Homeಮುಖಪುಟಇಬ್ಬರು ಮುಸ್ಲಿಮರ ಹತ್ಯೆ ಪ್ರಕರಣ; ಪೊಲೀಸರ ಮೇಲಿನ ಆರೋಪ ಪರಿಶೀಲನೆಗೆ ಎಸ್‌ಐಟಿ ರಚನೆ

ಇಬ್ಬರು ಮುಸ್ಲಿಮರ ಹತ್ಯೆ ಪ್ರಕರಣ; ಪೊಲೀಸರ ಮೇಲಿನ ಆರೋಪ ಪರಿಶೀಲನೆಗೆ ಎಸ್‌ಐಟಿ ರಚನೆ

- Advertisement -
- Advertisement -

ಭಿವಾನಿ ಜಿಲ್ಲೆಯಲ್ಲಿ ಇಬ್ಬರು ಮುಸ್ಲಿಮರ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ತನಿಖಾ ಸಂಸ್ಥೆ ನಿರ್ಲಕ್ಷ್ಯ ತಾಳಿದೆ ಎಂಬ ಆರೋಪಗಳನ್ನು ಪರಿಶೀಲಿಸಲು ಹರಿಯಾಣ ಪೊಲೀಸರು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದಾರೆ.

ಫೆಬ್ರವರಿ 16 ರಂದು ರಾಜಸ್ಥಾನದ ಭರತ್‌ಪುರ ಜಿಲ್ಲೆಯಿಂದ ಇಬ್ಬರು ಮುಸ್ಲಿಮರನ್ನು ಅಪಹರಿಸಿದ ಗೋರಕ್ಷಕರು ಕೊಲೆ ಮಾಡಿದ್ದಾರೆ ಎಂಬ ಆರೋಪಗಳು ಬಂದಿವೆ. ನಾಸಿರ್ ಮತ್ತು ಜುನೈದ್ ಅವರ ಶವಗಳು ಸುಟ್ಟ ಸ್ಥಿತಿಯಲ್ಲಿ ಕಾರಿನೊಳಗೆ ಪತ್ತೆಯಾಗಿದ್ದವು. ಈ ಪ್ರಕರಣದಲ್ಲಿ ಬಜರಂಗದಳದ ಸದಸ್ಯ ಮೋನು ಮಾನೇಸರ್ ಸೇರಿದಂತೆ ಐವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ, ಆದರೆ ರಿಂಕು ಸೈನಿ ಎಂಬ ಒಬ್ಬನನ್ನು ಮಾತ್ರ ಈವರೆಗೆ ಬಂಧಿಸಿದ್ದಾರೆ.

ಜುನೈದ್ ಅವರ ಸಹೋದರ ಇಸ್ಮಾಯಿಲ್ ಪ್ರತಿಕ್ರಿಯಿಸಿದ್ದು, “ಹಲ್ಲೆಗೊಳಗಾಗಿದ್ದ ಸಂತ್ರಸ್ತರನ್ನು ಪೊಲೀಸ್ ಠಾಣೆಗೆ ಗೋರಕ್ಷಕರು ಕರೆದೊಯ್ದಿದ್ದರು. ಆದರೆ ಹರಿಯಾಣದ ನುಹ್ ಜಿಲ್ಲೆಯ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಳ್ಳಲು ನಿರಾಕರಿಸಿದರು” ಎಂದು ಆರೋಪಿಸಿದ್ದಾರೆ.

ನಾಸಿರ್ ಮತ್ತು ಜುನೈದ್ ಅವರನ್ನು ಅಪಹರಿಸಿದ ನಂತರ ಆರೋಪಿಗಳು ಪೊಲೀಸರನ್ನು ಭೇಟಿ ನೀಡಿದ್ದಾರೆ ಎಂಬ ಅಂಶವನ್ನು ಗಂಭೀರವಾಗಿ ರಾಜಸ್ಥಾನ ಪೊಲೀಸರು ಪರಿಗಣಿಸಿದ್ದಾರೆ. ‘ಅಪರಾಧ ತನಿಖಾ ಸಂಸ್ಥೆ ಪೊಲೀಸ್ ಠಾಣೆ’ಯ ಸಮೀಪವಿರುವ ಎಲ್ಲಾ ಸಂಸ್ಥೆಗಳ ಸಿಸಿಟಿವಿ ದೃಶ್ಯಗಳನ್ನು ರಾಜಸ್ಥಾನ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆದರೆ, ಈ ಆರೋಪ ನಿರಾಧಾರ ಎಂದು ನುಹ್ ಪೊಲೀಸ್ ವರಿಷ್ಠಾಧಿಕಾರಿ ವರುಣ್ ಸಿಂಗ್ಲಾ ತಿಳಿಸಿದ್ದಾರೆ. ಆರೋಪಗಳನ್ನು ಪರಿಶೀಲಿಸಲು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಉಷಾ ಕುಂದು ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

“ಅಪರಾಧ ತನಿಖಾ ಸಂಸ್ಥೆಯ ಪಾತ್ರದ ಕುರಿತು ರಾಜಸ್ಥಾನ ಪೊಲೀಸರ ವರದಿ ಏನು ತಿಳಿಸುತ್ತಿದೆ ಎಂದು ತಿಳಿಯಲು ನಾನು ಕಾಯುತ್ತಿದ್ದೇನೆ. ನಮ್ಮ ಪೊಲೀಸರು ಭಾಗಿಯಾಗಿರುವುದು ಕಂಡುಬಂದರೆ, ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

