Homeಮುಖಪುಟಬಿಬಿಸಿ ಕಚೇರಿಗಳ ಮೇಲೆ ಐಟಿ ದಾಳಿ; ಮೂರು ದಿನಗಳ ಕಾಲ ದಾಖಲೆ ಪರಿಶೀಲನೆ ಬಳಿಕ ಮುಕ್ತಾಯ

ಬಿಬಿಸಿ ಕಚೇರಿಗಳ ಮೇಲೆ ಐಟಿ ದಾಳಿ; ಮೂರು ದಿನಗಳ ಕಾಲ ದಾಖಲೆ ಪರಿಶೀಲನೆ ಬಳಿಕ ಮುಕ್ತಾಯ

- Advertisement -
- Advertisement -

ಐಟಿ ಅಧಿಕಾರಿಗಳು, ಬಿಬಿಸಿಯ ದೆಹಲಿ ಮತ್ತು ಮುಂಬೈ ಕಚೇರಿಗಳ ಮೇಲೆ ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿದ್ದರು. ಈ ದಾಳಿಯನ್ನು ಅಧಿಕಾರಿಗಳು ಸಮೀಕ್ಷೆ ಎಂದು ಹೇಳಿಕೊಂಡಿದ್ದರು. ಮೂರು ದಿನಗಳ ಕಾಲ ಐಟಿ ಅಧಿಕಾರಿಗಳು, ಡಿಜಿಟಲ್ ದಾಖಲೆಗಳು ಮತ್ತು ಫೈಲ್‌ಗಳನ್ನು ಪರಿಶೀಲಿಸುವ ಮೂಲಕ ಆದಾಯ ತೆರಿಗೆ “ಸಮೀಕ್ಷೆ”ಯನ್ನು ಗುರುವಾರ ರಾತ್ರಿ ಕೊನೆಗೊಳಿಸಿದ್ದಾರೆ.

ಬ್ರಿಟನ್‌ನ ಪಬ್ಲಿಕ್ ಬ್ರಾಡ್‌ಕಾಸ್ಟರ್‌ನ ಹಿರಿಯ ಸಂಪಾದಕರು ಸೇರಿದಂತೆ ಸುಮಾರು 10 ಉದ್ಯೋಗಿಗಳು ದೆಹಲಿಯ ಕಚೇರಿಯಲ್ಲಿ ಮೂರು ದಿನಗಳ ಕಾಲ ಕಳೆದು, ಮನೆಗೆ ಮರಳಿದರು. ಆದಾಯ ತೆರಿಗೆ ಇಲಾಖೆ ಇದುವರೆಗೂ ಯಾವುದೇ ಹೇಳಿಕೆ ನೀಡಿಲ್ಲ, ಶುಕ್ರವಾರ ಹೇಳಿಕೆ ನೀಡುವ ಸಾಧ್ಯತೆ ಇದೆ.

ತೆರಿಗೆ ಅಧಿಕಾರಿಗಳು, ಬಿಬಿಸಿ ಹಿರಿಯ ಉದ್ಯೋಗಿಗಳ ಮೊಬೈಲ್ ಫೋನ್‌, ಡೆಸ್ಕ್‌ಟಾಪ್ ಮತ್ತು ಲ್ಯಾಪ್‌ಟಾಪ್‌ಗಳನ್ನು ಸ್ಕ್ಯಾನ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಇಮೇಜ್‌ಗೆ ಧಕ್ಕೆ ತಂದಿದ್ದಕ್ಕೆ ಬಿಬಿಸಿ ಕಚೇರಿಗಳ ಮೇಲೆ ದಾಳಿ: ದಿಗ್ವಿಜಯ ಸಿಂಗ್

ತೆರಿಗೆ ಅಧಿಕಾರಿಗಳು, “ತೆರಿಗೆ”, “ಕಪ್ಪು ಹಣ” ಮತ್ತು “ಬೇನಾಮಿ”ಯಂತಹ ಕೀವರ್ಡ್‌ಗಳನ್ನು ಬಳಸಿಕೊಂಡು ಮೊಬೈಲ್, ಲ್ಯಾಪ್‌ಟಾಪ್‌, ಡೆಸ್ಕ್‌ಟಾಪ್‌ಗಳನ್ನು ಸ್ಕ್ಯಾನ್ ಮಾಡಿದ್ದಾರೆ. ಇದು ಬ್ಯಾಂಕಿಂಗ್ ವ್ಯವಸ್ಥೆಯ ಮೂಲಕ ಮಾಡುವ ವ್ಯವಹಾರ ಆಗಿರುವುದಿಲ್ಲ, ಒಬ್ಬರ ಕೈಯಿಂದ ಕೈಗೆ ನೀಡಿ ವ್ಯವಹರಿಸುವುದನ್ನು ಸೂಚಿಸುತ್ತದೆ.

