Homeಕರ್ನಾಟಕ37 ವರ್ಷಗಳಿಂದ ಆಡಳಿತರೂಢಾ ಯಾವುದೇ ಸರ್ಕಾರ ರಾಜ್ಯದಲ್ಲಿ ಮರು ಆಯ್ಕೆಯಾಗಿಲ್ಲ; ಬಿಜೆಪಿ ಕಥೆ ಏನಾಗಲಿದೆ?

37 ವರ್ಷಗಳಿಂದ ಆಡಳಿತರೂಢಾ ಯಾವುದೇ ಸರ್ಕಾರ ರಾಜ್ಯದಲ್ಲಿ ಮರು ಆಯ್ಕೆಯಾಗಿಲ್ಲ; ಬಿಜೆಪಿ ಕಥೆ ಏನಾಗಲಿದೆ?

- Advertisement -
- Advertisement -

ಏಪ್ರಿಲ್ – ಮೇ ವೇಳೆಗೆ ಕರ್ನಾಟಕದಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದೆ. ವಿಶೇಷವೆಂದರೆ ಕಳೆದ 37 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಯಾವುದೇ ಆಡಳಿತರೂಢ ಪಕ್ಷದ ಸರ್ಕಾರವು ಮರು ಆಯ್ಕೆಯಾಗಿಲ್ಲ ಎಂಬುದು ಗಮನಾರ್ಹ ಸಂಗತಿ. ಹೀಗಾಗಿ ಈಗ ಅಧಿಕಾರದಲ್ಲಿರುವ ಬಿಜೆಪಿ ಮತ್ತೆ ಗೆಲುವು ಸಾಧಿಸಿ, ಅಧಿಕಾರಕ್ಕೆ ಮರಳುವುದೇ? ಅಥವಾ ಕರ್ನಾಟಕ ಜನತೆ ಸರ್ಕಾರ ಬದಲಿಸುವ ಪರಂಪರೆಯನ್ನು ಮುಂದುವರಿಸುತ್ತಾರೆಯೇ? ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.

1985ನೇ ಇಸವಿಯೇ ಕೊನೆ, ನಂತರದ ಚುನಾವಣೆಯಲ್ಲಿ ಯಾವುದೇ ಸರ್ಕಾರ ಮರು ಆಯ್ಕೆಯಾಗಿದ್ದಿಲ್ಲ. ರಾಜ್ಯದ ಜನತೆ ಕಳೆದ 37 ವರ್ಷಗಳಿಂದ ವೈವಿಧ್ಯಮಯ ಫಲಿತಾಂಶವನ್ನು ನೀಡುತ್ತಾ ಬಂದಿದ್ದಾರೆ.

ಸತತ ಏಳು ಚುನಾವಣೆಗಳಲ್ಲಿಯೂ ಆಡಳಿತರೂಢ ಸರ್ಕಾರಗಳು ಅಧಿಕಾರ ಕಳೆದುಕೊಂಡಿವೆ. ಪರಿಣಾಮಕಾರಿಯಾಗಿ ಆಡಳಿತ ನಡೆಸಿದವರೂ ತಿರಸ್ಕರಿಸಲ್ಪಟ್ಟಿದ್ದಾರೆ. 1990ರ ದಶಕದಿಂದಲೂ ಮೂರು ಪ್ರಮುಖ ಪಕ್ಷಗಳು ಕಣದಲ್ಲಿದ್ದು, ಯಾವುದೇ ಪಕ್ಷವು ಸತತ ಬಹುಮತವನ್ನು ಪಡೆಯುವಲ್ಲಿ ವಿಫಲವಾಗುತ್ತಲೇ ಇವೆ.

