Homeಮುಖಪುಟಅದಾನಿ ಹಗರಣ| ಸುಪ್ರೀಂ ಕೋರ್ಟ್ ಮುಂದಿವೆ ನಾಲ್ಕು ಅರ್ಜಿ

ಅದಾನಿ ಹಗರಣ| ಸುಪ್ರೀಂ ಕೋರ್ಟ್ ಮುಂದಿವೆ ನಾಲ್ಕು ಅರ್ಜಿ

- Advertisement -
- Advertisement -

ಅದಾನಿ ಹಗರಣ ಮತ್ತು ಹಿಂಡನ್‌ ಬರ್ಗ್ ವರದಿ ಸಂಬಂಧ ಏನು ಮಾಡಬೇಕೆಂಬುದನ್ನು ಪರಿಶೀಲಿಸುವ ತಜ್ಞರ ಸಮಿತಿಯ ಹೆಸರುಗಳನ್ನು ಒಳಗೊಂಡಂತೆ ಕೇಂದ್ರ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದ ವರದಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ (ಫೆಬ್ರುವರಿ 17) ತಿರಸ್ಕರಿಸಿದೆ.

“ನಾವು ನಿಮ್ಮಿಂದ ಮುಚ್ಚಿದ ಲಕೋಟೆಯ ಸಲಹೆಯನ್ನು ಸ್ವೀಕರಿಸುವುದಿಲ್ಲ. ಏಕೆಂದರೆ ನಾವು ಸಂಪೂರ್ಣ ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು ಬಯಸುತ್ತೇವೆ. ಮುಚ್ಚಿದ ಲಕೋಟೆಯಲ್ಲಿ ನಾವು ಸಲಹೆಗಳನ್ನು ಸ್ವೀಕರಿಸಿದರೆ, ಮತ್ತೊಂದು ದೃಷ್ಟಿಕೋನವನ್ನು ಮುಚ್ಚಿಟ್ಟಂತಾಗುತ್ತದೆ. ಏಕೆಂದರೆ ಇದು ಸರ್ಕಾರ ನೇಮಿಸಿದ ಸಮಿತಿ ಎಂದು ಜನರು ಭಾವಿಸುತ್ತಾರೆ” ಎಂದು ಸಿಜೆಐ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆ.ಬಿ.ಪರ್ದಿವಾಲಾ ಅವರಿದ್ದ ಪೀಠ ಹೇಳಿದೆ.

ಪ್ರಕರಣ: ಅದಾನಿ ಗ್ರೂಪ್ ವಂಚನೆ ಮಾಡಿದೆ ಎಂದು ಆರೋಪಿಸಿ ಶಾರ್ಟ್-ಸೆಲ್ಲರ್ ಹಿಂಡೆನ್‌ಬರ್ಗ್ ರಿಸರ್ಚ್ ಪ್ರಕಟಿಸಿದ ವರದಿಗೆ ಸಂಬಂಧಿಸಿದ ನಾಲ್ಕು ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ಹಿಂಡನ್‌ಬರ್ಗ್ ವರದಿ ಹೊರಬಿದ್ದ ಬಳಿಕ, ಅದಾನಿ ಸಂಸ್ಥೆ‌ಯು 100 ಶತಕೋಟಿ ಡಾಲರ್‌ಗಿಂತ ಹೆಚ್ಚಿನ ಮೌಲ್ಯದ ಷೇರುಗಳ ನಷ್ಟ ಅನುಭವಿಸಿದೆ.

ತಜ್ಞರ ಸಮಿತಿಯ ಸಲಹೆಗಳು ಎಲ್ಲಿಂದ ಬಂದವು? ಕೇಂದ್ರ ಮತ್ತು ಸೆಬಿಯಿಂದ ಸುಪ್ರೀಂ ಕೋರ್ಟ್ ಪೀಠವು ಸಲಹೆಗಳನ್ನು ಕೋರಿತ್ತು. ನಿಯಂತ್ರಕ ಚೌಕಟ್ಟನ್ನು ಬಲಪಡಿಸುವ ಮತ್ತು ಭಾರತೀಯ ಹೂಡಿಕೆದಾರರ ಹಿತಾಸಕ್ತಿಗಳನ್ನು ರಕ್ಷಿಸುವ ಮಾರ್ಗಗಳನ್ನು ಸೂಚಿಸಲು ತಜ್ಞರ ಸಮಿತಿಯ ರಚನೆಯನ್ನು ಪ್ರಸ್ತಾಪಿಸಲಾಗಿತ್ತು.

ತಜ್ಞರ ಸಮಿತಿಯನ್ನು ರಚಿಸುವ ಕುರಿತು ನ್ಯಾಯಾಲಯದ ಸಲಹೆಗೆ ಕೇಂದ್ರವು ಒಪ್ಪಿಗೆ ನೀಡಿತ್ತು. ಆದರೆ ನಿಯಂತ್ರಣ ಚೌಕಟ್ಟಿನಲ್ಲಿ ಅಸಮರ್ಪಕತೆಗಳಿದ್ದು, ವಿದೇಶಿ ಮತ್ತು ದೇಶೀಯ ಹೂಡಿಕೆದಾರರಿಗೆ ತಿಳಿಸದ ರೀತಿಯಲ್ಲಿ ಸಮಿತಿಯನ್ನು ರಚಿಸುವುದಾಗಿ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿತ್ತು.

ಇದನ್ನೂ ಓದಿರಿ: 2018-2022ರ ನಡುವೆ 79% ಸವರ್ಣಿಯರು ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕ: ಪ್ರಾತಿನಿಧ್ಯದ ಪ್ರಶ್ನೆಗೆ ಉತ್ತರ ಸಿಗುವುದೇ?

