Homeಮುಖಪುಟಫಾರ್ಬಿಡನ್‌ ಪ್ರಕಟಿಸುತ್ತಿರುವ ‘ಸ್ಟೋರಿ ಕಿಲ್ಲರ್ಸ್’ ಸರಣಿಗೆ ಗೌರಿ ಲಂಕೇಶ್‌ ಸ್ಫೂರ್ತಿ; ಗಾರ್ಡಿಯನ್‌ ಉಲ್ಲೇಖ

ಫಾರ್ಬಿಡನ್‌ ಪ್ರಕಟಿಸುತ್ತಿರುವ ‘ಸ್ಟೋರಿ ಕಿಲ್ಲರ್ಸ್’ ಸರಣಿಗೆ ಗೌರಿ ಲಂಕೇಶ್‌ ಸ್ಫೂರ್ತಿ; ಗಾರ್ಡಿಯನ್‌ ಉಲ್ಲೇಖ

- Advertisement -
- Advertisement -

ಪ್ರಖ್ಯಾತ ತನಿಖಾ ಸಂಸ್ಥೆಯಾಗಿರುವ ‘ಫಾರ್ಬಿಡನ್‌ ಸ್ಟೋರೀಸ್‌’ ಪ್ರಕಟಿಸುತ್ತಿರುವ ‘ಸ್ಟೋರಿ ಕಿಲ್ಲರ್ಸ್’ ವಿಶೇಷ ಸರಣಿಗೆ ‘ಗೌರಿ ಲಂಕೇಶ್‌’ ಅವರು ಸ್ಫೂರ್ತಿಯಾಗಿದ್ದಾರೆ ಎಂದು ‘ದಿ ಗಾರ್ಡಿಯನ್‌’ ವರದಿ ಮಾಡಿದೆ.

ಸುಳ್ಳು ಸುದ್ದಿಗಳಿಂದ ಆಗಿರುವ ಅನಾಹುತಗಳನ್ನು, ಕೊಲೆ, ಹಿಂಸೆಗಳನ್ನು ಈ ಸರಣಿ ಬಿಚ್ಚಿಡುತ್ತಿದೆ. ಗೌರಿ ಲಂಕೇಶ್ ಅವರ ಕುರಿತು ವಿಶೇಷ ವರದಿಯನ್ನು ಇಲ್ಲಿ ಪ್ರಕಟಿಸಲಾಗಿದೆ.

ಗಾರ್ಡಿಯನ್ ತನ್ನ ವರದಿಯಲ್ಲಿ, “ಸುಳ್ಳು ಮಾಹಿತಿಗಳನ್ನು ನಮ್ಮ ಮಾಹಿತಿ ಪರಿಸರ ವ್ಯವಸ್ಥೆಯಲ್ಲಿನ ಪರಮಾಣು ಬಾಂಬ್‌ಗೆ ಹೋಲಿಸಲಾಗಿದೆ. ಸುಳ್ಳು ಮಾಹಿತಿಯು ಗಂಭೀರ ಸಮಸ್ಯೆಯಾಗಿದೆ. ಏಕೆಂದರೆ ಸತ್ಯಕ್ಕಿಂತ ವೇಗವಾಗಿ ದ್ವೇಷ, ಕೋಪ ಮತ್ತು ಪಿತೂರಿ ಸಿದ್ಧಾಂತಗಳು ಹರಡಲು ಸುಳ್ಳು ಮಾಹಿತಿಗಳು ಕಾರಣವಾಗುತ್ತವೆ. ಪತ್ರಕರ್ತೆ ಮತ್ತು ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಾರಿಯಾ ರೆಸ್ಸಾ ಅವರ ಹೇಳುವಂತೆ- ‘ಪ್ರಜಾಪ್ರಭುತ್ವ ಎಂಬುದು ಕನಸಷ್ಟೇ” ಎಂಬ ಸಾಲುಗಳನ್ನು ಉಲ್ಲೇಖಿಸಿದೆ.

