Homeಮುಖಪುಟಪ್ರಶ್ನೆಪತ್ರಿಕೆ ಸೋರಿಕೆ ವಿವಾದ; ಅರುಣಾಚಲದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

ಪ್ರಶ್ನೆಪತ್ರಿಕೆ ಸೋರಿಕೆ ವಿವಾದ; ಅರುಣಾಚಲದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

- Advertisement -
- Advertisement -

ಅರುಣಾಚಲ ಪ್ರದೇಶ ಲೋಕಸೇವಾ ಆಯೋಗದ ವಿರುದ್ಧ ಶುಕ್ರವಾರ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಬಳಿಕ ಇಟಾನಗರದಲ್ಲಿ ನಾಲ್ವರು ಭದ್ರತಾ ಅಧಿಕಾರಿಗಳು ಸೇರಿದಂತೆ ಹತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಪ್ರತಿಭಟನಾಕಾರರ ವಿರುದ್ಧ ಭದ್ರತಾ ಸಿಬ್ಬಂದಿ ಅಶ್ರುವಾಯು ಪ್ರಯೋಗಿಸಿ, ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ಪೊಲೀಸ್ ಮಹಾನಿರೀಕ್ಷಕ ಚುಕು ಅಪಾ ಹೇಳಿದ್ದಾರೆ.

“ಕೆಲವು ಪ್ರತಿಭಟನಾಕಾರರು ಮೋಟಾರ್ ಸೈಕಲ್, ನಾಲ್ಕು ಚಕ್ರದ ವಾಹನವನ್ನು ಸುಟ್ಟುಹಾಕಿದಾಗ ಪರಿಸ್ಥಿತಿ ಹಿಂಸಾತ್ಮಕವಾಗಿ ಮಾರ್ಪಟ್ಟಿತು. ಆಸ್ತಿಪಾಸ್ತಿಗಳನ್ನು ಹಾನಿಗೊಳಿಸಲಾಗಿದೆ. ಭದ್ರತಾ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ನಡೆದಿದೆ” ಎಂದು ಅಪಾ ತಿಳಿಸಿದ್ದಾರೆ.

“ಯಾವುದೇ ಅಹಿತಕರ ಪರಿಸ್ಥಿತಿಯನ್ನು ಎದುರಿಸಲು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಇಟಾನಗರ ಪ್ರದೇಶದಲ್ಲಿ ಸಾಕಷ್ಟು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಅರುಣಾಚಲ ಪ್ರದೇಶ ಲೋಕಸೇವಾ ಆಯೋಗದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಇತ್ತೀಚೆಗೆ ಸೋರಿಕೆಯಾಗಿರುವುದನ್ನು ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಜೊತೆಗೆ ಶಂತನು ದಯಾಳ್ ಅವರನ್ನು ಅರುಣಾಚಲ ಪ್ರದೇಶ ಲೋಕಸೇವಾ ಆಯೋಗದ ಪರೀಕ್ಷೆಯ ಅಧ್ಯಕ್ಷರನ್ನಾಗಿ ನೇಮಿಸುವುದಕ್ಕೂ ಪ್ರತಿಭಟನಾಕಾರರು ವಿರೋಧ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯ ನೇತೃತ್ವ ವಹಿಸಿರುವ ಪ್ಯಾನ್ ಅರುಣಾಚಲ ಜಂಟಿ ಸ್ಟೀರಿಂಗ್ ಕಮಿಟಿ (ಪಿಎಜೆಎಸ್‌ಸಿ) ಪ್ರತಿಕ್ರಿಯಿಸಿದ್ದು, “ದಯಾಳ್ ಅವರಿಗೆ 61 ವರ್ಷ ವಯಸ್ಸಾಗಿದೆ. ಅವರು ಅಧ್ಯಕ್ಷರಾಗಿ ಸೇವೆ ಸಲ್ಲಿಸಲು ಕೇವಲ ಒಂದು ವರ್ಷ ಮಾತ್ರ ಸಾಧ್ಯ. 62 ವರ್ಷಗಳಿಗೆ ಆಯೋಗದಿಂದ ನಿವೃತ್ತಿ ಹೊಂದುವುದು ಕಡ್ಡಾಯವಾಗಿದೆ” ಎಂದಿದೆ.

