Homeಮುಖಪುಟದೆಹಲಿ ಮುನ್ಸಿಪಲ್ ಮೇಯರ್‌ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರು ಮತ ಹಾಕುವಂತಿಲ್ಲ: ಸುಪ್ರೀಂ ಆದೇಶದಿಂದ ಎಎಪಿಗೆ ಗೆಲುವು

ದೆಹಲಿ ಮುನ್ಸಿಪಲ್ ಮೇಯರ್‌ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರು ಮತ ಹಾಕುವಂತಿಲ್ಲ: ಸುಪ್ರೀಂ ಆದೇಶದಿಂದ ಎಎಪಿಗೆ ಗೆಲುವು

- Advertisement -
- Advertisement -

ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ನ ನಾಮನಿರ್ದೇಶಿತ ಸದಸ್ಯರು ಮೇಯರ್ ಹುದ್ದೆಯ ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ತೀರ್ಪು ನೀಡಿದ್ದು, ಆಮ್‌ ಆದ್ಮಿ ಪಕ್ಷಕ್ಕೆ ಬಹುದೊಡ್ಡ ಗೆಲುವು ಸಿಕ್ಕಂತಾಗಿದೆ.

ಮೇಯರ್ ಆಯ್ಕೆಗಾಗಿ ಚುನಾವಣೆಯ ದಿನಾಂಕವನ್ನು 24 ಗಂಟೆಗಳ ಒಳಗೆ ಪ್ರಕಟಿಸುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅವರಿಗೆ ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆ.ಬಿ.ಪಾರ್ದಿವಾಲಾ ಅವರನ್ನೊಳಗೊಂಡ ಪೀಠವು ಸೂಚಿಸಿದೆ.

ಸ್ಥಳೀಯ ಸಂಸ್ಥೆಯ ಚುನಾವಣೆಗಳು ನಡೆದು ಎರಡು ತಿಂಗಳಾದರೂ ದೆಹಲಿಯ ಮೇಯರ್ ಆಯ್ಕೆಯಾಗಿಲ್ಲ. ಆಮ್ ಆದ್ಮಿ ಪಕ್ಷ ಮತ್ತು ಭಾರತೀಯ ಜನತಾ ಪಕ್ಷದ ನಡುವಿನ ಬಿಕ್ಕಟ್ಟಿನಿಂದಾಗಿ ಈ ಚುನಾವಣೆ ವಿಳಂಬವಾಗುತ್ತಿದೆ.

ಕಳೆದ ಡಿಸೆಂಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಬಿಜೆಪಿಯನ್ನು ಸೋಲಿಸಿತು. ಬಿಜೆಪಿ ವಶದಲ್ಲಿದ್ದ ಮುನ್ಸಿಪಲ್‌ ಕಾರ್ಪೊರೇಷನ್‌ 15 ವರ್ಷಗಳ ನಂತರ ಆಮ್‌ ಆದ್ಮಿ ವಶವಾಯಿತು. ಆದರೆ ಪೌರಾಯುಕ್ತರನ್ನು ಆಯ್ಕೆ ಮಾಡುವ ಚುನಾವಣೆಯು ಮೂರು ಬಾರಿ ಸ್ಥಗಿತಗೊಂಡಿದೆ. ಮುನ್ಸಿಪಲ್‌ನ ನಾಮನಿರ್ದೇಶಿತ ಸದಸ್ಯರು ಅಥವಾ ಹಿರಿಯರು ಮತ ಚಲಾಯಿಸಬಹುದು ಎಂದು ಅಧ್ಯಕ್ಷೀಯ ಅಧಿಕಾರಿ ಹೇಳಿದ್ದರು.

ಮುನ್ಸಿಪಲ್ ಆಡಳಿತದ ಕುರಿತು ವಿಶೇಷ ಜ್ಞಾನವನ್ನು ಹೊಂದಿರುವ ನಾಮನಿರ್ದೇಶಿತ ಕೌನ್ಸಿಲರ್‌ಗಳು ಸಾರ್ವಜನಿಕರಿಗೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳಲ್ಲಿ ಸದನಕ್ಕೆ ಸಹಾಯ ಮಾಡುವ ಕೆಲಸ ಮಾಡುತ್ತಾರೆ. ಅವರನ್ನು ಲೆಫ್ಟಿನೆಂಟ್ ಗವರ್ನರ್ ನೇಮಕ ಮಾಡುತ್ತಾರೆ.

