Homeಮುಖಪುಟಗೌರಿ ಕೊಲೆಯೂ, ಸಿದ್ದರಾಮಯ್ಯನವರನ್ನು ಹೊಡೆದು ಹಾಕಬೇಕು ಎಂಬ ಕರೆಯೂ..

ಗೌರಿ ಕೊಲೆಯೂ, ಸಿದ್ದರಾಮಯ್ಯನವರನ್ನು ಹೊಡೆದು ಹಾಕಬೇಕು ಎಂಬ ಕರೆಯೂ..

ಕಾನೂನು ಕಟ್ಟಳೆಗಳನ್ನು ಬದಿಗಿಟ್ಟು ನೈತಿಕವಾಗಿ ನೋಡಿದರೂ, ಎಲ್ಲರನ್ನೂ ನಿರ್ನಾಮ ಮಾಡುತ್ತಾ ಹೋಗಿ ಕೊನೆಗೆ ಯಾವುದೋ ಒಂದು ಪಕ್ಷದ ಕೆಲವು ಮಂದಿ ಉಳಿದು ಯಾವ ಸಾಮ್ರಾಜ್ಯ ಕಟ್ಟಲಿದ್ದಾರೆ?

- Advertisement -
- Advertisement -

ಸೆಪ್ಟಂಬರ್ 5, 2017ರಂದು ಪರಶುರಾಮ್ ವಾಘ್ಮೋರೆ ಎಂಬ ವ್ಯಕ್ತಿ ಪತ್ರಕರ್ತೆ ಗೌರಿ ಲಂಕೇಶ್‌ರಿಗೆ ಗುಂಡು ಹೊಡೆದು ಕೊಂದ ಎಂದು ಈ ಹತ್ಯೆಯ ಪ್ರಕರಣದ ಆರೋಪ ಪಟ್ಟಿ ನುಡಿಯುತ್ತದೆ. ಸದ್ಯಕ್ಕೆ ಈ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಹಿಂದೂ ಧರ್ಮದ ಒಂದು ಪಂಗಡಕ್ಕೆ ಸೇರಿದ ಈ ತೀವ್ರವಾದಿ “ತನ್ನ ಧರ್ಮವನ್ನು ಉಳಿಸಿಕೊಳ್ಳಲು” ಗೌರಿಯನ್ನು ಕೊಂದೆ ಎಂದು ವಿಶೇಷ ತನಿಖಾ ದಳದ ಎದುರು ಒಪ್ಪಿಕೊಂಡಿದ್ದ ಎಂದು ವರದಿಯಾಗಿತ್ತು. ಗೌರಿ ಹತ್ಯೆಯ ಸ್ಕೆಚ್ ಹಾಕಿದ್ದು ಅಮೋಲ್ ಕಾಳೆ ಎಂಬ ಮಾಸ್ಟರ್ ಮೈಂಡ್ ಎನ್ನುತ್ತದೆ ಚಾರ್ಜ್ ಶೀಟ್. ಇವರಿಗೆ ಬಂಧೂಕು ಒದಗಿಸಲು ಸಹಾಯ ಮಾಡಿದ್ದು ಮಂಡ್ಯ ಭಾಗದ ಒಕ್ಕಲಿಗ ಸಮುದಾಯದ ವ್ಯಕ್ತಿ ನವೀನ್ ಕುಮಾರ್ ಎಂಬಾತ. ಈಗ 18 ಜನರ ವಿರುದ್ಧ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದು, ಈ ಕೊಲೆಯ ಪ್ರಕರಣದ ಒಬ್ಬ ಆರೋಪಿ ಇನ್ನೂ ತಲೆಮರೆಸಿಕೊಂಡಿದ್ದಾನೆ. ಸನಾತನ ಸಂಸ್ಥಾ ಎಂಬ ಸಂಘಟನೆಯ ವಿರುದ್ಧ ಕೂಡ ಪೊಲೀಸರು ಆರೋಪ ಹೊರಿಸಿದ್ದಾರೆ.