ಬಿಬಿಸಿಯ ಪತ್ರಿಕಾ ತಂಡ ಟ್ವೀಟ್ ಮಾಡಿದ್ದು, ”ಆದಾಯ ತೆರಿಗೆ ಅಧಿಕಾರಿಗಳು ದೆಹಲಿ ಮತ್ತು ಮುಂಬೈನಲ್ಲಿರುವ ನಮ್ಮ ಕಚೇರಿಗಳನ್ನು ತೊರೆದಿದ್ದಾರೆ. ನಾವು ಮುಂದೆಯೂ ಅಧಿಕಾರಿಗಳೊಂದಿಗೆ ಸಹಕರಿಸುತ್ತೇವೆ ಮತ್ತು  ಸಾಧ್ಯವಾದಷ್ಟು ಬೇಗ ಈ ವಿಷಯಗಳನ್ನು ಪರಿಹರಿಸಲಾಗುವುದು ಎಂದು ಭಾವಿಸುತ್ತೇವೆ. ನಾವು ನಮ್ಮ ಸಿಬ್ಬಂದಿಗಳನ್ನು ಬೆಂಬಲಿಸುತ್ತೇವೆ. ಅವರಲ್ಲಿ ಕೆಲವರು ಸುದೀರ್ಘ ವಿಚಾರಣೆಯನ್ನು ಎದುರಿಸಿದ್ದಾರೆ ಮತ್ತು ರಾತ್ರಿಯಿಡೀ ಕಚೇರಿಯಲ್ಲಿ ಉಳಿದಿದ್ದಾರೆ. ಅವರೊಟ್ಟಿಗೆ ನಿಲ್ಲುವುದು ನಮ್ಮ ಕರ್ತವ್ಯವಾಗಿದೆ. ಇದೀಗ ಎಲ್ಲವೂ ಸಹಜ ಸ್ಥಿತಿಗೆ ಮರಳಿದೆ. ಭಾರತ ಮತ್ತು ಅದರಾಚೆಗೆ ನಮ್ಮ ಪ್ರೇಕ್ಷಕರಿಗೆ ಸೇವೆ ಸಲ್ಲಿಸಲು ನಾವು ಬದ್ಧರಾಗಿದ್ದೇವೆ” ಎಂದು ಹೇಳಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು 2002ರ ಗುಜರಾತ್ ಗಲಭೆಗಳ ಕುರಿತು ಬಿಬಿಸಿ ಸಾಕ್ಷ್ಯಚಿತ್ರ ಸರಣಿ ಪ್ರಸಾರ ಮಾಡಿದ ಕೆಲವೇ ವಾರಗಳಲ್ಲಿ ಐಟಿ ಅಧಿಕಾರಿಗಳು, ಭಾರತದಲ್ಲಿರುವ ಬಿಬಿಸಿ ಕಚೇರಿಗಳ ಮೇಲೆ ದಾಳಿ ನಡೆಸಿರುವುದನ್ನು ವಿರೋಧ ಪಕ್ಷಗಳು ಟೀಕಿಸಿವೆ.

ಮೋದಿ ಮತ್ತು 2002ರ ಗುಜರಾತ್ ಗಲಭೆಗಳ ಕುರಿತಾದ ಸಾಕ್ಷ್ಯಚಿತ್ರ ಬಿಡುಗಡೆಯಾದ ಬಳಿಕ ಬಿಜೆಪಿಯು, ಬಿಬಿಸಿ “ವಿಷಪೂರಿತ ವರದಿ” ಬಿತ್ತರಿಸತ್ತದೆ ಎಂದು ಹೇಳಿತ್ತು. ಭಾರತದಲ್ಲಿ ಬಿಬಿಸಿಯನ್ನು ನಿಷೇಧಿಸುವ ಕೋರಿಕೆಯನ್ನು ಸುಪ್ರೀಂ ಕೋರ್ಟ್, “ಸಂಪೂರ್ಣವಾಗಿ ತಪ್ಪಾಗಿ ಗ್ರಹಿಸಲ್ಪಟ್ಟಿದೆ” ಮತ್ತು “ಸಂಪೂರ್ಣವಾಗಿ ಅರ್ಹವಲ್ಲದ” ಕೋರಿಕೆ ಎಂದು ಕಳೆದ ವಾರ ವಜಾಗೊಳಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...