Homeಕರ್ನಾಟಕಸಿದ್ದರಾಮಯ್ಯ ಕೊಲೆಗೆ ಕರೆ ನೀಡಿದ ಅಶ್ವತ್ಥ ನಾರಾಯಣ ವಿರುದ್ಧ ರಾಜ್ಯಾದ್ಯಂತ ಖಂಡನೆ ವ್ಯಕ್ತ

ಸಿದ್ದರಾಮಯ್ಯ ಕೊಲೆಗೆ ಕರೆ ನೀಡಿದ ಅಶ್ವತ್ಥ ನಾರಾಯಣ ವಿರುದ್ಧ ರಾಜ್ಯಾದ್ಯಂತ ಖಂಡನೆ ವ್ಯಕ್ತ

- Advertisement -
- Advertisement -

ಉನ್ನತ ಶಿಕ್ಷಣ ಸಚಿವ ಸಿಎನ್ ಅಶ್ವತ್ಥ ನಾರಾಯಣ ಅವರು ಫೆ.15, ಬುಧವಾರದಂದು ಮಂಡ್ಯದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ವೇಳೆ, ”ಟಿಪ್ಪುವನ್ನು ಹೊಡೆದಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದುಹಾಕಿ” ಎಂದು ಕರೆ ಕೊಟ್ಟಿದ್ದಾರೆ. ಅವರ ಈ ವಿವಾದಾತ್ಮಕ ಹೇಳಿಕೆಯನ್ನು ರಾಜ್ಯಾದ್ಯಂತ ಅನೇಕ ನಾಯಕರು ಖಂಡಿಸಿದ್ದಾರೆ.

ಈ ಬಗ್ಗೆ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಅವರು ಹೀಗೆ ಬರೆದಿದ್ದಾರೆ.. ಟಿಪ್ಪುವನ್ನು ಉರಿಗೌಡ, ನಂಜೇಗೌಡ ಹೊಡೆದು ಹಾಕಿದ ಹಾಗೆ ಸಿದ್ದರಾಮಯ್ಯನವರನ್ನು ಮಾಡಿ ಎಂದು‌ ಸಚಿವ ಡಾ. ಅಶ್ವತ್ಥ ನಾರಾಯಣ ಬಹಿರಂಗ ಸಭೆಯಲ್ಲಿ ಪ್ರಚೋದಿಸಿದ್ದಾರೆ. ಮಾಧ್ಯಮದ ಮಂದಿ, ಬಿಜೆಪಿಯ ಸಜ್ಜನರು ಮಾತ್ರವಲ್ಲ ಕಾಂಗ್ರೆಸ್ ನಾಯಕರು ಕೂಡಾ ಮೌನಧಾರಣೆ ಮಾಡಿದ್ದಾರೆ. ಒಂದೊಮ್ಮೆ ಇದೇ ಮಾತನ್ನು ಬಿಜೆಪಿಯ ಸಚಿವರು, ಮುಖ್ಯಮಂತ್ರಿಗಳು ಇಲ್ಲವೆ ಪ್ರಧಾನಮಂತ್ರಿ ಅವರನ್ನು ಉದ್ದೇಶಿಸಿ ಹೇಳಿದ್ದರೆ ಏನಾಗುತ್ತಿತ್ತು? ಇಡೀ ದೇಶದಲ್ಲಿ ಸುಂಟರಗಾಳಿಯೋ, ಸುನಾಮಿಯೋ, ಭೂಕಂಪವೊ ಆಗುತ್ತಿತ್ತು. ಗೊತ್ತಲ್ಲಾ, ಮಣಿಶಂಕರ್ ಅಯ್ಯರ್, ಚಾಯ್ ವಾಲಾ ಎಂದು ಕರೆದ ಕಾರಣಕ್ಕಾಗಿಯೇ ನರೇಂದ್ರಮೋದಿಯವರು ಪ್ರಧಾನಿಯಾಗಿಯೇ ಬಿಟ್ಟರು. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸೋಲುತ್ತದೆ ಎಂದು ನಿಮಗೇನಾದರೂ ಅನಿಸುತ್ತಾ? ಎಂದು ಬರೆದಿದ್ದಾರೆ.