ಮೂರು ಪಕ್ಷಗಳ ಮತಗಳು ಭೌಗೋಳಿಕವಾಗಿ ಹಂಚಿಹೋಗಿರುವಲ್ಲಿಯೂ ವ್ಯತ್ಯಾಸಗಳಿವೆ. ಕಾಂಗ್ರೆಸ್‌ಗೆ ರಾಜ್ಯಾದ್ಯಂತ ಮತದಾರರು ಗಣನೀಯವಾಗಿ ಇದ್ದಾರೆ. ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮತಗಳು ಮುಖ್ಯವಾಗಿ ರಾಜ್ಯದ ಉತ್ತರ ಮತ್ತು ಮಧ್ಯ ಭಾಗದಲ್ಲಿನ ಜಿಲ್ಲೆಗಳಲ್ಲಿ ಕೇಂದ್ರೀಕೃತವಾಗಿವೆ. ಲಿಂಗಾಯತ ಸಮುದಾಯದ ಬೆಂಬಲವನ್ನು ಬಿಜೆಪಿ ಹೆಚ್ಚಿನ ಮಟ್ಟದಲ್ಲಿ ಪಡೆದಿದೆ. ಜನತಾ ದಳ-ಜಾತ್ಯತೀತ (ಜೆಡಿಎಸ್) ಹಳೆ ಮೈಸೂರು ಭಾಗದಲ್ಲಿ ಪ್ರಾಬಲ್ಯ ಹೊಂದಿದೆ. ಒಕ್ಕಲಿಗ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್‌ ಜೊತೆಯಲ್ಲಿ ಕೇಂದ್ರೀಕೃತವಾಗಿದ್ದಾರೆ. ಕಾಂಗ್ರೆಸ್ ಜೊತೆಯಲ್ಲಿ ಪರಿಶಿಷ್ಟ ಜಾತಿಗಳು, ಮುಸ್ಲಿಂ, ಒಬಿಸಿ ಸಮುದಾಯಗಳು ಹೆಚ್ಚಿನ ಸಂಖ್ಯೆಗಳು ಗುರುತಿಸಿಕೊಂಡಿವೆ. ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷವು ಹೆಚ್ಚು ಮತಗಳನ್ನು ಪಡೆದರೂ, ಇತರ ಪಕ್ಷಗಳು ಹೆಚ್ಚು ಸ್ಥಾನಗಳನ್ನು ಗೆಲ್ಲಲೂಬಹುದು. ಉದಾಹರಣೆಗೆ, 2004ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿಗಿಂತ 7% ಹೆಚ್ಚು ಮತಗಳನ್ನು ಗಳಿಸಿತು, ಆದರೆ ಬಿಜೆಪಿಯು ಕಾಂಗ್ರೆಸ್‌ ಪಕ್ಷಕ್ಕಿಂತ 14 ಹೆಚ್ಚಿನ ಸ್ಥಾನಗಳನ್ನು ಗೆದ್ದಿತ್ತು.

ರಾಜ್ಯದಲ್ಲಿ ಲಿಂಗಾಯತರ ಜನಸಂಖ್ಯೆ ಶೇ. 14ರಿಂದ 17, ಒಕ್ಕಲಿಗರ ಸಂಖ್ಯೆ ಶೇ. 11-12, ಬ್ರಾಹ್ಮಣರು ಶೇ.3.5, ಒಬಿಸಿ ಶೇ. 23%, ಪರಿಶಿಷ್ಟ ಜಾತಿ (ದಲಿತರು) ಶೇ. 15ರಿಂದ 17, ಪರಿಶಿಷ್ಟ ಪಂಗಡ ಶೇ. 5- 7, ಮುಸ್ಲಿಮರ ಜನಸಂಖ್ಯೆ ಶೇ. 11- 16ರಷ್ಟಿದೆ ಎಂದು ಅಂಕಿಅಂಶಗಳು ಹೇಳುತ್ತವೆ.

