Homeಕರ್ನಾಟಕ'ಅನರ್ಹಗೊಳ್ಳಬೇಕಿದ್ದ ವಿವಾದಾತ್ಮಕ ಅಂಬೇಡ್ಕರ್ ಸ್ಕಿಟ್ ಮೊದಲ ಸ್ಥಾನ ಪಡೆದಿದೆ!': ಮೂಲಗಳ ಮಾಹಿತಿ

‘ಅನರ್ಹಗೊಳ್ಳಬೇಕಿದ್ದ ವಿವಾದಾತ್ಮಕ ಅಂಬೇಡ್ಕರ್ ಸ್ಕಿಟ್ ಮೊದಲ ಸ್ಥಾನ ಪಡೆದಿದೆ!’: ಮೂಲಗಳ ಮಾಹಿತಿ

- Advertisement -
- Advertisement -

ಮೌಂಟ್ ಕಾರ್ಮೆಲ್ ಕಾಲೇಜ್ (ಎಂಸಿಸಿ) ಫೆಸ್ಟ್ ಸಮಯದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಮತ್ತು ದಲಿತ ಸಮುದಾಯವನ್ನು ಅವಹೇಳನಕಾರಿಯಾಗಿ ಚಿತ್ರಿಸಲಾದ ವಿವಾದಾತ್ಮಕ ಸ್ಕಿಟ್‌ ಪ್ರದರ್ಶಿಸಲಾಯಿತು. ಇಂತಹ ವಿವಾದಾತ್ಮಕ ಸ್ಕಿಟ್ ಪ್ರದರ್ಶಿಸಿದ ಜೈನ್ ವಿಶ್ವವಿದ್ಯಾಲಯದ ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ಸ್ಟಡೀಸ್‌(ಸಿಎಂಎಸ್‌)ನ ಡೆಲ್ರಾಯ್ಸ್ ಬಾಯ್ಸ್‌ಗೆ ಪ್ರಥಮ ಬಹುಮಾನ ನೀಡಲಾಗಿದೆ ಎಂದು ಎಂಸಿಸಿ ಮೂಲಗಳು ಬಹಿರಂಗಪಡಿಸಿವೆ.

ಎಂಸಿಸಿಯ ವಿದ್ಯಾರ್ಥಿ ಸಂಘಟನೆಯು 25 ವರ್ಷದೊಳಗಿನವರಿಗಾಗಿ ಮ್ಯಾಡ್‌ಆಡ್ಸ್ ಸ್ಪರ್ಧೆಯನ್ನು ಆಯೋಜಿಸಿದ್ದರು. ಇದರಲ್ಲಿ ಜೈನ್ ವಿಶ್ವವಿದ್ಯಾಲಯದ ಸಿಎಂಎಸ್‌ನ ಥಿಯೇಟರ್ ಗ್ರೂಪ್ ಡೆಲ್ರಾಯ್ಸ್ ಬಾಯ್ಸ್ ಸ್ಕಿಟ್ ಪ್ರದರ್ಶಿಸಿದ್ದರು. ವಾಸ್ತವವಾಗಿ ಈ ಸ್ಕಿಟ್‌ನ್ನು ಅನರ್ಹಗೊಳಿಸಬೇಕಿತ್ತು ಆದರೆ ಇದೇ ಸ್ಕಿಟ್‌ಗೆ ಮೊದಲ ಬಹುಮಾನ ನೀಡಲಾಗಿದೆ ಎಂದು ಮೂಲಗಳು ಬಹಿರಂಗಪಡಿಸಿವೆ. ”ಈ ಸ್ಕಿಟ್ ಪ್ರದರ್ಶನದ ಸಮಯದಲ್ಲಿ, ಕೆಲವು ಪ್ರೇಕ್ಷಕರಿಂದ ಆಕ್ಷೇಪ ವ್ಯಕ್ತವಾದಾಗ, ತೀರ್ಪುಗಾರರು ‘ಆಕ್ಟ್ ಅಸಭ್ಯವಲ್ಲ’ ಎಂದು ಹೇಳುವ ಮೂಲಕ ಅದನ್ನು ತಡೆಯುವ ಪ್ರಯತ್ನ ಮಾಡಲಿಲ್ಲ” ಎಂದು ಮೂಲಗಳು ತಿಳಿಸಿವೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

”ಇದಕ್ಕೂ ಮೊದಲು ಈ ಸ್ಕಿಟ್‌ನ್ನು ಇತರ ಎರಡು ಫೆಸ್ಟ್‌ಗಳಲ್ಲಿ ಪ್ರದರ್ಶಿಸಲಾಗಿದೆ ಮತ್ತು ಇದು ಈಗಲೇ ತಯಾರಿಸಿದ ಸ್ಕ್ರಿಪ್ಟ್ ಅಲ್ಲ” ಎಂದು ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ಸ್ಟಡೀಸ್‌ನ ಅಧಿಕಾರಿಯೊಬ್ಬರು ಖಚಿತಪಡಿಸಿದ್ದರು.