ನವೀನ್ ಕುಮಾರ್ ಮತ್ತು ಪರಶುರಾಮ್ ವಾಘ್ಮೋರೆ

ಈ ಅಪರಾಧವೆಸೆಗಲು ಈ ಆರೋಪಿಗಳ ತಲೆತಿರುಗುವಂತೆ ಮಾಡಲು ಮೊದಲು ಉಪಯೋಗಿಸಿದ ಅಸ್ತ್ರ ಒಂದು ‘ವಿಡಿಯೋ ತುಣುಕು’. ಗೌರಿ ಲಂಕೇಶ್ ಅವರು 2012ರಲ್ಲಿ ಹಿಂದೂ ಧರ್ಮದ ಬಹುತ್ವದ ಬಗ್ಗೆ ಮಾತನಾಡುತ್ತಾ, ಈ ಧರ್ಮದಲ್ಲಿರುವ ಅಸಂಖ್ಯಾತ ಜಾತಿ ಪಂಗಡಗಳ ಬಗ್ಗೆ ಹೇಳುತ್ತಾ, ಈ ಧರ್ಮಕ್ಕೆ ಅಪ್ಪ ಅಮ್ಮ ಯಾರೂ ಇಲ್ಲ ಎಂಬ ಮಾತುಗಳನ್ನಾಡಿದ್ದರು. ಆದರೆ ಕುತ್ಸಿತ ಮನಸ್ಸಿನ ಹಿಂದುತ್ವವಾದಿಗಳು ‘ಅಪ್ಪ ಅಮ್ಮ ಯಾರೂ ಇಲ್ಲ’ ಎಂದು ಹೇಳುವ ಭಾಗದ ಐದು ನಿಮಿಷದ ಭಾಗವನ್ನು ಮೂಲ ವಿಡಿಯೋದಿಂದ ಕತ್ತರಿಸಿ, ಪ್ರಚಾರ ಮಾಡಿ, ಲಕ್ಷಾಂತರ ಜನರಿಗೆ ವಿಷ ಬಿತ್ತುವ ಯೋಜನೆಗೆ ಬಳಸಿಕೊಳ್ಳಲಾಗಿತ್ತು. ಇತ್ತೀಚೆಗೆ ಪ್ಯಾರಿಸ್ ಮೂಲದ ‘Forbidden Stories’ ಎಂಬ ಸಂಸ್ಥೆ ಗೌರಿ ಕೊಲೆಯ ಬಗ್ಗೆ ವರದಿ ಮಾಡುತ್ತಾ ಈ ವಿಡಿಯೋ ವೈರಲ್ ಆದ ವಿನ್ಯಾಸವನ್ನು ಬಿಚ್ಚಿಟ್ಟಿದೆ. ಈ ತನಿಖೆಗೆ digitalwitnesslab.org ನವರು ಕೂಡ ಕೈಜೋಡಿಸಿದ್ದಾರೆ. ಈ ತನಿಖೆಯ ಪ್ರಕಾರ ಯೂಟ್ಯೂಬ್ ವೇದಿಕೆಯಲ್ಲಿ ಈ ವಿಡಿಯೋ ತುಣುಕನ್ನು ಹತ್ತಾರು ಯೂಸರ್‌ಗಳು ಕಾಪಿ ಮಾಡಿ ಹಾಕಿದ್ದರು. “ರಿಯಲ್ ಫೇಸ್ ಆಫ್ ಸೆಕ್ಯುಲರಿಸಂ” (ಜಾತ್ಯಾತೀತತೆಯ ನಿಜ ಮುಖ) ಎಂಬ ಹೆಸರಿನ ಈ ವಿಡಿಯೋ ಯೂಟ್ಯೂಬ್ ನಲ್ಲಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಬಾರಿ ವೀಕ್ಷಿಸಲಾಗಿತ್ತು (ಈಗ ವಿಡಿಯೋವನ್ನು ತೆಗೆದು ಹಾಕಲಾಗಿದೆ – ಆದರೆ ಅದನ್ನು ಆರ್ಕೈವ್ ಮಾಡಿ ಸೇವ್ ಮಾಡಲಾಗಿದೆ). ಫೇಸ್ಬುಕ್ ವೇದಿಕೆಯಲ್ಲಿ ಈ ವಿಡಿಯೋಗೆ ಸುಮಾರು 130 ದಶಲಕ್ಷ ಎಂಗೇಜ್‌ಮೆಂಟ್ ಇದೆ. ಇನ್ನು 13 ಅಕ್ಟೋಬರ್ 2014 ರಲ್ಲಿ ಈ ವಿಡಿಯೋವನ್ನು ಫೇಸ್ಬುಕ್ ನಲ್ಲಿ ಹಂಚಿಕೊಂಡಿದ್ದ ‘ಕರ್ನಾಟಕ ಬಿಜೆಪಿ’, “This is an old video but nevertheless, it will not be the last from such ‘seculars’. The next time we hear such speeches, we should give a fitting legal reply” (ಇದು ಹಳೆ ವಿಡಿಯೋ ಆದರೂ ಅಂತಹ ‘ಜಾತ್ಯಾತೀತ’ರಿಂದ ಇದು ಕೊನೆಯದೇನೂ ಆಗಿರುವುದಿಲ್ಲ. ಮುಂದಿನ ಬಾರಿ ಇಂಥ ಭಾಷಣಗಳನ್ನು ನಾವು ಕೇಳಿದಾಗ, ಇದಕ್ಕೆ ಕಾನೂನು ರೀತಿಯಲ್ಲಿ ಸರಿಯಾದ ಉತ್ತರ ಕೊಡಬೇಕು) ಎಂದಿತ್ತು. ತಮಗೆ ಬೇಕಾದಂತೆ ಕತ್ತರಿಸಿದ ವಿಡಿಯೋಗೆ ಇವರು ಕಾನೂನು ರೀತಿಯ ಉತ್ತರ ಕೊಡಬೇಕು ಅಂದರೂ ಕೂಡ ಅವರನ್ನು ಬೆಂಬಲಿಸುವ ಫ್ರಿಂಜ್ ಗಳು ‘ಕೊಲ್ಲುವ’ ಭಾಷೆಯನ್ನಾಗಲೇ ತಮ್ಮದಾಗಿಸಿಕೊಂಡಿದ್ದರು. ಅದರಲ್ಲಿ ಯಶಸ್ವಿಯಾಗಿ ಕರ್ನಾಟಕದಲ್ಲಿ ದುರಂತದ ಒಂದು ಅಧ್ಯಾಯವನ್ನು ಬರೆದಿದ್ದರು. ಈಗ ಆ ಕೊಲುವ ಭಾಷೆಯನ್ನು ಬಿಜೆಪಿಯ ಮುಖಂಡರು, ಸಚಿವರು ಸಾರ್ವಜನಿಕರೆದುರಲ್ಲಿಯೇ ರಾಜಾರೋಷವಾಗಿ ಉಪಯೋಗಿಸುತ್ತಿದ್ದಾರೆ.