ಬಲಾಢ್ಯ ಜಾತಿಗಳ ಪ್ರಾಬಲ್ಯವನ್ನು ಡಿ.ದೇವರಾಜ ಅರಸು (ಮುಖ್ಯಮಂತ್ರಿ, 1972-1980) ಅವರು ಮುರಿದಿದ್ದರು. ಲಿಂಗಾಯತರು ಮತ್ತು ಒಕ್ಕಲಿಗರನ್ನು ಬಿಟ್ಟು ಹೆಚ್ಚು ಸಂಖ್ಯೆಯಲ್ಲಿರುವ ಹಿಂದುಳಿದ ಜಾತಿಗಳನ್ನು ಸಂಘಟಿಸಿ ಚುನಾವಣಾ ನಿಯಮಗಳನ್ನು ಅರಸು ಬದಲಿಸಿದ್ದರು.

ಆದರೆ ಸಾಂಪ್ರದಾಯಿಕವಾಗಿ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯದವರು ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಟಿಕೆಟ್ ಪಡೆಯುತ್ತಾರೆ. ಈ ಸಮುದಾಯಗಳ ಸಂಖ್ಯಾ ಬಲಕ್ಕಿಂತ ಹೆಚ್ಚಿನ ರಾಜಕೀಯ ಸ್ಥಾನಮಾನ ಈ ಜಾತಿಗಳಿಗೆ ಇದೆ.

224 ವಿಧಾನಸಭಾ ಕ್ಷೇತ್ರಗಳು ಕರ್ನಾಟಕ ರಾಜ್ಯದಲ್ಲಿವೆ. 1983ರಲ್ಲಿ ಯಾವುದೇ ಪಕ್ಷ ಬಹುಮತ ಪಡೆದಿರಲಿಲ್ಲ. ರಾಮಕೃಷ್ಣ ಹೆಗಡೆಯವರ ನೇತೃತ್ವದ ಜನತಾ ಪಕ್ಷವು 92 ಸ್ಥಾನಗಳನ್ನು ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಬಿಜೆಪಿ ಮತ್ತು ಇತರ ಪಕ್ಷಗಳ ಬೆಂಬಲದೊಂದಿಗೆ ಅವರು ಸರ್ಕಾರ ರಚಿಸಿದ್ದರು. ಆದರೆ ಬಿಜೆಪಿ ಪಕ್ಷದ ತೊಂದರೆಗಳಿಂದ ಬೇಸೆತ್ತು ಅವರು ಎರಡೇ ವರ್ಷಕ್ಕೆ ಸರ್ಕಾರ ವಿಸರ್ಜಿಸಿ ಚುನಾವಣೆಗೆ ಹೋದರು,

1985ರ ಅಸೆಂಬ್ಲಿ ಚುನಾವಣೆಯಲ್ಲಿ ರಾಮಕೃಷ್ಣ ಹೆಗಡೆಯವರ ನೇತೃತ್ವದ ಜನತಾ ಪಕ್ಷ 139 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಮತ್ತೊಮ್ಮೆ ಅಧಿಕಾರ ಹಿಡಿದಿತ್ತು. ಅದೇ ಕೊನೆ ಸತತ ಎರಡನೇ ಬಾರಿಗೆ ಸರ್ಕಾರ ರಚಿಸಿದ ಪಕ್ಷವಾಗಿತ್ತು. ಕಾಂಗ್ರೆಸ್‌ ಆ ಚುನಾವಣೆಯಲ್ಲಿ 65 ಸ್ಥಾನಗಳನ್ನು ಪಡೆದಿತ್ತು. 1989ರಲ್ಲಿ ಮತ್ತೆ ಚುನಾವಣೆ ಎದುರಾಗಿ ವೀರೇಂದ್ರ ಪಾಟೀಲ್‌ ನಾಯಕತ್ವದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿತು. 178 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿತ್ತು. ಜನತಾ ದಳ 24 ಸ್ಥಾನಗಳಲ್ಲಿ ಗೆದ್ದಿತ್ತು.

