Homeಅಂಕಣಗಳುಮಾತು ಮರೆತ ಭಾರತ-35; ಮಿರ್ಯಾಲಗುಡ ಫೈಲ್: ’ಅಪ್ಪನನ್ನು ಗಲ್ಲಿಗೇರಿಸಿ’ ಎಂದ ಅಮೃತಳ ಕತೆ

ಮಾತು ಮರೆತ ಭಾರತ-35; ಮಿರ್ಯಾಲಗುಡ ಫೈಲ್: ’ಅಪ್ಪನನ್ನು ಗಲ್ಲಿಗೇರಿಸಿ’ ಎಂದ ಅಮೃತಳ ಕತೆ

- Advertisement -
- Advertisement -

ಗಮನಿಸಿ : ಫೆಬ್ರವರಿ 20, 2023ರಲ್ಲಿ ಪ್ರಕಟಗೊಂಡ ಈ ಹಳೆಯ ಬರಹವನ್ನು ಮತ್ತೊಮ್ಮೆ ಹಂಚಿಕೊಳ್ಳಲಾಗಿದೆ. ಈ ಪ್ರಕರಣದ ಮೊದಲ ಆರೋಪಿ ಮಾರುತಿರಾವ್ 2020ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಎರಡನೇ ಅಪರಾಧಿಗೆ ಮರಣದಂಡನೆ ಮತ್ತು ಉಳಿದ 6 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಾ.10,2025ರಂದು ತೆಲಂಗಾಣದ ನ್ಯಾಯಾಲಯದ ಆದೇಶಿಸಿದೆ.   

’ನನ್ನ ತಂದೆಯನ್ನು ನೇಣಿಗೇರಿಸಿ’ ಎಂದು ಅಮೃತವರ್ಷಿಣಿ ಪೊಲೀಸರನ್ನೂ ಹಾಗೂ ಮಾಧ್ಯಮದವರನ್ನು ಅಂಗಲಾಚುತ್ತಿದ್ದಳು. ಅವಳ ಕಣ್ಣುಗಳು ಕಣ್ಣೀರಲ್ಲಿ ಮಿಂದು ಕೆಂಪಗಾಗಿದ್ದವು. ತಂದೆಯನ್ನೇ ಗಲ್ಲಿಗೇರಿಸಲು ಬೇಡಿಕೊಳ್ಳುವ ಮಗಳು ನಿಜಕ್ಕೂ ಮಗಳೇ ಎಂದು ನೀವು ಪ್ರಶ್ನಿಸಬಹುದು. ಓದುತ್ತಾ ಹೋದಂತೆ ನಿಮಗೆ ಉತ್ತರ ಸಿಗಲಿದೆ.