ಉಕ್ರೇನ್‌ನ ಮೇಲೆ ರಷ್ಯಾದ ಕ್ರೂರ ಆಕ್ರಮಣ, ಅಮೆರಿಕದ ಸಂಸತ್‌ ಮೇಲೆ ದಾಳಿ, ಕೋವಿಡ್ -19ರ ಸುತ್ತ ಹುಟ್ಟಿದ ಸುಳ್ಳುಗಳು- ಇವೆಲ್ಲ ತಪ್ಪು ಮಾಹಿತಿಯ ಪ್ರಮುಖ ಜಾಗತಿಕ ಘಟನೆಗಳಾಗಿ ಕಾಣುತ್ತವೆ ಎಂದಿದೆ.

‘Disinfo black ops’ ಎಂಬ ವಿಶೇಷ ತನಿಖೆಯು ಪ್ರಪಂಚದಾದ್ಯಂತ ಆಗುತ್ತಿರುವ ಸುಳ್ಳು ಮಾಹಿತಿಯ ಉದ್ದೇಶಪೂರ್ವಕ ಹರಡುವಿಕೆಯ ಕುರಿತು ಬಹಿರಂಗಪಡಿಸುತ್ತಿದೆ. ಇದು ಸ್ಟೋರಿ ಕಿಲ್ಲರ್ಸ್‌ ಸರಣಿಯ ಭಾಗವಾಗಿದೆ. ಗಾರ್ಡಿಯನ್, ಅಬ್ಸರ್ವರ್, ಹಾರೆಟ್ಜ್, ಲೆ ಮಾಂಡೆ, ಡೆರ್ ಸ್ಪೀಗೆಲ್, ರೇಡಿಯೋ ಫ್ರಾನ್ಸ್, ದಿ ಮಾರ್ಕರ್, ಪೇಪರ್ ಟ್ರಯಲ್ ಮೀಡಿಯಾ ಮತ್ತು ವಾಷಿಂಗ್ಟನ್ ಪೋಸ್ಟ್ ಸೇರಿದಂತೆ 30 ಸುದ್ದಿ ಮಾಧ್ಯಮಗಳ ಪತ್ರಕರ್ತರನ್ನು ಒಳಗೊಂಡ ಅಂತಾರಾಷ್ಟ್ರೀಯ ಮಟ್ಟದ ಸಹಯೋಗದಲ್ಲಿ ನಡೆಯುತ್ತಿರುವ ಯೋಜನೆ ಇದಾಗಿದೆ.

ಲಾಭದ ಉದ್ದೇಶದಿಂದ ಅಂತರ್ಜಾಲದಾದ್ಯಂತ ನಕಲಿ ಮಾಹಿತಿಯನ್ನು ಹರಡುವ ಸರ್ಕಾರಿ-ಪ್ರಾಯೋಜಿತ ಘಟಕಗಳು ಅಥವಾ ಖಾಸಗಿ ಸಂಸ್ಥೆಗಳು ಹರಡುವ ಸುಳ್ಳು ಮಾಹಿತಿಗಳ ಬಗ್ಗೆ ಈ ತನಿಖೆ ಬೆಳಕು ಚೆಲ್ಲುತ್ತಿದೆ.

ಡ್ಯಾಫ್ನೆ ಪ್ರಾಜೆಕ್ಟ್ ಮತ್ತು ಪೆಗಾಸಸ್ ಪ್ರಾಜೆಕ್ಟ್‌ನ ಹಿಂದಿರುವ ‘ಫೋರ್ಬಿಡನ್ ಸ್ಟೋರೀಸ್’ (ಲಾಭೋದ್ದೇಶವಿಲ್ಲದ ಫ್ರೆಂಚ್ ಮೂಲದ ಸಂಸ್ಥೆ) ಈ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಹತ್ಯೆಗೀಡಾದ, ಬೆದರಿಕೆ ಅಥವಾ ಜೈಲಿನಲ್ಲಿರುವ ಪತ್ರಕರ್ತರ ಆಶಯಗಳನ್ನು ಮುಂದುವರಿಸುವುದು ಈ ಯೋಜನೆಯ ಉದ್ದೇಶವಾಗಿದೆ.