ಬದಲಾದ ರಾಜಕೀಯ ಪರಿಸರದಲ್ಲಿ 1994ರಲ್ಲಿ ಎಚ್.ಡಿ.ದೇವೇಗೌಡ ಅವರ ನೇತೃತ್ವದ ಜನತಾ ದಳ 115 ಸ್ಥಾನಗಳನ್ನು ಪಡೆಯಿತು. ಬಿಜೆಪಿ 40 ಸ್ಥಾನಗಳನ್ನು ಪಡೆದರೆ ಕಾಂಗ್ರೆಸ್‌ ಕೇವಲ 34 ಸ್ಥಾನಗಳಿಗೆ ಕುಸಿಯಿತು. ಜನತಾ ದಳದ ನಾಯಕರಾಗಿದ್ದ ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿಯಾಗಿದ್ದರು.

1999ರಲ್ಲಿ ಮತ್ತೆ ಅಧಿಕಾರಕ್ಕೆ ಮರಳಿದ ಕಾಂಗ್ರೆಸ್ 132 ಸ್ಥಾನಗಳನ್ನು ಪಡೆಯಿತು. ಎಸ್‌.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾದರು. ಬಿಜೆಪಿ 44 ಸ್ಥಾನಗಳನ್ನು ಪಡೆದು, ಕಳೆದ ಚುನಾವಣೆಗಿಂತ 4 ಹೆಚ್ಚಿನ ಸ್ಥಾನಗಳನ್ನು ತನ್ನದಾಗಿಸಿಕೊಂಡಿತು. ಜನತಾ ದಳ ಒಡೆದು ಹೋಗಿ ‘ಜನತಾ ದಳ ಸೆಕ್ಯುಲರ್‌’ (ಜೆಡಿಎಸ್‌) ರಚನೆಯಾಗಿತ್ತು. ಈ ಚುನಾವಣೆಯಲ್ಲಿ ಜೆಡಿಎಸ್‌ 10 ಸ್ಥಾನಗಳನ್ನು ಪಡೆದಿತ್ತು.

2004ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯಲಿಲ್ಲ. 65 ಸೀಟ್‌ಗಳನ್ನು ಪಡೆದ ಕಾಂಗ್ರೆಸ್‌ 58 ಸೀಟ್‌ಗಳನ್ನು ಪಡೆದ ಜೆಡಿಎಸ್‌ನೊಂದಿಗೆ ಸಮ್ಮಿಶ್ರ ಸರ್ಕಾರ ರಚನೆ ಮಾಡಿತು. ಜೆಡಿಎಸ್‌ ತನ್ನ ಸ್ಥಾನಗಳನ್ನು ಗಣನೀಯವಾಗಿ ಹೆಚ್ಚಿಸಿಕೊಂಡು ಬಲವಾಯಿತು. ಧರಂಸಿಂಗ್‌ ಮುಖ್ಯಮಂತ್ರಿಯಾದರು. ಈ ಚುನಾವಣೆಯಲ್ಲಿ ಬಿಜೆಪಿ 79 ಸೀಟ್‌ಗಳನ್ನು ಗೆದ್ದಿತ್ತು.

2006ರಲ್ಲಿ ಎಚ್.ಡಿ ಕುಮಾರಸ್ವಾಮಿಯವರು ಬಿಜೆಪಿಯ ಯಡಿಯೂರಪ್ಪನವರೊಂದಿಗೆ 20-20 ತಿಂಗಳ ಒಳ ಒಪ್ಪಂದ ಮಾಡಿಕೊಂಡು ಕಾಂಗ್ರೆಸ್‌ನಿಂದ ಹೊರಬಂದು ಸರ್ಕಾರ ರಚಿಸಿದರು. ಆದರೆ 2008ರಲ್ಲಿ ಅಧಿಕಾರ ಬಿಟ್ಟುಕೊಡದ ಕಾರಣ ಸರ್ಕಾರ ಪತನವಾಯಿತು.

