Homeಮುಖಪುಟ2018-2022ರ ನಡುವೆ 79% ಸವರ್ಣಿಯರು ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕ: ಪ್ರಾತಿನಿಧ್ಯದ ಪ್ರಶ್ನೆಗೆ ಉತ್ತರ ಸಿಗುವುದೇ?

2018-2022ರ ನಡುವೆ 79% ಸವರ್ಣಿಯರು ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕ: ಪ್ರಾತಿನಿಧ್ಯದ ಪ್ರಶ್ನೆಗೆ ಉತ್ತರ ಸಿಗುವುದೇ?

- Advertisement -
- Advertisement -

ಈ ಅಂಕಿಅಂಶವು ಸಚಿವಾಲಯದಿಂದ ಬಿಡುಗಡೆ ಆಗಿದೆ. ನ್ಯಾಯಾಧೀಶರ ನೇಮಕಾತಿಯಲ್ಲಿ ಎಲ್ಲಾ ಸಮುದಾಯದ ಪ್ರಾತಿನಿಧ್ಯವನ್ನು ಖಾತರಿಪಡಿಸುವಲ್ಲಿ ಕೊಲಿಜಿಯಂ ವಿಫಲವಾಗಿದೆ ಎಂದು ಎತ್ತಿ ತೋರುತ್ತಿದೆ.
ಇಂದಿರಾ ಜೈನ್‌ಸಿಂಗ್ ಅವರು ಡಿಸೆಂಬರ್ 26ರಂದು ಲೀಫ್‌ಲೆಟ್ ಅಂತರ್ಜಾಲ ಪತ್ರಿಕೆಗೆ ಬರೆದ ಲೇಖನದ ಅನುಸಾರ, “ಸರ್ಕಾರದ ನಿರಂತರ ದಾಳಿಯಿಂದಾಗಿ ಸುಪ್ರೀಂಕೋರ್ಟ್ ತನ್ನ ಅಸ್ತಿತ್ವದ ಬಿಕ್ಕಟ್ಟು ಎದುರಿಸುತ್ತಿದೆ. ಇತ್ತೀಚಿಗೆ ಕೇಂದ್ರ ಕಾನೂನು ಸಚಿವರು ಮತ್ತು ಉಪ ರಾಷ್ಟ್ರಪತಿಗಳು ಮಾಡಿದ ಭಾಷಣದಿಂದ ಇದು ಇನ್ನಷ್ಟು ಸ್ಪಷ್ಟವಾಗಿದೆ. ನ್ಯಾಯಾಂಗ ನೇಮಕಾತಿಗಳಲ್ಲಿ ಪ್ರಾತಿನಿಧ್ಯ ಮುಖ್ಯವಾದ ಅಗತ್ಯವಾಗಿದ್ದರೂ, ಕಾಯಿಲೆಗಿಂತಲೂ ಚಿಕಿತ್ಸೆಯೇ ಕೆಟ್ಟದಾಗಿದೆ”.

ಈ ಹಿನ್ನಲೆಯಲ್ಲಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ವರದಿಯ ಪ್ರಕಾರ, ಕಳೆದ 5 ವರ್ಷಗಳಲ್ಲಿ (2018ರಿಂದ 2022ರ ಅವಧಿಯಲ್ಲಿ) ಹೈಕೋರ್ಟ್‌ಗೆ ನೇಮಕಗೊಂಡ ನ್ಯಾಯಧೀಶರ ಪೈಕಿ ಶೇ. 79 ಪ್ರಮಾಣದಷ್ಟು ಬಲಾಢ್ಯ ಜಾತಿಗಳೇ ಇದ್ದಾರೆಂಬುದು ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯದ ಅಸಮಾನ ಪ್ರಾತಿನಿಧ್ಯವನ್ನು ಸ್ಪಷ್ಟಪಡಿಸುತ್ತದೆ. ಸಂಸದೀಯ ಸಮಿತಿ ಮುಂದೆ ಕೇಂದ್ರ ಕಾನೂನು ಸಚಿವಾಲಯವು ಈ ಅಂಕಿಅಂಶಗಳನ್ನು ಮಂಡಿಸಿದೆ.

