Homeಕರ್ನಾಟಕಮಂಗಳೂರು: ಕೆಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಕಾಲು ಕಳೆದುಕೊಂಡ ಯುವಕ -ಡಿವೈಎಫ್‌ಐ ಆರೋಪ

ಮಂಗಳೂರು: ಕೆಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಕಾಲು ಕಳೆದುಕೊಂಡ ಯುವಕ -ಡಿವೈಎಫ್‌ಐ ಆರೋಪ

- Advertisement -
- Advertisement -

ಕೆಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರ ಅವಿವೇಕತನಕ್ಕೆ ಯುವಕನೊಬ್ಬ ತನ್ನ ಎಡಗಾಲು ಕಳೆದುಕೊಂಡಿದ್ದಾರೆ ಎಂಬ ಆರೋಪ ಉಳ್ಳಾಲದಲ್ಲಿ ಕೇಳಿಬಂದಿದೆ. ಆಸ್ಪತ್ರೆಯ ಆಡಳಿತ ಮಂಡಳಿಯು ಪರಿಹಾರವನ್ನೂ ನೀಡದೆ ಯುವಕನ ಬದುಕಿನಲ್ಲಿ ಆಟವಾಡುತ್ತಿದೆ ಎಂದು ಡಿವೈಎಫ್‌ಐ ಆರೋಪಿಸಿದೆ.

ಉಳ್ಳಾಲ ತಾಲೂಕು ಕುರ್ನಾಡು ಗ್ರಾಮದ ನೌಷಾದ್ ಎನ್ನುವ ಯುವಕ ದುಬೈನಲ್ಲಿ ಉದ್ಯೋಗದಲ್ಲಿದ್ದರು. 2021ರ‌ ನವೆಂಬರ್ ತಿಂಗಳಲ್ಲಿ ರಜೆಯಲ್ಲಿ ಊರಿಗೆ ಬಂದಿದ್ದ ನೌಶಾದ್‌ಗೆ ಸಣ್ಣದೊಂದು ಬೈಕ್ ಆಕ್ಸಿಡೆಂಟ್ ಆಗಿ ಕಾಲಿಗೆ ಪೆಟ್ಟಾಗಿತ್ತು.‌ ಈ ವೇಳೆ ಅವರು ಮಂಗಳೂರಿನ ದೇರಳಕಟ್ಟೆಯಲ್ಲಿರುವ ಕೆ.ಎಸ್.ಹೆಗಡೆ ಆಸ್ಪತ್ರೆಗೆ ದಾಖಲಾಗಿದ್ದರು. ಅಪಘಾತದಿಂದಾಗಿ ಅವರ ಕಾಲಿನಲ್ಲಿ ಯಾವುದೇ ಗಾಯ, ಮೂಳೆ ಮುರಿತಗಳಿಲ್ಲದೆ ತೀವ್ರ ನೋವು ಮಾತ್ರ ಇದ್ದುದರಿಂದ ಸ್ಕ್ಯಾನಿಂಗ್ ಸಹಿತ ಎಲ್ಲಾ ವಿಧದ ಪರೀಕ್ಷೆಗಳಿಗೆ ಅವರನ್ನು ಒಳಪಡಿಸಲಾಗಿತ್ತು. ಆ ‌ವೇಳೆ ವರದಿಗಳ ಆಧಾರದ ಮೇಲೆ ಯಾವುದೇ ಗಂಭೀರ ಸಮಸ್ಯೆಗಳಿಲ್ಲ ಎಂದು ಕೆಎಸ್ ಹೆಗಡೆ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು. ಜೊತೆಗೆ ಸಾಮಾನ್ಯ ಚಿಕಿತ್ಸೆ, ವಿಶ್ರಾಂತಿಗಾಗಿ ಒಂದು ದಿನ ಆಸ್ಪತ್ರೆಯಲ್ಲಿ ದಾಖಲಾಗುವಂತೆ ಸೂಚಿಸಿದ್ದರು. ಆದರೆ ಮರು ದಿನ ಕಾಲು ವಿಪರೀತ ನೋವು ಇರುವುದಾಗಿ ನೌಶಾದ್ ತಿಳಿಸಿದಾಗ ಮತ್ತೊಂದು ದಿನ ಆಸ್ಪತ್ರೆಯಲ್ಲೇ ಇದ್ದು ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ. ಹೀಗೆ ನೌಶಾದ್ ಅವರನ್ನು ಮೂರು ದಿನಗಳ ಕಾಲ ಆಸ್ಪತ್ರೆಯಲ್ಲಿ ಉಳಿಸಿಕೊಂಡು ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಲಾಗಿದೆ.