ಹೋರಾಟಗಾರ, ನಟ ಚೇತನ್ ಕೂಡ ಖಂಡಿಸಿದ್ದು, ”ಟಿಪ್ಪುವನ್ನು ಪ್ರೀತಿಸುವವರು ‘ಇರಬಾರದು’ ಎಂಬ ಬಿಜೆಪಿಯ ಕಟೀಲು ಮತ್ತು ಟಿಪ್ಪುವಿನಂತೆ ಸಿದ್ದರಾಮಯ್ಯ ಅವರನ್ನು ‘ಮುಗಿಯಬೇಕು’ ಎಂಬ ಅಶ್ವತ್ಥ ನಾರಾಯಣ ಅವರ ಹೇಳಿಕೆಗಳು ಹಿಂಸೆಯ ಕರೆಗಳು! ನಮ್ಮ ಪ್ರಜಾಪ್ರಭುತ್ವದಲ್ಲಿ ಇಂತಹ ಮಾತುಗಳನ್ನು ಸಹಿಸಲು ಸಾಧ್ಯವಿಲ್ಲ. ಈ 2 ಹಿಂಸಾಚಾರ ಪ್ರಚೋದಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಹೇಳಿದ್ದಾರೆ.

ಮಾಜಿ ಸಚಿವ ಡಾ.ಎಚ್‌ಸಿ ಮಹಾದೇವಪ್ಪ ಟ್ವೀಟ್ ಮಾಡಿದ್ದು, ”ಕೊಡಗಿಗೆ ಹೋದಾಗ ಬಿಜೆಪಿಗರು ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಹೊಡೆಯುವ ಕೆಲಸ ಮಾಡಿದ್ದರು, ಈಗ ಅವರ ಹತ್ಯೆಗೆ ಪ್ರಚೋದಿಸುವ ಹೇಳಿಕೆಯನ್ನು ಸಚಿವರೇ ಕೊಡುತ್ತಿದ್ದಾರೆ. ರಾಜ್ಯದಲ್ಲಿ ಗೃಹ ಇಲಾಖೆ ಏನಾದರೂ ಬದುಕಿದ್ದರೆ ಮೊದಲು ಬೇಜವಾಬ್ದಾರಿ ಸಚಿವ ಅಶ್ವತ್ಥ ನಾರಾಯಣ ಅವರ ಮೇಲೆ ಕ್ರಮ ಜರುಗಿಸಲಿ ಮತ್ತು ಈತನನ್ನು ಸಂಪುಟದಿಂದ ವಜಾ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಅವರು, ”ಸಿದ್ದರಾಮಯ್ಯರನ್ನ ಕೊಲೆ ಮಾಡಲು ಅಶ್ವತ್ಥ ನಾರಾಯಣ ಬಹಿರಂಗ ಕರೆ ನೀಡುತ್ತಿದ್ದಾರೆ. ಇದು ಕ್ರೂರವಾದದ್ದು, ರಾಜ್ಯದ ಕ್ಯಾಬಿನೆಟ್ ಮಂತ್ರಿಯೊಬ್ಬರು ಕೊಲೆಗೆ ಬಹಿರಂಗವಾಗಿ ಕರೆ ನೀಡುತ್ತಾರೆ. ಗಾಂಧೀಜಿ ಕೊಲೆಗಾರರ ​​ಬಗ್ಗೆ ಸಹಾನುಭೂತಿ ಹೊಂದಿರುವ ಜನರಿಂದ ಇನ್ನೇನು ನಿರೀಕ್ಷಿಸಬಹುದು? ಪೊಲೀಸರು ಸಚಿವರ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು” ಎಂದು ಟ್ವೀಟ್ ಮಾಡಿದ್ದಾರೆ.

ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಅವರು, ”ಅಶ್ವತ್ಥ ನಾರಾಯಣ ಅವರಿಂದ ಇದನ್ನು ನಿರೀಕ್ಷಿಸಿರಲಿಲ್ಲ. ಕೇಶವ ಕೃಪಾದವರನ್ನು ಸಮಾಧಾನ ಪಡಿಸುವುದೊಂದೇ ರಾಜ್ಯ ಬಿಜೆಪಿ ನಾಯಕರ ಅಜೆಂಡಾದಂತೆ ಕಾಣುತ್ತಿದೆ. ಬಿಜೆಪಿ ಹತಾಶವಾಗಿದೆ ಮತ್ತು ಇಂತಹ ಅಸಂಬದ್ಧ ಹೇಳಿಕೆಗಳ ಮೂಲಕ ಮತದಾರರ ಗಮನ ಸೆಳೆಯಲು ಶ್ರಮಿಸುತ್ತಿದೆ” ಎಂದಿದ್ದಾರೆ.

ಈ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ”ಟಿಪ್ಪು ಸುಲ್ತಾನ್ ಬಗ್ಗೆ ಕೇಂದ್ರದ ನಿಲುವು ಏನಿದೆ.. ಕೇಂದ್ರದ ವಸ್ತು ಸಂಗ್ರಹಾಲಯದಲ್ಲಿ ಟಿಪ್ಪು ಸುಲ್ತಾನರಿಗೆ ಏನು ಗೌರವ ಕೊಟ್ಟಿದ್ದಾರೆ ಎನ್ನುವುದು ರಾಜ್ಯ ಬಿಜೆಪಿ ನಾಯಕರು ತಿಳಿದುಕೊಳ್ಳಬೇಕು.. ಈ ಅಶ್ವತ್ಥ ನಾರಾಯಣ ಒಬ್ಬ ಮಲ್ಲೇಶ್ವರಂನ ಚಿಲ್ಲಾರೆ ಗಿರಾಕಿ ಇಂತವನಿಗೆ ಇತಿಹಾಸವೂ ಗೊತ್ತಿಲ್ಲ ಚುನಾವಣೆ ಸಂದರ್ಭದಲ್ಲಿ ಯಾವ ವಿಚಾರ ಮಾತನಾಡಬೇಕು ಎನ್ನುವ ಕನಿಷ್ಠ ಜ್ಞಾನವೂ ಇಲ್ಲ” ಎಂದರು.
”ಸಿದ್ದರಾಮಯ್ಯರನ್ನ ಹೊಡದಾಕಿಬಿಡಿ ಅಂದ್ರೆ ಹೇಗೆ.. ಅವರು ಬೇರೆ ಪಕ್ಷದಲ್ಲಿ ಇರಬಹುದು, ಸಂಸ್ಕೃತಿ ಇರುವಂತವರಾಗಿ, ನಾಗರಿಕ ಸಮಾಜದಲ್ಲಿ ಬದುಕುತ್ತಿದ್ದೇವೆ ಎನ್ನುವ ಅರಿವು ಇರಬೇಕು. ಈ ರೀತಿ ಹೇಳಿಕೆ ನೀಡುವುದು ಖಂಡನೀಯ, ಡಿಸಿಯವರು ಇವರ ಮೇಲೆ ಸುಮೋಟೋ ಕೇಸ್ ದಾಖಲಿಸಬೇಕಿತ್ತು. ಈಗಲಾದರೂ ಮಾನ್ಯ ಮುಖ್ಯಮಂತ್ರಿಗಳು ಅಶ್ವತ್ಥ ನಾರಾಯಣ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸುತ್ತೇನೆ” ಎಂದರು.

ಇದೇ ವೇಳೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು, ”ಅಶ್ವತ್ಥ ನಾರಾಯಣ ಸಂಸ್ಕೃತಿಯೇ ಅಂತಹದ್ದು, ಈ ರೀತಿ ಆಗಾಗ ಅದು ಹೊರಗೆ ಬರುತ್ತದೆ” ಎಂದರು.
ಸಚಿವ ಅಶ್ವತ್ಥ ನಾರಾಯಣ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಮಾಡಲು ನಿರ್ಧರಿಸಿದೆ. ಇತ್ತ ಕುರುಬ ಸಮುದಾಯದ ನಾಯಕರು ಸಹ ಪ್ರತಿಭಟನೆಗೆ ಮುಂದಾಗಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಅವರು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...