Homeಮುಖಪುಟಮೋದಿ ಮೇಲಿನ ಟೀಕೆ ಸಹಿಸುತ್ತೇವೆ, ಭಾರತದ ಮೇಲಿನ ಟೀಕೆಯನ್ನಲ್ಲ: ಸ್ಮೃತಿ ಇರಾನಿ

ಮೋದಿ ಮೇಲಿನ ಟೀಕೆ ಸಹಿಸುತ್ತೇವೆ, ಭಾರತದ ಮೇಲಿನ ಟೀಕೆಯನ್ನಲ್ಲ: ಸ್ಮೃತಿ ಇರಾನಿ

- Advertisement -
- Advertisement -

ಭಾರತೀಯ ಉದ್ಯಮಿ ಗೌತಮ್ ಅದಾನಿ ಅವರು ಇತ್ತೀಚಿಗೆ ಷೇರು ಮಾರುಕಟ್ಟೆಯಲ್ಲಿ ಎದುರಿಸಿದ ತೊಂದರೆಗಳು ‘ಭಾರತದಲ್ಲಿ ಪ್ರಜಾಪ್ರಭುತ್ವದ ಪುನರುಜ್ಜೀವನ’ವನ್ನು ಉತ್ತೇಜಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ‘ಪ್ರಶ್ನೆಗಳಿಗೆ ಉತ್ತರಿಸಬೇಕಾಗಿದೆ’ ಎಂದು ಬಿಲಿಯನೇರ್ ಹೂಡಿಕೆದಾರ ಜಾರ್ಜ್ ಸೊರೊಸ್ ಹೇಳಿದ್ದಾರೆ. ಇದಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಪ್ರತಿಕ್ರಿಯಿಸಿದ್ದು, “ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳಲ್ಲಿ ಮಧ್ಯಪ್ರವೇಶಿಸಲು ಪ್ರಯತ್ನಿಸುವ ವಿದೇಶಿ ಶಕ್ತಿಗಳ ವಿರುದ್ದ ಭಾರತೀಯರು ಒಗ್ಗಟ್ಟಾಗಿ ಪ್ರತಿಕ್ರಿಯಿಸಬೇಕು” ಎಂದು ಕರೆ ನೀಡಿದ್ದಾರೆ.

ಭಾರತದ ಮೇಲಿನ ಹೂಡಿಕೆದಾರರ ವಿಶ್ವಾಸಕ್ಕೆ ಹಿಂಡೆನ್‌ಬರ್ಗ್ ರಿಸರ್ಚ್‌ನ ದಾಳಿಯಿಂದ ಧಕ್ಕೆಯುಂಟಾಗಿದೆ. ಇದು ದೇಶದ ನಿಯಂತ್ರಣ ಚೌಕಟ್ಟಿನ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ. ಅದಾನಿ ಜೊತೆಗಿನ ಪ್ರಧಾನಿ ನರೇಂದ್ರ ಮೋದಿಯವರ ಸಂಬಂಧಗಳ ಬಗ್ಗೆ ಪ್ರಶ್ನೆಗಳೂ ಮೂಡಿವೆ ಎಂದು ಸೊರೊಸ್ ಹೇಳಿದರು.

“ಮೋದಿ ಅವರು ಈ ವಿಷಯದ ಬಗ್ಗೆ ಮೌನವಾಗಿದ್ದಾರೆ, ಆದರೆ ಅವರು ವಿದೇಶಿ ಹೂಡಿಕೆದಾರರ ಪ್ರಶ್ನೆಗಳಿಗೆ ಮತ್ತು ಸಂಸತ್ತಿನಲ್ಲಿ ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸಬೇಕಾಗುತ್ತದೆ” ಎಂದು ಸೊರೊಸ್ ಅವರು ಮ್ಯೂನಿಚ್ ಭದ್ರತಾ ಸಮ್ಮೇಳನಕ್ಕೂ ಮುನ್ನ ಹೇಳಿದ್ದಾರೆ. “ಈ ವಿದ್ಯಮಾನ ಒಕ್ಕೂಟ ಸರ್ಕಾರದ ಮೇಲೆ ಮೋದಿಯವರ ಹಿಡಿತವನ್ನು ದುರ್ಬಲಗೊಳಿಸುತ್ತದೆ. ಭಾರತದಲ್ಲಿ ಪ್ರಜಾಸತ್ತಾತ್ಮಕ ಪುನರುಜ್ಜೀವನ ಆಗಬೇಕೆಂದು ನಾನು ನಿರೀಕ್ಷಿಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ: ಭಾರತದ ಬಿಬಿಸಿ ಕಚೇರಿಗಳ ಮೇಲೆ ಐಟಿ ದಾಳಿ: ಅದಾನಿ ವಿರುದ್ಧ ಈ ಕ್ರಮ ಯಾಕೆ ಇಲ್ಲ? ಎಂದ ಮೊಯಿತ್ರಾ

ಹೂಡಿಕೆದಾರ ಜಾರ್ಜ್ ಸೊರೊಸ್ ಮೇಲೆ ತೀವ್ರ ವಾಗ್ದಾಳಿ ನಡೆಸಿದ ಇರಾನಿ, “ಅವರು ಭಾರತಕ್ಕೆ ಸಂಬಂಧಿಸಿದಂತೆ ಕೆಟ್ಟ ಉದ್ದೇಶ ಹೊಂದಿರುವ ‘ಆರ್ಥಿಕ ಯುದ್ಧ ಅಪರಾಧಿ” ಎಂದು ಟೀಕಿಸಿದ್ದಾರೆ.

