Homeಮುಖಪುಟಫಾರ್ಬಿಡನ್‌ ಪ್ರಕಟಿಸುತ್ತಿರುವ ‘ಸ್ಟೋರಿ ಕಿಲ್ಲರ್ಸ್’ ಸರಣಿಗೆ ಗೌರಿ ಲಂಕೇಶ್‌ ಸ್ಫೂರ್ತಿ; ಗಾರ್ಡಿಯನ್‌ ಉಲ್ಲೇಖ

ಫಾರ್ಬಿಡನ್‌ ಪ್ರಕಟಿಸುತ್ತಿರುವ ‘ಸ್ಟೋರಿ ಕಿಲ್ಲರ್ಸ್’ ಸರಣಿಗೆ ಗೌರಿ ಲಂಕೇಶ್‌ ಸ್ಫೂರ್ತಿ; ಗಾರ್ಡಿಯನ್‌ ಉಲ್ಲೇಖ

- Advertisement -
- Advertisement -

ಪ್ರಖ್ಯಾತ ತನಿಖಾ ಸಂಸ್ಥೆಯಾಗಿರುವ ‘ಫಾರ್ಬಿಡನ್‌ ಸ್ಟೋರೀಸ್‌’ ಪ್ರಕಟಿಸುತ್ತಿರುವ ‘ಸ್ಟೋರಿ ಕಿಲ್ಲರ್ಸ್’ ವಿಶೇಷ ಸರಣಿಗೆ ‘ಗೌರಿ ಲಂಕೇಶ್‌’ ಅವರು ಸ್ಫೂರ್ತಿಯಾಗಿದ್ದಾರೆ ಎಂದು ‘ದಿ ಗಾರ್ಡಿಯನ್‌’ ವರದಿ ಮಾಡಿದೆ.

ಸುಳ್ಳು ಸುದ್ದಿಗಳಿಂದ ಆಗಿರುವ ಅನಾಹುತಗಳನ್ನು, ಕೊಲೆ, ಹಿಂಸೆಗಳನ್ನು ಈ ಸರಣಿ ಬಿಚ್ಚಿಡುತ್ತಿದೆ. ಗೌರಿ ಲಂಕೇಶ್ ಅವರ ಕುರಿತು ವಿಶೇಷ ವರದಿಯನ್ನು ಇಲ್ಲಿ ಪ್ರಕಟಿಸಲಾಗಿದೆ.

ಗಾರ್ಡಿಯನ್ ತನ್ನ ವರದಿಯಲ್ಲಿ, “ಸುಳ್ಳು ಮಾಹಿತಿಗಳನ್ನು ನಮ್ಮ ಮಾಹಿತಿ ಪರಿಸರ ವ್ಯವಸ್ಥೆಯಲ್ಲಿನ ಪರಮಾಣು ಬಾಂಬ್‌ಗೆ ಹೋಲಿಸಲಾಗಿದೆ. ಸುಳ್ಳು ಮಾಹಿತಿಯು ಗಂಭೀರ ಸಮಸ್ಯೆಯಾಗಿದೆ. ಏಕೆಂದರೆ ಸತ್ಯಕ್ಕಿಂತ ವೇಗವಾಗಿ ದ್ವೇಷ, ಕೋಪ ಮತ್ತು ಪಿತೂರಿ ಸಿದ್ಧಾಂತಗಳು ಹರಡಲು ಸುಳ್ಳು ಮಾಹಿತಿಗಳು ಕಾರಣವಾಗುತ್ತವೆ. ಪತ್ರಕರ್ತೆ ಮತ್ತು ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಾರಿಯಾ ರೆಸ್ಸಾ ಅವರ ಹೇಳುವಂತೆ- ‘ಪ್ರಜಾಪ್ರಭುತ್ವ ಎಂಬುದು ಕನಸಷ್ಟೇ” ಎಂಬ ಸಾಲುಗಳನ್ನು ಉಲ್ಲೇಖಿಸಿದೆ.

