್ತೀರಾ ಎಂದು ಕಾರ್ಯಕರ್ತರನ್ನು ಕೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಟಿಪ್ಪು ಅಧಿಕಾರಕ್ಕೆ ಬಂದ ಹಾಗೆ ಎನ್ನುತ್ತಾರೆ, ನಾನು ಟಿಪ್ಪು, ಸೇವಾಲಾಲ್, ಬಸವಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಎಲ್ಲರನ್ನೂ ಗೌರವಿಸ್ತೀನಿ.. ನಾನು ಮನುಷ್ಯತ್ವ ಇರೋನು ಹಿಂದೂಗಳನ್ನು, ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ, ಜೈನ್ ಎಲ್ಲರನ್ನೂ ಪ್ರೀತಸ್ತೀನಿ” ಎಂದು ಪ್ರತಿಕ್ರಿಯಿಸಿದ್ದಾರೆ.

ಈ ವಿಚಾರವಾಗಿ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದು, ”ಟಿಪ್ಪುವನ್ನು ಹೊಡೆದುಹಾಕಿದಂತೆ ನನ್ನನ್ನೂ ಹೊಡೆದುಹಾಕಬೇಕು ಎಂದು ಸಚಿವ ಡಾ.ಸಿಎನ್ ಅಶ್ವತ್ಥ್ ನಾರಾಯಣ ಜನರಿಗೆ ಕರೆ ನೀಡಿದ್ದಾರೆ. ಜನರನ್ನು ಯಾಕೆ ಪ್ರಚೋದಿಸುತ್ತೀರಿ ಸಚಿವರೇ? ನೀವೇ ಕೋವಿ (ಬಂದೂಕು) ಹಿಡಿದುಕೊಂಡು ಬಂದು ಬಿಡಿ” ಎಂದಿದ್ದಾರೆ.

”ನನ್ನ ಹತ್ಯೆಗೆ ಡಾ.ಸಿಎನ್ ಅಶ್ವತ್ಥ್ ನಾರಾಯಣ ಅವರು ಕೊಟ್ಟ ಕರೆಯಿಂದ ನನಗೇನು ಆಶ್ಚರ್ಯವಾಗಿಲ್ಲ. ಗಾಂಧೀಜಿಯನ್ನು ಕೊಂದವರನ್ನೇ ಆರಾಧಿಸುತ್ತಿರುವ ಪಕ್ಷದ ನಾಯಕರಿಂದ ಕೊಲೆಗಡುಕತನವಲ್ಲದೆ, ಪ್ರೀತಿ, ಕರುಣೆ, ಸ್ನೇಹವನ್ನು ನಿರೀಕ್ಷಿಸಲು ಸಾಧ್ಯವೇ?” ಎಂದು ಪ್ರಶ್ನೆ ಮಾಡಿದ್ದಾರೆ.

”ರಾಜ್ಯದ ಒಬ್ಬ ಸಚಿವ ಈ ರೀತಿ ಬಹಿರಂಗವಾಗಿ ಹತ್ಯೆಗೆ ಕರೆ ನೀಡಿದ ನಂತರವೂ ಅವರ ವಿರುದ್ಧ ಪೊಲೀಸರು ಕ್ರಮಕೈಗೊಂಡಿಲ್ಲ ಎಂದಾದರೆ ಈ ರಾಜ್ಯವನ್ನು ಆಳುವವರು ಜೀವಂತವಾಗಿಲ್ಲ, ಸರ್ಕಾರ ಸತ್ತುಹೋಗಿದೆ ಎಂದೇ ಲೆಕ್ಕ” ಎಂದು ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಸಿಟ್ಟು ಹೊರಹಾಕಿದ್ದಾರೆ.

”ಸಚಿವ ಡಾ.ಸಿಎನ್ ಅಶ್ವತ್ಥ್ ನಾರಾಯಣ ಅವರು ನೀಡಿರುವ ಹತ್ಯೆಯ ಕರೆಯ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪ್ರತಿಕ್ರಿಯೆ ಏನು ಎನ್ನುವುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ. ಮೌನ ಸಮ್ಮತಿಯ ಲಕ್ಷಣವೇ?” ಎಂದು ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...