ಚುನಾವಣೆಯಲ್ಲಿ ಸೋತರೂ ಮುನ್ಸಿಪಲ್‌ ಮೇಲೆ ಹಿಡಿತ ಸಾಧಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ. ನಾಮನಿರ್ದೇಶಿತ ಕೌನ್ಸಿಲರ್‌ಗಳು ಬಿಜೆಪಿ ಬೆಂಬಲಿಗರು ಎಂದು ಆರೋಪಿಸಿದೆ. ಆಮ್ ಆದ್ಮಿ ಪಕ್ಷದ ಮೇಯರ್ ಅಭ್ಯರ್ಥಿ ಶೆಲ್ಲಿ ಒಬೆರಾಯ್ ಅವರು ಜನವರಿಯಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ ಮೇಯರ್ ಚುನಾವಣೆಯನ್ನು ಕಾಲಮಿತಿಯಲ್ಲಿ ನಡೆಸಬೇಕೆಂದು ಕೋರಿದ್ದರು.

ಸಂವಿಧಾನದ 243 ಆರ್ ಮತ್ತು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಕಾಯಿದೆಯ ಸೆಕ್ಷನ್ 3 (3)ರ ಪ್ರಕಾರ ನಾಮನಿರ್ದೇಶನಗೊಂಡ ವ್ಯಕ್ತಿಗಳು ಈ ಸಂದರ್ಭದಲ್ಲಿ ಮತದಾನದ ಹಕ್ಕನ್ನು ಹೊಂದಿಲ್ಲ ಎಂದು ಸುಪ್ರೀಂಕೋರ್ಟ್ ಶುಕ್ರವಾರ ಸ್ಪಷ್ಟಪಡಿಸಿದೆ.

ಇದನ್ನೂ ಓದಿರಿ: ಏಕನಾಥ್ ಶಿಂಧೆ ಬಣವೇ ನಿಜವಾದ ಶಿವಸೇನೆ: ಚುನಾವಣಾ ಆಯೋಗ ಆದೇಶ

ಮೇಯರ್ ಆಯ್ಕೆಯಾದ ನಂತರ ಉಪಮೇಯರ್ ಚುನಾವಣೆಯಲ್ಲಿ ಮೇಯರ್‌ ಅವರೇ ಅಧ್ಯಕ್ಷರಾಗುತ್ತಾರೆ ಎಂದು ನ್ಯಾಯಾಧೀಶರು ಹೇಳಿದ್ದಾರೆ. ಮೇಯರ್, ಉಪಮೇಯರ್ ಮತ್ತು ಸ್ಥಾಯಿ ಸಮಿತಿಗೆ ಏಕಕಾಲದಲ್ಲಿ ಚುನಾವಣೆ ನಡೆಸಬಾರದು ಎಂದು ಒಬೆರಾಯ್ ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ ಟ್ವೀಟ್ ಮಾಡಿದ್ದು, “ಸುಪ್ರೀಂ ಕೋರ್ಟ್‌ಗೆ ಧನ್ಯವಾದಗಳು. ನ್ಯಾಯಾಲಯದ ನಿರ್ಧಾರವು ಪ್ರಜಾಪ್ರಭುತ್ವದ ವಿಜಯವಾಗಿದೆ” ಎಂದು ಬಣ್ಣಿಸಿದ್ದಾರೆ.

“ಎಲ್‌ಜಿ ಮತ್ತು ಬಿಜೆಪಿಯು ಅಕ್ರಮ, ಅಸಂವಿಧಾನಿಕ ಆದೇಶಗಳನ್ನು ಪ್ರತಿ ದಿನವೂ ಒಪ್ಪಂದ ಮಾಡಿಕೊಳ್ಳುತ್ತಿವೆ ಎಂಬುದು ಸಾಬೀತಾಗಿದೆ” ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....