Homeಕವನಅನುವಾದಿತ ಕವನ; ನಿನ್ನ ಹಸಿವೆಯಿಂದ ಭಯಗೊಂಡಿದ್ದೇನೆ

ಅನುವಾದಿತ ಕವನ; ನಿನ್ನ ಹಸಿವೆಯಿಂದ ಭಯಗೊಂಡಿದ್ದೇನೆ

- Advertisement -
- Advertisement -

ನಾ ನಿನ್ನ ಊರಿನಿಂದ
ಮತ್ತು ನಿನ್ನ ಲೋಕದಿಂದ
ಪೂರಾ ಸೋತುಹೋಗಿದ್ದೇನೆ
ಅನಿಷ್ಟದ ನಗುವನ್ನು
ಕಿರೀಟದಂತೆ ಮುಡಿಸಿಕೊಂಡ
ನಿಮ್ಮ ಆತ್ಮದ ರೀತಿ ರಿವಾಜುಗಳು ಹೊಲಸು ನಾರುತ್ತಿವೆ
ಇನ್ನು ಸಹಿಸಲಾಗದು!

ನಿಮ್ಮ ತಕ್ಕಡಿಯಲ್ಲಿ ನಮ್ಮ ಬದುಕನ್ನಿಟ್ಟು
ಬರುಹೋಗುವ ಉಸಿರನ್ನು ನೋಡುವುದಕ್ಕೂ
ನಾಚಿಕೆಯಾಗುತ್ತದೆ.

ದೇವರು ನಿನ್ನದೇ ಕಲ್ಪನೆಯ ಕೆಟ್ಟ ಸೃಷ್ಟಿಯೆಂದು ಯಾರಿಗೆ ಗೊತ್ತಿಲ್ಲ
ಧರ್ಮವೆಂಬುದು ಸೃಷ್ಟಿಯ ಬಹುದೊಡ್ದ ಹಗರಣ
ಜಾತಿಯೆಂಬೊಂದು ಆಳ ಆಳದ ಬಾವಿ
ನೀರು ಎಲ್ಲಾ ವಿಕಾರವನ್ನು ಮುಚ್ಚಿಹಾಕಿದೆ..

ನಿಮ್ಮ ಕಲೆಯಿಂದ
ಮತ್ತು ನಿಮ್ಮ ವಿಜ್ಞಾನದಿಂದ ನಾನು
ವಿಪರೀತ ಬೇಸತ್ತು ಹೋಗಿದ್ದೇನೆ
ಇಲ್ಲಿ ರಕ್ತವನ್ನು ಉಗುಳು ಮತ್ತು
ಆಕ್ರಂದನವನು ದೇವಳದ ಭಜನೆ ನುಂಗಿಹಾಕಿದೆ
ಇಲ್ಲಿ ಸತ್ಯವನ್ನು ಸಂಸತ್ತಿನ ಟಾಯ್ಲೆಟ್ ಪೇಪರ್ ಮಾಡಿ
ನೇತುಹಾಕಲಾಗುತ್ತದೆ
ಮುಂಜಾನೆಯಿಂದ ಸಂಜೆವರೆಗೆ ಹೊಸಕಿಹೋದ ಜನರ ಕನಸುಗಳನ್ನು ಒರೆಸಲಾಗುತ್ತದೆ

ನಾನು ಶತಮಾನಗಳಿಂದ ಅನ್ನದ ಅಗುಳನ್ನೂ ಕಾಣದ
ಈ ದೇಶದ ಅನ್ನನಾಳದಿಂದ ಬಂದಿದ್ದೇನೆ
ನಿಮ್ಮ ಹಸಿವೆಯಿಂದ ನನಗೆ ಭಯವಾಗುತ್ತದೆ

