Homeಮುಖಪುಟಅದಾನಿ ಹಗರಣ| ಸುಪ್ರೀಂ ಕೋರ್ಟ್ ಮುಂದಿವೆ ನಾಲ್ಕು ಅರ್ಜಿ

ಅದಾನಿ ಹಗರಣ| ಸುಪ್ರೀಂ ಕೋರ್ಟ್ ಮುಂದಿವೆ ನಾಲ್ಕು ಅರ್ಜಿ

- Advertisement -
- Advertisement -

ಅದಾನಿ ಹಗರಣ ಮತ್ತು ಹಿಂಡನ್‌ ಬರ್ಗ್ ವರದಿ ಸಂಬಂಧ ಏನು ಮಾಡಬೇಕೆಂಬುದನ್ನು ಪರಿಶೀಲಿಸುವ ತಜ್ಞರ ಸಮಿತಿಯ ಹೆಸರುಗಳನ್ನು ಒಳಗೊಂಡಂತೆ ಕೇಂದ್ರ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದ ವರದಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ (ಫೆಬ್ರುವರಿ 17) ತಿರಸ್ಕರಿಸಿದೆ.

“ನಾವು ನಿಮ್ಮಿಂದ ಮುಚ್ಚಿದ ಲಕೋಟೆಯ ಸಲಹೆಯನ್ನು ಸ್ವೀಕರಿಸುವುದಿಲ್ಲ. ಏಕೆಂದರೆ ನಾವು ಸಂಪೂರ್ಣ ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು ಬಯಸುತ್ತೇವೆ. ಮುಚ್ಚಿದ ಲಕೋಟೆಯಲ್ಲಿ ನಾವು ಸಲಹೆಗಳನ್ನು ಸ್ವೀಕರಿಸಿದರೆ, ಮತ್ತೊಂದು ದೃಷ್ಟಿಕೋನವನ್ನು ಮುಚ್ಚಿಟ್ಟಂತಾಗುತ್ತದೆ. ಏಕೆಂದರೆ ಇದು ಸರ್ಕಾರ ನೇಮಿಸಿದ ಸಮಿತಿ ಎಂದು ಜನರು ಭಾವಿಸುತ್ತಾರೆ” ಎಂದು ಸಿಜೆಐ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆ.ಬಿ.ಪರ್ದಿವಾಲಾ ಅವರಿದ್ದ ಪೀಠ ಹೇಳಿದೆ.

ಪ್ರಕರಣ: ಅದಾನಿ ಗ್ರೂಪ್ ವಂಚನೆ ಮಾಡಿದೆ ಎಂದು ಆರೋಪಿಸಿ ಶಾರ್ಟ್-ಸೆಲ್ಲರ್ ಹಿಂಡೆನ್‌ಬರ್ಗ್ ರಿಸರ್ಚ್ ಪ್ರಕಟಿಸಿದ ವರದಿಗೆ ಸಂಬಂಧಿಸಿದ ನಾಲ್ಕು ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ಹಿಂಡನ್‌ಬರ್ಗ್ ವರದಿ ಹೊರಬಿದ್ದ ಬಳಿಕ, ಅದಾನಿ ಸಂಸ್ಥೆ‌ಯು 100 ಶತಕೋಟಿ ಡಾಲರ್‌ಗಿಂತ ಹೆಚ್ಚಿನ ಮೌಲ್ಯದ ಷೇರುಗಳ ನಷ್ಟ ಅನುಭವಿಸಿದೆ.

ತಜ್ಞರ ಸಮಿತಿಯ ಸಲಹೆಗಳು ಎಲ್ಲಿಂದ ಬಂದವು? ಕೇಂದ್ರ ಮತ್ತು ಸೆಬಿಯಿಂದ ಸುಪ್ರೀಂ ಕೋರ್ಟ್ ಪೀಠವು ಸಲಹೆಗಳನ್ನು ಕೋರಿತ್ತು. ನಿಯಂತ್ರಕ ಚೌಕಟ್ಟನ್ನು ಬಲಪಡಿಸುವ ಮತ್ತು ಭಾರತೀಯ ಹೂಡಿಕೆದಾರರ ಹಿತಾಸಕ್ತಿಗಳನ್ನು ರಕ್ಷಿಸುವ ಮಾರ್ಗಗಳನ್ನು ಸೂಚಿಸಲು ತಜ್ಞರ ಸಮಿತಿಯ ರಚನೆಯನ್ನು ಪ್ರಸ್ತಾಪಿಸಲಾಗಿತ್ತು.

ತಜ್ಞರ ಸಮಿತಿಯನ್ನು ರಚಿಸುವ ಕುರಿತು ನ್ಯಾಯಾಲಯದ ಸಲಹೆಗೆ ಕೇಂದ್ರವು ಒಪ್ಪಿಗೆ ನೀಡಿತ್ತು. ಆದರೆ ನಿಯಂತ್ರಣ ಚೌಕಟ್ಟಿನಲ್ಲಿ ಅಸಮರ್ಪಕತೆಗಳಿದ್ದು, ವಿದೇಶಿ ಮತ್ತು ದೇಶೀಯ ಹೂಡಿಕೆದಾರರಿಗೆ ತಿಳಿಸದ ರೀತಿಯಲ್ಲಿ ಸಮಿತಿಯನ್ನು ರಚಿಸುವುದಾಗಿ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿತ್ತು.

ಇದನ್ನೂ ಓದಿರಿ: 2018-2022ರ ನಡುವೆ 79% ಸವರ್ಣಿಯರು ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕ: ಪ್ರಾತಿನಿಧ್ಯದ ಪ್ರಶ್ನೆಗೆ ಉತ್ತರ ಸಿಗುವುದೇ?

