Homeಕರ್ನಾಟಕಸಿದ್ದು ಕೊಲೆಗೆ ಕರೆ ಕೊಟ್ಟ ಅಶ್ವತ್ಥ ನಾರಾಯಣ: ಬೊಮ್ಮಾಯಿಯ ಮೌನ, ಸಮ್ಮತಿಯ ಲಕ್ಷಣವೇ?; ಸಿದ್ದರಾಮಯ್ಯ ಪ್ರತಿಕ್ರಿಯೆ

ಸಿದ್ದು ಕೊಲೆಗೆ ಕರೆ ಕೊಟ್ಟ ಅಶ್ವತ್ಥ ನಾರಾಯಣ: ಬೊಮ್ಮಾಯಿಯ ಮೌನ, ಸಮ್ಮತಿಯ ಲಕ್ಷಣವೇ?; ಸಿದ್ದರಾಮಯ್ಯ ಪ್ರತಿಕ್ರಿಯೆ

- Advertisement -
- Advertisement -

ಉನ್ನತ ಶಿಕ್ಷಣ ಸಚಿವ ಸಿಎನ್ ಅಶ್ವತ್ಥ ನಾರಾಯಣ್ ಅವರು ಫೆ.15, ಬುಧವಾರದಂದು ಮಂಡ್ಯದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ವೇಳೆ, ”ಟಿಪ್ಪುವನ್ನು ಹೊಡೆದಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದಾಕಿ” ಎಂದು ಕರೆ ಕೊಟ್ಟಿದ್ದಾರೆ. ಇದು ಇದೀಗ ರಾಜ್ಯಾದ್ಯಂತ ಭಾರಿ ವಿವಾದಕ್ಕೆ ಕಾರಣವಾಗಿದೆ.

”ಮನಸ್ಸು ಮಾಡಿದ್ರೆ ಏನ ಬೇಕಾದ್ರೂ ಸಾಧಸ್ತಾರೆ.. ರಾಜಕೀಯ ದಿಕ್ಸೂಚಿ ಮಂಡ್ಯದಿಂದಲೇ ಕಾಣಬೇಕು. ಇಲ್ಲದಿದ್ರೆ, ಟಿಪ್ಪು ಜಾಗಕ್ಕೆ ಸಿದ್ದರಾಮಯ್ಯ ಬಂದಬಿಡ್ತಾರೆ. ಟಿಪ್ಪು ಬೇಕಾ? ಸಾವರ್ಕರ್ ಬೇಕಾ? ಹುರಿಗೌಡ ನಂಜೇಗೌಡ ಟಿಪ್ಪುವನ್ನು ಹೊಡದಾಕಿದ ಹಾಗೆ ಸಿದ್ದರಾಮಯ್ಯರನ್ನು ನೀವು ಹೊಡದಾಕಬೇಕು” ಎಂದು ಸಿಎನ್ ಅಶ್ವತ್ಥ ನಾರಾಯಣ ಕಾರ್ಯಕರ್ತರಿಗೆ ಕರೆ ಕೊಡುವ ಮೂಲಕ ವಿವಾದಕ್ಕೆ ಕಾರಣವಾಗಿದ್ದಾರೆ.