ನ್ಯಾಯಾಲಯವು ಶುಕ್ರವಾರ ತನ್ನ ತೀರ್ಪನ್ನು ಕಾಯ್ದಿರಿಸಿದೆ. “ಅದು ಸರ್ಕಾರ ನೇಮಿಸಿದ ಸಮಿತಿ” ಎಂಬ ದೂಷಣೆಯಿಂದ ಪಾರಾಗಲು ತನ್ನದೇ ಆದ ಸಮಿತಿಯನ್ನು ನೇಮಿಸುವುದಾಗಿ ಹೇಳಿದೆ.

ಕೇಂದ್ರಕ್ಕೆ ಮತ್ತೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್: ಹಿಂಡನ್‌ಬರ್ಗ್ ವರದಿಯಿಂದ ಮಾರುಕಟ್ಟೆ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಸರಕಾರ ‌ತಿಳಿಸಿರುವುದನ್ನು ನ್ಯಾಯಾಲಯ ಪರಿಗಣಿಸಿಲ್ಲ.

“ಮಾರುಕಟ್ಟೆಯ ಮೇಲೆ ಯಾವುದೇ ಪರಿಣಾಮವಾಗಿಲ್ಲ ಎಂದು ನೀವು ಹೇಳುತ್ತಿದ್ದೀರಿ. ಆದರೆ ಅಂಕಿಅಂಶಗಳು ಹೇಳುವಂತೆ ಹೂಡಿಕೆದಾರರು ಲಕ್ಷ ಕೋಟಿ ಮೌಲ್ಯದ ನಷ್ಟವನ್ನು ಎದುರಿಸಿದ್ದಾರೆ” ಎಂದಿದೆ ಕೋರ್ಟ್.

ಸುಪ್ರೀಂ ಕೋರ್ಟ್ ಮುಂದಿವೆ ನಾಲ್ಕು ಅರ್ಜಿಗಳು

  1. ಹಿಂಡೆನ್‌ಬರ್ಗ್ ರಿಸರ್ಚ್ ಸಂಸ್ಥಾಪಕ ನಾಥನ್ ಆಂಡರ್ಸನ್ ಮತ್ತು ಭಾರತದಲ್ಲಿನ ಅವರ ಸಹಚರರ ವಿರುದ್ಧ ತನಿಖೆ ನಡೆಸಬೇಕು, ಪ್ರಥಮ ಮಾಹಿತಿ ವರದಿಯನ್ನು (ಎಫ್‌ಐಆರ್) ದಾಖಲಿಸಬೇಕು ಎಂದು ವಕೀಲ ಮನೋಹರ್ ಲಾಲ್ ಶರ್ಮಾ ಅವರು ಮನವಿ ಮಾಡಿದ್ದಾರೆ. ಅಂತಹ ವರದಿಗಳನ್ನು ಮೊದಲು ಸೆಬಿಗೆ ಸಲ್ಲಿಸಿ ಪರಿಶೀಲಿಸದ ಹೊರತು ಇಂತಹ ಕಂಪನಿಗಳ ಬಗ್ಗೆ ಮಾಧ್ಯಮಗಳು ವರದಿ ಮಾಡದಂತೆ ತಡೆಯಬೇಕು ಎಂದು ಶರ್ಮಾ ಅವರು ಅರ್ಜಿಯಲ್ಲಿ ಕೋರಿದ್ದಾರೆ.
  2. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿಯಿಂದ ವರದಿಯ ಬಗ್ಗೆ ತನಿಖೆ ನಡೆಸಬೇಕೆಂದು ವಕೀಲ ವಿಶಾಲ್ ತಿವಾರಿ ಅವರು ಕೋರಿದ್ದಾರೆ. 500 ಕೋಟಿಗೂ ಹೆಚ್ಚಿನ ಸಾಲ ಮಂಜೂರಾತಿ ನೀತಿಯನ್ನು ಮೇಲ್ವಿಚಾರಣೆ ಮಾಡಲು ವಿಶೇಷ ಸಮಿತಿಯನ್ನು ರಚಿಸುವಂತೆಯೂ ಅವರು ಕೇಳಿಕೊಂಡಿದ್ದಾರೆ.
  3. ಕಾಂಗ್ರೆಸ್ ನಾಯಕಿ ಜಯಾ ಠಾಕೂರ್ ಅವರು ತಮ್ಮ ಅರ್ಜಿಯಲ್ಲಿ, “ಅದಾನಿ ಸಮೂಹವನ್ನು ಬಹು ಕಾನೂನುಗಳ ಅಡಿಯಲ್ಲಿ ವಿಚಾರಣೆಗೆ ಒಳಪಡಿಸಬೇಕು” ಎಂದು ಆಗ್ರಹಿಸಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮತ್ತು ಲೈಫ್ ಇನ್ಶುರೆನ್ಸ್ ಕಾರ್ಪೊರೇಷನ್ (LIC) ಸಂಸ್ಥೆಗಳು ಅದಾನಿ ಷೇರುಗಳಲ್ಲಿ ಹೂಡಿಕೆ ಮಾಡಿರುವ ನಿರ್ಧಾರವನ್ನು ಪ್ರಶ್ನಿಸಿದ್ದಾರೆ.
  4. ಹಿಂಡೆನ್‌ಬರ್ಗ್ ವರದಿಯನ್ನು ಆಧರಿಸಿ ಅದಾನಿ ಗುಂಪಿನ ವಿರುದ್ಧ ತನಿಖೆ ಮಾಡಬೇಕು ಎಂದು ಅನಾಮಿಕಾ ಜೈಸ್ವಾಲ್ ಸಲ್ಲಿಸಿದ ಮತ್ತೊಂದು ಅರ್ಜಿ ಒತ್ತಾಯಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...