Homeಮುಖಪುಟಏಕನಾಥ್ ಶಿಂಧೆ ಬಣವೇ ನಿಜವಾದ ಶಿವಸೇನೆ: ಚುನಾವಣಾ ಆಯೋಗ ಆದೇಶ

ಏಕನಾಥ್ ಶಿಂಧೆ ಬಣವೇ ನಿಜವಾದ ಶಿವಸೇನೆ: ಚುನಾವಣಾ ಆಯೋಗ ಆದೇಶ

- Advertisement -
- Advertisement -

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣವೇ ನಿಜವಾದ ಶಿವಸೇನೆ ಎಂದು ಗುರುತಿಸಿ ಬಿಲ್ಲು ಮತ್ತು ಬಾಣದ ಚಿಹ್ನೆಯನ್ನು ಚುನಾವಣಾ ಆಯೋಗವು ನಿಗದಿಪಡಿಸಿದೆ.

ಶುಕ್ರವಾರ ಪ್ರಕಟಿಸಲಾದ 78 ಪುಟಗಳ ಆದೇಶದಲ್ಲಿ ಚುನಾವಣಾ ಆಯೋಗವು, “2019ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಗೆದ್ದ 55 ಅಭ್ಯರ್ಥಿಗಳ ಪೈಕಿ  ಶಿಂಧೆ ಅವರನ್ನು ಬೆಂಬಲಿಸುವ 40 ಶಾಸಕರು ಇದ್ದಾರೆ. ಅವರ ಪರವಾಗಿ ಸುಮಾರು 76% ಮತಗಳು ಬಿದ್ದಿವೆ. ಮತ್ತೊಂದೆಡೆ, ಉದ್ಧವ್ ಠಾಕ್ರೆ ಬಣದ 15 ಶಾಸಕರಿದ್ದು, ಅವರಿಗೆ 23.5% ಮತಗಳು ಬಂದಿವೆ” ಎಂದು ತಿಳಿಸಿದೆ.

“2019ರ ಲೋಕಸಭೆ ಚುನಾವಣೆಯಲ್ಲಿ ಶಿವಸೇನೆಯ ಪರವಾಗಿ ಚಲಾವಣೆಯಾದ ಒಟ್ಟು ಮತಗಳಲ್ಲಿ 73% ಶಿಂಧೆ ಬಣದ 13 ಸಂಸದರು ಪಡೆದರೆ, ಕೇವಲ 27% ಮತಗಳು ಠಾಕ್ರೆ ಪಾಳಯದ ಸಂಸದರಿಗೆ ಬಂದಿವೆ” ಎಂದಿದೆ.

ಶಿವಸೇನೆ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್‌ನ ಒಗ್ಗೂಡಿ ರಚಿಸಿದ ಮಹಾರಾಷ್ಟ್ರದ ಹಿಂದಿನ ಸರ್ಕಾರದ ವಿರುದ್ಧ ಶಿಂಧೆ ಮತ್ತು ಇತರ ಶಾಸಕರ ಗುಂಪು ಬಂಡಾಯವೆದ್ದ ನಂತರ ಮಹಾ ಅಘಾಡಿ ಸರ್ಕಾರವು ಜೂನ್‌ನಲ್ಲಿ ವಿಭಜನೆಯಾಯಿತು.

ಒಂದು ವಾರಕ್ಕೂ ಹೆಚ್ಚು ಕಾಲ ನಡೆದ ರಾಜಕೀಯ ನಾಟಕದ ನಂತರ, ಸಮ್ಮಿಶ್ರ ಸರ್ಕಾರ ಪತನವಾಯಿತು. ಜೂನ್ 30ರಂದು ಶಿಂಧೆಯವರು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಭಾರತೀಯ ಜನತಾ ಪಕ್ಷದ ದೇವೇಂದ್ರ ಫಡ್ನವಿಸ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಠಾಕ್ರೆ ಮತ್ತು ಶಿಂಧೆ ನೇತೃತ್ವದ ಎರಡು ಬಣಗಳ ನಡುವೆ ನಿಜವಾದ ಶಿವಸೇನೆ ಯಾವುದೆಂಬ ಜಟಾಪಟಿ ಉಂಟಾಗಿತ್ತು. ಅದಕ್ಕಾಗಿ ಚುನಾವಣಾ ಸಂಸ್ಥೆಯನ್ನು ಸಂಪರ್ಕಿಸಿದ್ದವು.

ಶಿಂಧೆ ಅವರನ್ನು ಬಾಳಾಸಾಹೆಬಂಚಿ ಶಿವಸೇನೆ ಎಂದು ಕರೆಯಲಾಗುವುದು ಎಂದು ಚುನಾವಣಾ ಆಯೋಗ ಮಧ್ಯಂತರ ನಿರ್ಧಾರದಲ್ಲಿ ಹೇಳಿತ್ತು. ಈ ಬಣವು ತನ್ನ ಮಧ್ಯಂತರ ಚಿಹ್ನೆಯಾಗಿ ಎರಡು ಕತ್ತಿಗಳು ಮತ್ತು ಗುರಾಣಿಯನ್ನು ಆರಿಸಿಕೊಂಡಿದೆ.

