Homeಮುಖಪುಟಗೋಧ್ರಾ ರೈಲು ದಹಿಸಿದ ಅಪರಾಧಿಗಳ ಬಿಡುಗಡೆ ಅಸಾಧ್ಯ; ಸುಪ್ರೀಂನಲ್ಲಿ ಗುಜರಾತ್ ಸರ್ಕಾರ ಹೇಳಿಕೆ

ಗೋಧ್ರಾ ರೈಲು ದಹಿಸಿದ ಅಪರಾಧಿಗಳ ಬಿಡುಗಡೆ ಅಸಾಧ್ಯ; ಸುಪ್ರೀಂನಲ್ಲಿ ಗುಜರಾತ್ ಸರ್ಕಾರ ಹೇಳಿಕೆ

- Advertisement -
- Advertisement -

2002ರ ಗೋಧ್ರಾ ರೈಲು ದಹನ ಪ್ರಕರಣದ ಅಪರಾಧಿಗಳನ್ನು ಸರ್ಕಾರದ ಸನ್ನಡತೆ ನೀತಿಯಡಿ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಗುಜರಾತ್‌ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

‘ಭಯೋತ್ಪಾದಕ ಮತ್ತು ವಿಚ್ಛಿದ್ರಕಾರಕ ಚಟುವಟಿಕೆಗಳ (ತಡೆ) ಕಾಯ್ದೆ’ಯ ಅಡಿಯಲ್ಲಿ ಈ ಅಪರಾಧಿಗಳ ವಿರುದ್ಧ ಕ್ರಮಗಳನ್ನು ಜರುಗಿಸಲಾಗಿದ್ದು, ಸರ್ಕಾರದ ನೀತಿಯ ಅಡಿಯಲ್ಲಿ ಅವಧಿಪೂರ್ವವೇ ಬಿಡುಗಡೆ ಮಾಡಲಾಗದು ಎಂದು ಕೋರ್ಟ್‌ನಲ್ಲಿ ವಾದಿಸಿದೆ.

ಫೆಬ್ರವರಿ 27, 2002ರಂದು, ಗೋಧ್ರಾ ನಿಲ್ದಾಣದಲ್ಲಿ ಸಾಬರಮತಿ ಎಕ್ಸ್‌ಪ್ರೆಸ್‌ನ ಕೋಚ್ S6ಗೆ ಬೆಂಕಿ ಹಚ್ಚಲಾಗಿತ್ತು. ಇದರಿಂದಾಗಿ 59 ಜನರು ಸಾವನ್ನಪ್ಪಿದರು. ಅಯೋಧ್ಯೆಯಿಂದ ಹಿಂತಿರುಗುತ್ತಿದ್ದ ಕರಸೇವಕರು ಈ ಕೋಚ್‌ನಲ್ಲಿದ್ದರು.

11 ಅಪರಾಧಿಗಳಿಗೆ ಟ್ರಯಲ್ ಕೋರ್ಟ್ ನೀಡಿದ್ದ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಯಾಗಿ 2017ರಲ್ಲಿ ಗುಜರಾತ್ ಹೈಕೋರ್ಟ್ ಬದಲಾಯಿಸಿತು. ಇತರ 20 ಜನಕ್ಕೂ ನೀಡಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಎತ್ತಿ ಹಿಡಿದಿತ್ತು.

ರೈಲು ಸುಟ್ಟ ಬಳಿಕ ಗುಜರಾತ್ ಹೊತ್ತಿ ಉರಿಯಿತು. ಗುಜರಾತ್‌ನಲ್ಲಿ ವ್ಯಾಪಕವಾದ ಕೋಮು ಗಲಭೆಗಳು ನಡೆದವು. ಇದರ ಪರಿಣಾಮವಾಗಿ 1,044 ಜನರು ಸಾವನ್ನಪ್ಪಿದರು ಎಂದು ಅಧಿಕೃತ ಅಂಕಿ ಅಂಶಗಳು ತಿಳಿಸಿವೆ.

ಕೆಲವು ತಿಂಗಳ ಹಿಂದೆ ವಿಚಿದ್ರಕಾರಿ ನಿಲುವನ್ನು ತೆಗೆದುಕೊಂಡಿದ್ದ ಗುಜರಾತ್‌ ಸರ್ಕಾರ, ಬಿಲ್ಕಿಸ್ ಬಾನೋ ಪ್ರಕರಣದಲ್ಲಿ ಶಿಕ್ಷೆಗೊಳಗಾದ 11 ಅಪರಾಧಿಗಳನ್ನು ತುರ್ತಾಗಿ ಬಿಡುಗಡೆ ಮಾಡಲು ಅನುಮೋದನೆ ನೀಡಿತ್ತು. ಅತ್ಯಾಚಾರಿಗಳ ಬಿಡುಗಡೆಗೆ ಕಳೆದ ಆಗಸ್ಟ್ 15ರಂದು ಕ್ರಮ ಜರುಗಿಸಲಾಗಿತ್ತು.