ಉಕ್ರೇನ್‌ನ ಮೇಲೆ ರಷ್ಯಾದ ಕ್ರೂರ ಆಕ್ರಮಣ, ಅಮೆರಿಕದ ಸಂಸತ್‌ ಮೇಲೆ ದಾಳಿ, ಕೋವಿಡ್ -19ರ ಸುತ್ತ ಹುಟ್ಟಿದ ಸುಳ್ಳುಗಳು- ಇವೆಲ್ಲ ತಪ್ಪು ಮಾಹಿತಿಯ ಪ್ರಮುಖ ಜಾಗತಿಕ ಘಟನೆಗಳಾಗಿ ಕಾಣುತ್ತವೆ ಎಂದಿದೆ.

‘Disinfo black ops’ ಎಂಬ ವಿಶೇಷ ತನಿಖೆಯು ಪ್ರಪಂಚದಾದ್ಯಂತ ಆಗುತ್ತಿರುವ ಸುಳ್ಳು ಮಾಹಿತಿಯ ಉದ್ದೇಶಪೂರ್ವಕ ಹರಡುವಿಕೆಯ ಕುರಿತು ಬಹಿರಂಗಪಡಿಸುತ್ತಿದೆ. ಇದು ಸ್ಟೋರಿ ಕಿಲ್ಲರ್ಸ್‌ ಸರಣಿಯ ಭಾಗವಾಗಿದೆ. ಗಾರ್ಡಿಯನ್, ಅಬ್ಸರ್ವರ್, ಹಾರೆಟ್ಜ್, ಲೆ ಮಾಂಡೆ, ಡೆರ್ ಸ್ಪೀಗೆಲ್, ರೇಡಿಯೋ ಫ್ರಾನ್ಸ್, ದಿ ಮಾರ್ಕರ್, ಪೇಪರ್ ಟ್ರಯಲ್ ಮೀಡಿಯಾ ಮತ್ತು ವಾಷಿಂಗ್ಟನ್ ಪೋಸ್ಟ್ ಸೇರಿದಂತೆ 30 ಸುದ್ದಿ ಮಾಧ್ಯಮಗಳ ಪತ್ರಕರ್ತರನ್ನು ಒಳಗೊಂಡ ಅಂತಾರಾಷ್ಟ್ರೀಯ ಮಟ್ಟದ ಸಹಯೋಗದಲ್ಲಿ ನಡೆಯುತ್ತಿರುವ ಯೋಜನೆ ಇದಾಗಿದೆ.

ಲಾಭದ ಉದ್ದೇಶದಿಂದ ಅಂತರ್ಜಾಲದಾದ್ಯಂತ ನಕಲಿ ಮಾಹಿತಿಯನ್ನು ಹರಡುವ ಸರ್ಕಾರಿ-ಪ್ರಾಯೋಜಿತ ಘಟಕಗಳು ಅಥವಾ ಖಾಸಗಿ ಸಂಸ್ಥೆಗಳು ಹರಡುವ ಸುಳ್ಳು ಮಾಹಿತಿಗಳ ಬಗ್ಗೆ ಈ ತನಿಖೆ ಬೆಳಕು ಚೆಲ್ಲುತ್ತಿದೆ.

ಡ್ಯಾಫ್ನೆ ಪ್ರಾಜೆಕ್ಟ್ ಮತ್ತು ಪೆಗಾಸಸ್ ಪ್ರಾಜೆಕ್ಟ್‌ನ ಹಿಂದಿರುವ ‘ಫೋರ್ಬಿಡನ್ ಸ್ಟೋರೀಸ್’ (ಲಾಭೋದ್ದೇಶವಿಲ್ಲದ ಫ್ರೆಂಚ್ ಮೂಲದ ಸಂಸ್ಥೆ) ಈ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಹತ್ಯೆಗೀಡಾದ, ಬೆದರಿಕೆ ಅಥವಾ ಜೈಲಿನಲ್ಲಿರುವ ಪತ್ರಕರ್ತರ ಆಶಯಗಳನ್ನು ಮುಂದುವರಿಸುವುದು ಈ ಯೋಜನೆಯ ಉದ್ದೇಶವಾಗಿದೆ.