ಇದನ್ನೂ ಓದಿ: ಟಿಪ್ಪು ಅನುಯಾಯಿಗಳನ್ನು ಕೊಲ್ಲಿರಿ: ನಳಿನ್ ಕುಮಾರ್‌‌ ಪ್ರಚೋದನಾತ್ಮಕ ಹೇಳಿಕೆ

ಈ ಬಗ್ಗೆ ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ಪ್ರತಿಕ್ರಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ”ಟಿಪ್ಪು ಸುಲ್ತಾನನ್ನು ಹೊಡದಾಕಿದಂತೆ, ಮಾಜಿ ಸಿಎಂ ಸಿದ್ದರಾಮಯ್ಯರನ್ನು ಹೊಡದಾಕಬೇಕು ಎಂದು ಅಶ್ವತ್ಥ ನಾರಾಯಣ ಹೇಳತಾರೆ.. ಅಂದ್ರೆ ಅವರು ಮನುಷ್ಯರೋ.., ರಾಕ್ಷಸರೋ.. ಅಂತ ತಿಳ್ಕೊಳಿ ನೀವು… ನನ್ನನ್ನ ಹೊಡದಾಕೋಕೆ ಬಂದ್ರೆ ನೀವು ಬಿಡ್ತೀರಾ ಎಂದು ಕಾರ್ಯಕರ್ತರನ್ನು ಕೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಟಿಪ್ಪು ಅಧಿಕಾರಕ್ಕೆ ಬಂದ ಹಾಗೆ ಎನ್ನುತ್ತಾರೆ, ನಾನು ಟಿಪ್ಪು, ಸೇವಾಲಾಲ್, ಬಸವಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಎಲ್ಲರನ್ನೂ ಗೌರವಿಸ್ತೀನಿ.. ನಾನು ಮನುಷ್ಯತ್ವ ಇರೋನು ಹಿಂದೂಗಳನ್ನು, ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ, ಜೈನ್ ಎಲ್ಲರನ್ನೂ ಪ್ರೀತಸ್ತೀನಿ” ಎಂದು ಪ್ರತಿಕ್ರಿಯಿಸಿದ್ದಾರೆ.

ಈ ವಿಚಾರವಾಗಿ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದು, ”ಟಿಪ್ಪುವನ್ನು ಹೊಡೆದುಹಾಕಿದಂತೆ ನನ್ನನ್ನೂ ಹೊಡೆದುಹಾಕಬೇಕು ಎಂದು ಸಚಿವ ಡಾ.ಸಿಎನ್ ಅಶ್ವತ್ಥ್ ನಾರಾಯಣ ಜನರಿಗೆ ಕರೆ ನೀಡಿದ್ದಾರೆ. ಜನರನ್ನು ಯಾಕೆ ಪ್ರಚೋದಿಸುತ್ತೀರಿ ಸಚಿವರೇ? ನೀವೇ ಕೋವಿ (ಬಂದೂಕು) ಹಿಡಿದುಕೊಂಡು ಬಂದು ಬಿಡಿ” ಎಂದಿದ್ದಾರೆ.

”ನನ್ನ ಹತ್ಯೆಗೆ ಡಾ.ಸಿಎನ್ ಅಶ್ವತ್ಥ್ ನಾರಾಯಣ ಅವರು ಕೊಟ್ಟ ಕರೆಯಿಂದ ನನಗೇನು ಆಶ್ಚರ್ಯವಾಗಿಲ್ಲ. ಗಾಂಧೀಜಿಯನ್ನು ಕೊಂದವರನ್ನೇ ಆರಾಧಿಸುತ್ತಿರುವ ಪಕ್ಷದ ನಾಯಕರಿಂದ ಕೊಲೆಗಡುಕತನವಲ್ಲದೆ, ಪ್ರೀತಿ, ಕರುಣೆ, ಸ್ನೇಹವನ್ನು ನಿರೀಕ್ಷಿಸಲು ಸಾಧ್ಯವೇ?” ಎಂದು ಪ್ರಶ್ನೆ ಮಾಡಿದ್ದಾರೆ.

”ರಾಜ್ಯದ ಒಬ್ಬ ಸಚಿವ ಈ ರೀತಿ ಬಹಿರಂಗವಾಗಿ ಹತ್ಯೆಗೆ ಕರೆ ನೀಡಿದ ನಂತರವೂ ಅವರ ವಿರುದ್ಧ ಪೊಲೀಸರು ಕ್ರಮಕೈಗೊಂಡಿಲ್ಲ ಎಂದಾದರೆ ಈ ರಾಜ್ಯವನ್ನು ಆಳುವವರು ಜೀವಂತವಾಗಿಲ್ಲ, ಸರ್ಕಾರ ಸತ್ತುಹೋಗಿದೆ ಎಂದೇ ಲೆಕ್ಕ” ಎಂದು ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಸಿಟ್ಟು ಹೊರಹಾಕಿದ್ದಾರೆ.

”ಸಚಿವ ಡಾ.ಸಿಎನ್ ಅಶ್ವತ್ಥ್ ನಾರಾಯಣ ಅವರು ನೀಡಿರುವ ಹತ್ಯೆಯ ಕರೆಯ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪ್ರತಿಕ್ರಿಯೆ ಏನು ಎನ್ನುವುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ. ಮೌನ ಸಮ್ಮತಿಯ ಲಕ್ಷಣವೇ?” ಎಂದು ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...