“ಸರ್ಕಾರ ಮತ್ತು ಆಯೋಗವು ತಮ್ಮ ಪತ್ರಿಕೆ-ಮಾರಾಟದ ವ್ಯವಹಾರವನ್ನು ಪೂರ್ಣಗೊಳಿಸುವ ಉದ್ದೇಶದಲ್ಲಿದೆ. ಅದಕ್ಕಾಗಿಯೇ ಅವರು ಕೇವಲ ಒಂದು ವರ್ಷ ಅಧಿಕಾರದಲ್ಲಿ ಉಳಿಯಲಿರುವ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ನೇಮಿಸಲು ಆತುರಪಡಲಾಗುತ್ತಿದೆ” ಎಂದು ಪಿಎಜೆಎಸ್‌ಸಿ ಸದಸ್ಯ ಗ್ಯಾಮರ್ ಪಡಂಗ್ ಗುರುವಾರ ಆರೋಪಿಸಿದ್ದಾರೆ.

ಇಟಾನಗರದಲ್ಲಿ ವ್ಯಾಪಾರ ಸಂಸ್ಥೆಗಳು, ಮಾರುಕಟ್ಟೆಗಳು, ಬ್ಯಾಂಕ್‌ಗಳು, ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಮತ್ತು ಖಾಸಗಿ ಕಚೇರಿಗಳನ್ನು ಮುಚ್ಚಿ ಒಂದು ದಿನದ ಬಂದ್‌ಗೆ ಕರೆ ನೀಡಲಾಗಿತ್ತು ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿರಿ: ಹರಿರ್ಯಾಣ- ರಾಜಸ್ಥಾನ ಗಡಿ: ಇಬ್ಬರು ಮುಸ್ಲಿಮರನ್ನು ಜೀವಂತವಾಗಿ ಸುಟ್ಟ ದುಷ್ಕರ್ಮಿಗಳು; ಸ್ಥಳೀಯರಲ್ಲಿ ಭೀತಿ

ರಾಜ್ಯದಲ್ಲಿನ ಎಲ್ಲಾ ನೇಮಕಾತಿ ಪರೀಕ್ಷೆಗಳನ್ನು ಕೇಂದ್ರ ಲೋಕಸೇವಾ ಆಯೋಗವು ನಡೆಸುತ್ತದೆ, ಪತ್ರಿಕೆ ಸೋರಿಕೆ ಕುರಿತು ತ್ರಿಸದಸ್ಯ ಸಮಿತಿಯ ವರದಿಯನ್ನು ಸಾರ್ವಜನಿಕಗೊಳಿಸಬೇಕು, ರಾಜ್ಯ ಆಯೋಗದ ಅಡಿಯಲ್ಲಿ ನಿಯೋಜಿಸಲಾದ ಮೂವರು ರಾಜ್ಯ ಸರ್ಕಾರಿ ಅಧಿಕಾರಿಗಳನ್ನು ಹಿಂಪಡೆಯಬೇಕು. ನೊಂದ ಅಭ್ಯರ್ಥಿಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಪಿಎಜೆಎಸ್‌ಸಿ ಒತ್ತಾಯಿಸಿದೆ.

ಅರುಣಾಚಲ ಪ್ರದೇಶ ಲೋಕಸೇವಾ ಆಯೋಗದ ವಿರುದ್ಧದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗುತ್ತಿದ್ದಂತೆ, ರಾಜ್ಯ ಸಚಿವ ಸಂಪುಟವು ದಯಾಳ್ ಮತ್ತು ಇತರ ಅಧಿಕಾರಿಗಳ ಪ್ರಮಾಣವಚನ ಸಮಾರಂಭವನ್ನು ಶುಕ್ರವಾರ ರದ್ದುಗೊಳಿಸಿತು.

“ಈ ವಿಷಯವನ್ನು ಅರುಣಾಚಲ ಪ್ರದೇಶದ ಎಲ್ಲಾ ಸಮುದಾಯ-ಆಧಾರಿತ ಸಂಸ್ಥೆಗಳು ಮತ್ತು ಭಾಗಿಧಾರರೊಂದಿಗೆ ಚರ್ಚಿಸಲಾಗುವುದು” ಎಂದು ಕ್ಯಾಬಿನೆಟ್ ತಿಳಿಸಿರುವುದಾಗಿ ಅರುಣಾಚಲ ಟೈಮ್ಸ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....