ಅಮೋಲ್ ಕಾಳೆಯನ್ನು ರ್‍ಯಾಡಿಕಲೈಸ್‌ ಮಾಡಲು ಆತನ ಲ್ಯಾಪ್‌ಟಾಪ್ ನಲ್ಲಿ ಈ ವಿಡಿಯೋವನ್ನು ಡೌನ್‌ಲೋಡ್ ಮಾಡಿ ಪದೇಪದೇ ತೋರಿಸಲಾಗಿತ್ತಂತೆ. ಗೌರಿ ಕೊಲೆಯ ಆರೋಪಿಗಳಲ್ಲಿ ಎಷ್ಟೋ ಜನಕ್ಕೆ ಗೌರಿ ಏನು ಕೆಲಸ ಮಾಡುತ್ತಿದ್ದಾರೆ ಎಂಬುದು ಕೂಡ ತಿಳಿದಿರಲಿಲ್ಲ. ಹೀಗೆ ನಿಜ ಸಂಗತಿಗಳನ್ನು ಧರ್ಮಾಂಧತೆಯಿಂದ ಮುಚ್ಚಿಹಾಕಿ ಕೊಲೆ ಮಾಡಲು ಪ್ರೇರೇಪಿಸಲಾಗಿತ್ತು. ಎಸ್ ಐ ಟಿ ತನಿಖೆಯ ನಂತರ ಈ ಹಿಂದುತ್ವವಾದಿಗಳ ಹಿಟ್ ಲಿಸ್ಟ್ ನಲ್ಲಿ ಗಿರೀಶ್ ಕಾರ್ನಾಡ್, ಭಗವಾನ್ ಸೇರಿದಂತೆ ಇನ್ನೂ ಹಲವರಿರುವ ಸಂಗತಿ ಬಯಲಾಗಿತ್ತು. ಈ ಹಿಂದೆ ಈ ಕೆಲಸವನ್ನು ಇಂತಹ್ ಫ್ರಿಂಜ್ ಸಂಘಟನೆಗಳು ಮಾಡುತ್ತಿದ್ದರೆ ಈಗ ಮುಖ್ಯವಾಹಿನಿ ಪಕ್ಷವಾಗಿರುವ ಬಿಜೆಪಿ ಪಕ್ಷದ ಮುಖಂಡರು ಬಹಿರಂಗವಾಗಿ, ಸಾರ್ವಜನಿಕ ಸಮಾವೇಶದಲ್ಲಿ ಹೊಡೆದುಹಾಕುವ ಕರೆ ಕೊಡುತ್ತಿದ್ದಾರೆ. ಫೆಬ್ರವರಿ 15ರಂದು ಮಂಡ್ಯದಲ್ಲಿ ನಡೆದ ಒಂದು ಸಾರ್ವಜನಿಕ ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥ ನಾರಾಯಣ “ಮನಸ್ಸು ಮಾಡಿದ್ರೆ ಏನು ಬೇಕಾದ್ರೂ ಸಾಧಿಸ್ತಾರೆ.. ರಾಜಕೀಯ ದಿಕ್ಸೂಚಿ ಮಂಡ್ಯದಿಂದಲೇ ಕಾಣಬೇಕು. ಇಲ್ಲದಿದ್ರೆ, ಟಿಪ್ಪು ಜಾಗಕ್ಕೆ ಸಿದ್ದರಾಮಯ್ಯ ಬಂದುಬಿಡ್ತಾರೆ. ಟಿಪ್ಪು ಬೇಕಾ? ಸಾವರ್ಕರ್ ಬೇಕಾ? ಉರಿಗೌಡ ನಂಜೇಗೌಡ ಟಿಪ್ಪುವನ್ನು ಹೊಡದಾಕಿದ ಹಾಗೆ ಸಿದ್ದರಾಮಯ್ಯರನ್ನು ನೀವು ಹೊಡದಾಕಬೇಕು”. ಹೀಗೆ ಇತಿಹಾಸದಲ್ಲಿ ಇಲ್ಲದ ಉರಿ ಗೌಡ, ನಂಜೇಗೌಡರನ್ನ ಸೃಷ್ಟಿ ಮಾಡಿ ಬಿಜೆಪಿ ಮುಖಂಡರು ಇಷ್ಟು ದಿನ ನಂಜು ಹುಟ್ಟಿಹಾಕುತ್ತಿದ್ದರೆ ಅಶ್ವತ್ಥ ನಾರಾಯಣ ಒಂದು ಹೆಜ್ಜೆ ಮುಂದೆ ಹೋಗಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು ಹೊಡೆದು ಹಾಕುವ ಕರೆ ಕೊಟ್ಟಿದ್ದಾರೆ. ಹಲವು ವಲಯಗಳಿಂದ ಆಕ್ರೋಶ ವ್ಯಕ್ತವಾದ ಮೇಲೆ, “ಇದೊಂದು ರಾಜಕೀಯ ವಾಗ್ದಾಳಿ ಅಷ್ಟೇ, ಇದರಿಂದ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ” ಎಂದಿದ್ದಾರೆ.