2017ರಲ್ಲಿ ತಮ್ಮ ಬೆಂಗಳೂರಿನ ಮನೆಯ ಹೊರಗೆ ಹತ್ಯೆಯಾದ ಗೌರಿ ಲಂಕೇಶ್ ಅವರ ನಿರ್ಭೀತ ಕೆಲಸಗಳೇ ಈ ಎಂಟು ತಿಂಗಳ ಕಾಲ ನಡೆಸಿರುವ ತನಿಖೆಗೆ ಸ್ಫೂರ್ತಿಯಾಗಿದೆ ಎಂದು ‘ಗಾರ್ಡಿಯನ್‌’ ಉಲ್ಲೇಖಿಸಿದೆ.

ಹತ್ಯೆಯಾಗುವ ಕೆಲವೇ ಗಂಟೆಗಳ ಮೊದಲು ಗೌರಿ ಲಂಕೇಶ್ ಅವರು ‘ಸುಳ್ಳು ಸುದ್ದಿಗಳ ಯುಗದಲ್ಲಿ’ ಎಂಬ ಲೇಖನಕ್ಕೆ ಅಂತಿಮ ಸ್ಪರ್ಶ ನೀಡುತ್ತಿದ್ದರು. ಆನ್‌ಲೈನ್‌ನಲ್ಲಿ ಫೇಕ್‌ನ್ಯೂಸ್ ಪ್ಯಾಕ್ಟರಿಗಳು ಹೇಗೆ ಭಾರತದಲ್ಲಿ ತಪ್ಪು ಮಾಹಿತಿಗಳನ್ನು ಹರಡುತ್ತಿವೆ ಎಂಬುದನ್ನು ಈ ಲೇಖನ ಚರ್ಚಿಸಿದೆ ಎಂಬ ಸಂಗತಿಯನ್ನು ವರದಿಯಲ್ಲಿ ಪ್ರಸ್ತಾಪಿಸಲಾಗಿದೆ.

‘ಇನ್ ಏಜ್ ಆಫ್ ಫಾಲ್ಸ್ ನ್ಯೂಸ್’ ಲೇಖನವು ಗೌರಿಯವರ ಸಾವಿನ ನಂತರ ಪ್ರಕಟವಾಯಿತು. ಗೌರಿ ತಮ್ಮ ಅಂತಿಮ ವಾಕ್ಯದಲ್ಲಿ, “ನಕಲಿ ಸುದ್ದಿಗಳನ್ನು ಬಹಿರಂಗಪಡಿಸುವ ಎಲ್ಲರಿಗೂ ನಾನು ಸೆಲ್ಯೂಟ್ ಮಾಡಲು ಬಯಸುತ್ತೇನೆ. ಅಲ್ಲಿ ಇನ್ನೂ ಹೆಚ್ಚಿನವರು ಇರಬೇಕೆಂದು ನಾನು ಬಯಸುತ್ತೇನೆ” ಎಂದಿದ್ದರು.

ಹತ್ಯೆಗೆ ಸಂಬಂಧಿಸಿದಂತೆ 17 ಮಂದಿಯನ್ನು ಅಧಿಕಾರಿಗಳು ಬಂಧಿಸಿದ್ದಾರೆ. ವಿಚಾರಗಳು ಮುಂದುವರಿದಿವೆ.