ಕೆರೆ ಹಳ್ಳಗಳಿಗಾಗಿ
ನನ್ನನ್ನು ಬಿಟ್ಟುಬಿಡಿ
ಅಲ್ಲಿ ಕಪ್ಪೆ ಮೀನುಗಳು ನನಗಾಗಿ ಕಾಯುತ್ತಿರಬಹುದು
ಯಾರಾದರೂ ಜೀವದ ಗೆಳೆಯನೊಂದಿಗೆ
ಮಳೆಯನ್ನು ನನ್ನ ಅಂಗಿಯನ್ನಾಗಿಸಿ
ನನ್ನ ಕುರಿ ಆಡುಗಳು ನೆನೆಯುವ ಆ ದಿಕ್ಕಿನತ್ತ
ಈಜಲು ಹೋಗುವೆ
ಅಲ್ಲಿ ಯಾವುದಾದರೂ ಮಾವಿನ ಮರದ ಮೇಲೆ
ನನ್ನ ಎರಡೂ ಕೈಗಳು ಸಿಕ್ಕಿಕೊಂಡಿರಬೇಕು
ಮತ್ತು ಅಲ್ಲೇ ಎಲ್ಲೋ ಹತ್ತಿರದಲ್ಲಿ ಸಿಕ್ಕುಸಿಕ್ಕಾದ ನನ್ನ ಮೀನಿನ ಬಲೆ
ನನ್ನ ಬೆರಳುಗಳಿಗಾಗಿ ಕರೆಯುತ್ತಿರಬಹುದು

ಮುಕ್ತಿಬೋಧದ ಬಗ್ಗೆ ಯಾವ ಅಭಿಪ್ರಾಯವೂ ಇಲ್ಲ
ಮಾರ್ಕ್ಸ್ ನನಗೆ ಗುರುತಿಲ್ಲ
ಅಂಬೇಡ್ಕರ್ ಹೆಸರನ್ನೇ ಕೇಳಿರುವೆ ಮೊದಲಬಾರಿ
ಬಹುಶಃ ಅಜ್ಞೇಯನಾಗುವುದೆ ನಿಮ್ಮ ಸಂಸ್ಕೃತಿಯ ದೊಡ್ದ ಕೊಡುಗೆಯಿದ್ದೀತು
ಈಗ ನನ್ನನ್ನು ಹೋಗಲು ಬಿಡಿ

ಗಾಲಿಬನನ್ನು ನಾಲಿಗೆಯಲೂ ನೆನೆಯುವುದಿಲ್ಲ
ಜಯಸಿಯೇ ಯುದ್ಧದ ನಿರರ್ಥಕತೆಯನ್ನು ಸಾರಿದ ಮೊದಲ ಕವಿಯೆಂದು
ವಾದಿಸುವುದಿಲ್ಲ ನಾನು
ನನಗೆ ಹೋಗಲು ಬಿಡಿ

ನನ್ನನ್ನು ನೀವು ಪುಕ್ಕಲು ಎನ್ನಿ
ಪಲಾಯನವಾದಿ ಎನ್ನಿ
ಆದರೆ ಹೋಗಲು ಬಿಡಿ

ನಾನು ಹೋಗುವ ಅಜ್ಞಾತವಾಸದ ಅರ್ಥ
ಬಹುಶಃ ನಿಮಗೆ ಗೊತ್ತಿದ್ದೀತು ಅಥವಾ
ನಿಮಗೆಂದಿಗೂ ಗೊತ್ತಾಗದು
ತುದಿ ಮಣಿಸಿ ಬಾಗಿಸಿದ ಬಿದಿರ ಚಿಗುರು ಸಂಕಟದಲಿ
ನಡುಗಿದ್ದು
ಅದೇ ನನಗೆ ಹೇಳಿಕೊಟ್ಟಿದೆ
ಹೇಗೆ ವಿನಮ್ರತೆ ದೈನೇಸಿಯಾಗಿ ಬದಲಾಗುವ ಮೊದಲು
ಪ್ರತಿಭಟನೆಯಾಗಿ ಬದಲಾಗುವುದೇ
ಬದುಕಿನ ಸಾಕ್ಷಿಯಾಗಿದೆ..!

ಹಿಂದಿ ಮೂಲ: ಪರಾಗ್ ಪಾವನ್
ಕನ್ನಡಕ್ಕೆ: ರೇಣುಕಾ ನಿಡಗುಂದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...