ಕಾನೂನು ಮತ್ತು ನ್ಯಾಯದ ಸಂಸದೀಯ ಸ್ಥಾಯಿ ಸಮಿತಿಯ ಎದುರು ಕಾನೂನು ಸಚಿವಾಲಯ ಈ ವಿಷಯವನ್ನು ಬಹಿರಂಗಪಡಿಸಿದೆ; ಉನ್ನತ ನ್ಯಾಯಾಂಗದಲ್ಲಿ ಎಲ್ಲ ಸಮುದಾಯದವರಿಗೆ ಪ್ರಾತಿನಿಧ್ಯ ನೀಡಬೇಕು ಎಂದು ಸುಪ್ರೀಂಕೋರ್ಟ್ ಮೊದಲಿಗೆ ಮಾರ್ಗಸೂಚಿಯನ್ನು ರೂಪಿಸಲಾಗಿತ್ತು; ಕೊಲಿಜಿಯಂ ವ್ಯವಸ್ಥೆಯು 30 ವರ್ಷಗಳಿಂದ ಅಸ್ತಿತ್ವದಲ್ಲಿ ಇದ್ದರು ಕೂಡ ನ್ಯಾಯಾಧೀಶರುಗಳ ನೇಮಕಾತಿಯಲ್ಲಿ ಮಾರ್ಗಸೂಚಿಯ ಅನಿಷ್ಠಾನ ಕಾಣೆಯಾಗಿದೆ ಎಂದು ಕೂಡ ಹೇಳಿದೆ.

ಇದನ್ನೂ ಓದಿರಿ: ಮಾಧ್ಯಮಗಳ ಮೇಲೆ ಬೆದರಿಕೆ ಸಲ್ಲದು: ಬಿಬಿಸಿ ಮೇಲಿನ ಐಟಿ ದಾಳಿಗೆ ಎಡಿಟರ್ಸ್ ಗಿಲ್ಡ್ ಖಂಡನೆ

ದೇಶದ ಎಲ್ಲಾ 25 ಹೈಕೋರ್ಟ್‌‌ಗಳಲ್ಲಿ ನೇಮಕ ಆದ ನ್ಯಾಯಾಮೂರ್ತಿಗಳಲ್ಲಿ ಹೆಚ್ಚಿನವರೆಲ್ಲಾ ಸವರ್ಣೀಯ ಜಾರಿಯವರು ಎಂಬ ಅಂಶ ಅಘಾತಕಾರಿಯಾಗಿದೆ. ನ್ಯಾಯಾಂಗ ನೇಮಕಾತಿಯಲ್ಲಿ ‘ತಾರತಮ್ಯ’ ಆಗಿದೆ; ದೇಶದಲ್ಲಿ ಹಿಂದುಳಿದ ವರ್ಗದವರು (ಒಬಿಸಿ) 35% ಜನಸಂಖ್ಯೆ ಹೊಂದಿದ್ದಾರೆ. ಆದರೆ ಆ ವರ್ಗದಿಂದ ನ್ಯಾಯಪೀಠ ಸ್ಥಾನದಲ್ಲಿ 11%ಕ್ಕಿಂತ ಕಡಿಮೆ ನ್ಯಾಯಾಧೀಶರು ನೇಮಕ ಆಗಿದ್ದಾರೆ. ಮತ್ತೊಂದು ತಾರತಮ್ಯದ ಆರೋಪವೆಂದರೆ ದೇಶದ ಎಲ್ಲಾ ಹೈಕೋರ್ಟ್‌ಗಳಲ್ಲಿ 2018ರಿಂದ ಒಟ್ಟು 537 ನ್ಯಾಯಾಧೀಶರುಗಳು ನೇಮಕ ಆಗಿದ್ದಾರೆ. ಅವರಲ್ಲಿ ಅಲ್ಪಸಂಖ್ಯಾತ ಸಮುದಾಯದವರು 2.6%, ಪರಿಶಿಷ್ಟ ಜಾತಿಯವರು 2.8%, ಪರಿಶಿಷ್ಟ ಪಂಗಡದವರು ಕೇವಲ 1.3% ನೇಮಕ ಆಗಿದ್ದಾರೆ.

ಕಾನೂನು ಸಚಿವಾಲಯದ ಪ್ರಕಾರ, “ಪ್ರಾತಿನಿಧ್ಯ ಮತ್ತು ಸಾಮಾಜಿಕ ನ್ಯಾಯದ ಪ್ರಶ್ನೆಯನ್ನು ನ್ಯಾಯಾಲಯದ ನೇಮಕಾತಿ ಪ್ರಕ್ರಿಯೆಯಲ್ಲಿ ಸರಿಯಾಗಿ ನಿಭಾಯಿಸುವ ಪ್ರಾಥಮಿಕ ಹೊಣೆಗಾರಿಕೆಯು ಸುಪ್ರೀಂಕೋರ್ಟ್‌ನ ಕೊಲಿಜಿಯಂ ಹಾಗೂ ಹೈಕೋರ್ಟ್‌ನ ಕೊಲಿಜಿಯಂದು ಆಗಿರುತ್ತದೆ”.