ಇಸ್ರೇಲ್‌ನ ಬೆನ್-ಗುರಿಯನ್ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕರಾದ ನಿರ್ ಗ್ರಿನ್‌ಬರ್ಗ್ ಪ್ರತಿಕ್ರಿಯಿಸಿ, “ತಪ್ಪು ಮಾಹಿತಿಗಳ ಕುರಿತು ಸ್ಟೋರಿ ಕಿಲ್ಲರ್ಸ್ ಯೋಜನೆಯಲ್ಲಿ ಬಹಿರಂಗವಾಗುತ್ತಿರುವ ಸಂಗತಿಗಳು ನವೀನವಾಗಿದೆ” ಎಂದಿದ್ದಾರೆ.

“ನಾಗರಿಕ ಸಮಾಜವು ಈ ಆನ್‌ಲೈನ್ ವೇದಿಕೆಗಳಿಗೆ ಸಂಬಂಧಿಸಿದಂತೆ ನಿಯಮಗಳನ್ನು ಪುನಾ ರಚಿಸದ ಹೊರತು, ಈ ವೇದಿಕೆಗಳನ್ನು ಹೊಣೆಗಾರರನ್ನಾಗಿ ಮಾಡದ ಹೊರತು, ಅಂತಹ ತಪ್ಪು ಮಾಹಿತಿಯ ಪ್ರಚಾರಗಳಿಗೆ ಯಾರಾದರೂ ಬಲಿಯಾಗಬಹುದೆಂಬ ಭವಿಷ್ಯವನ್ನು ನಾವು ನೋಡುತ್ತಿದ್ದೇವೆ” ಎಂದಿದ್ದಾರೆ ಗ್ರಿನ್‌ಬರ್ಗ್.

ಈ ಸುಳ್ಳು ಸುದ್ದಿಗಳಿಂದಾಗಿ ವಿಶೇಷವಾಗಿ ಜಗತ್ತಿನಾದ್ಯಂತ ಮಹಿಳಾ ಪತ್ರಕರ್ತರು ಟಾರ್ಗೆಟ್ ಆಗಿದ್ದಾರೆ. ರೆಸ್ಸಾ ಅವರು ತಮ್ಮ ‘ರಾಪ್ಲರ್’ ಡಿಜಿಟಲ್‌ ವೇದಿಕೆಯ ಮೂಲಕ ಮಾಡಿದ ವರದಿಗಳ ಕಾರಣಕ್ಕೆ ಟ್ರೋಲ್ ಆಗಿದ್ದಾರೆ.

‘ಫಿಲಿಪೈನ್ಸ್‌ನ ಮುಕ್ತ ಪತ್ರಿಕಾ ಮುಖ’ ಎಂದೇ ಖ್ಯಾತರಾಗಿರುವ ರೆಸ್ಸಾ, ತೆರಿಗೆ ವಂಚನೆ ಆರೋಪಗಳಿಂದ ಖುಲಾಸೆಗೊಂಡರು, ಒಂದು ಪ್ರಕರಣದಲ್ಲಿ ಅವರು ಕಿರುಕುಳ ಎದುರಿಸಿದ್ದಾರೆ. ಫಿನ್‌ಲ್ಯಾಂಡ್‌ನ ಪತ್ರಕರ್ತೆ ಜೆಸ್ಸಿಕ್ಕಾ ಅರೋ ಅವರು ಫೇಕ್‌ನ್ಯೂಸ್‌ಗಳ ದಾಳಿಗೆ ಗುರಿಯಾಗಿದ್ದಾರೆ. ಹೀಗೆ ಸುಳ್ಳು ಸುದ್ದಿಗಳಿಂದ ತೊಂದರೆಗೊಳಗಾದ ಪತ್ರಕರ್ತರ ಕುರಿತು ‘ಫಾರ್ಬಿಡನ್‌ ಸ್ಟೋರೀಸ್‌’ ಸರಣಿ ತನಿಖಾ ವರದಿಗಳನ್ನು ಪ್ರಕಟಿಸುತ್ತಿದೆ.

ಮಾಹಿತಿ ಕೃಪೆ: ದಿ ಗಾರ್ಡಿಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...