Homeಕರ್ನಾಟಕಬಿಜೆಪಿ ಸರ್ಕಾರದ ನಿರ್ಗಮನದ ಬಜೆಟ್ ಇದು: ಸಿದ್ದರಾಮಯ್ಯ ಪ್ರತಿಕ್ರಿಯೆ

ಬಿಜೆಪಿ ಸರ್ಕಾರದ ನಿರ್ಗಮನದ ಬಜೆಟ್ ಇದು: ಸಿದ್ದರಾಮಯ್ಯ ಪ್ರತಿಕ್ರಿಯೆ

- Advertisement -
- Advertisement -

2023-24 ನೇ ಸಾಲಿನ ಬಜೆಟ್‌ಅನ್ನು ಶುಕ್ರವಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದರು. ಪ್ರತಿಪಕ್ಷದ ನಾಯಕರು, ‘ಇದು ಜನರ ಕಿವಿಗೆ ಹೂ ಇಡುವ ಬಜೆಟ್’ ಎಂದು ವ್ಯಂಗ್ಯವಾಡಿದ್ದಾರೆ.

ರಾಜ್ಯ ಬಜೆಟ್ ಬಗ್ಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ ಎಐಸಿಸಿ ಕರ್ನಾಟಕ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ಅವರು, ಬಜೆಟ್‌ಅನ್ನು ಮೂರು ಕನ್ನಡ ಪದಗಳಲ್ಲಿ ಬಣ್ಣಿಸಿದ್ದಾರೆ- ”ಕಿವಿ-ಮೇಲೆ-ಹೂ!”. “ಈ ಬಜೆಟ್ ಒಂದು ಸುಳ್ಳು ಭರವಸೆಗಳ ಕಂತೆ, ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಂದ ಸುಳ್ಳು ಹೇಳುವುದನ್ನು ಚೆನ್ನಾಗೇ ಕಲಿತಿದ್ದಾರೆ” ಎಂದು ಸುರ್ಜೆವಾಲಾ ಕುಟುಕಿದ್ದಾರೆ. 2022-23 ಸಾಲಿನ ಬಜೆಟ್‌ನಲ್ಲಿ 349 ಹೊಸ ಯೋಜನೆಗಳ ಭರವಸೆ ನೀಡಿದ್ದ ರಾಜ್ಯ ಸರ್ಕಾರ ಅವುಗಳಲ್ಲಿ ಯಾವುದನ್ನೂ ನೆರವೇರಿಸಲಿಲ್ಲ ಎಂದು ಅವರು ದೂರಿದ್ದಾರೆ.

ಬಜೆಟ್ ಮಂಡನೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, “ಇದನ್ನು ‘ಬಿಜೆಪಿ ಸರ್ಕಾರದ ನಿರ್ಗಮನ’ದ ಬಜೆಟ್” ಎಂದು ಕರೆದಿದ್ದಾರೆ. “ಈ ಬಾರಿಯ ಬಜೆಟ್ ಗಾತ್ರ ರೂ. 3,09,187ಕೋಟಿಯಷ್ಟಿದೆ. ಇನ್ನೆರಡು ತಿಂಗಳಲ್ಲಿ ಚುನಾವಣೆ ಇರುವುದರಿಂದ ಅದನ್ನು ಗುರಿಯಾಗಿಸಿಕೊಂಡು ಈ ಬಜೆಟ್ ಮಂಡನೆ ಮಾಡಿದ್ದಾರೆ. ಕಳೆದ ಬಜೆಟ್‌ನಲ್ಲಿ ಘೋಷಿಸಿರುವುದರಲ್ಲಿ 57 ಕಾರ್ಯಕ್ರಮಗಳನ್ನು ಪೂರ್ಣಗೊಳಿಸಿಲ್ಲ. 2018ರ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ಕೊಟ್ಟಿದ್ದರು. ಅದರಲ್ಲಿ 90% ಜಾರಿಯಾಗಿಲ್ಲ. ಅನುಷ್ಠಾನ ಮಾಡುವ ಜವಾಬ್ದಾರಿ ಇಲ್ಲದೇ ಹೋದರೆ, ಎಷ್ಟು ಬೇಕಾದರೂ ಭರವಸೆ ಕೊಡಬಹುದು” ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ವಿಭಿನ್ನ ಪ್ರತಿಭಟನೆ: ಬಜೆಟ್ ಅಧಿವೇಶಕ್ಕೆ ಕಿವಿಗೆ ಹೂ ಇಟ್ಟುಕೊಂಡು ಬಂದ ಸಿದ್ದರಾಮಯ್ಯ