ಮೇಲಿನ ಹೇಳಿಕೆಯನ್ನು ಸ್ಥಾಯಿ ಸಮಿತಿ ಮುಂದೆ ನೀಡುವ ಮೂಲಕ ಕಾನೂನು ಸಚಿವಾಲಯವು ತನ್ನ ಅಸಹಾಯಕತೆಯನ್ನು ವ್ಯಕ್ತಪಡಿಸುತ್ತದೆ. ನ್ಯಾಯಾಂಗವು ನ್ಯಾಯಾಧೀಶರ ನೇಮಕಾತಿಯಲ್ಲಿ ಪ್ರಾತಿನಿಧ್ಯದ ಪ್ರಶ್ನೆಯನ್ನು ಆದ್ಯತೆಯಾಗಿ ಮಾಡಿಕೊಳ್ಳಬೇಕು. ಆದ್ದರಿಂದ ಇದನ್ನು ನ್ಯಾಯಾಂಗವೇ ಸ್ವತಃ ಪರಿಹರಿಸಬೇಕಾಗಿದೆ.

ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗಳು ಎಂದು ನ್ಯಾಯಾಧೀಶರ ಕೊಲಿಜಿಯಂ ಎರಡು ಹಂತಗಳಲ್ಲಿ ಕಾರ್ಯ ನಿರ್ವಹಿಸುತ್ತದೆ. ಭಾರತದ ಮುಖ್ಯ ನ್ಯಾಯಾಧೀಶರ ನೇತೃತ್ವದ 4 ಸದಸ್ಯರ ಸುಪ್ರೀಂಕೋರ್ಟ್‌‍ನ ಕೊಲಿಜಿಯಂ ಸರ್ವೋಚ್ಚ ನ್ಯಾಯಾಲಯಕ್ಕೆ ನ್ಯಾಯಾಧೀಶರನ್ನು ನೇಮಕ ಮಾಡಲು ಪ್ರಸ್ತಾಪವನ್ನು ತಯಾರು ಮಾಡುತ್ತದೆ. ಮುಖ್ಯ ನ್ಯಾಯಾಧೀಶರ ನೇತೃತ್ವದ 3 ಸದಸ್ಯರ ಹೈಕೋರ್ಟ್ ಕೊಲಿಜಿಯಂ ಹೆಸರುಗಳನ್ನು ಶಿಫಾರಸು ಮಾಡುತ್ತದೆ.

ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರಗಳನ್ನು ಬರೆಯುವ ಮೂಲಕ ಕಾನೂನು ಸಚಿವಾಲಯವು ಉನ್ನತ ನ್ಯಾಯಾಂಗದಲ್ಲಿ “ಸಾಮಾಜಿಕ ಪ್ರಾತಿನಿಧ್ಯ ಮತ್ತು ಸಾಮಾಜಿಕ ನ್ಯಾಯದ ಸಮಸ್ಯೆಯನ್ನು ಪರಿಹರಿಸುವ” ಅಗತ್ಯವನ್ನು ಒತ್ತಿ ಹೇಳಿದೆ. ಕೊಲಿಜಿಯಂನ ಮುಖ್ಯ ಕೆಲಸಗಳಲ್ಲಿ ಒಂದಾದ ನ್ಯಾಯಾಧೀಶರ ನೇಮಕಾತಿಯಲ್ಲಿ ಅಸಮಾನತೆಯನ್ನು ತೊಡೆದುಹಾಕಲು ಅದಕ್ಕೆ ಸಾಧ್ಯವಾಗಿಲ್ಲ ಎಂದು ಕಾನೂನಿನ ಸಂಸದೀಯ ಸ್ಥಾಯಿ ಸಮಿತಿ ಮುಂದೆ ಕಾನೂನು ಸಚಿವಾಲಯ ಹೇಳಿದೆ.

“ಸರ್ಕಾರವು ಆಯಾ ನ್ಯಾಯಾಲಯದ ಕೊಲಿಜಿಯಂನಿಂದ ಶಿಫಾರಸು ಮಾಡಲ್ಪಟ್ಟ ಜನರನ್ನು ಮಾತ್ರ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗಳ ನ್ಯಾಯಾಧೀಶರನ್ನಾಗಿ ನೇಮಿಸುತ್ತದೆ” ಎಂದು ಕೂಡ ಸಚಿವಾಲಯ ಹೇಳಿದೆ.

