Homeಮುಖಪುಟಇಂದು ತ್ರಿಪುರ ಚುನಾವಣೆ : ಮೂರು ಮೈತ್ರಿಕೂಟಗಳ ನಡುವೆ ಒಲವು ಯಾರಿಗೆ?

ಇಂದು ತ್ರಿಪುರ ಚುನಾವಣೆ : ಮೂರು ಮೈತ್ರಿಕೂಟಗಳ ನಡುವೆ ಒಲವು ಯಾರಿಗೆ?

- Advertisement -
- Advertisement -

60 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ತ್ರಿಪುರದಲ್ಲಿ ಇಂದು ಮತದಾನ ನಡೆಯುತ್ತಿದೆ. 10 ಪ.ಜಾ ಮತ್ತು 20 ಪ.ಪಂಗಡದ ಮೀಸಲು ಕ್ಷೇತ್ರಗಳು ತ್ರಿಪುರದಲ್ಲಿವೆ. ಸಿಪಿಐ(ಎಂ) ಪಕ್ಷದ ಪ್ರಬಲ ನೆಲೆಯಾಗಿದ್ದ ತ್ರಿಪುರದಲ್ಲಿ ಸರಳ ಸಿಎಂ ಎಂದು ಖ್ಯಾತರಾದ ಮಾಣಿಕ್ ಸರ್ಕಾರ್‌ರವರು 1998 ರಿಂದ 2018ರವರೆಗೆ 20 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದರು. ಆದರೆ ಕಳೆದ ಚುನಾವಣೆಯಲ್ಲಿ ಪಕ್ಷ ಸೋತ ನಂತರ ಅವರು ಹಿಂದೆ ಸರಿದಿದ್ದಾರೆ. ಇಲ್ಲಿ ಬಹುಮತಕ್ಕೆ 31 ಸ್ಥಾನಗಳ ಅಗತ್ಯವಿದೆ.

2018ರ ಬಲಾಬಲ

ಬಿಜೆಪಿ 35, ಐಪಿಎಫ್‌ಟಿ 8 ಮತ್ತು ಸಿಪಿಐ(ಎಂ) 16 ಕ್ಷೇತ್ರಗಳಲ್ಲಿ ಜಯಗಳಿಸಿದ್ದವು.

ಈ ಚುನಾವಣೆಯಲ್ಲಿ ಅಧಿಕಾರಕ್ಕಾಗಿ ಮೂರು ಮೈತ್ರಿಕೂಟಗಳು ಸೆಣಸುತ್ತಿವೆ. ಅವುಗಳ ಸಂಕ್ಷಿಪ್ತ ಪರಿಚಯ ಇಲ್ಲಿದೆ.

ಎನ್‌ಡಿಎ

ಕಳೆದ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಬೃಹತ್ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯಿತು. ಬಿಪ್ಲವ್ ದೇವ್ ಮುಖ್ಯಮಂತ್ರಿಯಾಗಿದ್ದರು. ಆನಂತರ ಅವರನ್ನು ಕೆಳಗಿಸಿ ಸದ್ಯ ಮಾಣಿಕ್ ಶಾ ರಾಜ್ಯದ ಸಿಎಂ ಆಗಿದ್ದಾರೆ. ಅವರೇ ಈ ಬಾರಿಯ ಚುನಾವಣಾ ಉಸ್ತುವಾರಿ ಹೊತ್ತಿದ್ದಾರೆ.

ಈ ಚುನಾವಣೆಯಲ್ಲಿ ಬಿಜೆಪಿಯು ಐಪಿಎಫ್‌ಟಿನೊಂದಿಗೆ (Indigenous Peoples Front of Tripura) ಮೈತ್ರಿಮಾಡಿಕೊಂಡು ಎನ್‌ಡಿಎ ಕೂಟ ರಚಿಸಿದೆ. ಬಿಜೆಪಿ 55 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ಐಪಿಎಫ್‌ಟಿ ಉಳಿದ 5 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ.

ಸೆಕ್ಯುಲರ್ ಡೆಮಾಕ್ರಟಿಕ್ ಫೋರ್ಸಸ್

ಸಿಪಿಐ(ಎಂ) (43 ಕ್ಷೇತ್ರಗಳಲ್ಲಿ ಸ್ಪರ್ಧೆ), ಕಾಂಗ್ರೆಸ್ (13 ಕ್ಷೇತ್ರಗಳು), ಸಿಪಿಐ (1), ರೆವಲೂಷನರಿ ಸೋಷಿಯಲ್ ಪಾರ್ಟಿ(1), ಆಲ್ ಇಂಡಿಯಾ ಫಾರ್ವಡ್ ಬ್ಲಾಕ್ (1) ಪಕ್ಷಗಳು ಸೇರಿ ಸೆಕ್ಯುಲರ್ ಡೆಮಾಕ್ರಟಿಕ್ ಫೋರ್ಸಸ್ ಎಂಬ ಮೈತ್ರಿಕೂಟ ರಚಿಸಿಕೊಂಡಿವೆ. ಸಿಪಿಐ(ಎಂ) ಪಕ್ಷದ ಜಿತೇಂದ್ರ ಚೌಧರಿಯವರು ಈ ಮೈತ್ರಿಕೂಟದ ನಾಯಕರಾಗಿದ್ದು ಸಿಎಂ ಅಭ್ಯರ್ಥಿ ಎಂದು ಬಿಂಬಿತವಾಗಿದ್ದಾರೆ.