ಮಧ್ಯಂತರ ಹೆಸರು ಮತ್ತು ಚಿಹ್ನೆಯನ್ನು ಸ್ಥಗಿತದಲ್ಲಿ ಇಡಲಾಗುವುದು ಎಂದು ಚುನಾವಣಾ ಸಂಸ್ಥೆ ತಿಳಿಸಿದೆ. ರಾಜ್ಯದಲ್ಲಿ ವಿಧಾನಸಭಾ ಉಪಚುನಾವಣೆ ಮುಗಿಯುವವರೆಗೆ ಉದ್ಧವ್ ಠಾಕ್ರೆ ಬಣವು ತನ್ನ ಮಧ್ಯಂತರ ಚಿಹ್ನೆ – ಜ್ವಾಲೆಯ ಜ್ಯೋತಿಯನ್ನು ಇಟ್ಟುಕೊಳ್ಳಲು ಚುನಾವಣಾ ಆಯೋಗವು ಅನುಮತಿ ನೀಡಿದೆ.

ಶುಕ್ರವಾರ ಸಂಜೆ, ಶಿಂಧೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ, “ಚುನಾವಣಾ ಆಯೋಗದ ನಿರ್ಧಾರವು ಸತ್ಯ ಮತ್ತು ಜನರ ವಿಜಯವಾಗಿದೆ. ನಾನು ಚುನಾವಣಾ ಆಯೋಗಕ್ಕೆ ಧನ್ಯವಾದ ಹೇಳುತ್ತೇನೆ. ಪ್ರಜಾಪ್ರಭುತ್ವದಲ್ಲಿ ಬಹುಮತ ಪರಿಗಣನೆಯಾಗುತ್ತದೆ. ಇದು ಬಾಳಾಸಾಹೇಬರ [ಠಾಕ್ರೆ] ಪರಂಪರೆಯ ವಿಜಯವಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಅದಾನಿ ಹಗರಣ| ಸುಪ್ರೀಂ ಕೋರ್ಟ್ ಮುಂದಿವೆ ನಾಲ್ಕು ಅರ್ಜಿ

ಚುನಾವಣಾ ಆಯೋಗವು ಅರ್ಹತೆಯ ಆಧಾರದಲ್ಲಿ ನಿರ್ಧಾರ ಕೈಗೊಂಡಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

ಇದರ ನಡುವೆ ಠಾಕ್ರೆ ಬಣದ ಸಂಸದ ಸಂಜಯ್ ರಾವುತ್ ಪ್ರತಿಕ್ರಿಯಿಸಿ, “ಚುನಾವಣಾ ಆಯೋಗದ ನಿರ್ಧಾರವು ಪ್ರಜಾಪ್ರಭುತ್ವದ ಕೊಲೆಯಾಗಿದೆ” ಎಂದು ಬಣ್ಣಿಸಿದ್ದಾರೆ.

“ನಾವು ಈ ನಿರ್ಧಾರವನ್ನು ಪ್ರಶ್ನಿಸುತ್ತೇವೆ. ಇಂತಹ ನಿರ್ಧಾರವನ್ನು ನಿರೀಕ್ಷಿಸಲಾಗಿತ್ತು. ಇದೆಲ್ಲವೂ ಒತ್ತಡದಲ್ಲಿ ನಡೆದಿದೆ. ನನಗೆ ಚುನಾವಣಾ ಆಯೋಗದ ಮೇಲೆ ನಂಬಿಕೆ ಇಲ್ಲ” ಎಂದು ಟೀಕಿಸಿದ್ದಾರೆ.

‘ಶಿವಸೇನೆಯ ಸಂವಿಧಾನ ಪ್ರಜಾಸತ್ತಾತ್ಮಕವಲ್ಲ’

ಚುನಾವಣಾ ಆಯೋಗವು ತನ್ನ ಆದೇಶದಲ್ಲಿ, ಶಿವಸೇನೆ ಪಕ್ಷದ ಸಂವಿಧಾನವು ಪ್ರಜಾಸತ್ತಾತ್ಮಕವಲ್ಲ ಎಂದು ಗುರುತಿಸಿದೆ.

2018ರಲ್ಲಿ ಪಕ್ಷದ ಸಂವಿಧಾನದಲ್ಲಿ ಮಾಡಲಾದ ತಿದ್ದುಪಡಿಗಳ ಬಗ್ಗೆ ಚುನಾವಣಾ ಆಯೋಗಕ್ಕೆ ತಿಳಿಸಲಾಗಿಲ್ಲ ಎಂದು ಅದು ಗಮನಿಸಿದೆ. ಶಿವಸೇನಾ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ತಂದ ಪ್ರಜಾಸತ್ತಾತ್ಮಕ ಮಾನದಂಡಗಳನ್ನು ತೆಗೆದುಹಾಕಲಾಗಿದೆ ಎಂದು ಆಯೋಗ ಉಲ್ಲೇಖಿಸಿದೆ.

ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು

ಠಾಕ್ರೆ ನೇತೃತ್ವದ ಸರ್ಕಾರದ ಪತನ ಮತ್ತು ಶಿಂಧೆ ಪ್ರಮಾಣ ವಚನಕ್ಕೆ ಕಾರಣವಾದ ರಾಜಕೀಯ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಎರಡು ಬಣಗಳು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...