Homeಮುಖಪುಟಗೋಧ್ರಾ ರೈಲು ದಹಿಸಿದ ಅಪರಾಧಿಗಳ ಬಿಡುಗಡೆ ಅಸಾಧ್ಯ; ಸುಪ್ರೀಂನಲ್ಲಿ ಗುಜರಾತ್ ಸರ್ಕಾರ ಹೇಳಿಕೆ

ಗೋಧ್ರಾ ರೈಲು ದಹಿಸಿದ ಅಪರಾಧಿಗಳ ಬಿಡುಗಡೆ ಅಸಾಧ್ಯ; ಸುಪ್ರೀಂನಲ್ಲಿ ಗುಜರಾತ್ ಸರ್ಕಾರ ಹೇಳಿಕೆ

- Advertisement -
- Advertisement -

2002ರ ಗೋಧ್ರಾ ರೈಲು ದಹನ ಪ್ರಕರಣದ ಅಪರಾಧಿಗಳನ್ನು ಸರ್ಕಾರದ ಸನ್ನಡತೆ ನೀತಿಯಡಿ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಗುಜರಾತ್‌ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

‘ಭಯೋತ್ಪಾದಕ ಮತ್ತು ವಿಚ್ಛಿದ್ರಕಾರಕ ಚಟುವಟಿಕೆಗಳ (ತಡೆ) ಕಾಯ್ದೆ’ಯ ಅಡಿಯಲ್ಲಿ ಈ ಅಪರಾಧಿಗಳ ವಿರುದ್ಧ ಕ್ರಮಗಳನ್ನು ಜರುಗಿಸಲಾಗಿದ್ದು, ಸರ್ಕಾರದ ನೀತಿಯ ಅಡಿಯಲ್ಲಿ ಅವಧಿಪೂರ್ವವೇ ಬಿಡುಗಡೆ ಮಾಡಲಾಗದು ಎಂದು ಕೋರ್ಟ್‌ನಲ್ಲಿ ವಾದಿಸಿದೆ.

ಫೆಬ್ರವರಿ 27, 2002ರಂದು, ಗೋಧ್ರಾ ನಿಲ್ದಾಣದಲ್ಲಿ ಸಾಬರಮತಿ ಎಕ್ಸ್‌ಪ್ರೆಸ್‌ನ ಕೋಚ್ S6ಗೆ ಬೆಂಕಿ ಹಚ್ಚಲಾಗಿತ್ತು. ಇದರಿಂದಾಗಿ 59 ಜನರು ಸಾವನ್ನಪ್ಪಿದರು. ಅಯೋಧ್ಯೆಯಿಂದ ಹಿಂತಿರುಗುತ್ತಿದ್ದ ಕರಸೇವಕರು ಈ ಕೋಚ್‌ನಲ್ಲಿದ್ದರು.

11 ಅಪರಾಧಿಗಳಿಗೆ ಟ್ರಯಲ್ ಕೋರ್ಟ್ ನೀಡಿದ್ದ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಯಾಗಿ 2017ರಲ್ಲಿ ಗುಜರಾತ್ ಹೈಕೋರ್ಟ್ ಬದಲಾಯಿಸಿತು. ಇತರ 20 ಜನಕ್ಕೂ ನೀಡಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಎತ್ತಿ ಹಿಡಿದಿತ್ತು.

ರೈಲು ಸುಟ್ಟ ಬಳಿಕ ಗುಜರಾತ್ ಹೊತ್ತಿ ಉರಿಯಿತು. ಗುಜರಾತ್‌ನಲ್ಲಿ ವ್ಯಾಪಕವಾದ ಕೋಮು ಗಲಭೆಗಳು ನಡೆದವು. ಇದರ ಪರಿಣಾಮವಾಗಿ 1,044 ಜನರು ಸಾವನ್ನಪ್ಪಿದರು ಎಂದು ಅಧಿಕೃತ ಅಂಕಿ ಅಂಶಗಳು ತಿಳಿಸಿವೆ.

ಕೆಲವು ತಿಂಗಳ ಹಿಂದೆ ವಿಚಿದ್ರಕಾರಿ ನಿಲುವನ್ನು ತೆಗೆದುಕೊಂಡಿದ್ದ ಗುಜರಾತ್‌ ಸರ್ಕಾರ, ಬಿಲ್ಕಿಸ್ ಬಾನೋ ಪ್ರಕರಣದಲ್ಲಿ ಶಿಕ್ಷೆಗೊಳಗಾದ 11 ಅಪರಾಧಿಗಳನ್ನು ತುರ್ತಾಗಿ ಬಿಡುಗಡೆ ಮಾಡಲು ಅನುಮೋದನೆ ನೀಡಿತ್ತು. ಅತ್ಯಾಚಾರಿಗಳ ಬಿಡುಗಡೆಗೆ ಕಳೆದ ಆಗಸ್ಟ್ 15ರಂದು ಕ್ರಮ ಜರುಗಿಸಲಾಗಿತ್ತು.