ಆದಾಗ್ಯೂ, ಸಚಿವಾಲಯವು ಹೈಕೋರ್ಟ್ ನ್ಯಾಯಾಧೀಶರನ್ನು ನೇಮಕ ಮಾಡುವ ನೀತಿಗಳನ್ನೂ ಸ್ಪಷ್ಟಪಡಿಸಿತು. ಸಂವಿಧಾನದ 217 ಮತ್ತು 224 ವಿಧಿಗಳ ಪ್ರಕಾರ ಯಾವುದೇ ಜಾತಿ ಅಥವಾ ವರ್ಗದ ವ್ಯಕ್ತಿಗಳಿಗೆ ಮೀಸಲಾತಿಯನ್ನು ಒದಗಿಸುವುದಿಲ್ಲ. ನ್ಯಾಯಾಧೀಶರ ನೇಮಕಾತಿಗೆ ಪ್ರಸ್ತಾವನೆಗಳನ್ನು ಕಳುಹಿಸುವಾಗ ಸಾಮಾಜಿಕ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಸೇರಿದ ಸೂಕ್ತ ಅಭ್ಯರ್ಥಿಗಳನ್ನು ಪರಿಗಣಿಸಿ ಪಟ್ಟಿ ನೀಡಬೇಕು ಎಂದು ಮುಖ್ಯ ನ್ಯಾಯಾಧೀಶರುಗಳನ್ನು ಕಾಲಕಾಲಕ್ಕೆ ಸಚಿವಾಲಯ ಆಗ್ರಹಿಸುತ್ತಿದೆ ಎಂದಿದೆ.

ಸರ್ವೋಚ್ಚ ನ್ಯಾಯಾಲಯದ ಕೊಲಿಜಿಯಂ ಕಳಿಸಿದ ಶಿಫಾರಸುಗಳನ್ನು ಕಾನೂನು ಸಚಿವಾಲಯವು ಪರಿಶೀಲಿಸುತ್ತದೆ. ಗುಪ್ತಚರ ಇಲಾಖೆಯು ಶಿಫಾರಸ್ಸು ಮಾಡಲಾದ ಈ ಅಭ್ಯರ್ಥಿಗಳ ಹಿನ್ನಲೆಯನ್ನು ಪರಿಶೀಲಿಸುತ್ತದೆ. ನಂತರ ಹೈಕೋರ್ಟ್ ಕೊಲಿಜಿಯಂನ ಶಿಫಾರಸುಗಳನ್ನು ಒಳಗೊಂಡಂತೆ ವಿವರವಾದ ವರದಿಯನ್ನು ಸುಪ್ರೀಂಕೋರ್ಟ್ ಕೊಲಿಜಿಯಂಗೆ ಅವರ ಸಲಹೆಗಾಗಿ ಕಳುಹಿಸಲಾಗುತ್ತದೆ. ನಂತರ ಸರ್ವೋಚ್ಚ ನ್ಯಾಯಾಲಯದ ಕೊಲಿಜಿಯಂನಿಂದ ಹೆಸರುಗಳು ಅಂತಿಮಗೊಳ್ಳುತ್ತದೆ, ಕೇಂದ್ರ ಸರ್ಕಾರ ನೇಮಕಾತಿಗಳ ಅಧಿಸೂಚನೆ ಪ್ರಕಟಿಸುತ್ತದೆ.

ಒಂದು ವೇಳೆ ಸರ್ಕಾರ ಮತ್ತು ಸುಪ್ರೀಂಕೋರ್ಟ್ ನಡುವೆ ಭಿನ್ನಾಭಿಪ್ರಾಯ ಬಂದರೆ, ಸರ್ಕಾರವು ಅಂತಹ ಹೆಸರುಗಳನ್ನು ಮರುಪರಿಶೀಲನೆ ಮಾಡಲು ಸುಪ್ರೀಂಕೋರ್ಟ್ ಕೊಲಿಜಿಯಂಗೆ ವಾಪಾಸು ಕಳಿಸುತ್ತದೆ. ಆದರೆ ಅಸ್ತಿತ್ವದಲ್ಲಿರುವ ಕೊಲಿಜಿಯಂ ವ್ಯವಸ್ಥೆ ಪ್ರಕಾರ ಸುಪ್ರೀಂಕೋರ್ಟ್‌ನ ಕೊಲಿಜಿಯಂ ಅದೇ ಹೆಸರುಗಳನ್ನು ಪುನರುಚ್ಚರಿಸಿದರೆ ಅವರನ್ನು ನ್ಯಾಯಾಧೀಶರನ್ನಾಗಿ ನೇಮಕ ಮಾಡುವುದಕ್ಕೆ ಸರ್ಕಾರವು ಬದ್ಧವಾಗಿರಬೇಕಿರುತ್ತದೆ.