ಪ್ರಣಯ್ ಕುಮಾರ್ ತೆಲಂಗಾಣದ ನಲಕೊಂಡ ಬಳಿ ಇರುವ ಮಿರ್ಯಾಲಗುಡ ಪಟ್ಟಣದ ದಲಿತ ಯುವಕ. ಆರ್ಥಿಕವಾಗಿ ಮುಂದುವರಿದಿದ್ದ ದಲಿತ ಕುಟುಂಬದ ಹಿರಿಯ ಮಗ. ಅವನಿಗಿನ್ನೂ 23 ವರ್ಷ ಮಾತ್ರ. ಅದೇ ಪಟ್ಟಣದ ಪ್ರಭಾವಿ ವೈಶ್ಯ ಕುಟುಂಬದ ವ್ಯಾಪಾರಿ ಮಾರುತಿರಾವ್ ಮಗಳು ಅಮೃತವರ್ಷಿಣಿ. ಅಮೃತ ಮತ್ತು ಪ್ರಣಯ್ ಇಬ್ಬರೂ ಶಾಲಾದಿನಗಳಿಂದಲೇ ಉತ್ತಮ ಸ್ನೇಹಿತರು. ಒಂದೇ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣವನ್ನು ಕಲಿಯುತ್ತಿದ್ದಾಗ ಇವರಿಬ್ಬರ ನಡುವೆ ಪ್ರೇಮಾಂಕುರವಾಯಿತು. ಯಥಾಪ್ರಕಾರ ಪ್ರೀತಿ ಜಾತಿಯನ್ನು ಮೀರಿ ನಿಂತಿತು. ಆದರೆ ಭಾರತದ ಹಿರಿಯ ಜಾತಿ ಭಯೋತ್ಪಾದಕರು ಮೀರಿಲ್ಲವಲ್ಲ! ಪಿಯುಸಿಯಲ್ಲಿಯೇ ಒಮ್ಮೆ ಪ್ರಣಯ್‌ಗೆ ಅಮೃತಳ ತಂದೆ ಎಚ್ಚರಿಕೆ ನೀಡಿದ್ದರು. ಮಗಳ ಸಹವಾಸಕ್ಕೆ ಬರಬೇಡವೆಂದು ಸೂಚಿಸಿದ್ದರು. ಇವರಿಬ್ಬರ ನಡುವಿನ ಪ್ರೀತಿಗೆ ಬ್ರೇಕ್ ಹಾಕಲು ಮಗಳು ಅಮೃತ ಪಿಯುಸಿ ಪಾಸ್ ಆದ ನಂತರ ಮುಂದೆ ಕಾಲೇಜಿಗೆ ಒಂದು ವರ್ಷ ಕಾಲ ಸೇರಿಸಲೇ ಇಲ್ಲ. ನಂತರದ ವರ್ಷ ಅಮೃತ ಇಂಜಿನಿಯರಿಂಗ್ ಕಾಲೇಜಿಗೆ ಸೇರಿದಾಗ ಪ್ರಣಯ್ ಸಹ ಇಂಜಿನಿಯರಿಂಗ್ ಓದುತ್ತಿದ್ದನು. ಒಟ್ಟಿಗೆ ಇರಬೇಕೆಂದು ಅಂದುಕೊಂಡ ಮೇಲೆ ಅದೆಷ್ಟು ವರ್ಷ ದೂರವಿದ್ದರೇನು? ಅಷ್ಟು ಸುಲಭವಾಗಿ ಪ್ರೀತಿಸಿದ ಸಂಗಾತಿಯನ್ನು ಮರೆಯಲು ಸಾಧ್ಯವೇ? 2018ರ ಜನವರಿ ತಿಂಗಳಂದು ಪ್ರಣಯ್ ಹಾಗೂ ಅಮೃತವರ್ಷಿಣಿ ಇಬ್ಬರೂ ವಿವಾಹವಾದರು. ಈ ವಿವಾಹ ಮಾರುತಿ ರಾವ್ ಮತ್ತು ಕುಟುಂಬಕ್ಕೆ ಕಿಂಚಿತ್ತೂ ಇಷ್ಟವಿರಲಿಲ್ಲ. ತೆಲಂಗಾಣ ರಾಷ್ಟ್ರೀಯ ಪಕ್ಷದ ಪದಾಧಿಕಾರಿಯಾಗಿದ್ದ ಮಾರುತಿರಾವ್‌ಗೆ ಪ್ರತಿಷ್ಠೆ ನೆತ್ತಿಗೇರಿ ತಲೆ ತಿರುಗುತ್ತಿತ್ತು. ಮಗಳು ಗರ್ಭಿಣಿ ಆದ ವಿಚಾರ ತಿಳಿದಾಗ ಆಕೆ ನಿಯಮಿತವಾಗಿ ತಪಾಸಣೆ ಮಾಡಿಸಿಕೊಳ್ಳುವ ವೈದ್ಯರ ಮೂಲಕವೇ ಗರ್ಭಪಾತ ಮಾಡಿಸಿಕೊಂಡು ಮನೆಗೆ ಮರಳುವಂತೆ ಸೂಚಿಸಿದ್ದನು. ಆದರೆ ಅಮೃತ ಪ್ರಣಯನ ರೀತಿಯಲ್ಲಿಯೇ ಇನ್ನಷ್ಟು ಗಟ್ಟಿಯಾಗಿದ್ದಳು. ಮೇಲ್ಜಾತಿ ಹುಡುಗಿ ತನ್ನ ಮನೆ ಬಿಟ್ಟು, ತಮ್ಮ ಮನೆ ತುಂಬಿಕೊಂಡಿದ್ದಾಳೆಂದು ಪ್ರಣಯ್ ತಂದೆತಾಯಿಯೂ ಸಹ ಪ್ರೀತಿಯಿಂದ ಸಲಹುತ್ತಿದ್ದರು. ಹೀಗೆ ಎಲ್ಲಾ ರೀತಿಯ ಪ್ರಯತ್ನ ಮಾಡಿದಾಗಲೂ ಸಹ ಮಗಳು ಮನೆಗೆ ಬರುವುದಿಲ್ಲವೆಂದು ಖಡಾಖಂಡಿತವಾಗಿ ಹೇಳಿದಾಗ ಮಾರುತಿರಾವ್‌ಗೆ ಬಹಳ ನಿರಾಶೆಯಾಗಿತ್ತು.

