Homeಮುಖಪುಟಉನ್ನಾಂವ್ ಅತ್ಯಾಚಾರದ ಸಂತ್ರಸ್ಥೆಯನ್ನೇ ಕೊಲ್ಲುವ ಯತ್ನ: ಪ್ರಕರಣ ಸಿಬಿಐಗೆ

ಉನ್ನಾಂವ್ ಅತ್ಯಾಚಾರದ ಸಂತ್ರಸ್ಥೆಯನ್ನೇ ಕೊಲ್ಲುವ ಯತ್ನ: ಪ್ರಕರಣ ಸಿಬಿಐಗೆ

ಈ ಅಪಘಾತಕ್ಕೆ ಆರೋಪಿ ಬಿಜೆಪಿ ಶಾಸಕನ ಕೈವಾಡವಿದೆ ಎಂದು ಕೇಳಿಬರುತ್ತಿದ್ದು, ಈ ಹಿಂದೆ ಸಂತ್ರಸ್ಥೆ ತಂದೇ ಜೈಲಲ್ಲೇ ಮೃತಪಟ್ಟಿದ್ದೂ ಕೂಡ ಈಗ ಮುನ್ನಲೆಗೆ ಬಂದಿದೆ.

- Advertisement -
- Advertisement -

ಉನ್ನಾಂವ್ ಅತ್ಯಾಚಾರಕ್ಕೆ ಒಳಗಾಗಿ ನ್ಯಾಯಕ್ಕಾಗಿ ಹೋರಾಡುತ್ತಿರುವ ಸಂತ್ರಸ್ತೆಯನ್ನೇ ಕೊಲ್ಲುವ ಭಯಾನಕ ಯತ್ನ ನಿನ್ನೆ ನಡೆದಿದೆ. ಈ ಅತ್ಯಾಚಾರದ ಪ್ರಮುಖ ಆರೋಪಿ ಉತ್ತರಪ್ರದೇಶದ ಬಿಜೆಪಿ ಶಾಸಕನಾಗಿದ್ದಾನೆ. ಈ ಹಿಂದೆಯೇ ಸಂತ್ರಸ್ತೆಯ ತಂದೆ ಜೈಲಿನಲ್ಲೇ ಅನುಮಾನಾಸ್ಪಾದವಾಗಿ ನಿಧನ ಹೊಂದಿದರು ಎಂಬ ವಿಷಯಗಳನ್ನು ಗಣನೆಗೆ ತೆಗೆದುಕೊಂಡಾಗ ಉತ್ತರಪ್ರದೇಶದ ಯೋಗಿ ಆದಿತ್ಯನಾಥರ ಸರ್ಕಾರ ಆರೋಪಿಯನ್ನು ರಕ್ಷಿಸುವ ಯತ್ನವನ್ನು ಮೊದಲಿಂದಲೂ ಮಾಡುತ್ತಲೇ ಬಂದಿದೆ ಎಂಬ ಅನುಮಾನಗಳಿಗೆ ಪುಷ್ಠಿ ಸಿಗುವಂತಿದೆ….

ಅಪಘಾತವೋ, ಕೊಲೆಯ ಸಂಚೋ?
ಉತ್ತರಪ್ರದೇಶದ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಪ್ರಮುಖ ಆರೋಪಿಯಾಗಿರುವ ಉನ್ನಾಂವ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ, ಸಂತ್ರಸ್ತ ಯುವತಿ ತೀವ್ರವಾಗಿ ಗಾಯಗೊಂಡು ಪ್ರಾಣಾಪಾಯದಲ್ಲಿದ್ದರೆ, ಆಕೆಯ ಇಬ್ಬರು ಸಂಬಂಧಿಕರು ಅಪಘಾತದಲ್ಲಿ ನಿಧನರಾಗಿದ್ದಾರೆ.

ಅತ್ಯಾಚಾರ ಪ್ರಕರಣ ನಡೆದ ಸಂದರ್ಭದಿಂದ ಇಲ್ಲಿವರೆಗೂ ನಡೆದ ಘಟನೆಗಳು ಮತ್ತು ಉತ್ತರಪ್ರದೇಶ ಸರ್ಕಾರ ಆರೋಪಿ ಶಾಸಕ ಕುಲದೀಪ್ ಪರವಾಗಿ ನಿಲ್ಲುತ್ತಲೇ ಬಂದಿವೆ. ಹಾಗಾಗಿ ಸಂತ್ರಸ್ತೆಯ ತಂದೆ ಜೈಲಿನಲ್ಲಿ ಅನುಮಾನಾಸ್ಪಾದವಾಗಿ ಮರಣ ಹೊದಿದ್ದನ್ನು ಗಂಭೀರವಾಗಿ ಪರಿಗಣಿಸಿದರೆ, ರವಿವಾರ ನಡೆದದ್ದು ಅಪಘಾತವಲ್ಲ, ಕೊಲೆ ಯತ್ನ ಎಂಬುದು ಸ್ಪಷ್ಟವಾಗುತ್ತದೆ.

ರಾಯ್‍ಬರೇಲಿ ಜೈಲಿನಲ್ಲಿರುವ ತನ್ನ ಚಿಕ್ಕಪ್ಪನನ್ನು ನೋಡಲು ಸನತ್ರಸ್ತ ಯುವತಿ ಪ್ರಯಾಣಿಸುವಾಗ ಈ ‘ಅಪಘಾತ’ ನಡೆದಿದ್ದು ಸಂಶಯಗಳನ್ನು ಹುಟ್ಟು ಹಾಕಿದೆ. ಅಪಘಾತದಲ್ಲಿ ಸಂತ್ರಸ್ತೆಯ ಚಿಕ್ಕಮ್ಮ, ಆಕೆಯ ಸಹೋದರಿ ಮೃತರಾಗಿದ್ದು, ಸಂತ್ರಸ್ತೆಯ ವಕೀಲರು ತೀವ್ರವಾಗಿ ಗಾಯಗೊಂಡಿದ್ದಾರೆ.

