Homeಮುಖಪುಟಬಿಬಿಸಿ ಕಚೇರಿಗಳ ಮೇಲೆ ಐಟಿ ದಾಳಿ; ಮೂರು ದಿನಗಳ ಕಾಲ ದಾಖಲೆ ಪರಿಶೀಲನೆ ಬಳಿಕ ಮುಕ್ತಾಯ

ಬಿಬಿಸಿ ಕಚೇರಿಗಳ ಮೇಲೆ ಐಟಿ ದಾಳಿ; ಮೂರು ದಿನಗಳ ಕಾಲ ದಾಖಲೆ ಪರಿಶೀಲನೆ ಬಳಿಕ ಮುಕ್ತಾಯ

- Advertisement -
- Advertisement -

ಐಟಿ ಅಧಿಕಾರಿಗಳು, ಬಿಬಿಸಿಯ ದೆಹಲಿ ಮತ್ತು ಮುಂಬೈ ಕಚೇರಿಗಳ ಮೇಲೆ ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿದ್ದರು. ಈ ದಾಳಿಯನ್ನು ಅಧಿಕಾರಿಗಳು ಸಮೀಕ್ಷೆ ಎಂದು ಹೇಳಿಕೊಂಡಿದ್ದರು. ಮೂರು ದಿನಗಳ ಕಾಲ ಐಟಿ ಅಧಿಕಾರಿಗಳು, ಡಿಜಿಟಲ್ ದಾಖಲೆಗಳು ಮತ್ತು ಫೈಲ್‌ಗಳನ್ನು ಪರಿಶೀಲಿಸುವ ಮೂಲಕ ಆದಾಯ ತೆರಿಗೆ “ಸಮೀಕ್ಷೆ”ಯನ್ನು ಗುರುವಾರ ರಾತ್ರಿ ಕೊನೆಗೊಳಿಸಿದ್ದಾರೆ.

ಬ್ರಿಟನ್‌ನ ಪಬ್ಲಿಕ್ ಬ್ರಾಡ್‌ಕಾಸ್ಟರ್‌ನ ಹಿರಿಯ ಸಂಪಾದಕರು ಸೇರಿದಂತೆ ಸುಮಾರು 10 ಉದ್ಯೋಗಿಗಳು ದೆಹಲಿಯ ಕಚೇರಿಯಲ್ಲಿ ಮೂರು ದಿನಗಳ ಕಾಲ ಕಳೆದು, ಮನೆಗೆ ಮರಳಿದರು. ಆದಾಯ ತೆರಿಗೆ ಇಲಾಖೆ ಇದುವರೆಗೂ ಯಾವುದೇ ಹೇಳಿಕೆ ನೀಡಿಲ್ಲ, ಶುಕ್ರವಾರ ಹೇಳಿಕೆ ನೀಡುವ ಸಾಧ್ಯತೆ ಇದೆ.

ತೆರಿಗೆ ಅಧಿಕಾರಿಗಳು, ಬಿಬಿಸಿ ಹಿರಿಯ ಉದ್ಯೋಗಿಗಳ ಮೊಬೈಲ್ ಫೋನ್‌, ಡೆಸ್ಕ್‌ಟಾಪ್ ಮತ್ತು ಲ್ಯಾಪ್‌ಟಾಪ್‌ಗಳನ್ನು ಸ್ಕ್ಯಾನ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಇಮೇಜ್‌ಗೆ ಧಕ್ಕೆ ತಂದಿದ್ದಕ್ಕೆ ಬಿಬಿಸಿ ಕಚೇರಿಗಳ ಮೇಲೆ ದಾಳಿ: ದಿಗ್ವಿಜಯ ಸಿಂಗ್

ತೆರಿಗೆ ಅಧಿಕಾರಿಗಳು, “ತೆರಿಗೆ”, “ಕಪ್ಪು ಹಣ” ಮತ್ತು “ಬೇನಾಮಿ”ಯಂತಹ ಕೀವರ್ಡ್‌ಗಳನ್ನು ಬಳಸಿಕೊಂಡು ಮೊಬೈಲ್, ಲ್ಯಾಪ್‌ಟಾಪ್‌, ಡೆಸ್ಕ್‌ಟಾಪ್‌ಗಳನ್ನು ಸ್ಕ್ಯಾನ್ ಮಾಡಿದ್ದಾರೆ. ಇದು ಬ್ಯಾಂಕಿಂಗ್ ವ್ಯವಸ್ಥೆಯ ಮೂಲಕ ಮಾಡುವ ವ್ಯವಹಾರ ಆಗಿರುವುದಿಲ್ಲ, ಒಬ್ಬರ ಕೈಯಿಂದ ಕೈಗೆ ನೀಡಿ ವ್ಯವಹರಿಸುವುದನ್ನು ಸೂಚಿಸುತ್ತದೆ.