2017ರಲ್ಲಿ ತಮ್ಮ ಬೆಂಗಳೂರಿನ ಮನೆಯ ಹೊರಗೆ ಹತ್ಯೆಯಾದ ಗೌರಿ ಲಂಕೇಶ್ ಅವರ ನಿರ್ಭೀತ ಕೆಲಸಗಳೇ ಈ ಎಂಟು ತಿಂಗಳ ಕಾಲ ನಡೆಸಿರುವ ತನಿಖೆಗೆ ಸ್ಫೂರ್ತಿಯಾಗಿದೆ ಎಂದು ‘ಗಾರ್ಡಿಯನ್‌’ ಉಲ್ಲೇಖಿಸಿದೆ.

ಹತ್ಯೆಯಾಗುವ ಕೆಲವೇ ಗಂಟೆಗಳ ಮೊದಲು ಗೌರಿ ಲಂಕೇಶ್ ಅವರು ‘ಸುಳ್ಳು ಸುದ್ದಿಗಳ ಯುಗದಲ್ಲಿ’ ಎಂಬ ಲೇಖನಕ್ಕೆ ಅಂತಿಮ ಸ್ಪರ್ಶ ನೀಡುತ್ತಿದ್ದರು. ಆನ್‌ಲೈನ್‌ನಲ್ಲಿ ಫೇಕ್‌ನ್ಯೂಸ್ ಪ್ಯಾಕ್ಟರಿಗಳು ಹೇಗೆ ಭಾರತದಲ್ಲಿ ತಪ್ಪು ಮಾಹಿತಿಗಳನ್ನು ಹರಡುತ್ತಿವೆ ಎಂಬುದನ್ನು ಈ ಲೇಖನ ಚರ್ಚಿಸಿದೆ ಎಂಬ ಸಂಗತಿಯನ್ನು ವರದಿಯಲ್ಲಿ ಪ್ರಸ್ತಾಪಿಸಲಾಗಿದೆ.

‘ಇನ್ ಏಜ್ ಆಫ್ ಫಾಲ್ಸ್ ನ್ಯೂಸ್’ ಲೇಖನವು ಗೌರಿಯವರ ಸಾವಿನ ನಂತರ ಪ್ರಕಟವಾಯಿತು. ಗೌರಿ ತಮ್ಮ ಅಂತಿಮ ವಾಕ್ಯದಲ್ಲಿ, “ನಕಲಿ ಸುದ್ದಿಗಳನ್ನು ಬಹಿರಂಗಪಡಿಸುವ ಎಲ್ಲರಿಗೂ ನಾನು ಸೆಲ್ಯೂಟ್ ಮಾಡಲು ಬಯಸುತ್ತೇನೆ. ಅಲ್ಲಿ ಇನ್ನೂ ಹೆಚ್ಚಿನವರು ಇರಬೇಕೆಂದು ನಾನು ಬಯಸುತ್ತೇನೆ” ಎಂದಿದ್ದರು.

ಹತ್ಯೆಗೆ ಸಂಬಂಧಿಸಿದಂತೆ 17 ಮಂದಿಯನ್ನು ಅಧಿಕಾರಿಗಳು ಬಂಧಿಸಿದ್ದಾರೆ. ವಿಚಾರಗಳು ಮುಂದುವರಿದಿವೆ.