ಎಂಸಿಸಿಯ ವಿದ್ಯಾರ್ಥಿ ಸಂಘಟನೆ ಪ್ರಕಾರ, ಈ ಮ್ಯಾಡ್‌ಆಡ್ಸ್ ಸ್ಪರ್ಧೆಯ ತೀರ್ಪುಗಾರರಾಗಿ ಸೇಂಟ್ ಜೋಸೆಫ್ ಕಾಲೇಜ್ ಆಫ್ ಕಾಮರ್ಸ್ (ಎಸ್‌ಜೆಸಿಸಿ) ಕೌನ್ಸಿಲ್‌ನ ಮಾಜಿ ಉಪಾಧ್ಯಕ್ಷ ರೆಬೆಕಾ ಫ್ಲಾರೆನ್ಸ್, ಬಾಲ್ಡ್‌ವಿನ್ಸ್ ಮೆಥೋಡಿಸ್ಟ್ ಕಾಲೇಜಿನ ಮಾಜಿ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ನಿಸ್ ಜಿಯೋ ಮತ್ತು ಹರ್ಷಿಲ್ ಜೆ ಶಾ ಇದ್ದರು ಎಂದು ಹೇಳಲಾಗಿದೆ.

ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿ ಸಂಘಟನೆಯು ಈ ಸ್ಕಿಟ್‌ನ ಪ್ರದರ್ಶಕರನ್ನು ಅನರ್ಹಗೊಳಿಸಲು ತೀರ್ಪುಗಾರರನ್ನು ಕೇಳಿಕೊಂಡಿದ್ದಾರೆ. ಆದರೆ ನ್ಯಾಯಾಧೀಶರು ಅದನ್ನು ‘ಡಾರ್ಕ್ ಹ್ಯೂಮರ್’ (ಇದು ಅತ್ಯಂತ ಹಾಸ್ಯಮಯವಾದುದು) ಎಂದು ಲೇಬಲ್ ಮಾಡಿದರು ಮತ್ತು ಸ್ಕಿಟ್ ಚೆನ್ನಾಗಿದೆ ಎಂದು ಹೇಳಿದರು. ಅದಾದಮೇಲೂ ನಮ್ಮ ಸಂಘಟನೆಯ ಕೆಲವು ಸದಸ್ಯರು ಸ್ಕಿಟ್ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಸಂಘವನ್ನು ತೊರೆದರು” ಎಂದು ಎಂಸಿಸಿಯ ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

ಸ್ಕಿಟ್‌ನ ಪ್ರದರ್ಶನದ ಬಳಿಕ ಅದರ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬಳಿಕ ಸಾಕಷ್ಟು ಜನರು ಜೈನ್ ವಿಶ್ವವಿದ್ಯಾಲಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೆಲವು ಸಂಘಟನೆಗಳು ಜೈನ್ ವಿವಿ ಬ್ಯಾನ್ ಮಾಡಬೇಕು ಎಂದು ಹೋರಾಟಗಳನ್ನು ಮಾಡಿದರು. ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ದಕ್ಷಿಣ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಕೆ.ಎನ್.ಮಧುಸೂದನ ಅವರು ಪೊಲೀಸರಿಗೆ ದೂರು ನೀಡಿದ್ದರು.

ಇದನ್ನೂ ಓದಿ: ಅಂಬೇಡ್ಕರ್‍‌ಗೆ ಅವಮಾನ: ಜೈನ್ ವಿವಿ ಮಾನ್ಯತೆ ರದ್ದುಪಡಿಸಲು ವಿಪಕ್ಷಗಳ ಆಗ್ರಹ

ದೂರಿನಲ್ಲಿ ಏನಿದೆ?

ಜೈನ್‌ ವಿಶ್ವವಿದ್ಯಾನಿಲಯದ ಕಾಲೇಜು ಫೆಸ್ಟ್‌ನಲ್ಲಿ ವಿದ್ಯಾರ್ಥಿಗಳು ಆ ದಿನ ನೀಡಿದ  ಸ್ಕಿಟ್‌ನಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಮತ್ತು ಮೀಸಲಾತಿಯ ಕುರಿತು ಅವಹೇಳನ ಮಾಡಲಾಗಿದೆ. @sunilhc ಎಂಬ ಟ್ವಿಟರ್ ಖಾತೆಯ ಮೂಲಕ ವಿಡಿಯೊವನ್ನು ಟ್ವೀಟ್ ಮಾಡಲಾಗಿದ್ದು ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಕಮಿಷನರ್‌, ಡಿಜಿಪಿ ಮತ್ತು ಇತರೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ.