2008 ಚುನಾವಣೆಯಲ್ಲಿ ಮತ್ತೆ ಫಲಿತಾಂಶ ಏರುಪೇರಾಯಿತು. ಯಡಿಯೂರಪ್ಪನವರ ನೇತೃತ್ವದ ಬಿಜೆಪಿ 110 ಸೀಟ್‌ಗಳನ್ನು ಗೆದ್ದಿತು. ಆಪರೇಷನ್‌ ಕಮಲ ಮಾಡಿದ ಯಡಿಯೂರಪ್ಪನವರು ಮುಖ್ಯಯಾದರು. ಆ ವೇಳೆಗೆ ಸಿದ್ದರಾಮಯ್ಯನವರು ಕಾಂಗ್ರೆಸ್ ಸೇರಿದ್ದರು.

2013ರ ಚುನಾವಣೆ ವೇಳೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ 122 ಕ್ಷೇತ್ರಗಳಲ್ಲಿ ಗೆದ್ದು ಅಧಿಕಾರ ಹಿಡಿಯಿತು. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದರು. ಜೆಡಿಎಸ್‌ 40 ಕ್ಷೇತ್ರಗಳಲ್ಲಿ ಗೆಲುವು ಪಡೆದಿತ್ತು. ಬಿಜೆಪಿ 40 ಸ್ಥಾನಗಳಿಗೆ ಕುಸಿಯಿತು. ಆ ಚುನಾವಣೆಯಲ್ಲಿ ಬಿಜೆಪಿಯಿಂದ ಬಂಡಾಯವೆದ್ದಿದ್ದ ಬಿ.ಎಸ್.ಯಡಿಯೂರಪ್ಪನವರು ಕೆಜೆಪಿಯನ್ನು ಕಟ್ಟಿದ್ದು, ಬಿಜೆಪಿಗೆ ಭಾರೀ ಹೊಡೆತ ನೀಡಿತು.

2013ರ ಚುನಾವಣಾ ಫಲಿತಾಂಶದಿಂದ ಕಂಗೆಟ್ಟಿದ್ದ ಬಿಜೆಪಿ ನಾಯಕರು ಮತ್ತೆ ಯಡಿಯೂರಪ್ಪನವರನ್ನು ಬಿಜೆಪಿಗೆ ಕರೆತಂದರು. 2018ರ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆದ್ದಿತು. ಹೆಚ್ಚು ಸ್ಥಾನ ಗಳಿಸಿದ್ದರಿಂದ ಬಿಜೆಪಿ ನೇತೃತ್ವದ ಸರ್ಕಾರ ರಚನೆಗೆ ರಾಜ್ಯಪಾಲರು ಅವಕಾಶ ನೀಡಿದರು. ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆದರೆ ಬಹುಮತ ಸಾಬೀತು ಮಾಡಲಾಗದೆ ರಾಜೀನಾಮೆ ನೀಡಿದರು.

80 ಕ್ಷೇತ್ರಗಳಲ್ಲಿ ಗೆದ್ದಿದ್ದ ಕಾಂಗ್ರೆಸ್, 37 ಕ್ಷೇತ್ರಗಳಲ್ಲಿ ಗೆದ್ದಿದ್ದ ಜೆಡಿಎಸ್‌ ಜೊತೆಯಲ್ಲಿ ಸೇರಿ ಸಮ್ಮಿಶ್ರ ಸರ್ಕಾರ ರಚಿಸಿತು. ಎಚ್‌.ಡಿ.ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾದರು. ಆದರೆ 2019 ಲೋಕಸಭೆ ಚುನಾವಣೆಯ ಬಳಿಕ ಕಾಂಗ್ರೆಸ್‌- ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಬಿರುಕು ಮೂಡಿತು. ಈ ವೇಳೆಗೆ ನಡೆದ ಆಪರೇಷನ್‌ ಕಮಲದಲ್ಲಿ 17 ಶಾಸಕರು ಸರ್ಕಾರ ಉರುಳಲು ಕಾರಣವಾದರು. ರಾಜಕೀಯ ಚದುರಂಗದಾಟದಲ್ಲಿ ಬಿ.ಎಸ್.ಯಡಿಯೂರಪ್ಪನವರು ಮತ್ತೆ ಮುಖ್ಯಮಂತ್ರಿಯಾದರು. ಈಗ ಯಡಿಯೂರಪ್ಪನವರನ್ನು ಕೆಳಗಿಳಿಸಿ, ಬಸವರಾಜ ಬೊಮ್ಮಾಯಿಯವರನ್ನು ಮುಖ್ಯಮಂತ್ರಿ ಮಾಡಲಾಗಿದೆ.