ಮಾರ್ಚ್ 3, 2002 ರಂದು ಗುಜರಾತ್‌ನಲ್ಲಿ ನಡೆದ ಕೋಮು ಗಲಭೆಯ ಸಂದರ್ಭದಲ್ಲಿ ಅಹಮದಾಬಾದ್ ಬಳಿಯ ಹಳ್ಳಿಯೊಂದರಲ್ಲಿ ಬಿಲ್ಕಿಸ್ ಬಾನೋ ಅವರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದಲ್ಲಿ 11 ಜನರಿಗೆ ಶಿಕ್ಷೆಯಾಗಿತ್ತು.

ಆ ಸಮಯದಲ್ಲಿ ಬಿಲ್ಕಿಸ್‌ 19 ವರ್ಷದ ವಯಸ್ಸಿನ ಗರ್ಭಿಣಿಯಾಗಿದ್ದರು. ಬಿಲ್ಕಿಸ್ ಅವರ ಮೂರು ವರ್ಷದ ಮಗಳು ಸೇರಿದಂತೆ ಅವರ ಕುಟುಂಬದ ಹದಿನಾಲ್ಕು ಜನರನ್ನು ಹಿಂಸಾಚಾರದಲ್ಲಿ ಕೊಲ್ಲಲಾಯಿತು. ಬಿಲ್ಕಿಸ್ ಅವರ ತಲೆಯನ್ನು ನೆಲಕ್ಕೆ ಹೊಡೆಸಿ ಹಿಂಸೆ ನೀಡಲಾಗಿತ್ತು.

ಗೋದ್ರಾ ರೈಲು ದುರಂತಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಾದಿಸಿದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, “ಗುಜರಾತ್ ಹೈಕೋರ್ಟ್ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿದೆ. ಆದರೆ ಅಪರಾಧಿಗಳಿಗೆ ಮರಣದಂಡನೆ ವಿಧಿಸಲು ಸರ್ಕಾರ ಒತ್ತಾಯಿಸುತ್ತದೆ” ಎಂದಿದ್ದಾರೆ.

ಇದನ್ನೂ ಓದಿರಿ: ಒಂದು ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ: ಮುತಾಲಿಕ್ ವಿವಾದಾತ್ಮಕ ಹೇಳಿಕೆ

“ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 59 ಜನರನ್ನು ಜೀವಂತವಾಗಿ ಸುಟ್ಟುಹಾಕಲಾಗಿದೆ. ಇದು ಅಪರೂಪದ ಪ್ರಕರಣಗಳಲ್ಲಿ ಅಪರೂಪವಾಗಿದೆ” ಎಂದು ಮೆಹ್ತಾ ಹೇಳಿದ್ದಾರೆ.

ಅಪರಾಧಿಗಳ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಕೆಟಿಎಸ್ ತುಳಸಿ, “ಅವರಲ್ಲಿ ಒಬ್ಬರು ತನಗೆ ಗುಜರಾತಿ ಭಾಷೆ ಗೊತ್ತಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಆತ ತಾನು ಓದಿಲ್ಲದೆ ಇರುವ ಹೇಳಿಕೆಗೆ ಹೆಬ್ಬೆರಳಿನ ಗುರುತನ್ನು ನೀಡಿದ್ದಾನೆ. ಜಾಮೀನು ಅರ್ಜಿಗಳನ್ನು ಪರಿಗಣಿಸಲು ಎಲ್ಲಾ ಸಂಬಂಧಿತ ವಿವರಗಳೊಂದಿಗೆ ಸಂಕಲಿಸಿದ ಚಾರ್ಟ್ ಅಗತ್ಯವಿದೆ ಎಂದು ನ್ಯಾಯಾಲಯ ಹೇಳಿದೆ” ಎಂದು ಮಾಹಿತಿ ನೀಡಿದ್ದಾರೆ.

ಹಲವು ಅಪರಾಧಿಗಳ ಜಾಮೀನು ಅರ್ಜಿಯನ್ನು ಮೂರು ವಾರಗಳ ನಂತರ ವಿಚಾರಣೆ ನಡೆಸುವುದಾಗಿ ಕೋರ್ಟ್ ಹೇಳಿದೆ. ಅಪರಾಧಿಗಳಿಗೆ ನೀಡಲಾದ ನಿಜವಾದ ಶಿಕ್ಷೆಗಳು ಮತ್ತು ಇದುವರೆಗೆ ಜೈಲಿನಲ್ಲಿ ಕಳೆದ ಅವಧಿಯಂತಹ ವಿವರಗಳನ್ನು ನೀಡುವ ಕ್ರೋಢೀಕೃತ ಚಾರ್ಟ್ ಅನ್ನು ಸಲ್ಲಿಸುವಂತೆ ಎರಡೂ ಕಡೆಯವರಿಗೂ ಕೋರ್ಟ್ ಸೂಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...