ಸದರಿ ಟ್ವೀಟ್‌ನಲ್ಲಿ ಮಾಡಲಾದ ವಿಡಿಯೊದಲ್ಲಿ ಮೇಲ್ನೋಟಕ್ಕೆ ಆಪಾದನೆಗಳು ಸರಿಯೆಂದು ಕಂಡು ಬಂದಿದೆ. ಸಾರ್ವಜನಿಕ ಸ್ಥಳದಲ್ಲಿ, ಸ್ಕಿಟ್‌ ಮೂಲಕ ಜಾತಿ ನಿಂದನೆ ಮಾಡಿರುವುದರಿಂದ ಇದನ್ನು ನೋಡಿದಲ್ಲಿ ಸಾಮಾಜಿಕ ಸಾಮರಸ್ಯ ಹಾಳಾಗುತ್ತದೆ. ಇದರಿಂದ ಜಾತಿ ಜಾತಿಗಳ ವಿರುದ್ಧ ವಿಷಬೀಜ ಬಿತ್ತಿದಂತಾಗಿರುತ್ತದೆ. ಈ ಹಿನ್ನೆಲೆಯಲ್ಲಿ- ಕಾರ್ಯಕ್ರಮದ ಉಸ್ತುವಾರಿಗಳು ಆದ ಜೈನ್ ವಿಶ್ವವಿದ್ಯಾಲಯದ ಪ್ರಾಂಶುಪಾಲರು (A1), ಡೀನ್ (A2), ಕಾರ್ಯಕ್ರಮದ ಆಯೋಜಕರು (A3), ಸ್ಕಿಟ್‌ನಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು (A4), ಸ್ಕಿಟ್‌ ಬರೆದ ಬರಹಗಾರರು (A5), ಇತರರರು (A6) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಅವಹೇಳನ ಮಾಡಿರುವುದು ಕಂಡುಬಂದಿದೆ. ಇದರಿಂದಾಗಿ ಸದರಿ ಮೇಲೆ ಹೆಸರಿಸಲಾದ ಎಲ್ಲರ ವಿರುದ್ಧ ದೌರ್ಜನ್ಯ ತಡೆ (ಪ್ರತಿಬಂಧಕ) ಕಾಯ್ದೆ 1989ರ ನಿಯಮ 3ರ ಉಪ ನಿಯಮಗಳಡಿ ಹಾಗೂ ಐ.ಪಿ.ಸಿ ಕಾಯ್ದೆಯಡಿ ದೂರು ದಾಖಲಿಸಿಕೊಳ್ಳಲಾಯಿತು.

ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ನೀಡಿದ ದೂರಿನ ಅನ್ವಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್‌ 3(1)(r), 3(1)(s), 3(1)(v) ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 153A, 149, 295A ಅಡಿಯಲ್ಲಿ ನಾಟಕದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು ಬಂಧಿಸಿರುವುದಾಗಿ ಬೆಂಗಳೂರಿನ ಸಿದ್ದಾಪುರ ಪೊಲೀಸರು ತಿಳಿಸಿದ್ದಾರೆ.

ಸುಜಲ್, ಗೌರವ್ ಪವಾರ್, ನೈಮಾ ನಾಗ್ರಿಯಾ, ಪ್ರಣವ್ ಪಲ್ಲಿಯಿಲ್, ರಿಷಬ್ ಜೈನ್, ಸ್ಮೃತಿ ಆರ್.ಬಿ, ಆಸಿಶ್ ಅಗರ್ವಾಲ್ ಬಂಧಿತ ವಿದ್ಯಾರ್ಥಿಗಳಾಗಿದ್ದಾರೆ. ಇವರೆಲ್ಲರೂ ಬಿಬಿಎ 5 ನೇ ಸೆಮಿಸ್ಟರ್ ನಲ್ಲಿ ಓದುತ್ತಿದ್ದಾರೆ ಎನ್ನಲಾಗಿದೆ.

ಈ ಏಳು ಜನ ಸೇರಿ ಈ ಕಿರು ನಾಟಕ ಪ್ರದರ್ಶಿಸಿದ್ದಾರೆ. ಸೋಮವಾರ ಈ ಏಳು ವಿದ್ಯಾರ್ಥಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿಲಾಗಿದೆ. ವಿಚಾರಣೆ ಬಳಿಕ ಸತ್ಯಾಂಶ ತಿಳಿಯಲಿದೆ ಎಂದು ಸಿದ್ದಾಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...