“ಪ್ರಧಾನಿ ಮೋದಿ ಅವರು ಟೀಕೆಗಳನ್ನು ಸ್ವೀಕರಿಸಬಹುದು, ಆದರೆ ಭಾರತದ ಮೇಲಿನ ಹೇಳಿಕೆಗಳನ್ನು ಸಹಿಸುವುದಿಲ್ಲ” ಎಂದು ಸ್ಮೃತಿ ಇರಾನಿ ಒತ್ತಿ ಹೇಳಿದ್ದಾರೆ. ಈ ವೇಳೆ, ಪ್ರಧಾನಿಯ ಮೇಲಿನ ದಾಳಿಗೆ ಆ ಕೋಟ್ಯಾಧಿಪತಿಯನ್ನು ಬೆಂಬಲಿಸುವ ರಾಜಕೀಯ ಸಂಘಟನೆಗಳಿಗೂ ಕೇಂದ್ರ ಸಚಿವರು ಎಚ್ಚರಿಕೆ ನೀಡಿದ್ದಾರೆ.

“ಬ್ಯಾಂಕ್ ಆಫ್ ಇಂಗ್ಲೆಂಡ್‌ನ್ನು ಮುರಿದವರು ಮತ್ತು ರಾಷ್ಟ್ರದಿಂದ ಆರ್ಥಿಕ ಯುದ್ಧ ಅಪರಾಧಿ ಎಂದು ಹೆಸರಿಸಲ್ಪಟ್ಟ ವ್ಯಕ್ತಿ ಈಗ ಭಾರತೀಯ ಪ್ರಜಾಪ್ರಭುತ್ವವನ್ನು ಮುರಿಯುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. ಅಂತಾರಾಷ್ಟ್ರೀಯ ವಾಣಿಜ್ಯೋದ್ಯಮಿ ಜಾರ್ಜ್ ಸೊರೊಸ್ ಅವರು ಪ್ರಜಾಪ್ರಭುತ್ವ ಪ್ರಕ್ರಿಯೆಗಳಲ್ಲಿ ಮಧ್ಯಪ್ರವೇಶಿಸುವ ತನ್ನ ದುರುದ್ದೇಶವನ್ನು ಘೋಷಿಸಿದ್ದಾರೆ” ಎಂದು ಕಿಡಿಕಾರಿದರು.

ದೇಶದ ಪ್ರಜಾಪ್ರಭುತ್ವವನ್ನು ಕೆಟ್ಟದಾಗಿ ತೋರಿಸಲು ಪ್ರಯತ್ನಿಸಿದ ಮತ್ತು ಭಾರತದ ಆರ್ಥಿಕತೆಗೆ ಆಕ್ರಮಣವನ್ನು ತಂದ ವ್ಯಕ್ತಿಯ ಉದ್ದೇಶವನ್ನು ಖಂಡಿಸಬೇಕು ಎಂದು ದೇಶದ ಜನರಲ್ಲಿ ಇರಾನಿ ಮನವಿ ಮಾಡಿದ್ದಾರೆ.

“ಅದಾನಿ ಹಗರಣವು ಭಾರತದಲ್ಲಿ ಪ್ರಜಾಸತ್ತಾತ್ಮಕ ಪುನರುಜ್ಜೀವನವನ್ನು ಉಂಟುಮಾಡುತ್ತದೆಯೇ ಎಂಬುದು ಸಂಪೂರ್ಣವಾಗಿ ಕಾಂಗ್ರೆಸ್, ವಿರೋಧ ಪಕ್ಷಗಳು ಮತ್ತು ನಮ್ಮ ಚುನಾವಣಾ ಪ್ರಕ್ರಿಯೆಯ ಮೇಲೆ ಅವಲಂಬಿತವಾಗಿದೆ. ಇದಕ್ಕೂ ಜಾರ್ಜ್ ಸೊರೊಸ್‌ಗೂ ಯಾವುದೇ ಸಂಬಂಧವಿಲ್ಲ. ನಮ್ಮ ನೆಹರೂವಿಯನ್ ಪರಂಪರೆಯಲ್ಲಿ ಸೊರೊಸ್‌ನಂತಹ ಜನರು ನಮ್ಮ ಚುನಾವಣಾ ಫಲಿತಾಂಶಗಳನ್ನು ನಿರ್ಧರಿಸಲು ಸಾಧ್ಯವಿಲ್ಲ” ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...