Homeಕರ್ನಾಟಕಶಿಕ್ಷಣಕ್ಕೆ ಬಜೆಟ್‌ನಲ್ಲಿ ಹೊಸತೇನೂ ಇಲ್ಲ, ಇದು 2022-23ರ ಎರಡನೇ ಆವೃತ್ತಿಯಾಗಿದೆ: ವಿ.ಪಿ ನಿರಂಜನರಾಧ್ಯ

ಶಿಕ್ಷಣಕ್ಕೆ ಬಜೆಟ್‌ನಲ್ಲಿ ಹೊಸತೇನೂ ಇಲ್ಲ, ಇದು 2022-23ರ ಎರಡನೇ ಆವೃತ್ತಿಯಾಗಿದೆ: ವಿ.ಪಿ ನಿರಂಜನರಾಧ್ಯ

ಶಿಕ್ಷಕರು ಸೇರಿದಂತೆ ಹಲವು ಸರ್ಕಾರಿ ನೌಕರರು ಹಳೇ ಪಿಂಚಣಿ ವ್ಯವಸ್ಥೆಗಾಗಿ ದೊಡ್ಡ ಹೋರಾಟ-ಆಂದೋಲನ ನಡೆಸಿದ್ದರು. ಅದನ್ನು ಸಹ ಈ ಸರ್ಕಾರ ನಿರ್ಲಕ್ಷಿಸಿದೆ.

- Advertisement -
- Advertisement -

2022-23 ರ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕಾಗಿ ಏನನ್ನು ಘೋಷಿಸಲಾಗಿತ್ತೊ ಅವುಗಳನ್ನು ಪೂರ್ಣಗೊಳಿಸುತ್ತೇವೆ ಎಂದಷ್ಟೆ 2023-24ರ ಈ ವರ್ಷದ ಬಜೆಟ್‌ನಲ್ಲಿ ಹೇಳಲಾಗಿದೆ ಹೊರತು, ಹೊಸತೇನೂ ಇಲ್ಲ ಎಂದು ಶಿಕ್ಷಣ ತಜ್ಞ ವಿ.ಪಿ ನಿರಂಜನರಾಧ್ಯ ಅಭಿಪ್ರಾಯಪಟ್ಟಿದ್ದಾರೆ.

ಶಿಕ್ಷಣ ಕ್ಷೇತ್ರದ ಜ್ವಲಂತ ಸಮಸ್ಯೆಗಳಿಗೆ ಈ ಬಜೆಟ್‌ನಲ್ಲಿ ಯಾವುದೇ ಪರಿಹಾರ ಘೋಷಿಸಿಲ್ಲ. ಆಡಳಿತ ಸುಧಾರಣಾ ಆಯೋಗ-2 ಅಪೌಷ್ಟಿಕತೆ ದೊಡ್ಡ ಮಟ್ಟದಲ್ಲಿದೆ ಎಂದು ವರದಿ ನೀಡಿತ್ತು. ಹಾಗಾಗಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಾರಕ್ಕೆ 5 ದಿನ ಮೊಟ್ಟೆ ಕೊಡಬೇಕು, ಸಾಮಾನ್ಯ ಮಕ್ಕಳಿಗೆ ವಾರಕ್ಕೆ 2 ದಿನ ಮೊಟ್ಟೆ ಕೊಡಬೇಕು ಎಂಬದು ಶಿಫಾರಸ್ಸು ಮಾಡಿತ್ತು. ಅದರ ಪ್ರಸ್ತಾಪವೇ ಬಜೆಟ್‌ನಲ್ಲಿಲ್ಲ ಎಂದರು.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 1,41,000 ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಅದರ ಬಗ್ಗೆ ಮುಖ್ಯಮಂತ್ರಿಗಳು ಪ್ರಸ್ತಾಪ ಮಾಡಿಲ್ಲ. ಹಿಂದೆ 15,000 ಶಿಕ್ಷಕರ ನೇಮಕ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದರೂ ಆ ಪ್ರಕ್ರಿಯೆಯೇ ಇನ್ನು ಪೂರ್ಣಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅನುದಾನ ರಹಿತ ಕನ್ನಡ ಶಾಲೆಗಳು 1994ರಿಂದಲೂ ಅನುದಾನ ಕೊಡಿ ಎಂದು ಕೇಳುತ್ತಾ ಬಂದಿದ್ದಾರೆ. ಅವು ಕನ್ನಡ ಶಾಲೆಗಳಾಗಿದ್ದು ಅನುದಾನ ನೀಡಿದ್ದರೆ ಒಳ್ಳೆಯದಾಗುತ್ತಿತ್ತು. ಆದರೆ ಈ ಬಜೆಟ್‌ನಲ್ಲಿಯೂ ಸರ್ಕಾರ ಅದಕ್ಕೆ ಸ್ಪಂದಿಸಿಲ್ಲ. ಇನ್ನು ಶಿಕ್ಷಕರು ಸೇರಿದಂತೆ ಹಲವು ಸರ್ಕಾರಿ ನೌಕರರು ಹಳೇ ಪಿಂಚಣಿ ವ್ಯವಸ್ಥೆಗಾಗಿ ದೊಡ್ಡ ಹೋರಾಟ-ಆಂದೋಲನ ನಡೆಸಿದ್ದರು. ಅದನ್ನು ಸಹ ಈ ಸರ್ಕಾರ ನಿರ್ಲಕ್ಷಿಸಿದೆ ಎಂದರು.