ಹತ್ಯೆಯ ಕರೆಕೊಟ್ಟು ಅದನ್ನು ರಾಜಕೀಯ ವಾಗ್ದಾಳಿ ಎಂದು ಕರೆದು ನುಣುಚಿಕೊಂಡುಬಿಡುವುದು ಅಷ್ಟು ಸುಲಭವಾಗಿ ಹೋಗಿದೆಯೇ? ಈ ಕರೆಯಿಂದ ಎಷ್ಟೋ ಜನ ಧರ್ಮಾಂಧ ರ್‍ಯಾಡಿಕಲ್‌ಗಳು ಸ್ಫೂರ್ತಿ ಪಡೆದುಕೊಂಡು, ಗೌರಿ, ಕಲ್ಬುರ್ಗಿ ಮುಂತಾದವರನ್ನು ಹತ್ಯೆ ಮಾಡಿದಂತೆ ರಾಜಕೀಯ ಮುಖಂಡರ ಹತ್ಯೆಗೂ ಪ್ರಯತ್ನ ಪಡುವುದಿಲ್ಲ ಎಂಬುದಕ್ಕೆ ಆಶ್ವತ್ಥ ನಾರಾಯಣರವರು ಏನು ಖಾತ್ರಿ ಕೊಡಬಲ್ಲರು? ಗೌರಿ ಹತ್ಯೆಯಲ್ಲಿ ಒಕ್ಕಲಿಗ ಜನಾಂಗಕ್ಕೆ ಸೇರಿದ ನವೀನ್ ಕುಮಾರ್ ಆರೋಪ ಪಟ್ಟಿಯಲ್ಲಿದ್ದಾನೆ. ಒಕ್ಕಲಿಗ ಜನಾಂಗದ ಯುವಕರನ್ನು ದಾರಿ ತಪ್ಪಿಸಲು ಸಂಘ ಪರಿವಾರ ಇಂತಹ ಆಟಗಳನ್ನು ಆಡುತ್ತಿದೆಯೇ? ಬಿಜೆಪಿಯ ಇತರ ಹಿರಿಯ ಮುಖಂಡರು ಮೌನವಾಗಿರುವುದೇಕೆ? ಜನರ ಪ್ರಾಣವನ್ನು ಪಣಕ್ಕಿಟ್ಟು ಇಂತಹ ದ್ವೇಷದ ವಾತಾವಾರಣ ಬೆಳೆದು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಅವರು ಕಾತರರಾಗಿದ್ದಾರೆಯೇ? ಮುಂತಾದ ಪ್ರಶ್ನೆಗಳನ್ನು ಸದರಿ ಸರ್ಕಾರ ಕರ್ನಾಟಕದ ನಾಗರಿಕರಿಗೆ ಉತ್ತರಿಸಬೇಕಿದೆ.

