Homeಮುಖಪುಟಪ್ರಶ್ನೆಪತ್ರಿಕೆ ಸೋರಿಕೆ ವಿವಾದ; ಅರುಣಾಚಲದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

ಪ್ರಶ್ನೆಪತ್ರಿಕೆ ಸೋರಿಕೆ ವಿವಾದ; ಅರುಣಾಚಲದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

- Advertisement -
- Advertisement -

ಅರುಣಾಚಲ ಪ್ರದೇಶ ಲೋಕಸೇವಾ ಆಯೋಗದ ವಿರುದ್ಧ ಶುಕ್ರವಾರ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಬಳಿಕ ಇಟಾನಗರದಲ್ಲಿ ನಾಲ್ವರು ಭದ್ರತಾ ಅಧಿಕಾರಿಗಳು ಸೇರಿದಂತೆ ಹತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಪ್ರತಿಭಟನಾಕಾರರ ವಿರುದ್ಧ ಭದ್ರತಾ ಸಿಬ್ಬಂದಿ ಅಶ್ರುವಾಯು ಪ್ರಯೋಗಿಸಿ, ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ಪೊಲೀಸ್ ಮಹಾನಿರೀಕ್ಷಕ ಚುಕು ಅಪಾ ಹೇಳಿದ್ದಾರೆ.

“ಕೆಲವು ಪ್ರತಿಭಟನಾಕಾರರು ಮೋಟಾರ್ ಸೈಕಲ್, ನಾಲ್ಕು ಚಕ್ರದ ವಾಹನವನ್ನು ಸುಟ್ಟುಹಾಕಿದಾಗ ಪರಿಸ್ಥಿತಿ ಹಿಂಸಾತ್ಮಕವಾಗಿ ಮಾರ್ಪಟ್ಟಿತು. ಆಸ್ತಿಪಾಸ್ತಿಗಳನ್ನು ಹಾನಿಗೊಳಿಸಲಾಗಿದೆ. ಭದ್ರತಾ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ನಡೆದಿದೆ” ಎಂದು ಅಪಾ ತಿಳಿಸಿದ್ದಾರೆ.

“ಯಾವುದೇ ಅಹಿತಕರ ಪರಿಸ್ಥಿತಿಯನ್ನು ಎದುರಿಸಲು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಇಟಾನಗರ ಪ್ರದೇಶದಲ್ಲಿ ಸಾಕಷ್ಟು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಅರುಣಾಚಲ ಪ್ರದೇಶ ಲೋಕಸೇವಾ ಆಯೋಗದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಇತ್ತೀಚೆಗೆ ಸೋರಿಕೆಯಾಗಿರುವುದನ್ನು ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಜೊತೆಗೆ ಶಂತನು ದಯಾಳ್ ಅವರನ್ನು ಅರುಣಾಚಲ ಪ್ರದೇಶ ಲೋಕಸೇವಾ ಆಯೋಗದ ಪರೀಕ್ಷೆಯ ಅಧ್ಯಕ್ಷರನ್ನಾಗಿ ನೇಮಿಸುವುದಕ್ಕೂ ಪ್ರತಿಭಟನಾಕಾರರು ವಿರೋಧ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯ ನೇತೃತ್ವ ವಹಿಸಿರುವ ಪ್ಯಾನ್ ಅರುಣಾಚಲ ಜಂಟಿ ಸ್ಟೀರಿಂಗ್ ಕಮಿಟಿ (ಪಿಎಜೆಎಸ್‌ಸಿ) ಪ್ರತಿಕ್ರಿಯಿಸಿದ್ದು, “ದಯಾಳ್ ಅವರಿಗೆ 61 ವರ್ಷ ವಯಸ್ಸಾಗಿದೆ. ಅವರು ಅಧ್ಯಕ್ಷರಾಗಿ ಸೇವೆ ಸಲ್ಲಿಸಲು ಕೇವಲ ಒಂದು ವರ್ಷ ಮಾತ್ರ ಸಾಧ್ಯ. 62 ವರ್ಷಗಳಿಗೆ ಆಯೋಗದಿಂದ ನಿವೃತ್ತಿ ಹೊಂದುವುದು ಕಡ್ಡಾಯವಾಗಿದೆ” ಎಂದಿದೆ.