ಕೆಎಸ್ ಹೆಗ್ಡೆ ಆಸ್ಪತ್ರೆ ವೈದ್ಯರು ನೀಡಿದ ತಪ್ಪಾದ ಚಿಕಿತ್ಸೆಯಿಂದಾಗಿ ನೌಷದ್‌ನ ಕಾಲು ನಿರ್ಜೀವಗೊಂಡಿತು. ಇಷ್ಟಾದ ಮೇಲೆ ಕೆಎಸ್ ಹೆಗ್ಡೆ ಆಸ್ಪತ್ರೆ ವೈದ್ಯರು 38 ಸಾವಿರ ರೂ. ಬಿಲ್ ಪಡೆದು, ಹೆಚ್ಚಿನ ಚಿಕಿತ್ಸೆ ಎಂದು ಹೇಳಿ ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಕಳುಹಿಸಿಕೊಟ್ಟರು. ಅಲ್ಲಿ ನುರಿತ ವೈದ್ಯರು ಪರಿಶೀಲ‌‌ನೆ ನಡೆಸಿದ್ದು, ಕಾಲಿನ ಮೊಣಕಾಲಿನ ಬಳಿ ರಕ್ತನಾಳ ತುಂಡರಿಸಲ್ಪಟ್ಟಿರುವುದರಿಂದ ರಕ್ತ ಸಂಚಾರವಿಲ್ಲದೆ ಮೊಣಕಾಲಿನ ಕೆಳಗಡೆ ಕಾಲು ಗಂಭೀರವಾಗಿ ಘಾಸಿಗೊಂಡಿರುವುದಾಗಿ ತಿಳಿಸಿದ್ದರು ಎನ್ನಲಾಗಿದೆ.

ಅಪಘಾತ ನಡೆದ 24 ಗಂಟೆಯೊಳಗೆ ಸೂಕ್ತ ಚಿಕಿತ್ಸೆ ನೀಡಿದ್ದರೆ ಕಾಲುನೋವು ವಾಸಿಮಾಡಬಹುದಿತ್ತು. ಆದರೆ, ಮೂರು ದಿನ ಕಳೆದಿರುವುದರಿಂದ ಕಾಲು ಕತ್ತರಿಸಬೇಕಾದ ಅನಿವಾರ್ಯತೆಯ ಕುರಿತು ಫಾದರ್ ಮುಲ್ಲರ್ ‌ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಕಾಲು ಉಳಿಸುವ ಎಲ್ಲಾ ಪ್ರಯತ್ನಗಳು ವಿಫಲಗೊಂಡು ಕೊನೆಗೂ ನೌಶಾದ್‌ನ ಎಡಗಾಲನ್ನು ಕತ್ತರಿಸಿ ತೆಗೆಯಲಾಗಿದೆ. ಈ ಆಸ್ಪತ್ರೆಯಲ್ಲಿ 4 ಲಕ್ಷದ 50 ಸಾವಿರ ರೂ. ಬಿಲ್ ಮಾಡಲಾಯಿತು. ಈ ಎಲ್ಲ ಬಿಲ್‌ನ್ನು ನೌಷಾದ್ ಕುಟುಂಬವೇ ಭರಿಸಿದೆ.

ಇದನ್ನೂ ಓದಿ: ”ಅನರ್ಹಗೊಳ್ಳಬೇಕಿದ್ದ ವಿವಾದಾತ್ಮಕ ಅಂಬೇಡ್ಕರ್ ಸ್ಕಿಟ್ ಮೊದಲ ಸ್ಥಾನ ಪಡೆದಿದೆ!”: ಮೂಲಗಳ ಮಾಹಿತಿ