ಇಷ್ಟು ಸಾಲದೆಂಬಂತೆ 14ನೇ ಫೆಬ್ರವರಿಯಂದು ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತೆ ಇಂತಹುದೇ ಕರೆಯನ್ನು ಕೊಟ್ಟಿರುವುದು ಆತಂಕಕಾರಿಯಾಗಿದೆ. ಕೊಪ್ಪಳ ಜಿಲ್ಲೆಯ ಯಲಬುರ್ಗದಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡುತ್ತಾ “ಟಿಪ್ಪು ಅನುಯಾಯಿಗಳು ಈ ನೆಲದಲ್ಲಿ ಇರಬಾರದು” ಎಂದು ದ್ವೇಷದ ಮಾತಾಡಿ ಪರೋಕ್ಷವಾಗಿ ನಿರ್ಮೂಲನೆಯ ಕರೆಕೊಟ್ಟಿದ್ದಾರೆ. ಹೀಗೆ ಆಳುವ ಪಕ್ಷದ ಇಬ್ಬರು ರಾಜಕೀಯ ಮುಖಂಡರು ಸಮಾಜ ಮತ್ತು ಜನವಿರೋಧಿ ಹೇಳಿಕೆಗಳನ್ನು ನೀಡುತ್ತಾ ಚುನಾವಣಾ ಧ್ರುವೀಕರಣದ ತಳಪಾಯವನ್ನು ಗಟ್ಟಿ ಮಾಡಿಕೊಳ್ಳುತ್ತಿದ್ದರೆ, ಎಲ್ಲೋ ಧರ್ಮಾಂಧತೆಯಲ್ಲಿ ಮುಳುಗಿರುವ ಯಾರೋ ಫ್ರಿಂಜ್‌ಗಳು ಬಹುಷಃ ಕೊಲೆಗೆ ಸಿದ್ಧವಾಗುತ್ತಲೂ ಇರಬಹುದು!