“ಸರ್ಕಾರ ಮತ್ತು ಆಯೋಗವು ತಮ್ಮ ಪತ್ರಿಕೆ-ಮಾರಾಟದ ವ್ಯವಹಾರವನ್ನು ಪೂರ್ಣಗೊಳಿಸುವ ಉದ್ದೇಶದಲ್ಲಿದೆ. ಅದಕ್ಕಾಗಿಯೇ ಅವರು ಕೇವಲ ಒಂದು ವರ್ಷ ಅಧಿಕಾರದಲ್ಲಿ ಉಳಿಯಲಿರುವ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ನೇಮಿಸಲು ಆತುರಪಡಲಾಗುತ್ತಿದೆ” ಎಂದು ಪಿಎಜೆಎಸ್‌ಸಿ ಸದಸ್ಯ ಗ್ಯಾಮರ್ ಪಡಂಗ್ ಗುರುವಾರ ಆರೋಪಿಸಿದ್ದಾರೆ.

ಇಟಾನಗರದಲ್ಲಿ ವ್ಯಾಪಾರ ಸಂಸ್ಥೆಗಳು, ಮಾರುಕಟ್ಟೆಗಳು, ಬ್ಯಾಂಕ್‌ಗಳು, ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಮತ್ತು ಖಾಸಗಿ ಕಚೇರಿಗಳನ್ನು ಮುಚ್ಚಿ ಒಂದು ದಿನದ ಬಂದ್‌ಗೆ ಕರೆ ನೀಡಲಾಗಿತ್ತು ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿರಿ: ಹರಿರ್ಯಾಣ- ರಾಜಸ್ಥಾನ ಗಡಿ: ಇಬ್ಬರು ಮುಸ್ಲಿಮರನ್ನು ಜೀವಂತವಾಗಿ ಸುಟ್ಟ ದುಷ್ಕರ್ಮಿಗಳು; ಸ್ಥಳೀಯರಲ್ಲಿ ಭೀತಿ

ರಾಜ್ಯದಲ್ಲಿನ ಎಲ್ಲಾ ನೇಮಕಾತಿ ಪರೀಕ್ಷೆಗಳನ್ನು ಕೇಂದ್ರ ಲೋಕಸೇವಾ ಆಯೋಗವು ನಡೆಸುತ್ತದೆ, ಪತ್ರಿಕೆ ಸೋರಿಕೆ ಕುರಿತು ತ್ರಿಸದಸ್ಯ ಸಮಿತಿಯ ವರದಿಯನ್ನು ಸಾರ್ವಜನಿಕಗೊಳಿಸಬೇಕು, ರಾಜ್ಯ ಆಯೋಗದ ಅಡಿಯಲ್ಲಿ ನಿಯೋಜಿಸಲಾದ ಮೂವರು ರಾಜ್ಯ ಸರ್ಕಾರಿ ಅಧಿಕಾರಿಗಳನ್ನು ಹಿಂಪಡೆಯಬೇಕು. ನೊಂದ ಅಭ್ಯರ್ಥಿಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಪಿಎಜೆಎಸ್‌ಸಿ ಒತ್ತಾಯಿಸಿದೆ.

ಅರುಣಾಚಲ ಪ್ರದೇಶ ಲೋಕಸೇವಾ ಆಯೋಗದ ವಿರುದ್ಧದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗುತ್ತಿದ್ದಂತೆ, ರಾಜ್ಯ ಸಚಿವ ಸಂಪುಟವು ದಯಾಳ್ ಮತ್ತು ಇತರ ಅಧಿಕಾರಿಗಳ ಪ್ರಮಾಣವಚನ ಸಮಾರಂಭವನ್ನು ಶುಕ್ರವಾರ ರದ್ದುಗೊಳಿಸಿತು.

“ಈ ವಿಷಯವನ್ನು ಅರುಣಾಚಲ ಪ್ರದೇಶದ ಎಲ್ಲಾ ಸಮುದಾಯ-ಆಧಾರಿತ ಸಂಸ್ಥೆಗಳು ಮತ್ತು ಭಾಗಿಧಾರರೊಂದಿಗೆ ಚರ್ಚಿಸಲಾಗುವುದು” ಎಂದು ಕ್ಯಾಬಿನೆಟ್ ತಿಳಿಸಿರುವುದಾಗಿ ಅರುಣಾಚಲ ಟೈಮ್ಸ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...