ಈ ನೌಷದ್ ಕುಟುಂಬದವರು ಸ್ಥಿತಿವಂತರೇನಲ್ಲ, ಅವರ ತಂದೆ ಆಟೋ ಚಾಲಕ, ಈಗ ಅವರ ದುಡಿಮೆಯಿಂದಲೇ ಕುಟುಂಬ ನಡೆಯಬೇಕು. ನೌಷದ್ ಕಾಲು ಕಳೆದುಕೊಂಡು ಮೂಲೆ ಸೇರಿದ್ದಾರೆ. ಕೆಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರ ಅಪರಾಧದಿಂದ ಕಾಲು ಕಳೆದುಕೊಂಡ ನೌಷದ್ ಪರ ಧ್ವನಿ ಎತ್ತಲು ಯಾವುದೇ ರಾಜಕಾರಣಿಗಳು, ರಾಜಕೀಯ ಪಕ್ಷ, ಜನಪ್ರತಿನಿಧಿಗಳು ಮುಂದೆ ಬರದಿರುವುದು ಖೇದಕರ ಸಂಗತಿಯಾಗಿದೆ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ.

ನೌಷಾದ್ ಈಗ ಒಂದಿಷ್ಟು ಸಹಜವಾಗಿ ಓಡಾಡಬೇಕಾದರೆ ಅವರಿಗೆ ಒಳ್ಳೆಯ ಗುಣಮಟ್ಟದ ಕೃತಕ ಕಾಲು ಜೋಡಿಸಬೇಕು. ಅದಕ್ಕೆ ಕನಿಷ್ಟ 10 ಲಕ್ಷ ರೂಪಾಯಿ ಖರ್ಚಾಗುತ್ತದೆ. ಮನೆಯ ಸ್ಥಿತಿಗತಿಯೂ ಸರಿ ಇರದ ಕಾರಣ ನೌಷಾದ್ ಹಾಗೂ ಕುಟುಂಬದವರು ಜಿಲ್ಲೆಯ ದೊಡ್ಡ ಆಸ್ಪತ್ರೆಯ ವಿರುದ್ದ ಹೋರಾಟಕ್ಕಿಳಿಯಲೂ ಸಾಧ್ಯವಿಲ್ಲ ಎಂದು ಅವರು ಪರಿಹಾರಕ್ಕಾಗಿ ಅಂಗಲಾಚಿದರು. ಆ ಕ್ಷಣಕ್ಕೆ ಆಸ್ಪತ್ರೆಯವರು ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಆದರೆ ಒಂದು ವರ್ಷ ಕಳೆದರೂ ಯಾವುದೇ ಪರಿಹಾರ ನೀಡದ ಹೆಗ್ಡೆ ಮೆಡಿಕಲ್ ಕಾಲೇಜು ಧಣಿಗಳು, ಅಲೆದಾಡಿಸಿ ಇದೀಗ ನಡು ಬೀದಿಯಲ್ಲಿ ಕೈ ಬಿಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೀಗ ಡಿವೈಎಫ್ಐ ಉಳ್ಳಾಲ ವಲಯ ಸಮಿತಿಯು ನೌಷಾದ್ ಪರವಾಗಿ ನಿಂತಿದ್ದು, ”ಜನ ನಾಯಕರು, ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳು ಬೆಂಬಲಕ್ಕೆ ಬರದಿದ್ದರೇನು.. ತುಳುನಾಡಿನ ಜನ ನೌಷಾದ್ ಪರ ಹೋರಾಟದಲ್ಲಿ ಜೊತೆ ನಿಲ್ಲುತ್ತಾರೆ. ಇದು ಕೇವಲ ನೌಷದ್ ಕುಟುಂಬದ ಹೋರಾಟವಲ್ಲ ಜಿಲ್ಲೆಯ ಜನರ ಹೋರಾಟವಾಗಿದೆ. ಸದ್ಯದಲ್ಲೇ ಹೋರಾಟದ ರೂಪುರೇಷೆ ಪ್ರಕಟಿಸಲಾಗುವುದು” ಎಂದು ಹೇಳಿದೆ.

ಇದನ್ನೂ ಓದಿ: ‘ಅನರ್ಹಗೊಳ್ಳಬೇಕಿದ್ದ ವಿವಾದಾತ್ಮಕ ಅಂಬೇಡ್ಕರ್ ಸ್ಕಿಟ್ ಮೊದಲ ಸ್ಥಾನ ಪಡೆದಿದೆ!’: ಮೂಲಗಳ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...