ಬಿಬಿಸಿಯ ಪತ್ರಿಕಾ ತಂಡ ಟ್ವೀಟ್ ಮಾಡಿದ್ದು, ”ಆದಾಯ ತೆರಿಗೆ ಅಧಿಕಾರಿಗಳು ದೆಹಲಿ ಮತ್ತು ಮುಂಬೈನಲ್ಲಿರುವ ನಮ್ಮ ಕಚೇರಿಗಳನ್ನು ತೊರೆದಿದ್ದಾರೆ. ನಾವು ಮುಂದೆಯೂ ಅಧಿಕಾರಿಗಳೊಂದಿಗೆ ಸಹಕರಿಸುತ್ತೇವೆ ಮತ್ತು  ಸಾಧ್ಯವಾದಷ್ಟು ಬೇಗ ಈ ವಿಷಯಗಳನ್ನು ಪರಿಹರಿಸಲಾಗುವುದು ಎಂದು ಭಾವಿಸುತ್ತೇವೆ. ನಾವು ನಮ್ಮ ಸಿಬ್ಬಂದಿಗಳನ್ನು ಬೆಂಬಲಿಸುತ್ತೇವೆ. ಅವರಲ್ಲಿ ಕೆಲವರು ಸುದೀರ್ಘ ವಿಚಾರಣೆಯನ್ನು ಎದುರಿಸಿದ್ದಾರೆ ಮತ್ತು ರಾತ್ರಿಯಿಡೀ ಕಚೇರಿಯಲ್ಲಿ ಉಳಿದಿದ್ದಾರೆ. ಅವರೊಟ್ಟಿಗೆ ನಿಲ್ಲುವುದು ನಮ್ಮ ಕರ್ತವ್ಯವಾಗಿದೆ. ಇದೀಗ ಎಲ್ಲವೂ ಸಹಜ ಸ್ಥಿತಿಗೆ ಮರಳಿದೆ. ಭಾರತ ಮತ್ತು ಅದರಾಚೆಗೆ ನಮ್ಮ ಪ್ರೇಕ್ಷಕರಿಗೆ ಸೇವೆ ಸಲ್ಲಿಸಲು ನಾವು ಬದ್ಧರಾಗಿದ್ದೇವೆ” ಎಂದು ಹೇಳಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು 2002ರ ಗುಜರಾತ್ ಗಲಭೆಗಳ ಕುರಿತು ಬಿಬಿಸಿ ಸಾಕ್ಷ್ಯಚಿತ್ರ ಸರಣಿ ಪ್ರಸಾರ ಮಾಡಿದ ಕೆಲವೇ ವಾರಗಳಲ್ಲಿ ಐಟಿ ಅಧಿಕಾರಿಗಳು, ಭಾರತದಲ್ಲಿರುವ ಬಿಬಿಸಿ ಕಚೇರಿಗಳ ಮೇಲೆ ದಾಳಿ ನಡೆಸಿರುವುದನ್ನು ವಿರೋಧ ಪಕ್ಷಗಳು ಟೀಕಿಸಿವೆ.

ಮೋದಿ ಮತ್ತು 2002ರ ಗುಜರಾತ್ ಗಲಭೆಗಳ ಕುರಿತಾದ ಸಾಕ್ಷ್ಯಚಿತ್ರ ಬಿಡುಗಡೆಯಾದ ಬಳಿಕ ಬಿಜೆಪಿಯು, ಬಿಬಿಸಿ “ವಿಷಪೂರಿತ ವರದಿ” ಬಿತ್ತರಿಸತ್ತದೆ ಎಂದು ಹೇಳಿತ್ತು. ಭಾರತದಲ್ಲಿ ಬಿಬಿಸಿಯನ್ನು ನಿಷೇಧಿಸುವ ಕೋರಿಕೆಯನ್ನು ಸುಪ್ರೀಂ ಕೋರ್ಟ್, “ಸಂಪೂರ್ಣವಾಗಿ ತಪ್ಪಾಗಿ ಗ್ರಹಿಸಲ್ಪಟ್ಟಿದೆ” ಮತ್ತು “ಸಂಪೂರ್ಣವಾಗಿ ಅರ್ಹವಲ್ಲದ” ಕೋರಿಕೆ ಎಂದು ಕಳೆದ ವಾರ ವಜಾಗೊಳಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...