ಮಾರುತಿರಾವ್

ಪ್ರಣಯ್ ಮತ್ತು ಅಮೃತವರ್ಷಿಣಿಯ ಮದುವೆಯನ್ನು ಗಟ್ಟಿಯಾಗಿ ವಿರೋಧಿಸಿದ್ದ ಮಾರುತಿರಾವ್ ಮಗಳನ್ನು ಮನವೊಲಿಸಲು ಸೋತಾಗ ಅತ್ಯಂತ ಅಮಾನವೀಯ ಆಲೋಚನೆ ಮಾಡಿದ್ದನು. ತನ್ನ ಮಗಳ ಗಂಡ ಪ್ರಣಯ್‌ನನ್ನು ಕೊಲ್ಲಿಸಿಬಿಡಲು ಒಂದು ಕೋಟಿಗೆ ಸುಫಾರಿ ನೀಡಿದ್ದನು. ಮುಂಗಡ ಹಣವನ್ನಾಗಿ 15 ಲಕ್ಷ ರೂಪಾಯಿಗಳನ್ನೂ ಪಾವತಿಸಿದ್ದನು. ಪ್ರಣಯನನ್ನು ಕೊಲ್ಲಲು ಮುಂದಾದ ಸುಫಾರಿ ಕಿಲ್ಲರ್ ಬಿಹಾರದ ಸುಭಾಷ್ ಕುಮಾರ್ ಶರ್ಮಾ. ಹೀಗೆ ಮಾರುತಿರಾವ್ ಒಳಗಿದ್ದ ’ಜಾತಿ ಭಯೋತ್ಪಾದಕ’ ಧುತ್ತನೆ ಎಚ್ಚರವಾಗಿದ್ದನು. ಒಂದು ಕೋಟಿ ಹೋದರೂ ಪರವಾಗಿಲ್ಲ; ದಲಿತನನ್ನು ಮದುವೆಯಾಗಿ ತನ್ನ ಸನಾತನ ಮಾನ ಕಳೆದಳೆಂದು ಭಾವಿಸಿ ಕೊಲೆಗೆ ಸಂಚು ರೂಪಿಸಿದನು.

