Homeಚಳವಳಿದಮನಿಸುವವರನ್ನು ಮನೆಗೆ ಕಳಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಲಿ: ಡಾ. ದರ್ಶನ್‌ ಪಾಲ್‌

ದಮನಿಸುವವರನ್ನು ಮನೆಗೆ ಕಳಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಲಿ: ಡಾ. ದರ್ಶನ್‌ ಪಾಲ್‌

- Advertisement -
- Advertisement -

ಪ್ರಶ್ನೆ ಮಾಡುವವರನ್ನು ದಮನಿಸುವ ಅಧಿಕಾರದಲ್ಲಿರುವವರನ್ನು ಮನೆಗೆ ಕಳಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಲಿ ಎಂದು ರೈತ ಹೋರಾಟಗಾರ ಡಾ. ದರ್ಶನ್‌ ಪಾಲ್‌ ಕರೆ ನೀಡಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಮಸ್ತ ಜನ ಚಳುವಳಿಗಳ ಸಂಯುಕ್ತ ದನಿಯಾಗಿ ಜನಾಗ್ರಹ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, “ಪ್ರಧಾನಿ ನರೇಂದ್ರ ಮೋದಿ,‌ ಅಮಿತ್‌ ಷಾ, ಅಂಬಾನಿ, ಅದಾನಿಗಳ ಅನಾಚಾರಗಳ ವಿರುದ್ಧ ದನಿ ಎತ್ತಿದ ಪತ್ರಕರ್ತರು, ಅಧಿಕಾರಿಗಳು, ವಕೀಲರು, ಮಾನವ‌ ಹಕ್ಕುಗಳ ಹೋರಾಟಗಾರರು, ರೈತರು, ಸಾಮಾಜಿಕ ಕಾರ್ಯಕರ್ತರು ಜೈಲಿನಲ್ಲಿದ್ದಾರೆ. ಇಂತಹ ಫ್ಯಾಸಿಸ್ಟ್ ಮನಸ್ಥಿತಿಯ ದುರಂಹಕಾರಿಗಳ ವಿರುದ್ಧ ಎಲ್ಲ ಜನವರ್ಗದ ಪ್ರವಾಹವನ್ನು ಸೃಷ್ಟಿಸಿ ಪಾಠ ಕಲಿಸಬೇಕು” ಎಂದರು.

“ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ನಡೆದ ದೆಹಲಿ ಹೋರಾಟವನ್ನು ಮಣಿಸಲು ಗೋಲಿಬಾರ್‌ನಿಂದ ಹಿಡಿದು, ಲಖೀಂಪುರ ಖೇರಿಯಲ್ಲಿ ರೈತರ ಹತ್ಯೆ ತನಕ ಹಲವು ರೀತಿಯಲ್ಲಿ ದಬ್ಬಾಳಿಕೆ ನಡೆಸಿದರು. ಸರ್ಕಾರದ‌ ವಿರುದ್ಧ ನಡೆದ ಐತಿಹಾಸಿಕ ಚಳವಳಿಯಲ್ಲಿ ಹೋರಾಡಿ ರಕ್ತ ಸುರಿಸಿ 740 ರೈತರು ಹುತಾತ್ಮರಾದರು. ಆ ಮೂಲಕ ನೀವು ಮನಸ್ಸಿಗೆ ಬಂದಂತೆ ದೇಶವನ್ನು ಆಳ್ವಿಕೆ ಮಾಡಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ‌ ನೇತೃತ್ವದ ಕೇಂದ್ರ ಸರ್ಕಾರಕ್ಕೆ ದೇಶದ ರೈತರು, ಕಾರ್ಮಿಕರು, ಜನಸಾಮಾನ್ಯರು ಸಂದೇಶ ಕೊಟ್ಟರು” ಎಂದು ದರ್ಶನ್‌ ಪಾಲ್‌ ಐತಿಹಾಸಿಕ ಚಳವಳಿಯನ್ನು ಸ್ಮರಿಸಿದರು.

ಜನಾಂದೋಲನಗಳಿಂದಲೇ ಜನರ ಜಾಗೃತಿ ಮತ್ತು ಶಕ್ತಿ ಬೆಳೆಯಲು ಸಾಧ್ಯ. ಜನಾಂದೋಲನಗಳನ್ನು ಬೆಳೆಸುವ ಮೂಲಕ 2023 ರಲ್ಲಿ ಕರ್ನಾಟಕದಲ್ಲಿ, 2024ರಲ್ಲಿ ಕೇಂದ್ರದಲ್ಲೂ ಜನವಿರೋಧಿ ಹಾಗೂ ಫ್ಯಾಸಿವಾದಿ ಬಿಜೆಪಿಗೆ ತಕ್ಕ ಪಾಠ ಕಲಿಸೋಣ ಎಂದರು.

ದಲಿತ ಮುಖಂಡ ಮಾವಳ್ಳಿ ಶಂಕರ್ ಮಾತನಾಡಿ, “ಸಂಘಪರಿವಾರದ ಸರ್ಕಾರ ದೇಶವನ್ನು ಅಧೋಗತಿಗೆ ತೆಗೆದುಕೊಂಡು ಹೋಗುತ್ತಿದೆ. ಗೋಹತ್ಯೆ ನಿಷೇಧ ಕಾಯ್ದೆ ಹಿಂತೆಗೆದುಕೊಳ್ಳದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು” ಎಂದರು.

ಕರಾಳ ಕೃಷಿ ಕಾಯ್ದೆಗಳನ್ನು ಮೋದಿ ಹಿಂಪಡೆದರೂ, ರಾಜ್ಯದಲ್ಲಿ ಯಡಿಯೂರಪ್ಪ ಸಿಎಂ ಆಗದ್ದಾಗ ತಂದ ಕಾಯ್ದೆಗಳನ್ನು ಇದುವರೆಗೂ ಹಿಂಪಡೆದಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಚಾಮರಸ ಮಾಲಿಪಾಟೀಲ್ ಕಿಡಿಕಾರಿದರು.

ಇದನ್ನೂ ಓದಿ; ಗೌರಿ ಕೊಲೆಯೂ, ಸಿದ್ದರಾಮಯ್ಯನವರನ್ನು ಹೊಡೆದು ಹಾಕಬೇಕು ಎಂಬ ಕರೆಯೂ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...