Homeದಲಿತ್ ಫೈಲ್ಸ್ತಮಿಳುನಾಡು ದಲಿತ ಬಾಲಕಿಯರಿಗೆ ಶಿಕ್ಷಕರಿಂದ ಜಾತಿನಿಂದನೆ: ಫಿನಾಯಿಲ್ ಕುಡಿದು ಆತ್ಮ*ತ್ಯೆಗೆ ಯತ್ನ

ತಮಿಳುನಾಡು ದಲಿತ ಬಾಲಕಿಯರಿಗೆ ಶಿಕ್ಷಕರಿಂದ ಜಾತಿನಿಂದನೆ: ಫಿನಾಯಿಲ್ ಕುಡಿದು ಆತ್ಮ*ತ್ಯೆಗೆ ಯತ್ನ

ಬಾಲಕಿಯರು ಪರಿಶಿಷ್ಟ ಜಾತಿಗೆ ಸೇರಿದವರೆಂಬ ಕಾರಣಕ್ಕೆ ಶಾಲಾ ಬಸ್‌ಗೆ ಹತ್ತಿಸಿಕೊಳ್ಳದೆ ಅಸ್ಪೃಶ್ಯತೆ ಆಚರಿಸಲಾಗಿದೆ ಎಂದು ಬಾಲಕಿಯ ಪೋಷಕರು ಆರೋಪಿಸಿದ್ದಾರೆ.

- Advertisement -
- Advertisement -

ಶಿಕ್ಷಕಿಯರಿಂದ ಸತತ ಜಾತಿನಿಂದನೆಗೆ ಬೇಸೆತ್ತ 9ನೇ ತರಗತಿಯ ದಲಿತ ಬಾಲಕಿಯರಿಬ್ಬರು ಶೌಚಾಲಯ ಸ್ವಚ್ಚಗೊಳಿಸುವ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ ತೊಪ್ಪಪ್ಪಟ್ಟಿ ಗ್ರಾಮದಲ್ಲಿ ವರದಿಯಾಗಿದೆ.

ಸದ್ಯ ಆ ಇಬ್ಬರು ಬಾಲಕಿಯರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣದ ಹಿನ್ನೆಲೆ

ಚಿನ್ನಾಲಪಟ್ಟಿಯ ಸರ್ಕಾರಿ ಅನುದಾನಿತ ಶಾಲೆಯಲ್ಲಿ ಓದುತ್ತಿರುವ ಇಬ್ಬರು ಬಾಲಕಿಯರಿಗೆ ಅವರ ತರಗತಿ ಶಿಕ್ಷಕರಾದ ಸವರ್ಣೀಯ ಜಾತಿಯ ಪ್ರೇಮಲತಾ ಎಂಬುವವರು ಜಾತಿ ಹೆಸರಿಡಿದು ಬೈಯ್ದು ಜಾತಿನಿಂದನೆ ಮಾಡಿದ್ದಾರೆ. ಅಲ್ಲದೇ ಬಾಲಕಿಯರು ಪರಿಶಿಷ್ಟ ಜಾತಿಗೆ ಸೇರಿದವರೆಂಬ ಕಾರಣಕ್ಕೆ ಶಾಲಾ ಬಸ್‌ಗೆ ಹತ್ತಿಸಿಕೊಳ್ಳದೆ ಅಸ್ಪೃಶ್ಯತೆ ಆಚರಿಸಲಾಗಿದೆ ಎಂದು ಬಾಲಕಿಯ ಪೋಷಕರು ಆರೋಪಿಸಿದ್ದಾರೆ. ಹಾಗಾಗಿ ಫೆಬ್ರವರಿ 15 ರಂದು ಶಾಲಾ ಬಸ್ ಅನ್ನು ತಡೆದು ಪ್ರತಿಭಟನೆ ನಡೆಸಿದ್ದರು.

ಇದರಿಂದ ಕುಪಿತಗೊಮಡ ಗಣಿತ ಶಿಕ್ಷಕಿಯಾದ ಪ್ರೇಮಲತಾ ಈ ಇಬ್ಬರೂ ದಲಿತ ವಿದ್ಯಾರ್ಥಿನಿಯರ ಮೇಲೆ ಹಗೆ ಸಾಧಿಸುತ್ತಿದ್ದರು. ಉಳಿದ ಯಾವ ವಿದ್ಯಾರ್ಥಿಗಳು ಸಹ ಇವರಿಬ್ಬರೊಂದಿಗೆ ಮಾತನಾಡಬಾರದೆಂದು ತಾಕೀತು ಮಾಡಿದ್ದರು. ಗುರುವಾರ ಶಾಲೆಗೆ ಬಂದ ದಲಿತ ವಿದ್ಯಾರ್ಥಿನಿಯರನ್ನು ಯಾರು ಮಾತನಾಡಿಸಿಲ್ಲ. ಇದರಿಂದ ನೊಂದ ಆ ಇಬ್ಬರು ವಿದ್ಯಾರ್ಥಿನಿಯರು ಊಟದ ವೇಳೆಯಲ್ಲಿ ಶೌಚಾಲಯದಲ್ಲಿದ್ದ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಸಂತ್ರಸ್ತ ಬಾಲಕಿಯೊಬ್ಬರ ತಾಯಿ ದೂರು ನೀಡಿದ್ದಾರೆ.

ಜಾತಿನಿಂದನೆ ಮಾಡಿದ ಶಿಕ್ಷಕಿಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸಂತ್ರಸ್ತ ವಿದ್ಯಾರ್ಥಿನಿಯರ ಸಂಬಂಧಿಕರು ಮಧುರೈ-ದಿಂಡುಗಲ್ ಹೆದ್ದಾರಿ ತಡೆದು ಮತ್ತು ಚಿನ್ನಾಲಪಟ್ಟಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಸಂಬಂಧಪಟ್ಟ ಶಾಲೆ ಮತ್ತು ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಆಗ್ರಹಿಸಿದ್ದು, ರಾಜ್ಯ ಎಸ್‌ಸಿ ಮತ್ತು ಎಸ್‌ಟಿ ಆಯೋಗವು ಬಂದು ಈ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ವಿದ್ಯಾರ್ಥಿನಿಯರ ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಶಾಲೆಯ ಆಡಳಿತ ಮಂಡಳಿ ಗಣಿತ ಶಿಕ್ಷಕಿ ಪ್ರೇಮಲತಾರನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೆ ಅದೇ ರೀತಿ ಜಾತಿ ನಿಂದನೆ ಮಾಡಿದ ಆರೋಪ ಹೊತ್ತಿರುವ ಮತ್ತೊಬ್ಬ ಶಿಕ್ಷಕಿಗೆ ಕಡ್ಡಾಯ ವೈದ್ಯಕೀಯ ರಜೆ ನೀಡಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ದೇವಾಲಯ ಪ್ರವೇಶಿಸಿದ ದಲಿತ ಯುವಕನಿಗೆ ಡಿಎಂಕೆ ಮುಖಂಡನಿಂದ ಬೆದರಿಕೆ; ವಿಡಿಯೊ ವೈರಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...