ಇದನ್ನೂ ಓದಿ: ಟಿಪ್ಪು ಅನುಯಾಯಿಗಳನ್ನು ಕೊಲ್ಲಿರಿ: ನಳಿನ್ ಕುಮಾರ್‌‌ ಪ್ರಚೋದನಾತ್ಮಕ ಹೇಳಿಕೆ

ಬಸವಣ್ಣ, ಕುವೆಂಪು, ನಾಲ್ವಡಿ ಕೃಷ್ಣರಾಜ ಒಡೆಯರ್, ಬಿ ಕೃಷ್ಣಪ್ಪನಂತಹ ಸಾವಿರಾರು ಮಹನೀಯರು ಕಟ್ಟಿಕೊಟ್ಟ ವಿವೇಕದಲ್ಲಿ ರೂಪುಗೊಂಡ ಈ ಕನ್ನಡ ನಾಡಿನಲ್ಲಿ ಕೊಲೆಗೆ ಕರೆ ಕೊಡುವಂತಹ, ಅದು ಸಾಧ್ಯವಾಗುವ ದ್ವೇಷದ ಮತ್ತು ಧ್ರುವೀಕರಣದ ಪರಿಸ್ಥಿತಿಯನ್ನು ನಿರ್ಮಾಣ ಮಾಡುವಂತಹ ಕೆಲಸಕ್ಕೆ ಸಂಘ ಪರಿವಾರಕ್ಕೆ ಸೇರಿದ ಹಲವರು ಹುನ್ನಾರ ನಡೆಸುತ್ತಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಹೀಗೆ ಮತ್ತೊಬ್ಬನನ್ನು ನಿರ್ಮೂಲನೆ ಮಾಡಲು ಕರೆ ಕೊಡುವುದು ಮಹಾಪರಾಧ. ನಮ್ಮ ಸಂವಿಧಾನ ಕೂಡ ಇಂತಹ ದ್ವೇಷದ ಮಾತುಗಳನ್ನು ಮನ್ನಿಸುವುದಿಲ್ಲ. ಕಾನೂನು ಕಟ್ಟಳೆಗಳನ್ನು ಬದಿಗಿಟ್ಟು ನೈತಿಕವಾಗಿ ನೋಡಿದರೂ, ಎಲ್ಲರನ್ನೂ ನಿರ್ನಾಮ ಮಾಡುತ್ತಾ ಹೋಗಿ ಕೊನೆಗೆ ಯಾವುದೋ ಒಂದು ಪಕ್ಷದ ಕೆಲವು ಮಂದಿ ಉಳಿದು ಯಾವ ಸಾಮ್ರಾಜ್ಯ ಕಟ್ಟಲಿದ್ದಾರೆ?

ಈ ಎಲ್ಲಾ ಪ್ರಹಸನಗಳ ಹಿನ್ನೆಲೆಯಲ್ಲಿ, ಕರ್ನಾಟಕ ಹಿಂದೆಂದೂ ಕಾಣದಂತಹ ಕ್ಷೋಭೆಗೆ ತುತ್ತಾಗಿರುವುದು ಸ್ಪಷ್ಟವಾಗಿದ್ದು, ಇಲ್ಲಿಯವರೆಗೂ ಕಟ್ಟಿಕೊಂಡಿದ್ದ ವಿವೇಕ ನಿರ್ನಾಮವಾಗುವುದರೊಳಗೆ ನಾಗರಿಕರು ಎಚ್ಚೆತ್ತುಕೊಳ್ಳಬೇಕಿದೆ.

ಇದನ್ನೂ ಓದಿ: ಭಾರತದಲ್ಲಿ ಹೆಚ್ಚುತ್ತಿರುವ ಮುಸ್ಲಿಂ ವಿರೋಧಿ ಹಾಡುಗಳು: ಇಸ್ಲಾಮೋಫೋಬಿಯ ಹರಡುವ ಪ್ರಯತ್ನ ತೆರೆದಿಟ್ಟ ಜರ್ಮನ್ ಸಾಕ್ಷ್ಯಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...