ಇದರ ನಡುವೆ ಆರೋಪಿ ಮಾನೇಸರ್ ಅವರನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿ ಸಂತ್ರಸ್ತ ಕುಟುಂಬಗಳು ಧರಣಿ ನಡೆಸುತ್ತಿವೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

“ನಮಗೆ ನ್ಯಾಯ ನೀಡಲಾಗಿಲ್ಲ” ಎಂದು ಜುನೈದ್ ಅವರ ಸಂಬಂಧಿಕರೊಬ್ಬರು ಭಾನುವಾರ ಆರೋಪಿಸಿದ್ದಾರೆ. “ಮೋನು ಮಾನೇಸರ್ ಅವರನ್ನು ಬಂಧಿಸಬೇಕು; ಅಲ್ಲಿಯವರೆಗೆ ನಾವು ಧರಣಿಯನ್ನು ಮುಂದುವರಿಸುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಗೋಸಂರಕ್ಷಣೆ ಹೆಸರಲ್ಲಿ ಆಗಾಗ್ಗೆ ವಿವಾದಗಳನ್ನು ಸೃಷ್ಟಿಸುತ್ತಿರುವ ಮಾನೇಸರ್, ಪ್ರಕರಣದಲ್ಲಿ ತಾನು ಭಾಗಿಯಾಗಿರುವುದನ್ನು ನಿರಾಕರಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಗೋವು ಕಳ್ಳಸಾಗಣೆದಾರರನ್ನು ಹಿಂಬಾಲಿಸುವ, ಎದುರಿಸುವ ಮತ್ತು ಬಂಧಿಸುವ ವೀಡಿಯೋಗಳನ್ನು ಹಂಚಿಕೊಳ್ಳುವಲ್ಲಿ ಈ ಆರೋಪಿ ಮಾನೇಸರ್‌ ಪ್ರಖ್ಯಾತನಾಗಿದ್ದಾನೆ.

ಮಾನೇಸರ್ 2013ರಿಂದಲೂ ಭಜರಂಗ ದಳದೊಂದಿಗೆ ಸಂಬಂಧ ಹೊಂದಿದ್ದಾರೆ. ಗೋ ರಕ್ಷಣೆಯ ಹೆಸರಲ್ಲಿ ಹಲವಾರು ದಾಂಧಲೆಗಳನ್ನು ನಡೆಸಿರುವುದನ್ನು ‘ಆಲ್ಟ್‌ನ್ಯೂಸ್‌’ ಬಯಲಿಗೆಳೆದಿದೆ.

ಹಸು ಕಳ್ಳಸಾಗಣೆದಾರರ ಮೇಲೆ ತಮ್ಮ ತಂಡವು ಎಂದಿಗೂ ಹಲ್ಲೆ ನಡೆಸಿಲ್ಲ ಎಂದು ಅವರು ಹೇಳಿಕೊಂಡಿದ್ದರೂ, ಹಿಂದುತ್ವ ಸಂಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿರುವ ಹಲವಾರು ಫೋಟೋಗಳು ಬೇರೆಯದೆ ಕಥೆಯನ್ನು ಹೇಳುತ್ತಿವೆ. ಇವರು ಹಿಡಿದ ಅನೇಕ ವ್ಯಕ್ತಿಗಳ ಚಿತ್ರಗಳು ಗಾಯಗೊಂಡ ಸ್ಥಿತಿಯಲ್ಲಿ ಕಂಡುಬಂದಿವೆ.

ಪ್ರಕರಣದಲ್ಲಿ ದಾಖಲಾಗಿರುವ ಮತ್ತೊಬ್ಬ ವ್ಯಕ್ತಿ ಲೋಕೇಶ್ ಸಿಂಗ್ಲಾ ಮೇವತ್ ಪ್ರತಿಕ್ರಿಯಿಸಿ, “ನನ್ನ ಕೈವಾಡ ಪ್ರಕರಣದಲ್ಲಿ ಇಲ್ಲ. ಕೇಂದ್ರೀಯ ತನಿಖಾ ದಳದಿಂದ ತನಿಖೆ ನಡೆಯಲಿ” ಎಂದು ಆಗ್ರಹಿಸಿದ್ದಾರೆ.

ಈ ವಿಷಯಕ್ಕೆ ಧಾರ್ಮಿಕ ಅಥವಾ ರಾಜಕೀಯ ಬಣ್ಣ ನೀಡಬಾರದು ಎಂದು ಗೋರಕ್ಷಕ ಗುಂಪಿನ ಗೌ ರಕ್ಷಾ ದಳದ ಸ್ಥಳೀಯ ಅಧ್ಯಕ್ಷ ಮೇವಾತ್ ಅವರು ವಿಡಿಯೋವೊಂದರಲ್ಲಿ ಹೇಳಿದ್ದಾರೆ.

“ನನ್ನನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ. ಆದರೆ ಇದು ಯಾವುದೇ ಸತ್ಯವನ್ನು ಆಧರಿಸಿಲ್ಲ. ಫೆಬ್ರವರಿ 14 ರಂದು ನಾನು ನನ್ನ ಸ್ನೇಹಿತನೊಂದಿಗೆ ನ್ಯಾಯಾಲಯಕ್ಕೆ ಹಾಜರಾಗಿದ್ದೆ. ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಬಹುದು. ಮರುದಿನ, ನನ್ನ ಮಗ ಅಸ್ವಸ್ಥನಾಗಿದ್ದರಿಂದ ನಾನು ಆಸ್ಪತ್ರೆಯಲ್ಲಿದ್ದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...