ಇದನ್ನೂ ಓದಿರಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮಂಗಳೂರು: ಕೇಸರಿ-ಹಸಿರು ಚಕ್ರವ್ಯೂಹ ಬೇಧಿಸಿ ಬರುವರೆ ಸೆಕ್ಯುಲರ್ ಖಾದರ್?

ಕಳೆದ 37 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಯಾವುದೇ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರ ಹಿಡಿಯಲು ರಾಜ್ಯದಲ್ಲಿ ಸಾಧ್ಯವಾಗಿಲ್ಲ. ಇದು ಕರ್ನಾಟಕದ ವೈಶಿಷ್ಟ್ಯತೆ.

ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಆಡಳಿತ ವಿರೋಧಿ ಅಲೆಯನ್ನು ಎದುರಿಸುತ್ತಿದೆ. ತಾವು ಯಾವ ಅಭಿವೃದ್ಧಿ ಕೆಲಸವನ್ನು ಮಾಡಿದ್ದೇವೆಂದು ಹೇಳುವುದಕ್ಕಿಂತ, ಸಿದ್ದರಾಮಯ್ಯನವರನ್ನು ಟಾರ್ಗೆಟ್ ಮಾಡಿ ಮಾತನಾಡುತ್ತಿರುವುದೇ ರಾರಾಜಿಸುತ್ತಿದೆ.

ಶೇ. 40 ಕಮಿಷನ್ ಆರೋಪವನ್ನು ಈ ಸರ್ಕಾರ ಎದುರಿಸುತ್ತಿದೆ. ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾದ ಬಳಿಕ ರಾಜ್ಯವು ಒಂದಲ್ಲ ಒಂದು ಕೋಮು ಕೇಂದ್ರಿತ ವಿವಾದಗಳಲ್ಲಿ ಸಿಲುಕಿದೆ. ಅಭಿವೃದ್ಧಿಗಿಂತ ಹಿಂದುತ್ವವನ್ನು ಮುಂದು ಮಾಡಿ ಕೋಮು ನೆಲೆಯಲ್ಲಿ ರಾಜಕೀಯ ಧ್ರುವೀಕರಣಕ್ಕೆ ಬಿಜೆಪಿ ಯತ್ನಿಸುತ್ತಿದೆ. ಈ ಹಿಂದೆ ಯಾವತ್ತೂ ಆಗದಷ್ಟು ಕೋಮು ಪ್ರಚೋದಿತ ಘಟನೆಗಳು ಇಲ್ಲಿ ಘಟಿಸುತ್ತಿವೆ. ಮತೀಯ ಗೂಂಡಾಗಿರಿ, ಹಿಜಾಬ್ ವಿವಾದ, ಹಲಾಲ್‌ ಕಟ್‌, ಜಟ್ಕಾ ಕಟ್‌, ಮುಸ್ಲಿಂ ವ್ಯಾಪಾರಿಗಳಿಗೆ ದೇವಸ್ಥಾನಗಳ ಬಳಿ ಅವಕಾಶ ನೀಡಲ್ಲ ಎನ್ನುವುದು- ಇವೆಲ್ಲವೂ ಮುಂದಿನ ಚುನಾವಣೆಯಲ್ಲಿ ಯಾವ ಪರಿಣಾಮಗಳನ್ನು ಬೀರುತ್ತವೆ ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...