ಇದನ್ನೂ ಓದಿ: ದೂರದೃಷ್ಟಿಯಿಲ್ಲದ, ಕೃಷಿಕರ ಪರವಿಲ್ಲದ ಗುಮಾಸ್ತ ತಯಾರಿಸಿದ ಲೆಕ್ಕಾಚಾರದ ಬಜೆಟ್: ಬಡಗಲಪುರ ನಾಗೇಂದ್ರ

ಆರ್‌ಟಿಇ ಕಾಯ್ದೆಯ ಅನುಸರಣೆ ಕೇವಲ 23% ಇದೆ. ಅದು ಕನಿಷ್ಟ 50%ಗೆ ಏರಿಸಬೇಕೆಂಬುದು ನಮ್ಮ ಹಕ್ಕೊತ್ತಾಯವಾಗಿತ್ತು. ಆದರೆ ಅದನ್ನೂ ಪ್ರಸ್ತಾಪಿಸಿಲ್ಲ. ಇನ್ನು ವರ್ಷವೀಡಿ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಹೋದಬಂದಲೆಲ್ಲಾ ಮಾತನಾಡುತ್ತಿದ್ದ ಬಿಜೆಪಿ ಸರ್ಕಾರ ಬಜೆಟ್‌ನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಎಂಬ ಪದವನ್ನೇ ಬಳಸಿಲ್ಲ. 5ನೇ ತರಗತಿಯವರೆಗೂ ಕನ್ನಡ ಮಾಧ್ಯಮ ತರುತ್ತೇವೆ ಎಂಬುದಾಗಲಿ, ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುತ್ತೇವೆ ಎಂಬುದೆಲ್ಲ ಬರೀ ಸುಳ್ಳು ಎಂಬುದನ್ನು ಈ ಬಜೆಟ್‌ ನಿರೂಪಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

2022-23 ನೇ ಸಾಲಿನ ಆಯವ್ಯಯದಲ್ಲಿ ಶಿಕ್ಷಣಕ್ಕೆ ರೂ.31,980 ಕೋಟಿಯನ್ನು ಮೀಸಲಿಡಲಾಗಿತ್ತು. 2022-23 ನೇ ಸಾಲಿನ ಒಟ್ಟು ಆಯವ್ಯಯದಲ್ಲಿ ಶಿಕ್ಷಣದ ಪಾಲು ಶೇಕಡ 12. ಈ ಬಾರಿ ಶಿಕ್ಷಣಕ್ಕೆ 37,960 ಕೋಟಿಯನ್ನು ಮೀಸಲಿಡಲಾಗಿದೆ. ಒಟ್ಟು ಆಯವ್ಯದಲ್ಲಿ ಶಿಕ್ಷಣದ ಪಾಲು ಶೇಕಡ 13.1. ಯಥಾರ್ಥದಲ್ಲಿ, ಶಿಕ್ಷಣಕ್ಕೆ ಕಳೆದ ಬಾರಿಗಿಂತ 5980 ಕೋಟಿ ಹೆಚ್ಚಿನ ಅನುದಾನ ಸಿಕ್ಕಿದ್ದು, ಒಟ್ಟು ಆಯವ್ಯಯದಲ್ಲಿ ಶೇಕಡಾ 13.1 ದೊರೆತಿದ್ದು,  ಶೇಕಡಾವಾರು ಲೆಕ್ಕದಲ್ಲಿ 1.1 ರಷ್ಟು ಹೆಚ್ಚಿದೆ.

