Homeದಲಿತ್ ಫೈಲ್ಸ್ತಮಿಳುನಾಡು ದಲಿತ ಬಾಲಕಿಯರಿಗೆ ಶಿಕ್ಷಕರಿಂದ ಜಾತಿನಿಂದನೆ: ಫಿನಾಯಿಲ್ ಕುಡಿದು ಆತ್ಮ*ತ್ಯೆಗೆ ಯತ್ನ

ತಮಿಳುನಾಡು ದಲಿತ ಬಾಲಕಿಯರಿಗೆ ಶಿಕ್ಷಕರಿಂದ ಜಾತಿನಿಂದನೆ: ಫಿನಾಯಿಲ್ ಕುಡಿದು ಆತ್ಮ*ತ್ಯೆಗೆ ಯತ್ನ

ಬಾಲಕಿಯರು ಪರಿಶಿಷ್ಟ ಜಾತಿಗೆ ಸೇರಿದವರೆಂಬ ಕಾರಣಕ್ಕೆ ಶಾಲಾ ಬಸ್‌ಗೆ ಹತ್ತಿಸಿಕೊಳ್ಳದೆ ಅಸ್ಪೃಶ್ಯತೆ ಆಚರಿಸಲಾಗಿದೆ ಎಂದು ಬಾಲಕಿಯ ಪೋಷಕರು ಆರೋಪಿಸಿದ್ದಾರೆ.

- Advertisement -
- Advertisement -

ಶಿಕ್ಷಕಿಯರಿಂದ ಸತತ ಜಾತಿನಿಂದನೆಗೆ ಬೇಸೆತ್ತ 9ನೇ ತರಗತಿಯ ದಲಿತ ಬಾಲಕಿಯರಿಬ್ಬರು ಶೌಚಾಲಯ ಸ್ವಚ್ಚಗೊಳಿಸುವ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ ತೊಪ್ಪಪ್ಪಟ್ಟಿ ಗ್ರಾಮದಲ್ಲಿ ವರದಿಯಾಗಿದೆ.

ಸದ್ಯ ಆ ಇಬ್ಬರು ಬಾಲಕಿಯರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣದ ಹಿನ್ನೆಲೆ

ಚಿನ್ನಾಲಪಟ್ಟಿಯ ಸರ್ಕಾರಿ ಅನುದಾನಿತ ಶಾಲೆಯಲ್ಲಿ ಓದುತ್ತಿರುವ ಇಬ್ಬರು ಬಾಲಕಿಯರಿಗೆ ಅವರ ತರಗತಿ ಶಿಕ್ಷಕರಾದ ಸವರ್ಣೀಯ ಜಾತಿಯ ಪ್ರೇಮಲತಾ ಎಂಬುವವರು ಜಾತಿ ಹೆಸರಿಡಿದು ಬೈಯ್ದು ಜಾತಿನಿಂದನೆ ಮಾಡಿದ್ದಾರೆ. ಅಲ್ಲದೇ ಬಾಲಕಿಯರು ಪರಿಶಿಷ್ಟ ಜಾತಿಗೆ ಸೇರಿದವರೆಂಬ ಕಾರಣಕ್ಕೆ ಶಾಲಾ ಬಸ್‌ಗೆ ಹತ್ತಿಸಿಕೊಳ್ಳದೆ ಅಸ್ಪೃಶ್ಯತೆ ಆಚರಿಸಲಾಗಿದೆ ಎಂದು ಬಾಲಕಿಯ ಪೋಷಕರು ಆರೋಪಿಸಿದ್ದಾರೆ. ಹಾಗಾಗಿ ಫೆಬ್ರವರಿ 15 ರಂದು ಶಾಲಾ ಬಸ್ ಅನ್ನು ತಡೆದು ಪ್ರತಿಭಟನೆ ನಡೆಸಿದ್ದರು.

ಇದರಿಂದ ಕುಪಿತಗೊಮಡ ಗಣಿತ ಶಿಕ್ಷಕಿಯಾದ ಪ್ರೇಮಲತಾ ಈ ಇಬ್ಬರೂ ದಲಿತ ವಿದ್ಯಾರ್ಥಿನಿಯರ ಮೇಲೆ ಹಗೆ ಸಾಧಿಸುತ್ತಿದ್ದರು. ಉಳಿದ ಯಾವ ವಿದ್ಯಾರ್ಥಿಗಳು ಸಹ ಇವರಿಬ್ಬರೊಂದಿಗೆ ಮಾತನಾಡಬಾರದೆಂದು ತಾಕೀತು ಮಾಡಿದ್ದರು. ಗುರುವಾರ ಶಾಲೆಗೆ ಬಂದ ದಲಿತ ವಿದ್ಯಾರ್ಥಿನಿಯರನ್ನು ಯಾರು ಮಾತನಾಡಿಸಿಲ್ಲ. ಇದರಿಂದ ನೊಂದ ಆ ಇಬ್ಬರು ವಿದ್ಯಾರ್ಥಿನಿಯರು ಊಟದ ವೇಳೆಯಲ್ಲಿ ಶೌಚಾಲಯದಲ್ಲಿದ್ದ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಸಂತ್ರಸ್ತ ಬಾಲಕಿಯೊಬ್ಬರ ತಾಯಿ ದೂರು ನೀಡಿದ್ದಾರೆ.

ಜಾತಿನಿಂದನೆ ಮಾಡಿದ ಶಿಕ್ಷಕಿಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸಂತ್ರಸ್ತ ವಿದ್ಯಾರ್ಥಿನಿಯರ ಸಂಬಂಧಿಕರು ಮಧುರೈ-ದಿಂಡುಗಲ್ ಹೆದ್ದಾರಿ ತಡೆದು ಮತ್ತು ಚಿನ್ನಾಲಪಟ್ಟಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಸಂಬಂಧಪಟ್ಟ ಶಾಲೆ ಮತ್ತು ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಆಗ್ರಹಿಸಿದ್ದು, ರಾಜ್ಯ ಎಸ್‌ಸಿ ಮತ್ತು ಎಸ್‌ಟಿ ಆಯೋಗವು ಬಂದು ಈ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ವಿದ್ಯಾರ್ಥಿನಿಯರ ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಶಾಲೆಯ ಆಡಳಿತ ಮಂಡಳಿ ಗಣಿತ ಶಿಕ್ಷಕಿ ಪ್ರೇಮಲತಾರನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೆ ಅದೇ ರೀತಿ ಜಾತಿ ನಿಂದನೆ ಮಾಡಿದ ಆರೋಪ ಹೊತ್ತಿರುವ ಮತ್ತೊಬ್ಬ ಶಿಕ್ಷಕಿಗೆ ಕಡ್ಡಾಯ ವೈದ್ಯಕೀಯ ರಜೆ ನೀಡಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ದೇವಾಲಯ ಪ್ರವೇಶಿಸಿದ ದಲಿತ ಯುವಕನಿಗೆ ಡಿಎಂಕೆ ಮುಖಂಡನಿಂದ ಬೆದರಿಕೆ; ವಿಡಿಯೊ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...