ಸುಮಾರು ನಾಲ್ಕು ಬಾರಿ ಪ್ರಣಯನನ್ನು ಕೊಲ್ಲಲು ಯತ್ನಿಸಿದ ಭಯೋತ್ಪಾದಕ ’ಶರ್ಮಾ’ ಪದೇಪದೇ ವಿಫಲನಾಗಿದ್ದನು. ಮಾರುತಿರಾವ್ ಅದೆಷ್ಟು ಚಾಲಾಕಿ ನಯವಂಚಕನೆಂದರೆ ತನ್ನ ಹೆಂಡತಿ ಹಾಗೂ ಮಗಳು ಅಮೃತವರ್ಷಿಣಿ ಪರಸ್ಪರ ದೂರವಾಣಿ ಕರೆ ಮಾಡಿ ಮಾತನಾಡಿಕೊಂಡು ಚೆನ್ನಾಗಿರಲು ಅನುವು ಮಾಡಿಕೊಟ್ಟು, ಪ್ರಣಯ್ ಚಲನವಲನಗಳನ್ನು ತಿಳಿದುಕೊಳ್ಳುತ್ತಿದ್ದನು. ಸೆಪ್ಟೆಂಬರ್ 13ರಂದು ಎಂದಿನಂತೆ ಕರೆ ಮಾಡಿದ್ದ ಅಮೃತಳ ತಾಯಿ ಮಗಳೊಂದಿಗೆ ಮಾತಾಡಿದ್ದರು. ಹೀಗೆ ಮಾತಾಡುವಾಗ ಸ್ವತಃ ಅಮೃತ ನಾಳೆ (ಸೆಪ್ಟೆಂಬರ್ 14) ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಹೋಗುತ್ತಿದ್ದೇವೆ ಎಂದು ತಿಳಿಸಿದ್ದಳು. ಇದನ್ನು ಅರಿತ ಮಾರುತಿರಾವ್ ಸುಫಾರಿ ಕಿಲ್ಲರ್ ಶರ್ಮಾನಿಗೆ ವಿಷಯ ತಿಳಿಸಿದ್ದನು. ಸೆಪ್ಟೆಂಬರ್ 14, 2018ರಂದು ಮಿರ್ಯಾಲಗುಡದ ಆಸ್ಪತ್ರೆಗೆ 5 ತಿಂಗಳ ಗರ್ಭಿಣಿಯಾಗಿದ್ದ ಹೆಂಡತಿ ಅಮೃತಳನ್ನು ನಿಯಮಿತ ತಪಾಸಣೆಗೆ ಕರೆದುಕೊಂಡು ಬಂದಿದ್ದ ಪ್ರಣಯ್ ಮತ್ತು ಆತನ ತಾಯಿಯನ್ನು ಹಿಂಬಾಲಿಸಿಕೊಂಡು ಬಂದಿದ್ದ ಶರ್ಮಾ, ಅವರು ಆಸ್ಪತ್ರೆಯಿಂದ ಹೊರಬರುತ್ತಿದ್ದಂತೆಯೇ ಪ್ರಣಯ್ ಮೇಲೆರಗಿ ಕಬ್ಬಿಣದ ಸಲಾಕೆಯಿಂದ ಮನಸೋಇಚ್ಛೆ ತಲೆಗೆ ಥಳಿಸಿ ಕೊಂದೇಬಿಟ್ಟನು. ಶರ್ಮಾ ಎಂಬ ಭಯೋತ್ಪಾದಕ ತನ್ನ ಸನಾತನ ಪರಂಪರೆಯ ರಕ್ಷಣೆ ಮಾಡಲು ಐದನೇ ಬಾರಿಗೆ ಯಶಸ್ವಿಯಾಗಿ ಒಂದು ಅಮಾಯಕ ಜೀವ ತೆಗೆದಿದ್ದನು. ಅದೂ ಸಹ ದಲಿತನೆಂಬ ಕಾರಣಕ್ಕೆ! ಈ ಇಡೀ ಘಟನೆ ಆಸ್ಪತ್ರೆಯ ಸಿ.ಸಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿ ಇಡೀ ಪ್ರಪಂಚವೇ ನೋಡಿತು. ಆ ಭೀಕರ ಭಯೋತ್ಪಾದಕ ಕೃತ್ಯ ಕಂಡು ಭಾರತದ ’ಮನುಷ್ಯರು’ ಅಕ್ಷರಶಃ ಬೆಚ್ಚಿಬಿದ್ದರು.

ಇದನ್ನೂ ಓದಿ: ಇನ್ನೂ ನಡೆಯುತ್ತಿದೆ ಜಾತ್ಯಹಂಕಾರಗಳ “ರುದ್ರ ನರ್ತನ”

ಈ ಕೊಲೆಯಾದ ಸಮಯದಲ್ಲಿ ಮಾರುತಿರಾವ್ ತನ್ನ ಮೇಲೆ ಅನುಮಾನ ಬಾರದಿರಲೆಂದು ’ದೃಶ್ಯಂ’ ಸಿನೆಮಾ ಮಾದರಿಯಲ್ಲಿ ಅಲಿಬಿ (ಅಪರಾಧ ನಡೆದ ಸಮಯದಲ್ಲಿ ಬೇರೆ ಜಾಗದಲ್ಲಿರುವುದಕ್ಕೆ ಸಾಕ್ಷಿ) ಸೃಷ್ಟಿಮಾಡುವ ಕಾರಣಕ್ಕಾಗಿ, ಗಣೇಶ ಚತುರ್ಥಿಗೆ ಆಹ್ವಾನ ಮಾಡುವ ನೆಪದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ್ದನು. ದಾರಿಯಲ್ಲಿ ಬೇಕಂತಲೇ ಕಾರು ನಿಲ್ಲಿಸಿ ರಾಜಕಾರಣಿಯೊಬ್ಬರನ್ನು ಮಾತನಾಡಿಸಿದ್ದನು.