ನ್ಯಾಯಾಲಯವು ಶುಕ್ರವಾರ ತನ್ನ ತೀರ್ಪನ್ನು ಕಾಯ್ದಿರಿಸಿದೆ. “ಅದು ಸರ್ಕಾರ ನೇಮಿಸಿದ ಸಮಿತಿ” ಎಂಬ ದೂಷಣೆಯಿಂದ ಪಾರಾಗಲು ತನ್ನದೇ ಆದ ಸಮಿತಿಯನ್ನು ನೇಮಿಸುವುದಾಗಿ ಹೇಳಿದೆ.

ಕೇಂದ್ರಕ್ಕೆ ಮತ್ತೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್: ಹಿಂಡನ್‌ಬರ್ಗ್ ವರದಿಯಿಂದ ಮಾರುಕಟ್ಟೆ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಸರಕಾರ ‌ತಿಳಿಸಿರುವುದನ್ನು ನ್ಯಾಯಾಲಯ ಪರಿಗಣಿಸಿಲ್ಲ.

“ಮಾರುಕಟ್ಟೆಯ ಮೇಲೆ ಯಾವುದೇ ಪರಿಣಾಮವಾಗಿಲ್ಲ ಎಂದು ನೀವು ಹೇಳುತ್ತಿದ್ದೀರಿ. ಆದರೆ ಅಂಕಿಅಂಶಗಳು ಹೇಳುವಂತೆ ಹೂಡಿಕೆದಾರರು ಲಕ್ಷ ಕೋಟಿ ಮೌಲ್ಯದ ನಷ್ಟವನ್ನು ಎದುರಿಸಿದ್ದಾರೆ” ಎಂದಿದೆ ಕೋರ್ಟ್.

ಸುಪ್ರೀಂ ಕೋರ್ಟ್ ಮುಂದಿವೆ ನಾಲ್ಕು ಅರ್ಜಿಗಳು

  1. ಹಿಂಡೆನ್‌ಬರ್ಗ್ ರಿಸರ್ಚ್ ಸಂಸ್ಥಾಪಕ ನಾಥನ್ ಆಂಡರ್ಸನ್ ಮತ್ತು ಭಾರತದಲ್ಲಿನ ಅವರ ಸಹಚರರ ವಿರುದ್ಧ ತನಿಖೆ ನಡೆಸಬೇಕು, ಪ್ರಥಮ ಮಾಹಿತಿ ವರದಿಯನ್ನು (ಎಫ್‌ಐಆರ್) ದಾಖಲಿಸಬೇಕು ಎಂದು ವಕೀಲ ಮನೋಹರ್ ಲಾಲ್ ಶರ್ಮಾ ಅವರು ಮನವಿ ಮಾಡಿದ್ದಾರೆ. ಅಂತಹ ವರದಿಗಳನ್ನು ಮೊದಲು ಸೆಬಿಗೆ ಸಲ್ಲಿಸಿ ಪರಿಶೀಲಿಸದ ಹೊರತು ಇಂತಹ ಕಂಪನಿಗಳ ಬಗ್ಗೆ ಮಾಧ್ಯಮಗಳು ವರದಿ ಮಾಡದಂತೆ ತಡೆಯಬೇಕು ಎಂದು ಶರ್ಮಾ ಅವರು ಅರ್ಜಿಯಲ್ಲಿ ಕೋರಿದ್ದಾರೆ.
  2. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿಯಿಂದ ವರದಿಯ ಬಗ್ಗೆ ತನಿಖೆ ನಡೆಸಬೇಕೆಂದು ವಕೀಲ ವಿಶಾಲ್ ತಿವಾರಿ ಅವರು ಕೋರಿದ್ದಾರೆ. 500 ಕೋಟಿಗೂ ಹೆಚ್ಚಿನ ಸಾಲ ಮಂಜೂರಾತಿ ನೀತಿಯನ್ನು ಮೇಲ್ವಿಚಾರಣೆ ಮಾಡಲು ವಿಶೇಷ ಸಮಿತಿಯನ್ನು ರಚಿಸುವಂತೆಯೂ ಅವರು ಕೇಳಿಕೊಂಡಿದ್ದಾರೆ.
  3. ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಅವರು ತಮ್ಮ ಅರ್ಜಿಯಲ್ಲಿ, “ಅದಾನಿ ಸಮೂಹವನ್ನು ಬಹು ಕಾನೂನುಗಳ ಅಡಿಯಲ್ಲಿ ವಿಚಾರಣೆಗೆ ಒಳಪಡಿಸಬೇಕು” ಎಂದು ಆಗ್ರಹಿಸಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮತ್ತು ಲೈಫ್ ಇನ್ಶುರೆನ್ಸ್ ಕಾರ್ಪೊರೇಷನ್ (LIC) ಸಂಸ್ಥೆಗಳು ಅದಾನಿ ಷೇರುಗಳಲ್ಲಿ ಹೂಡಿಕೆ ಮಾಡಿರುವ ನಿರ್ಧಾರವನ್ನು ಪ್ರಶ್ನಿಸಿದ್ದಾರೆ.
  4. ಹಿಂಡೆನ್‌ಬರ್ಗ್ ವರದಿಯನ್ನು ಆಧರಿಸಿ ಅದಾನಿ ಗುಂಪಿನ ವಿರುದ್ಧ ತನಿಖೆ ಮಾಡಬೇಕು ಎಂದು ಅನಾಮಿಕಾ ಜೈಸ್ವಾಲ್ ಸಲ್ಲಿಸಿದ ಮತ್ತೊಂದು ಅರ್ಜಿ ಒತ್ತಾಯಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....