ಅತ್ಯಾಚಾರ ಪ್ರಕರಣದ ಬಳಿಕ ನಡೆದ ಘಟನೆಗಳನ್ನು ನೋಡುತ್ತ ಹೋದರೆ ಇದು ಅಪಘಾತವಲ್ಲ, ಸಂತ್ರಸ್ತೆಯನ್ನು ಕೊಲ್ಲುವ ಯತ್ನ ಎಂಬುದು ಮನದಟ್ಟಾಗುತ್ತದೆ. ಹೀಗಾಗಿಯೇ ಉತ್ತರಪ್ರದೇಶದ ವಿರೋಧ ಪಕ್ಷಗಳು ಇಲ್ಲಿ ಫೆಡೆರಲ್ ತನಿಖೆ ಆಗಬೇಕೆಂದು ಆಗ್ರಹಿಸಿದ್ದು ಸಮಂಜಸವಾಗಿಯೇ ಇದೆ.

ಆರೋಪಿ ಬಿಜೆಪಿ ಶಾಸಕ ಕುಲದೀಪ ಸಿಂಗ್ ಸೆಂಗಾರ್ ತುಂಬ ಪ್ರಭಾವಿಯಾಗಿದ್ದು, ಆರಂಭದಲ್ಲಿ ಈತನ ಪರ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರೇ ಮಾತಾಡುವ ಮೂಲಕ ಸಾಕಷ್ಟು ಟೀಕೆಗೆ ಒಳಗಾಗಿದ್ದನ್ನು ಗಮನಿಸಬಹುದು. ಏಪ್ರಿಲ್ 8, 2018ರಂದು ಆರೋಪಿ ಶಾಸಕ ಕುಲದೀಪ್ ಮನೆ ಮುಂದೆ ಸಂತ್ರಸ್ತ ಯುವತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು ಎಂಬುದು ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ. ಆ ಕಾರಣಕ್ಕೆ ಇದು ದೇಶದ ಗಮನ ಸೆಳೆಯುವಂತಾಗಿದ್ದು.

ಶಾಸಕನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆಂದು ಸಂತ್ರಸ್ತೆಯ ತಂದೆಯನ್ನು ಉತ್ತರಪ್ರದೇಶ ಪೊಲೀಸರು ಬಂಧಿಸಿದ್ದರು. ಪೊಲೀಸ್ ಕಸ್ಟಡಿಯಲ್ಲಿಯೇ ಶಾಸಕನ ಸಹೋದರರು ಆಕೆಯ ತಂದೆಯ ಮೇಲೆ ಮಾರಣಾಂತಿ ಹಲ್ಲೆ ನಡೆಸಿದ ಆರೋಪವನ್ನು ಎದುರಿಸುತ್ತಿದ್ದಾರೆ. ನಂತರ ಆಕೆಯ ತಂದೆ ಕಸ್ಟಡಿಯಲ್ಲೆ ನಿಧನ ಹೊಂದಿದರು.

ಇನ್ನು ಕಾರಿಗೆ ಗುದ್ದಿರುವ ಲಾರಿಯ ನಂಬರ್ ಪ್ಲೇಟ್ ಅನ್ನೇ ಕಪ್ಪು ಬಣ್ಣ ಬಳಿದು ಅಳಿಸಲಾಗಿದೆ ಎನ್ನಲಾಗುತ್ತಿದೆ. ಈ ಘಟನೆಯ ನಂತರ ವ್ಯಾಪಕ ಖಂಡನೆ ವ್ಯಕ್ತವಾದ ಪರಿಣಾಮ ಸಿಬಿಐ ತನಿಖೆಗೆ ಆದೇಶಿಸಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಹೀಗೆ ಎಲ್ಲ ಘಟನಾವಳಿಗಳನ್ನು ಗಮನಿಸಿದರೆ ಕೇಸನ್ನು ಮುಚ್ಚು ಹಾಕಲು ಆರೋಪಿ ಶಾಸಕ ಕುಲದೀಪ್ ಮತ್ತು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು ಯತ್ನಿಸುತ್ತಿದ್ದಾರೆ ಎಂಬ ಅನುಮಾನಗಳು ಮೂಡಿವೆ. ಇದಕ್ಕೆ ರಾಷ್ಟ್ರೀಯ ಬಿಜೆಪಿ ನಾಯಕರ ಬೆಂಬಲವೂ ಇದ್ದಂತಿದೆ. ಅಮಿತ್ ಶಾ ಕೇಸಿಗೆ ಸಂಬಂಧಿಸಿದಂತೆ ಸಂಭವಿಸಿದ ‘ಅಸಹಜ’ ಸಾವುಗಳನ್ನು ಗಮನಿಸಿದರೆ, ತಮ್ಮ ಪಾಪಕೃತ್ಯಗಳನ್ನು ಮುಚ್ಚಿ ಹಾಕಲು ಈ ದುರುಳರೆಲ್ಲ ಎಂತಹ ಹೇಯ ಕೃತ್ಯಕ್ಕೂ ಕೈ ಹಾಕಬಲ್ಲರು ಎಂಬ ಅನುಮಾನ ಮೂಡದೇ ಇರುತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...