ಇಸ್ರೇಲ್‌ನ ಬೆನ್-ಗುರಿಯನ್ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕರಾದ ನಿರ್ ಗ್ರಿನ್‌ಬರ್ಗ್ ಪ್ರತಿಕ್ರಿಯಿಸಿ, “ತಪ್ಪು ಮಾಹಿತಿಗಳ ಕುರಿತು ಸ್ಟೋರಿ ಕಿಲ್ಲರ್ಸ್ ಯೋಜನೆಯಲ್ಲಿ ಬಹಿರಂಗವಾಗುತ್ತಿರುವ ಸಂಗತಿಗಳು ನವೀನವಾಗಿದೆ” ಎಂದಿದ್ದಾರೆ.

“ನಾಗರಿಕ ಸಮಾಜವು ಈ ಆನ್‌ಲೈನ್ ವೇದಿಕೆಗಳಿಗೆ ಸಂಬಂಧಿಸಿದಂತೆ ನಿಯಮಗಳನ್ನು ಪುನಾ ರಚಿಸದ ಹೊರತು, ಈ ವೇದಿಕೆಗಳನ್ನು ಹೊಣೆಗಾರರನ್ನಾಗಿ ಮಾಡದ ಹೊರತು, ಅಂತಹ ತಪ್ಪು ಮಾಹಿತಿಯ ಪ್ರಚಾರಗಳಿಗೆ ಯಾರಾದರೂ ಬಲಿಯಾಗಬಹುದೆಂಬ ಭವಿಷ್ಯವನ್ನು ನಾವು ನೋಡುತ್ತಿದ್ದೇವೆ” ಎಂದಿದ್ದಾರೆ ಗ್ರಿನ್‌ಬರ್ಗ್.

ಈ ಸುಳ್ಳು ಸುದ್ದಿಗಳಿಂದಾಗಿ ವಿಶೇಷವಾಗಿ ಜಗತ್ತಿನಾದ್ಯಂತ ಮಹಿಳಾ ಪತ್ರಕರ್ತರು ಟಾರ್ಗೆಟ್ ಆಗಿದ್ದಾರೆ. ರೆಸ್ಸಾ ಅವರು ತಮ್ಮ ‘ರಾಪ್ಲರ್’ ಡಿಜಿಟಲ್‌ ವೇದಿಕೆಯ ಮೂಲಕ ಮಾಡಿದ ವರದಿಗಳ ಕಾರಣಕ್ಕೆ ಟ್ರೋಲ್ ಆಗಿದ್ದಾರೆ.

‘ಫಿಲಿಪೈನ್ಸ್‌ನ ಮುಕ್ತ ಪತ್ರಿಕಾ ಮುಖ’ ಎಂದೇ ಖ್ಯಾತರಾಗಿರುವ ರೆಸ್ಸಾ, ತೆರಿಗೆ ವಂಚನೆ ಆರೋಪಗಳಿಂದ ಖುಲಾಸೆಗೊಂಡರು, ಒಂದು ಪ್ರಕರಣದಲ್ಲಿ ಅವರು ಕಿರುಕುಳ ಎದುರಿಸಿದ್ದಾರೆ. ಫಿನ್‌ಲ್ಯಾಂಡ್‌ನ ಪತ್ರಕರ್ತೆ ಜೆಸ್ಸಿಕ್ಕಾ ಅರೋ ಅವರು ಫೇಕ್‌ನ್ಯೂಸ್‌ಗಳ ದಾಳಿಗೆ ಗುರಿಯಾಗಿದ್ದಾರೆ. ಹೀಗೆ ಸುಳ್ಳು ಸುದ್ದಿಗಳಿಂದ ತೊಂದರೆಗೊಳಗಾದ ಪತ್ರಕರ್ತರ ಕುರಿತು ‘ಫಾರ್ಬಿಡನ್‌ ಸ್ಟೋರೀಸ್‌’ ಸರಣಿ ತನಿಖಾ ವರದಿಗಳನ್ನು ಪ್ರಕಟಿಸುತ್ತಿದೆ.

ಮಾಹಿತಿ ಕೃಪೆ: ದಿ ಗಾರ್ಡಿಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...