ಇದು ತೋರಿಕೆಗೆ ಜಾಸ್ತಿಯೆನಿಸಿದರೂ, ಬಹುತೇಕ ಪಾಲು ಈಗಿನ ಶಿಕ್ಷಕರ ಸಂಬಳ, ಹೆಚ್ಚಿಸಿರುವ ಗೌರವ ಧನ ಹಾಗು ಹಿಂದಿನ ಸಾಲಿನಲ್ಲಿ ಮುಂದುವರಿದಿರುವ ಕಾಮಗಾರಿಗಳಿಗೆ ವ್ಯಯವಾಗುತ್ತದೆ. ಆದ್ದರಿಂದ, ಜ್ವಲಂತ ಸಮಸ್ಯೆಗಳಾಗಿರುವ ಶಿಕ್ಷಣ ಹಕ್ಕು ಕಾಯಿದೆಯ ಈಗಿನ ಶೇಕಡ 23.6 ಅನುಸರಣೆಯನ್ನು ಕನಿಷ್ಠ 50 ಕ್ಕೆ ಏರಿಸಲಾಗಲಿ, ಸರಕಾರಿ ಶಾಲೆಗಳಲ್ಲಿ ಖಾಲಿ ಇರುವ 1,41,358 ಶಿಕ್ಷಕರ ಖಾಲಿ ಹುದ್ದೆಗಳನ್ನು ತುಂಬುವ ಭರವಷೆಯಾಗಲಿ, ತೀವ್ರ ಅಪೌಷ್ಠಿಕತೆಯನ್ನು ತೊಡೆದು ಹಾಕಲು ಆಡಳಿತ ಸುಧಾರಣಾ ಆಯೋಗ -೨ರ ವರದಿಯು ಪ್ರಸ್ತಾಪಿಸಿದಂತೆ ಮಕ್ಕಳಿಗೆ ವಾರದಲ್ಲಿ 5 ದಿನವೂ ಮೊಟ್ಟೆ ನೀಡುವ ಭರವಷೆಯಾಗಲಿ ಅನುದಾನಕ್ಕಾಗಿ ಕಾಯುತ್ತಿರುವ ಕನ್ನಡ ಅನುದಾನರಹಿತ ಶಾಲೆಗಳಿಗೆ ಅನುದಾನ ಒದಗಿಸುವ ಅಥವಾ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಯಾವ ಅಂಶಗಳೂ ಆಯವ್ಯದಲ್ಲಿ ಕಾಣುತ್ತಿಲ್ಲ.

ಒಟ್ಟಾರೆಯಾಗಿ ಹಳೆಯ ಬಜೆಟ್‌ನ ಎರಡನೇ ಆವೃತ್ತಿ ಇದಾಗಿದೆ. ಇದು ಹೊಸ ಬಜೆಟ್ ಅಲ್ಲವೇ ಅಲ್ಲ. 2022-23 (ಎರಡನೇ ಆವೃತ್ತಿ) ಆಗಿದೆ ಎಂದು ವಿ.ಪಿ ನಿರಂಜನರಾಧ್ಯರು ತಿಳಿಸಿದರು.

ಇದನ್ನೂ ಓದಿ: ಬೊಮ್ಮಾಯಿ ಘೋಷಿಸಿದ 775 ಕೋಟಿ ರೂ ಅನುದಾನ: ಫ್ರೀಡಂ ಪಾರ್ಕ್‌ನಲ್ಲಿ ನಿಲ್ಲದ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...