ಮಾರ್ಚ್ 3, 2002 ರಂದು ಗುಜರಾತ್‌ನಲ್ಲಿ ನಡೆದ ಕೋಮು ಗಲಭೆಯ ಸಂದರ್ಭದಲ್ಲಿ ಅಹಮದಾಬಾದ್ ಬಳಿಯ ಹಳ್ಳಿಯೊಂದರಲ್ಲಿ ಬಿಲ್ಕಿಸ್ ಬಾನೋ ಅವರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದಲ್ಲಿ 11 ಜನರಿಗೆ ಶಿಕ್ಷೆಯಾಗಿತ್ತು.

ಆ ಸಮಯದಲ್ಲಿ ಬಿಲ್ಕಿಸ್‌ 19 ವರ್ಷದ ವಯಸ್ಸಿನ ಗರ್ಭಿಣಿಯಾಗಿದ್ದರು. ಬಿಲ್ಕಿಸ್ ಅವರ ಮೂರು ವರ್ಷದ ಮಗಳು ಸೇರಿದಂತೆ ಅವರ ಕುಟುಂಬದ ಹದಿನಾಲ್ಕು ಜನರನ್ನು ಹಿಂಸಾಚಾರದಲ್ಲಿ ಕೊಲ್ಲಲಾಯಿತು. ಬಿಲ್ಕಿಸ್ ಅವರ ತಲೆಯನ್ನು ನೆಲಕ್ಕೆ ಹೊಡೆಸಿ ಹಿಂಸೆ ನೀಡಲಾಗಿತ್ತು.

ಗೋದ್ರಾ ರೈಲು ದುರಂತಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಾದಿಸಿದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, “ಗುಜರಾತ್ ಹೈಕೋರ್ಟ್ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿದೆ. ಆದರೆ ಅಪರಾಧಿಗಳಿಗೆ ಮರಣದಂಡನೆ ವಿಧಿಸಲು ಸರ್ಕಾರ ಒತ್ತಾಯಿಸುತ್ತದೆ” ಎಂದಿದ್ದಾರೆ.

ಇದನ್ನೂ ಓದಿರಿ: ಒಂದು ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ: ಮುತಾಲಿಕ್ ವಿವಾದಾತ್ಮಕ ಹೇಳಿಕೆ

“ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 59 ಜನರನ್ನು ಜೀವಂತವಾಗಿ ಸುಟ್ಟುಹಾಕಲಾಗಿದೆ. ಇದು ಅಪರೂಪದ ಪ್ರಕರಣಗಳಲ್ಲಿ ಅಪರೂಪವಾಗಿದೆ” ಎಂದು ಮೆಹ್ತಾ ಹೇಳಿದ್ದಾರೆ.

ಅಪರಾಧಿಗಳ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಕೆಟಿಎಸ್ ತುಳಸಿ, “ಅವರಲ್ಲಿ ಒಬ್ಬರು ತನಗೆ ಗುಜರಾತಿ ಭಾಷೆ ಗೊತ್ತಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಆತ ತಾನು ಓದಿಲ್ಲದೆ ಇರುವ ಹೇಳಿಕೆಗೆ ಹೆಬ್ಬೆರಳಿನ ಗುರುತನ್ನು ನೀಡಿದ್ದಾನೆ. ಜಾಮೀನು ಅರ್ಜಿಗಳನ್ನು ಪರಿಗಣಿಸಲು ಎಲ್ಲಾ ಸಂಬಂಧಿತ ವಿವರಗಳೊಂದಿಗೆ ಸಂಕಲಿಸಿದ ಚಾರ್ಟ್ ಅಗತ್ಯವಿದೆ ಎಂದು ನ್ಯಾಯಾಲಯ ಹೇಳಿದೆ” ಎಂದು ಮಾಹಿತಿ ನೀಡಿದ್ದಾರೆ.

ಹಲವು ಅಪರಾಧಿಗಳ ಜಾಮೀನು ಅರ್ಜಿಯನ್ನು ಮೂರು ವಾರಗಳ ನಂತರ ವಿಚಾರಣೆ ನಡೆಸುವುದಾಗಿ ಕೋರ್ಟ್ ಹೇಳಿದೆ. ಅಪರಾಧಿಗಳಿಗೆ ನೀಡಲಾದ ನಿಜವಾದ ಶಿಕ್ಷೆಗಳು ಮತ್ತು ಇದುವರೆಗೆ ಜೈಲಿನಲ್ಲಿ ಕಳೆದ ಅವಧಿಯಂತಹ ವಿವರಗಳನ್ನು ನೀಡುವ ಕ್ರೋಢೀಕೃತ ಚಾರ್ಟ್ ಅನ್ನು ಸಲ್ಲಿಸುವಂತೆ ಎರಡೂ ಕಡೆಯವರಿಗೂ ಕೋರ್ಟ್ ಸೂಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...