”ಕೇಂದ್ರ ಸರ್ಕಾರದಿಂದ ಬರಬೇಕಾಗಿದ್ದ ಅನುದಾನ ಬರದೇ ಇರೋದಕ್ಕೆ ಇಷ್ಟೊಂದು ಸಾಲ ಮಾಡಬೇಕಾಗಿದೆ. ಪ್ರಧಾನಿ ಮೋದಿ ರಾಜ್ಯಕ್ಕೆ ಬಂದಾಗ ಬಂಜಾರ ಸಮುದಾಯದ ಜನಕ್ಕೆ ಹಕ್ಕುಪತ್ರ ನೀಡಿದ್ದಕ್ಕೆ ಇವರು ಈಗ ಮೋದಿಯವರಿಗೆ ಥ್ಯಾಂಕ್ಸ್ ಹೇಳಿದ್ದಾರೆ. ಆದರೆ ಅದು ಇವರು ಮಾಡಿರುವ ಸಾಧನೆ ಅಲ್ಲ. ಕಾಗೋಡು ತಿಮ್ಮಪ್ಪನವರು ರೆವಿನ್ಯೂ ಮಿನಿಸ್ಟರ್ ಇದ್ದಾಗ ಕಾನೂನು ತಿದ್ದುಪಡಿ ಮಾಡಿದ್ದರು. ಬಂಜಾರ ಸಮುದಾಯದವರಿಗೆಲ್ಲ ‘ವಾಸಿಸುವವನೇ ಮನೆಯ ಒಡೆಯ’ ಎನ್ನುವ ಕಾರ್ಯಕ್ರಮ ಜಾರಿಗೆ ತಂದು, ಹಕ್ಕುಪತ್ರ ಬರುವವರೆಗೂ ಕೆಲಸ ಮಾಡಿದ್ದು ನಾವು. ಆದರೆ ಇವರು ತಮ್ಮ ಸಾಧನೆ ಎಂದು ಹೇಳುವ ಮೂಲಕ ಹೈಜಾಕ್ ಮಾಡಿದ್ದಾರೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಜೆಟ್ ಬಗ್ಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, “ಇದು ದಕ್ಷಿಣ ಭಾರತದಲ್ಲಿ ಬಿಜೆಪಿಯ ಕೊನೆಯ ಬಜೆಟ್‌ ಆಗಿದ್ದು, ಬರೀ ಸುಳ್ಳಗಳನ್ನೇ ಒಳಗೊಂಡಿದೆ. ಡಬಲ್ ಎಂಜಿನ್ ಸರ್ಕಾರ ಇದೆ, ರಾಜ್ಯವನ್ನು ಉದ್ಧಾರ ಮಾಡುತ್ತೇವೆ ಎಂದು ಹೇಳುತ್ತಾರೆ. ಆದರೆ ಅವರು ಘೋಷಣೆಗಳನ್ನು ಮಾತ್ರ ನೀಡುತ್ತಾರೆ. ಅವು ಎಂದಿಗೂ ಕಾರ್ಯರೂಪಕ್ಕೆ ಬಂದಿಲ್ಲ. ಈ ಬಜೆಟ್‌ನಲ್ಲೂ ಚುನಾವಣಾ ದೃಷ್ಟಿಕೋನದಿಂದ ಸಾಕಷ್ಟು ಘೋ‍ಷಣೆಗಳನ್ನು ಮಾಡಿದ್ದಾರೆ. ಆದರೆ ಅವು ವಾಸ್ತವಕ್ಕೆ ದೂರವಾಗಿವೆ. ಇದು ಕೇವಲ ಅಂಕಿ ಅಂಶಗಳ ಪುಸ್ತಕ ಅಷ್ಟೇ.., ಬಿಜೆಪಿ ಬಜೆಟ್‌ನಿಂದ ರೈತರು, ಕಾರ್ಮಿಕರು, ಯುವಕರು, ವರ್ತಕರು ಯಾರಿಗೂ ಲಾಭವಿಲ್ಲ. ಈ ಬಜೆಟ್‌ನಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಬಗ್ಗೆಯೂ ಮಾತನಾಡಿಲ್ಲ. ಸ್ವಯಂ ಉದ್ಯೋಗ ಯೋಜನೆಗಳೂ ಇಲ್ಲ. ಹೀಗಾಗಿ ಈ ಬಜೆಟ್‌ನಿಂದ ಯಾವುದೇ ವರ್ಗಕ್ಕೂ ಪ್ರಯೋಜನ ಆಗುವುದಿಲ್ಲ” ಎಂದು ಭವಿಷ್ಯ ನುಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...