ಪ್ರಣಯ್ ಕೊಲೆಯಾದ ದಿನವೇ ಅಮೃತವರ್ಷಿಣಿ ತನ್ನ ತಂದೆಯ ವಿರುದ್ಧ ಈ ಮೇಲಿನ ಮಾತುಗಳನ್ನು ಆಡಿದ್ದಳು. ತನ್ನ ಗಂಡ ಕೊನೆಯುಸಿರೆಳೆಯುವುದನ್ನು ಸ್ವತಃ ಕಣ್ಣಿಂದ ನೋಡಿದ ಅಮೃತ ಪೊಲೀಸರ ಮುಂದೆ ತನ್ನ ತಂದೆಯೇ ಕೊಲೆಗಾರ ಎಂದು ಹೇಳಿದ್ದಳು. ಇದರ ಆಧಾರದಲ್ಲಿ ಮಾರುತಿರಾವ್‌ನನ್ನು ಬಂದಿಸಲಾಯಿತಾದರೂ, ಪೊಲೀಸರಿಗೂ ಸಹ ಈತನ ಮೇಲೆ ಅನುಮಾನ ಬರದಂತೆ ನೋಡಿಕೊಳ್ಳಲಾಗಿತ್ತು. ಕೊಲೆಗಾರ ಶರ್ಮಾನನ್ನು ಸಿಸಿ ಕ್ಯಾಮೆರಾ ಫುಟೇಜ್ ಸಹಾಯದಿಂದ ಬಿಹಾರದಲ್ಲಿ ಪತ್ತೆ ಹಚ್ಚಿದಾಗಲೇ ಮಾರುತಿರಾವ್ ನಿಜ ಬಣ್ಣ ಬಯಲಾಗಿದ್ದು. ಈ ಮಾರುತಿರಾವ್ ತನ್ನ ಹೆಂಡತಿಯ ಮುಂದೆಯೂ ಸಹ ತನ್ನಲ್ಲಿನ ವಿಷವನ್ನು ಕಕ್ಕಿಕೊಂಡಿರಲಿಲ್ಲ. ತನ್ನೆಲ್ಲಾ ಕುಟಿಲ ಯೋಜನೆಯನ್ನು ತನ್ನ ತಮ್ಮ ಶ್ರವಣನ ಬಳಿ ಮಾತ್ರ ಹೇಳಿಕೊಂಡಿದ್ದ. ಅವರಿಬ್ಬರೂ ಸೇರಿ ಇಷ್ಟೆಲ್ಲ ಮಾಡಿದ್ದರು.

ಪ್ರಣಯ್ ಹೋದ ಮೇಲೆ ಧೃತಿಗೆಡದ ಅಮೃತ ಪ್ರಣಯ್ ಕುಟುಂಬದೊಂದಿಗೆ ಇದ್ದು ಅವರಿಗೆ ಧೈರ್ಯ ತುಂಬಿದಳು. ಸರ್ಕಾರ 4 ಲಕ್ಷ ಪರಿಹಾರ ಮತ್ತು ಸರ್ಕಾರಿ ನೌಕರಿ ನೀಡಲು ಬಂದಾಗ ಖಡಾಖಂಡಿತವಾಗಿ ಅದನ್ನು ನಿರಾಕರಿಸಿ ’ನನ್ನ ತಂದೆಯನ್ನು ನೇಣಿಗೇರಿಸಿ’ ಎಂದು ಅಂಗಲಾಚಿಕೊಂಡಿದ್ದಳು.

ಪ್ರಣಯ್ ಹೋದ ನಾಲ್ಕು ತಿಂಗಳಿಗೆ ಮುದ್ದಾದ ಮಗುವಿಗೆ ಜನ್ಮ ನೀಡಿದಳು. ಆ ಮಗುವಿನ ಹೆಸರು ನಿಹಾನ್ ಪ್ರಣಯ್.