ಇದನ್ನೂ ಓದಿರಿ: ಅದಾನಿ ಹಗರಣ ವಿಚಾರ: ಹೂಡಿಕೆದಾರರ ರಕ್ಷಣೆಗೆ ಸಮಿತಿ ರಚಿಸಲು ಅಭ್ಯಂತರವಿಲ್ಲ ಎಂದ ಕೇಂದ್ರ

ಈ ಪರಿಸ್ಥಿತಿ ನ್ಯಾಯಾಲಯದಲ್ಲಿ ಮಾತ್ರವಲ್ಲ, ಮೀಸಲಾತಿ ಇಲ್ಲದ ಎಲ್ಲಾ ವಲಯಗಳಲ್ಲಿ ಇದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳೆಯರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳ ಮೇಲಿನ ತಾರತಮ್ಯವು ಸಾಂಸ್ಥಿಕವಾದದ್ದು ಮತ್ತು ವ್ಯವಸ್ಥಿತವಾದದ್ದು ಆಗಿದೆ. ದೇಶ ಸ್ವತಂತ್ರಗೊಂಡ ಇಷ್ಟು ವರ್ಷಗಳ ನಂತರ ಇಂದಿಗೂ ದುರ್ಬಲ ವರ್ಗಗಳು ತಮ್ಮ ಅಸ್ತಿತ್ವಕ್ಕಾಗಿ, ಪ್ರಾತಿನಿಧ್ಯಗಾಗಿ ಹೋರಾಡಲೇ ಬೇಕಾದಂತಹ ಪರಿಸ್ಥಿತಿ ಇದೆ. ಉನ್ನತ ನ್ಯಾಯಾಂಗದಲ್ಲಿನ ಈ ತಾರತಮ್ಯ ಪ್ರಜಾಪ್ರಭುತ್ವದ ಅಡಿಪಾಯವನ್ನೆ ಅಣಕಿಸುತ್ತಿದೆ. ಸಂವಿಧಾನದ ಅನುಷ್ಠಾನ ಮತ್ತು ಪಾಲನೆ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗಳ ಪ್ರಧಾನ ಕರ್ತವ್ಯ.

ಸಮಾಜದ ಎಲ್ಲಾ ರಂಗಗಳಲ್ಲಿ ದುರ್ಬಲ ವರ್ಗಗಳಿಗೆ ಸಮಾನ ಪ್ರಾತಿನಿಧ್ಯ ಕಲ್ಪಿಸಿಕೊಡಬೇಕು ಎಂಬುದು ಸಂವಿಧಾನದ ಆಶಯ ಆಗಿದೆ. ಕಲ್ಪಿಸಿ ಕೊಡುವುದು ಉನ್ನತ ನ್ಯಾಯಾಲಯದ ಕರ್ತವ್ಯ. ಸುಪ್ರೀಂಕೋರ್ಟ್ ಈ ತಾರತಮ್ಯ ಹೋಗಲಾಡಿಸಲು ಮುಂದಾಗಬೇಕಿದೆ. ಇತ್ತೀಚಿನ ವರ್ಷಗಳಲ್ಲಿ ನ್ಯಾಯಾಂಗವನ್ನು ಸರ್ಕಾರವು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಪ್ರಯತ್ನವನ್ನು ಮಾಡುತ್ತಿದೆ. ನಮಗೆ ಸ್ವತಂತ್ರ ನ್ಯಾಯಾಂಗ ವ್ಯವಸ್ಥೆಯು ಬೇಕಿದೆ. ಸ್ವತಂತ್ರ ನ್ಯಾಯಾಂಗದೊಳಗೆ ಸಮಾನ ಪ್ರಾತಿನಿಧ್ಯವು ಬೇಕಿದೆ. ಆಗ ಮಾತ್ರ ಸಂವಿಧಾನದ ಆಶಯ ಈಡೇರುತ್ತದೆ.

ಲೇಖನ: ಮಹೇಶ್ ಕುಮಾರ್
ಅನುವಾದ: ಸಂಜಯ್
ಮೂಲ: ನ್ಯೂಸ್‌ಕ್ಲಿಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...