ಟಿಪ್ರ ಮೋಥಾ ಪಾರ್ಟಿ

ರಾಜಮನೆತನಕ್ಕೆ ಸೇರಿದ ಪ್ರದ್ಯೋತ್ ಮಾಣಿಕ್ಯ ದೇಬಬರ್ಮಾ ಅವರು ಟಿಪ್ರ ಮೋಥಾ ಪಕ್ಷದ ನೇತೃತ್ವವಹಿಸಿದ್ದಾರೆ. ಅಲ್ಲದೆ ಟಿಪ್ರ ಮೋಥಾ ಬಿಜೆಪಿ ಮೈತ್ರಿಕೂಟ ಅಥವಾ ಕಾಂಗ್ರೆಸ್ ಮೈತ್ರಿಕೂಟದ ಜೊತೆ ಚುನಾವಣಾ ಪೂರ್ವ ಮೈತ್ರಿ ನಿರಾಕರಿಸಿದ್ದು, 42 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ.

“ಚುನಾವಣೋತ್ತರ ಮೈತ್ರಿಯನ್ನು ಅಲ್ಲಗಳೆಯುವುದಿಲ್ಲ. ಪ್ರತ್ಯೇಕ ‘ಗ್ರೇಟರ್ ಟಿಪ್ರಲ್ಯಾಂಡ್’ ರಾಜ್ಯ ರಚಿಸುವ ನಮ್ಮ ಬೇಡಿಕೆಗೆ ಬೆಂಬಲ ನೀಡುವ ಯಾವುದೇ ಪಕ್ಷವನ್ನು ಬೆಂಬಲಿಸುತ್ತೇವೆ” ಎಂದು ಟಿಪ್ರ ಮೋಥಾ ಪಕ್ಷ ಹೇಳಿದೆ.

2021ರಲ್ಲಿ ನಡೆದ ಚುನಾವಣೆಯಲ್ಲಿ ತ್ರಿಪುರಾ ಬುಡಕಟ್ಟು ಪ್ರದೇಶಗಳ ಸ್ವಾಯತ್ತ ಜಿಲ್ಲಾ ಮಂಡಳಿಗೆ (ಟಿಟಿಎಡಿಸಿ) 30ರ ಪೈಕಿ 18 ಸ್ಥಾನಗಳನ್ನು ಗೆದ್ದ ನಂತರ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಟಿಪ್ರಮೋಥಾ ನಿರ್ಧರಿಸಿದೆ. ಪಕ್ಷ 60 ವಿಧಾನಸಭಾ ಕ್ಷೇತ್ರಗಳ ಪೈಕಿ ಬುಡಕಟ್ಟು ಪ್ರಾಬಲ್ಯದ 20 ಕ್ಷೇತ್ರಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ.

ಉಳಿದಂತೆ ಟಿಎಂಸಿ ಪಕ್ಷವು 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. SUCI ಪಕ್ಷವು 5 ಸ್ಥಾನಗಳಲ್ಲಿ ಮತ್ತು ಸಿಪಿಐ(ಎಂಎಲ್) ಪಕ್ಷ 1 ಸ್ಥಾನದಲ್ಲಿ ಸ್ಪರ್ಧಿಸುತ್ತಿವೆ.

ತ್ರಿಪುರದಲ್ಲಿನ ಗ್ರೇಟರ್ ತ್ರಿಪುರ್‌ಲ್ಯಾಂಡ್ ಹೊಸ ರಾಜ್ಯದ ಬೇಡಿಕೆ, ಉದ್ಯೋಗ ಸೃಷ್ಟಿ ಚುನಾವಣಾ ವಿಷಯಗಳಾಗಿವೆ.

ಭಾರತದ ಈಶಾನ್ಯ ರಾಜ್ಯಗಳಾದ ನಾಗಲ್ಯಾಂಡ್, ಮೇಘಾಲಯಗಳಲ್ಲಿ ಈ ತಿಂಗಳ 26 ರಂದು ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಮಾರ್ಚ್ 02 ರಂದು ಎಲ್ಲಾ ಮೂರು ರಾಜ್ಯಗಳ ಫಲಿತಾಂಶ ಘೋಷಣೆಯಾಗಲಿದೆ.

ಇದನ್ನೂ ಓದಿ; ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮೇಲುಕೋಟೆಯಲ್ಲಿ ಸಿ.ಎಸ್ ಪುಟ್ಟರಾಜು ವರ್ಸಸ್ ದರ್ಶನ್ ಪುಟ್ಟಣ್ಣಯ್ಯ ನಡುವೆ ಫೈಟ್: ಅದೃಷ್ಟದ ಅದಲುಬದಲು ಸಾಧ್ಯವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...