ಈ ಕೊಲೆ ಮಾಡಿದ ಹಾಗೂ ಮಾಡಲು ಕೈವಾಡ ರೂಪಿಸಿದ ಏಳು ಜನರನ್ನು ಬಂಧಿಸಲಾಯಿತು. ಮುಖ್ಯ ಆರೋಪಿ ಮಾರುತಿ ರಾವ್ ಹಾಗೂ ಶ್ರವಣ. ಹಲವು ತಿಂಗಳುಗಳ ಕಾಲ ಜೈಲಿನಲ್ಲಿದ್ದ ಮಾರುತಿರಾವ್ ಜಾಮೀನಿನ ಮೇಲೆ ಹೊರಬಂದನು. ಬಂದ ದಿನವೇ ವೈಶ್ಯ ಸಂಘದ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡನು. ಬಹುಶಃ ಜಾತಿಪ್ರತಿಷ್ಠೆಯನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲವಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡಿರಬಹುದು. ಪ್ರಾಣ ತೆಗೆದಾದರೂ ಸರಿ, ಪ್ರಾಣ ಕೊಟ್ಟಾದರೂ ಸರಿ, ಜಾತಿ ಪ್ರತಿಷ್ಠೆಯನ್ನು ಉಳಿಸಿಕೊಳ್ಳುತ್ತೇನೆ ಎಂದು ಆಲೋಚಿಸುವವರೆಲ್ಲರೂ ಭಯೋತ್ಪಾದಕರೇ ಆಗಿದ್ದಾರೆ. ಅಂತಹ ಭಯೋತ್ಪಾದಕರಲ್ಲಿ ಈ ಮಾರುತಿರಾವ್ ಸಹ ಒಬ್ಬ. ಈತ ಸತ್ತ ದಿನ ಸೋಷಿಯಲ್ ಮೀಡಿಯಾದಲ್ಲಿ ಆತನ ಪರವಾಗಿ ದುಃಖ ವ್ಯಕ್ತಪಡಿಸುತ್ತ ಅಮೃತಳನ್ನು ಹೀಗಳೆದವರೆಲ್ಲರೂ ಜಾತಿವಾದಿ ಭಯೋತ್ಪಾದಕರೇ ಆಗಿದ್ದಾರೆ. ಇಂತಹವರಿಗೆ ಆದಷ್ಟು ಬೇಗ ಬುದ್ಧಿ ಕಲಿಸುವ ಕಾನೂನು ಜಾರಿಗೊಳ್ಳಬೇಕಿದೆ. ಅದಕ್ಕಿಂತಲೂ ಹೆಚ್ಚಾಗಿ ಮರ್ಯಾದೆಗೇಡು ಹತ್ಯೆಗಳ ವಿರುದ್ಧ ಆಂದೋಲನ ರೂಪುಗೊಳ್ಳಬೇಕಿದೆ.

ಇದನ್ನೂ ಓದಿ: ಪ್ರೀತಿ ಕೊಂದ ಜಾತಿ… ಜಾತಿಯನ್ನು ಕೊಲ್ಲುವುದು ಯಾವಾಗ?

ಇಂತಹ ಮರ್ಯಾದೆಗೇಡು ಹತ್ಯೆಗಳನ್ನು ತಡೆಗಟ್ಟಲು ರಾಜಸ್ಥಾನ ಸರ್ಕಾರ 2019ರಲ್ಲಿ ಒಂದು ಕಾಯ್ದೆಯನ್ನು ಎರಡೂ ಸದನಗಳಲ್ಲಿ ಪಾಸು ಮಾಡಿದೆ. ಆದರೆ ಇದಕ್ಕೆ ರಾಷ್ಟ್ರಪತಿಯವರ ಅಂಕಿತವಿನ್ನೂ ಬಿದ್ದಿಲ್ಲ.

ಭಾರತದ ದತ್ತಾಂಶ ಸಂಸ್ಥೆಯು 2017ರಲ್ಲಿ ಅಧ್ಯಯನ ಮಾಡಿರುವ ಪ್ರಕಾರ ಅಂತರ್ಜಾತಿ ವಿವಾಹ ಗ್ರಾಮಗಳಲ್ಲಿ ಶೇ.5.2 ಇದ್ದರೆ ನಗರಗಳಲ್ಲಿ ಶೇ.4.9 ರಷ್ಟಿದೆ. ಭಾರತದಲ್ಲಿ ದಿನದಿಂದ ದಿನಕ್ಕೆ ಮರ್ಯಾದೆಗೇಡು ಹತ್ಯೆಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕೊಂದು ಪರಿಹಾರ ಅತಿ ಜರೂರಾಗಿ ಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...